HomeಅಂಕಣಗಳುKarnataka SIR'ಎಸ್‌ಐಆರ್‌'ನಿಂದ ಹೆಸರು ಡಿಲೀಟ್‌ ಆದವರಿಗೆ 'ಹೊಸ ಮತದಾರರ ನೋಂದಣಿ' ಯಾಕೆ?

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಹಳೆ ಮತದಾರರಿಗೆ ನಮೂನೆ ಸಂಖ್ಯೆ 6 ಕೊಡಿ ಎನ್ನುತ್ತಿರುವುದರ ಹಿಂದಿನ ಉದ್ದೇಶವೇನು?

- Advertisement -
- Advertisement -

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಹೇಳಿದ್ದರು. ಈ ಸುದ್ದಿಗೋಷ್ಠಿಯಲ್ಲಿ ಮಾತ್ರವಲ್ಲ, ಹಲವು ಕಡೆಗಳಲ್ಲಿ ಅವರು “ಅಂತಿಮ ಮತದಾರರ ಪಟ್ಟಿಯಲ್ಲಿ ಯಾವುದೇ ಮತದಾರರ ಹೆಸರು ಕಾಣೆಯಾಗಿದ್ದರೆ, ಅವರು ಭಾರತ ಚುನಾವಣಾ ಆಯೋಗಕ್ಕೆ ನಮೂನೆ ಸಂಖ್ಯೆ 6 ಸಲ್ಲಿಸುವ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು” ಎಂದು ಹೇಳಿರುವುದನ್ನು ನಾವು ಕೇಳಿದ್ದೇವೆ.

ಎಸ್‌ಐಆರ್ ನಿಂದ ಮತದಾರರ ಹೆಸರು ಡಿಲೀಟ್ ಆದರೂ, ನಮೂನೆ ಸಂಖ್ಯೆ 6 ಅನ್ನು ಸಲ್ಲಿಸುವ ಮೂಲಕ ನಮ್ಮ ಹೆಸರನ್ನು ಮರು ಸೇರ್ಪಡೆ ಮಾಡಬಹುದಲ್ವಾ ಎಂದು ಸಮಾಧಾನಪಟ್ಟುಕೊಳ್ಳಬಹುದು. ಆದರೆ, ಫಾರ್ಮ್ ನಂ. 6 ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇರುವ ಪ್ರಕ್ರಿಯೆ. ಈಗಾಗಲೇ ಮತ ಪಟ್ಟಿಯಲ್ಲಿ ತಮ್ಮ ಹೆಸರು ಇದ್ದವರು, ವಿಳಾಸ ಬದಲಾವಣೆಗೆ ಫಾರ್ಮ್ ನಂ. 8 ಅನ್ನು ಸಲ್ಲಿಸಬೇಕಾಗಿದೆ. ಈ ಬಗ್ಗೆ ಗಂಭೀರ ಚರ್ಚೆಗಳೇ ನಡೆಯುತ್ತಿಲ್ಲ. ಹಳೆ ಮತದಾರರೂ ಹೊಸ ದಾಖಲಾತಿಗಳನ್ನು ಕೊಟ್ಟು ಪಟ್ಟಿಗೆ ಹೊಸ ಮತದಾರರರಾಗಿ ಹೆಸರು ಸಲ್ಲಿಸಬೇಕಾಗಿದೆ.

ಹೊಸ ಮತದಾರರ ನೋಂದಣಿಗೆ ಫಾರ್ಮ್ ನಂ. 6

ಹೊಸದಾಗಿ ಮತದಾನದ ಹಕ್ಕು ಪಡೆಯಲು ಬಯಸುವವರು ಅಥವಾ ಮೊದಲ ಬಾರಿಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಈ ಫಾರ್ಮ್ ಅನ್ನು ಬಳಸಲಾಗುತ್ತದೆ.

