HomeಅಂಕಣಗಳುKarnataka against SIRಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

- Advertisement -
- Advertisement -

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ಆಗಸ್ಟ್ 10ರಂದು ವರದಿ ಮಾಡಿದೆ.

ಕರಡು ಪಟ್ಟಿ ಪ್ರಕಟಿಸುವ ಮುನ್ನ ಗುಣಮಟ್ಟ ತಪಾಸಣೆಯ ಭಾಗವಾಗಿ, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಮತದಾರರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ. ಈ ಮತದಾರರು ಈ ಹಿಂದೆ ಎಎಸ್‌ಡಿಡಿಒ (ಗೈರುಹಾಜರು, ವಲಸೆ ಹೋದವರು, ಮೃತರು, ನಕಲಿ ಮತ್ತು ಇತರೆ) ಪಟ್ಟಿಯಲ್ಲಿದ್ದರು.

ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಮುನ್ನ ಚುನಾವಣಾ ಆಯೋಗ ನಡೆಸುತ್ತಿರುವ ಗುಣಮಟ್ಟ ತಪಾಸಣೆಯಿಂದಾಗಿ, ಆಗಸ್ಟ್ 3 ಮತ್ತು 9 ರ ನಡುವೆ ಕರ್ನಾಟಕದ ಎಎಸ್‌ಡಿಡಿಒ ಪಟ್ಟಿಯಿಂದ ಸುಮಾರು 2.9 ಲಕ್ಷ ಮತದಾರರನ್ನು ಕೈಬಿಡಲಾಗಿದ್ದು, ಇದರಲ್ಲಿ ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಸಂಖ್ಯೆಯ ಕಡಿತ ದಾಖಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಸದ್ಯ ಕರ್ನಾಟಕದ ಎಎಸ್‌ಡಿಡಿಒ ಪಟ್ಟಿಯಲ್ಲಿ 1 ಕೋಟಿಗೂ ಹೆಚ್ಚು ಹೆಸರುಗಳಿದ್ದು, ಪಟ್ಟಿಯಲ್ಲಿ ಮುಂದುವರಿಯಲು ಅಥವಾ ಅದರಿಂದ ಹೊರಹೋಗಲು ಜನರು ತಮ್ಮ ಗುರುತಿನ ಪುರಾವೆಗಳನ್ನು ಸಲ್ಲಿಸಬೇಕಾಗಿದೆ. ಎಎಸ್‌ಡಿಡಿಒ ಪ್ರಮಾಣ ಕರ್ನಾಟಕದ ಒಟ್ಟು ಮತದಾರರ ಸಂಖ್ಯೆಯ ಸುಮಾರು ಶೇಕಡಾ 20 ರಷ್ಟು ಅಥವಾ ಆರನೇ ಒಂದು ಭಾಗದಷ್ಟಿದೆ ಎಂದು ವರದಿ ಹೇಳಿದೆ.

SIR ಪ್ರಕ್ರಿಯೆಯ ಬಗ್ಗೆಯೇ ಪ್ರಶ್ನೆಗಳನ್ನು ಮೂಡಿಸಿದ ವರದಿ

ಟೈಮ್ಸ್ ಆಫ್ ಇಂಡಿಯಾದ ಮೇಲಿನ ವರದಿ ಕರ್ನಾಟಕದ ಒಟ್ಟಾರೆ ಎಸ್‌ಐಆರ್ ಪ್ರಕ್ರಿಯೆ ಬಗ್ಗೆಯೇ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

1. ಗುಣಮಟ್ಟ ತಪಾಸಣೆಯ ಭಾಗವಾಗಿ ಎಎಸ್‌ಡಿಡಿಒ ಪಟ್ಟಿಯಿಂದ ಲಕ್ಷಾಂತರ ಜನರನ್ನು ಕೈಬಿಡಲಾಗಿದೆ ಎಂದು ವರದಿ ಹೇಳುತ್ತದೆ. ಹಾಗಾದರೆ, ಈ ತಪಾಸಣೆ ಮಾಡದೇ ಇದ್ದಿದ್ದರೆ ಈ ಜನರು ತಮ್ಮ ಹಕ್ಕು ಕಳೆದುಕೊಳ್ಳುತ್ತಿರಲಿಲ್ಲವೇ?

