Homeಮುಖಪುಟಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

- Advertisement -
- Advertisement -

“ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು” ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ ಮತದಾರರ ಬಳಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ ಎಂಬ ಮಾತುಗಳು ಕೇಳಿಬರುತ್ತಿದೆ. ಫಾರ್ಮ್ ನಂ.6ರ ಪ್ರಕ್ರಿಯೆ ಮತ್ತು ಕಾನೂನುಬದ್ಧತೆಯ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.

ಉದಾಹರಣೆಗೆ, ಶಾಂತಿನಗರ ವಿಧಾನಸಭಾ ಕ್ಷೇತ್ರದ ನಿವಾಸಿಯಾಗಿರುವ ಬಹುಭಾಷ ನಟ ಪ್ರಕಾಶ್‌ ರಾಜ್ ಅವರಿಗೆ ಈಗ 61 ವರ್ಷ. ಅವರು ಈ ಹಿಂದೆ ಇದ್ದ ಮನೆಯಲ್ಲಿ ಈಗ ಇಲ್ಲ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಪ್ರಕಟಿಸಿರುವ asddo ಪಟ್ಟಿಯಲ್ಲಿ ಅವರ ಹೆಸರೂ ಬಂದಿದೆ. ಅಂದರೆ, ಅವರ ಹೆಸರು ಮತದಾರರ ಪಟ್ಟಿಯಲ್ಲಿ ಡಿಲೀಟ್ ಆಗಿದ್ದು, “ಅವರು ಹೊಸದಾಗಿ ಫಾರ್ಮ್‌ ನಂ.6 ನೀಡುವ ಮೂಲಕ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು” ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಹೀಗೆ ಕೇಳುವುದೇ ನಿಯಮ ಬಾಹಿರ ಎಂಬುದು ಸಾರ್ವಜನಿಕರು ಮತ್ತು ನಾಗರೀಕ ಸಂಘಟನೆಗಳ ವಾದವಾಗಿದೆ.

ಏಕೆಂದರೆ, ಹೊಸ ಮತದಾರರ ಸೇರ್ಪಡೆಗಾಗಿ ಭಾರತೀಯ ಚುನಾವಣಾ ಆಯೋಗದ ಫಾರ್ಮ್‌ ನಂ.6ರ ‘ಘೋಷಣೆ’ ಕಾಲಂನಲ್ಲಿರುವ ಮೂರನೇ ಘೋಷಣೆಯನ್ನು ನಾವು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಅದರಲ್ಲಿ “ನಾನು ನನ್ನ ಹೆಸರನ್ನು ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಕ್ಕೆ ಅರ್ಜಿ ಸಲ್ಲಿಸುತ್ತಿದ್ದು, ನನ್ನ ಹೆಸರು ಯಾವುದೇ ವಿಧಾನಸಭಾ ಕ್ಷೇತ್ರ/ಲೋಕಸಭಾ ಕ್ಷೇತ್ರದಲ್ಲಿ ಸೇರ್ಪಡೆಗೊಂಡಿರುವುದಿಲ್ಲ” ಎಂದು ಘೋಷಿಸಬೇಕಾಗಿದೆ.

ಆದರೆ, 61 ವರ್ಷದ ಪ್ರಕಾಶ್‌ ರಾಜ್‌ ಅವರು ಹಲವು ವರ್ಷಗಳಿಂದ ಬೇರೆಬೇರೆ ಕ್ಷೇತ್ರಗಳಲ್ಲಿ ಮತ ಹಾಕಿದ್ದಾರೆ. ಮುಖ್ಯವಾಗಿ, ಅವರು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈಗ ಅವರು ಫಾರ್ಮ್‌ ನಂ. 6 ನೀಡುವ ಮೂಲಕ “ನಾನು ನನ್ನ ಹೆಸರನ್ನು ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಕ್ಕೆ ಅರ್ಜಿ ಸಲ್ಲಿಸುತ್ತಿದ್ದು, ನನ್ನ ಹೆಸರು ಯಾವುದೇ ವಿಧಾನಸಭಾ ಕ್ಷೇತ್ರ/ಲೋಕಸಭಾ ಕ್ಷೇತ್ರದಲ್ಲಿ ಸೇರ್ಪಡೆಗೊಂಡಿರುವುದಿಲ್ಲ” ಎಂದು ಹೇಳುವುದು ಕಾನೂನುಬಾಹಿರ ಆಗುವುದಲ್ಲವೇ? ಚುನಾವಣಾ ಆಯೋಗವು ತನ್ನದೇ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದಂತೆ ಆಗುವುದಿಲ್ಲವೇ?