18 ವರ್ಷ ತುಂಬಿದ ಭಾರತೀಯ ನಾಗರಿಕರು, ಈ ಹಿಂದೆ ಯಾವುದೇ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿರುವವರು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡುವವವರು ಬಿಎಲ್‌ಒಗಳಿಂದ ಫಾರ್ಮ್ ನಂ.6 ಪಡೆದು ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಪುರಾವೆಯಾಗಿ ಆಧಾರ್ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನನ ಪ್ರಮಾಣ ಪತ್ರ ಸಲ್ಲಿಸಬೇಕು. ವಾಸಸ್ಥಳದ ಪುರಾವೆಯಾಗಿ ಪಡಿತರ ಚೀಟಿ, ಕರೆಂಟ್ ಬಿಲ್, ಬ್ಯಾಂಕ್ ಪಾಸ್‌ಬುಕ್ ನೀಡಬೇಕು.

ಫಾರ್ಮ್ ನಂ. 8ರ ಬಗ್ಗೆ ಮಾತನಾಡದ ಚುನಾವಣಾ ಆಯೋಗ!

ಇಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದವರು ತಿದ್ದುಪಡಿ ಮತ್ತು ವಿಳಾಸ ಬದಲಾವಣೆ ಮಾಡಬೇಕಾದರೆ,
ಈ ಫಾರ್ಮ್ ಅನ್ನು ಬಳಸಬೇಕಾಗುತ್ತದೆ. ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿರುವವರು ತಮ್ಮ ವರಗಳ ತಿದ್ದುಪಡಿ, ಹೆಸರು, ಜನ್ಮ ದಿನಾಂಕ, ತಂದೆ/ಗಂಡನ ಹೆಸರು, ಲಿಂಗ ಅಥವಾ ಫೋಟೋ ತಪ್ಪಾಗಿದ್ದರೆ ಸರಿಪಡಿಸಲು ಅರ್ಜಿ ಸಲ್ಲಿಸಬೇಕು.

ಅದೇ ಕ್ಷೇತ್ರದ ಒಳಗಡೆ ಅಥವಾ ಬೇರೆ ಮತಕ್ಷೇತ್ರಕ್ಕೆ ವಾಸಸ್ಥಳ ಬದಲಾಯಿಸಿದಾಗ ಹೊಸ ವಿಳಾಸ ನಮೂದಿಸಲು. ವೋಟರ್ ಐಡಿ ಕಳೆದುಹೋಗಿದ್ದರೆ, ಹಾಳಾಗಿದ್ದರೆ ಅಥವಾ ಹರಿದುಹೋಗಿದ್ದರೆ ಹೊಸ ಕಾರ್ಡ್‌ಗೆ ವಿನಂತಿಸಲು, ಮತದಾರರ ಪಟ್ಟಿಯಲ್ಲಿ ವಿಕಲಚೇತನ ವರ್ಗವನ್ನು ನಮೂದಿಸಲು ಫಾರ್ಮ್‌ ನಂ.8 ಅನ್ನು ಬಳಸಲಾಗುತ್ತದೆ.

ಕರ್ನಾಟಕದಲ್ಲಿ ಈಗ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ, ಮತದಾರರ ಹಕ್ಕುಗಳನ್ನು ಉಲ್ಲಂಘನೆ ಮಾಡಲಾಗುತ್ತಿದೆ. ಈಗಾಗಲೇ ಪಟ್ಟಿಯಲ್ಲಿದ್ದವರ ಹೆಸರಿನಲ್ಲಿ ಏನಾದರೂ ವ್ಯತ್ಯಾಸ ಕಂಡು ಬಂದಲ್ಲಿ ಅವರಿಗೆ ಫಾರ್ಮ್‌ 8 ನೀಡಬೇಕಿತ್ತು. ಆದರೆ, ಚುನಾವಣಾ ಆಯೋಗ ಆ ಬಗ್ಗೆ ಮಾತನಾಡುತ್ತಿಲ್ಲ.. ಹಳೆ ಮತದಾರರಿಗೆ ಫಾರ್ಮ್‌ ನಂ. 8 ಕೊಡುವ ಬದಲು, ಹೊಸದಾಗಿ ಅರ್ಜಿ ಸಲ್ಲಿಸಿ ಎಂದು ಹೇಳುತ್ತಿರುವ ಹಿಂದಿನ ಉದ್ದೇಶವಾದರೂ ಏನು ಎಂಬುದನ್ನು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...