Homeಅಂತರಾಷ್ಟ್ರೀಯ'ರಷ್ಯಾ ನಿರ್ಬಂಧ ಮಸೂದೆ' ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

- Advertisement -
- Advertisement -

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು ಅಂಗೀಕರಿಸಿದೆ.

‘ಲಿಂಡ್ಸೆ ಒ ಗ್ರಾಹಂ ಸಂಕ್ಷನ್ ರಷ್ಯಾ ಅಂಡ್ ಇರಾನ್ ಆಕ್ಟ್ ಆಫ್ 2026’ ಎಂದು ಮರುನಾಮಕರಣ ಮಾಡಲಾದ ಈ ಮಸೂದೆಯು ಸೆನೆಟ್‌ನಲ್ಲಿ 86-11 ಮತಗಳ ಬಹುಮತದಿಂದ ಅನುಮೋದನೆ ಪಡೆದುಕೊಂಡಿದೆ.

ಈ ಕಾಯ್ದೆಯು ರಷ್ಯಾದಿಂದ ಅತಿ ಹೆಚ್ಚು ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವ ಮೊದಲ ಐದು ದೇಶಗಳ ಸರಕುಗಳ ಮೇಲೆ ಶೇಕಡಾ 100ರಷ್ಟು ತೆರಿಗೆ (ತರೀಫ್) ವಿಧಿಸುವ ಅಧಿಕಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ನೀಡುತ್ತದೆ.

ಪ್ರಸ್ತುತ ಚೀನಾ, ಭಾರತ, ಅಜರ್‌ಬೈಜಾನ್, ಹಂಗೇರಿ ಮತ್ತು ಸ್ಲೊವಾಕಿಯಾ ದೇಶಗಳು ರಷ್ಯಾದಿಂದ ಅತಿ ಹೆಚ್ಚು ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳುತ್ತಿರುವ ಪ್ರಮುಖ ಐದು ರಾಷ್ಟ್ರಗಳಾಗಿವೆ.

ರಷ್ಯಾ ಮೇಲಿನ ನಿರ್ಬಂಧಗಳ ಜೊತೆಗೆ, ಇರಾನ್ ಶಕ್ತಿ (ಎನರ್ಜಿ) ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಕಂಪನಿಗಳ ಮೇಲೆ ದಂಡ ವಿಧಿಸುವ ‘ಇರಾನ್ ನಿರ್ಬಂಧಗಳ ಕಾಯ್ದೆ 1996’ರ ಗಡುವನ್ನು 2031ರವರೆಗೆ ವಿಸ್ತರಿಸಲು ಈ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ.

ದ್ವಿಪಕ್ಷೀಯ ಬೆಂಬಲ ಹೊಂದಿದ್ದ ಈ ಮಸೂದೆಯನ್ನು ಜುಲೈ 11 ರಂದು ನಿಧನರಾದ ರಿಪಬ್ಲಿಕನ್ ಸಂಸದ ಲಿಂಡ್ಸೆ ಗ್ರಾಹಂ ಮತ್ತು ಡೆಮಾಕ್ರಟ್ ನಾಯಕ ರಿಚರ್ಡ್ ಬ್ಲುಮೆಂಥಾಲ್ ಜಂಟಿಯಾಗಿ ರೂಪಿಸಿದ್ದರು. ಕೀವ್‌ಗೆ ಪ್ರವಾಸ ಕೈಗೊಂಡ ಬೆನ್ನಲ್ಲೇ ಇದ್ದಕ್ಕಿದ್ದಂತೆ ನಿಧನರಾದ ಗ್ರಾಹಂ ಅವರ ಸ್ಮರಣಾರ್ಥ ಮತ್ತು ಉಕ್ರೇನ್‌ಗೆ ಅವರ ಬೆಂಬಲ ಗೌರವಿಸಿ, ಎಲ್ಲಾ ಪಕ್ಷಗಳ ನಾಯಕರು ಒಗ್ಗಟ್ಟಿನಿಂದ ಈ ಮಸೂದೆಯನ್ನು ಅಂಗೀಕರಿಸಿದ್ದಾರೆ.

“ರಷ್ಯಾದ ಆರ್ಥಿಕತೆಯನ್ನು ಜೀವಂತವಾಗಿಟ್ಟಿರುವ ಪ್ರಮುಖ ದೇಶಗಳಿಗೆ ಈ ಮಸೂದೆಯು ಒಂದು ಸ್ಪಷ್ಟ ಆಯ್ಕೆಯನ್ನು ನೀಡುತ್ತದೆ. ಅಮೆರಿಕದೊಂದಿಗೆ ವ್ಯವಹಾರ ಮಾಡಬೇಕೋ ಅಥವಾ ರಷ್ಯಾದಿಂದ ಅಗ್ಗದ ಇಂಧನವನ್ನು ಖರೀದಿಸಬೇಕೋ ಎಂಬುದನ್ನು ಆ ದೇಶಗಳೇ ತೀರ್ಮಾನಿಸಬೇಕು” ಎಂದು ಲಿಂಡ್ಸೆ ಗ್ರಾಹಂ ನಿಧನದ ನಂತರ ಅವರ ಸ್ಥಾನಕ್ಕೆ ನೇಮಕಗೊಂಡ ಅವರ ಸಹೋದರಿ ಡಾರ್ಲಿನ್ ಗ್ರಾಹಂ ಹೇಳಿದ್ದಾರೆ.