ಹಳೆ ಮತದಾರರ ವಿಳಾಸ ಬದಲಾವಣೆಗೆ ಯಾವ ಫಾರ್ಮ್‌ ಕೊಡಬೇಕು?

ಹಳೆ ಮತದಾರರ ವಿಳಾಸ ಬದಲಾವಣೆಗೆ ಭಾರತೀಯ ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಫಾರ್ಮ್ ನಂ. 8 ಅನ್ನು ಸಲ್ಲಿಸಬೇಕು.

ಫಾರ್ಮ್ ನಂ. 8 ನ್ನೇ ಯಾಕೆ ಸಲ್ಲಿಸಬೇಕು ಎಂದರೆ, ಮತದಾರರೊಬ್ಬರು ವಾಸಿಸುವ ಮನೆಯನ್ನು ಬದಲಾಯಿಸಿದಾಗ (ಅದು ಅದೇ ವಿಧಾನಸಭಾ ಕ್ಷೇತ್ರದ ಒಳಗೆ ಇರಲಿ ಅಥವಾ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ಬದಲಾಗಿರಲಿ), ಅವರ ಪ್ರಸ್ತುತ ವಿಳಾಸವನ್ನು ಮತದಾರರ ಪಟ್ಟಿಯಲ್ಲಿ ನವೀಕರಿಸಲು ಇದು ಅಗತ್ಯ.
ವಿಳಾಸ ಬದಲಾವಣೆಯ ಅರ್ಜಿ ಅನುಮೋದನೆಯಾದ ನಂತರ ಹೊಸ ವಿಳಾಸದೊಂದಿಗೆ ನವೀಕರಿಸಿದ ಮತದಾರರ ಗುರುತಿನ ಚೀಟಿಯನ್ನು ಚುನಾವಣಾ ಆಯೋಗ ನೀಡುತ್ತದೆ.

ಚುನಾವಣಾ ಆಯೋಗದ ನಿಯಮಗಳು ಹೇಳುವುದೇನು?

1950ರ ಜನಪ್ರತಿನಿಧಿ ಕಾಯ್ದೆ ಪ್ರಕಾರ, ಒಬ್ಬ ವ್ಯಕ್ತಿಯು ಭಾರತದಲ್ಲಿ ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳ ಪಟ್ಟಿಯಲ್ಲಿ ಹೆಸರು ಹೊಂದುವಂತಿಲ್ಲ. ಮತದಾರರು ಫಾರ್ಮ್ 8 ಸಲ್ಲಿಸಿದಾಗ, ಅವರ ಹೆಸರು ಹಳೆಯ ವಿಳಾಸದ ಮತದಾರರ ಪಟ್ಟಿಯಿಂದ ತೆರವುಗೊಂಡು, ಹೊಸ ವಿಳಾಸದ ಪಟ್ಟಿಗೆ ಸೇರ್ಪಡೆಯಾಗುತ್ತದೆ.

ಮತದಾರರು ಪ್ರಸ್ತುತ ತಾವು ‘ಸಾಮಾನ್ಯವಾಗಿ ವಾಸಿಸುತ್ತಿರುವ’ ವಿಳಾಸದಲ್ಲೇ ನೋಂದಣಿ ಹೊಂದಿರಬೇಕು. ಆದ್ದರಿಂದ ಅವರು ವಿಳಾಸ ಪುರಾವೆ ನೀಡುವುದು ಕಡ್ಡಾಯವಾಗಿದೆ. ಹೊಸ ವಿಳಾಸವನ್ನು ದೃಢೀಕರಿಸಲು, ಅವರು ಸ್ವಯಂ ದೃಢೀಕೃತ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ: ಆಧಾರ್ ಕಾರ್ಡ್, ಇತ್ತೀಚಿನ ವಿದ್ಯುತ್, ನೀರು ಅಥವಾ ಗ್ಯಾಸ್ ಬಿಲ್ (ಕನಿಷ್ಠ 1 ವರ್ಷದ ಒಳಗೆ)ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಕರೆಂಟ್ ಪಾಸ್‌ಬುಕ್‌, ಭಾರತೀಯ ಪಾಸ್‌ಪೋರ್ಟ್‌, ನೋಂದಾಯಿತ ಬಾಡಿಗೆ ಕರಾರು ಪತ್ರ ನೀಡಬೇಕಾಗುತ್ತದೆ.