2. ಲಕ್ಷಾಂತರ ಮತದಾರರನ್ನು ಡಿಲೀಟ್ ಪಟ್ಟಿಗೆ ಹಾಕುವಷ್ಟು ಕಳಪೆ ಗುಣಮಟ್ಟದಿಂದ ಈ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆಯಾ? ಜನರ ಅಮೂಲ್ಯವಾದ ಸಾಂವಿಧಾನಿಕ ಹಕ್ಕನ್ನು ಚುನಾವಣಾ ಆಯೋಗ ಇಷ್ಟೊಂದು ತುಚ್ಚವಾಗಿ ನೋಡುತ್ತಿದೆಯಾ?

3. ಗುಣಮಟ್ಟ ತಪಾಸಣೆ ವೇಳೆ ಇಷ್ಟೊಂದು ಸಂಖ್ಯೆಯಲ್ಲಿ ಜನರನ್ನು ಪಟ್ಟಿಯಿಂದ ಕೈಬಿಟ್ಟರೆ, ಇನ್ನುಳಿದ ಪಟ್ಟಿಯಲ್ಲಿ ಇರುವ ಜನರ ಬಗ್ಗೆ ಚುನಾವಣಾ ಆಯೋಗ ಕೊಟ್ಟ ತೀರ್ಪನ್ನು ಸರಿ ಎಂದು ನಂಬುವುದಾದರೂ ಹೇಗೆ?

4. ಈಗ ಎಎಸ್‌ಡಿಡಿಒ ಪಟ್ಟಿಯಿಂದ ಕೈಬಿಡಲಾದ ಜನರನ್ನು ಕೆಲ ದಿನಗಳ ಹಿಂದೆ ಮುಖ್ಯ ಚುನಾವಣಾ ಆಯುಕ್ತರೇ ಎಎಸ್‌ಡಿಡಿಒಗಳು ಎಂದು ತೀರ್ಪು ಕೊಟ್ಟಿದ್ದರು. ಸರಿಯಾಗಿ ಪರಿಶೀಲನೆ ಮಾಡದೆ ಈ ತೀರ್ಮಾನಕ್ಕೆ ಆಯೋಗ ಬಂದಿದ್ದು ಹೇಗೆ?

5. ಬದುಕಿರುವ ವ್ಯಕ್ತಿಯನ್ನು ಸತ್ತಿದ್ದಾನೆ ಎಂದು ತೀರ್ಪು ಕೊಟ್ಟು, ಈಗ ಇಲ್ಲಾ ಸತ್ತಿಲ್ಲ ಎನ್ನುವಂತಹ ಈ ಎಸ್‌ಐಆರ್ ಪ್ರಕ್ರಿಯೆಯನ್ನು ನಂಬುವುದಾರೂ ಹೇಗೆ?

6. ಬರೀ ಎಎಸ್‌ಡಿಡಿಒ ಮಾತ್ರವಲ್ಲದೆ ಇದುವರೆಗೆ ನಡೆದಿರುವ ಮತ್ತು ಮುಂದೆ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆಯ ಸಮರ್ಪಕತೆ, ಪಾರದರ್ಶಕತೆ ಮತ್ತು ಗುಣಮಟ್ಟತೆಯನ್ನು ಜನರು ನಂಬುವುದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ.

ಒಟ್ಟಾರೆಯಾಗಿ ಎಎಸ್‌ಡಿಡಿಒ ಪಟ್ಟಿಯ ಸಂಖ್ಯೆ ಇಳಿಕೆಯಾಗಿದೆ ಎಂದು ಜನರು ನಿರಾಳರಾಗುವ ಸಮಯ ಇದಲ್ಲ. ಟೈಮ್ಸ್ ಆಫ್ ಇಂಡಿಯಾದ ವರದಿ ಇಡೀ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆಯೇ ಹಲವು ಪ್ರಶ್ನೆಗಳು ಹುಟ್ಟು ಹಾಕಿದೆ ಮತ್ತು ಆತಂಕವನ್ನು ಮೂಡಿಸಿದೆ. ಇವೆಲ್ಲದಕ್ಕೂ ಚುನಾವಣಾ ಆಯೋಗ ಸಮಂಜಸವಾದ ಉತ್ತರ ಕೊಡಲೇ ಬೇಕಿದೆ. ಏಕೆಂದರೆ, ಪ್ರತಿಯೊಬ್ಬ ಅರ್ಹರ ಮತದಾನದ ಹಕ್ಕು ತುಚ್ಚವಾಗಿ ಕಾಣುವಂತದಲ್ಲ. ಅದು ಅತ್ಯಂತ ಅಮೂಲ್ಯವಾದದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...