ಇಷ್ಟೇ ಅಲ್ಲದೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಲ್ಲಿನ ಪ್ರಭಾವಿ ಉದ್ಯಮಿಗಳು ಹಾಗೂ ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಅವರ ಮೇಲೆಯೂ ನಿರ್ಬಂಧಗಳನ್ನು ವಿಧಿಸಲು ಈ ಮಸೂದೆ ಯತ್ನಿಸುತ್ತದೆ.

ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬ್ಲುಮೆಂಥಾಲ್, “ನಾವು ಸಾಧಿಸಿರುವುದನ್ನು ನೋಡಿ ಗ್ರಾಹಂ ಖಂಡಿತ ಹೆಮ್ಮೆಪಡುತ್ತಿದ್ದರು. ಉಕ್ರೇನ್‌ನ ಸ್ವತಂತ್ರ ಜನರ ವಿರುದ್ಧ ನಡೆಯುತ್ತಿರುವ ಈ ಕ್ರೂರ ಯುದ್ಧಕ್ಕೆ ಕುಮ್ಮಕ್ಕು ನೀಡುವ ಪ್ರತಿಯೊಬ್ಬರನ್ನು ಈ ಕಠಿಣ ನಿರ್ಬಂಧಗಳು ಮತ್ತು ಸುಂಕಗಳು ತಡೆಯಲಿವೆ” ಎಂದು ತಿಳಿಸಿದರು.

ಆದರೆ, ಡೊನಾಲ್ಡ್ ಟ್ರಂಪ್ ಅವರು ಈಗಾಗಲೇ ತಮ್ಮ ವ್ಯಾಪಾರ ನೀತಿಯಲ್ಲಿ ಸುಂಕ ಹೆಚ್ಚಳವನ್ನು ಅಸ್ತ್ರವಾಗಿ ಬಳಸುತ್ತಿದ್ದು, ಈ ಮಸೂದೆಯು ಅವರಿಗೆ ಮತ್ತಷ್ಟು ಸುಂಕ ವಿಧಿಸುವ ಹೊಸ ಅಧಿಕಾರ ನೀಡಲಿದೆ ಎಂದು ಕೆಲ ಡೆಮಾಕ್ರಟಿಕ್ ನಾಯಕರು ಎಚ್ಚರಿಸಿದ್ದಾರೆ.

ಈ ಮಸೂದೆಯು ಈಗ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಮುಂದಿನ ಅನುಮೋದನೆಗೆ ಹೋಗಲಿದ್ದು, ಆಗಸ್ಟ್ 31 ರಂದು ಸದನ ಸಮಾವೇಶಗೊಂಡಾಗ ಚರ್ಚೆಗೆ ಬರಲಿದೆ.

ಡೆಮಾಕ್ರಟಿಕ್ ಸಂಸದರಾದ ಮೆಕ್ಸ್ ಮತ್ತು ಡಾನ್ ಬೇಯರ್ ಈ ಶಾಸನವನ್ನು ಟೀಕಿಸಿದ್ದು, “ಈ ಕಾಯ್ದೆಯು ಅಧ್ಯಕ್ಷರಿಗೆ ವ್ಯಾಪಕ ಸುಂಕ ವಿಧಿಸುವ ಅಧಿಕಾರವನ್ನು ನೀಡುತ್ತದೆ, ಇದನ್ನು ಟ್ರಂಪ್ ಅವರು ಆದೇಶದಂತೆ ಮತ್ತೆ ದುರುಪಯೋಗಪಡಿಸಿಕೊಳ್ಳಬಹುದು” ಎಂದಿದ್ದಾರೆ.

“ಉಕ್ರೇನ್‌ಗೆ ಬೆಂಬಲ ನೀಡುವ ಮತ್ತು ರಷ್ಯಾವನ್ನು ಶಿಕ್ಷಿಸುವ ನಮ್ಮ ಸೆನೆಟ್ ಸಹೋದ್ಯೋಗಿಗಳ ತುರ್ತು ಪ್ರಯತ್ನವನ್ನು ನಾವು ಸ್ವಾಗತಿಸುತ್ತೇವೆ. ಆದರೆ ಈ ಮಸೂದೆಯಿಂದ ಆ ಗುರಿ ತಲುಪಲು ಸಾಧ್ಯವಿಲ್ಲ. ಬದಲಾಗಿ, ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುವುದರಿಂದ ಟ್ರಂಪ್ ತಪ್ಪಿಸಿಕೊಳ್ಳಲು ಮತ್ತು ತಮ್ಮ ಹಾನಿಕಾರಕ ವ್ಯಾಪಾರ ಯುದ್ಧದಲ್ಲಿ ಮತ್ತಷ್ಟು ಸುಂಕಗಳನ್ನು ವಿಧಿಸುವುದಕ್ಕೆ ಇದು ರಹದಾರಿಯಾಗಲಿದೆ. ಅಂತಿಮವಾಗಿ ಇದರ ಹೊೆಯನ್ನು ಅಮೆರಿಕದ ಜನರೇ ಹೊರಬೇಕಾಗುತ್ತದೆ” ಎಂದು ಇಬ್ಬರೂ ನಾಯಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...