ಅರ್ಜಿಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದರೆ ಕಾಯ್ದೆಯ ಸೆಕ್ಷನ್ 31ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ.

ಫಾರ್ಮ್ ನಂ.6 – ಆನ್‌ಲೈನ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ

ಭಾರತೀಯ ಚುನಾವಣಾ ಆಯೋಗವು ಮತದಾರರ ನೋಂದಣಿಗಾಗಿ ಬಳಸಲಾಗುವ ಆನ್‌ಲೈನ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಪರಿಚಯಿಸಿದೆ. ಇಸಿಐಎನ್‌ಇಟಿ ಪೋರ್ಟಲ್ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸುವವರು, ಹಿಂದಿನ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ತಮ್ಮ ತಂದೆ ಅಥವಾ ತಾಯಿ ಮತದಾರರ ಪಟ್ಟಿಯಲ್ಲಿ ಸೇರಿದ್ದರೇ ಎಂಬುದಕ್ಕೆ ಸಂಬಂಧಿಸಿದ ಹೊಸ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಈ ಹೊಸ ಅವಶ್ಯಕತೆಯನ್ನು ಯಾವುದೇ ಸಾರ್ವಜನಿಕ ಪತ್ರಿಕಾ ಪ್ರಕಟಣೆ ಅಥವಾ ಅಧಿಸೂಚನೆಯ ಮೂಲಕ ಪರಿಚಯಿಸಲಾಗಿಲ್ಲ. ಇದು ಇಸಿಐಎನ್‌ಇಟಿ ಪೋರ್ಟಲ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಫಾರ್ಮ್‌ 6ರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ.

“ಘೋಷಣಾ ಪತ್ರ” ಎಂದು ವಿವರಿಸಲಾದ ಹೊಸ ವಿಭಾಗದಲ್ಲಿ, ಅರ್ಜಿದಾರರು ಹಿಂದಿನ ಎಸ್‌ಐಆರ್‍‌ ಸಂದರ್ಭದಲ್ಲಿ ತಮ್ಮ ತಂದೆ ಅಥವಾ ತಾಯಿ ಇವರಲ್ಲಿ ಯಾರಾದರೂ ಮತದಾರರ ಪಟ್ಟಿಯಲ್ಲಿ ಸೇರಿದ್ದರೇ ಎಂಬುದನ್ನು ತಿಳಿಸಬೇಕು. ಉತ್ತರ “ಹೌದು” ಎಂದಾದರೆ, ಆ ಎಸ್‌ಐಆರ್‌ನಲ್ಲಿ ಪೋಷಕರು ಯಾವ ವಿಧಾನಸಭಾ ಕ್ಷೇತ್ರದ ಸಂಖ್ಯೆಯಡಿ, ಯಾವ ಮತಗಟ್ಟೆಯ ಮತ್ತು ಯಾವ ಕ್ರಮಸಂಖ್ಯೆಯ ಅಡಿಯಲ್ಲಿ ದಾಖಲಾಗಿದ್ದರು ಎಂಬ ಮಾಹಿತಿಯನ್ನು ನೀಡಬೇಕು. ಪೋಷಕರು ಆ ಪಟ್ಟಿಯಲ್ಲಿ ಸೇರಿರದಿದ್ದರೆ, ಅವರ ಹೆಸರುಗಳನ್ನು ಮತ್ತು ಲಭ್ಯವಿದ್ದರೆ ಅವರ ಇಪಿಐಸಿ (EPIC) ಸಂಖ್ಯೆಗಳನ್ನೂ ನೀಡಬೇಕಾಗುತ್ತದೆ.

ಈ ಹೊಸ ಘೋಷಣೆಯ ಸೇರ್ಪಡೆಯಿಂದ ಮೊದಲ ಬಾರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳುವ ಅರ್ಜಿದಾರರಿಂದ ಕೇಳಲಾಗುವ ಮಾಹಿತಿಯ ಸ್ವರೂಪದಲ್ಲಿ ಬದಲಾವಣೆ ಉಂಟಾಗಿದೆ. ಆದರೆ, ‘Registration of Electors Rules, 1960’ ಅಡಿಯಲ್ಲಿ ನಿಗದಿಪಡಿಸಲಾದ ಕಾನೂನುಬದ್ಧ ಫಾರ್ಮ್‌ 6 ಅನ್ನು ಈ ಹೆಚ್ಚುವರಿ ಮಾಹಿತಿಯನ್ನು ಒಳಗೊಳ್ಳುವಂತೆ ಯಾವುದೇ ಸಾರ್ವಜನಿಕವಾಗಿ ಲಭ್ಯವಿರುವ ಗೆಜೆಟ್ ಅಧಿಸೂಚನೆಯ ಮೂಲಕ ತಿದ್ದುಪಡಿ ಮಾಡಿಲ್ಲ ಎಂಬುದನ್ನು ಗಮನಿಸಬೇಕಾಗಿದೆ.

ಫಾರ್ಮ್‌ ನಂ 6′ ಎಂಬ ಕಾನೂನುಬದ್ಧ ನಮೂನೆ

ಫಾರ್ಮ್‌ ನಂ. 6 ಮತದಾರರ ಪಟ್ಟಿಗೆ ವ್ಯಕ್ತಿಯ ಹೆಸರನ್ನು ಸೇರಿಸುವುದಕ್ಕಾಗಿ ನಿಗದಿಪಡಿಸಲಾದ ಕಾನೂನುಬದ್ಧ ಅರ್ಜಿ ನಮೂನೆಯಾಗಿದೆ. ಇದಕ್ಕೆ ‘ಜನತಾ ಪ್ರಾತಿನಿಧ್ಯ ಕಾಯ್ದೆ, 1950’ ಮತ್ತು ‘ಮತದಾರರ ನೋಂದಣಿ ನಿಯಮಗಳು, 1960’ ಕಾನೂನು ಆಧಾರವಾಗಿವೆ. ಸಂವಿಧಾನದ ಆರ್ಟಿಕಲ್ 326 ಪ್ರಕಾರ, ಕಾನೂನಿನಲ್ಲಿ ನಿಗದಿಪಡಿಸಿರುವ ಅನರ್ಹತೆಗಳಿಗೆ ಒಳಪಡದ ಪ್ರತಿಯೊಬ್ಬ ವಯಸ್ಕ ನಾಗರಿಕರೂ ತಾವು ಸಾಮಾನ್ಯವಾಗಿ ವಾಸಿಸುವ ಕ್ಷೇತ್ರದಲ್ಲಿ ಮತದಾರರಾಗಿ ನೋಂದಾಯಿಸಿಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ.

ಫಾರ್ಮ್ 6, ‘ಮತದಾರರ ನೋಂದಣಿ ನಿಯಮಗಳ’ ಭಾಗವಾಗಿರುವುದರಿಂದ, ಅದರಲ್ಲಿರುವ ವಿಷಯಗಳು ಆಡಳಿತಾತ್ಮಕ ಕ್ರಮಕ್ಕಿಂತಲೂ ಅಧೀನ ಶಾಸನ (delegated legislation)ದ ವ್ಯಾಪ್ತಿಗೆ ಬರುತ್ತವೆ. ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 28 ಅಡಿಯಲ್ಲಿ, ಕೇಂದ್ರ ಸರ್ಕಾರವು ಚುನಾವಣಾ ಆಯೋಗದೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಈ ನಿಯಮಗಳನ್ನು ರೂಪಿಸಬಹುದು ಅಥವಾ ತಿದ್ದುಪಡಿ ಮಾಡಬಹುದು. ಇಂತಹ ತಿದ್ದುಪಡಿಗಳನ್ನು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚಿಸಬೇಕು ಮತ್ತು ನಂತರ ಸಂಸತ್ತಿನ ಮುಂದೆ ಮಂಡಿಸಬೇಕು.

ಹಿಂದೆಯೂ ಕಾನೂನುಬದ್ಧ ಚುನಾವಣಾ ನಮೂನೆಗಳಲ್ಲಿ ಬದಲಾವಣೆಗಳನ್ನು ಮಾಡಬೇಕಾದಾಗ, ಕಾನೂನು ಸಚಿವಾಲಯವು ಮತದಾರರ ನೋಂದಣಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಅದನ್ನು ಗೆಜೆಟ್ ಅಧಿಸೂಚನೆಯ ಮೂಲಕ ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ, ಪ್ರಸ್ತುತ ಹೆಚ್ಚುವರಿ ಪೋಷಕರ ಘೋಷಣೆ ಕೇವಲ ಇಸಿಐ ಪೋರ್ಟಲ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವುದು ಮಹತ್ವದ್ದಾಗಿದೆ. ಆಫ್‌ಲೈನ್ ಸಲ್ಲಿಕೆಗೆ ಲಭ್ಯವಿರುವ ಡೌನ್‌ಲೋಡ್ ಮಾಡಬಹುದಾದ ಫಾರ್ಮ್‌ 6 ಇನ್ನೂ ಅಧಿಕೃತವಾಗಿ ಅಧಿಸೂಚಿತವಾಗಿರುವ ಹಳೆಯ ನಮೂನೆಯನ್ನೇ ಹೊಂದಿದ್ದು, ಅದರಲ್ಲಿ ಈ ಹೊಸ ಘೋಷಣೆಯಿಲ್ಲ.

ಇದರ ಪರಿಣಾಮವಾಗಿ, ಫಾರ್ಮ್‌ 6ನ ಆನ್‌ಲೈನ್ ಮತ್ತು ಆಫ್‌ಲೈನ್ ಆವೃತ್ತಿಗಳು ಪರಸ್ಪರ ಹೊಂದಿಕೆಯಾಗದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಒಂದು ಪ್ರಮುಖ ಕಾನೂನು ಪ್ರಶ್ನೆ ಉದ್ಭವಿಸುತ್ತದೆ: ಕಾನೂನುಬದ್ಧ ನಮೂನೆಗೆ ಸಂಬಂಧಿಸಿದ ಮೂಲಭೂತ ಹೆಚ್ಚುವರಿ ಮಾಹಿತಿಯನ್ನು, ಮತದಾರರ ನೋಂದಣಿ ನಿಯಮಗಳಿಗೆ ತಿದ್ದುಪಡಿ ಮಾಡದೆ ಕೇವಲ ಆನ್‌ಲೈನ್ ಪೋರ್ಟಲ್ ಮೂಲಕ ಸೇರಿಸಬಹುದೇ?

ಪ್ರಸ್ತುತ ಪರಿಸ್ಥಿತಿ 2022ರಲ್ಲಿ ಅನುಸರಿಸಲಾದ ಪ್ರಕ್ರಿಯೆಯಿಂದ ಗಮನಾರ್ಹವಾಗಿ ಭಿನ್ನವಾಗಿದೆ. ಆ ಸಂದರ್ಭದಲ್ಲಿ ಮತದಾರರ ನೋಂದಣಿ ನಮೂನೆಗಳಲ್ಲಿ ವ್ಯಾಪಕ ಬದಲಾವಣೆಗಳನ್ನು ಮಾಡಲಾಗಿತ್ತು.

ಚುನಾವಣಾ ಕಾನೂನುಗಳು (ತಿದ್ದುಪಡಿ) ಕಾಯ್ದೆ, 2021 ಮೂಲಕ ಜನತಾ ಪ್ರಾತಿನಿಧ್ಯ ಕಾಯ್ದೆಯ ಹಲವು ವಿಧಿಗಳನ್ನು ತಿದ್ದುಪಡಿ ಮಾಡಲಾಯಿತು. ಈ ತಿದ್ದುಪಡಿಗಳ ಅನುಸರಣೆಯಲ್ಲಿ, ಕಾನೂನು ಮತ್ತು ನ್ಯಾಯ ಸಚಿವಾಲಯವು ಜೂನ್ 17, 2022ರಂದು ಗೆಜೆಟ್ ಅಧಿಸೂಚನೆ ಮೂಲಕ ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, 2022 ಅನ್ನು ಅಧಿಸೂಚಿಸಿತು. ತಿದ್ದುಪಡಿ ಮಾಡಲಾದ ನಿಯಮಗಳು ಆಗಸ್ಟ್ 1, 2022ರಿಂದ ಜಾರಿಗೆ ಬಂದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...