Homeಮುಖಪುಟಬಿಹಾರ| ಗ್ರಾಮ ತೊರೆಯಿರಿ ಅಥವಾ 'ಘರ್ ವಾಪ್ಸಿ'ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

- Advertisement -
- Advertisement -

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು ‘ಕ್ಲಾರಿಯನ್ ಇಂಡಿಯಾ’ ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. ‘ಘರ್ ವಾಪ್ಸಿ’ಯಾಗಿ ಅಥವಾ ಗ್ರಾಮ ತೊರೆಯುವಂತೆ ಬೆದರಿಕೆ ಹಾಕಿದ್ದು, ಇದು ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯ ಹುಟ್ಟುಹಾಕಿದೆ.

ಸುದ್ದಿ ಪ್ರಕಾರ, ಆಗಸ್ಟ್ 8 ರಂದು ಹಳ್ಳಿಯಾದ್ಯಂತ ಚಲಿಸುವ ಮೂರು ಚಕ್ರಗಳ ವಾಹನದಲ್ಲಿ ಅಳವಡಿಸಲಾದ ಧ್ವನಿವರ್ಧಕಗಳ ಮೂಲಕ ಬೆದರಿಕೆ ಸಂದೇಶ ಪ್ರಸಾರ ಮಾಡಲಾಯಿತು. ಬೆದರಿಕೆ ಹಾಕುತ್ತಿರುವ ವೀಡಿಯೊಗಳು ಅಂದಿನಿಂದ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.

ಹಿಂದುತ್ವ ಗುಂಲಿನ ಸದಸ್ಯರು ಕ್ರಿಶ್ಚಿಯನ್ ಕುಟುಂಬಗಳನ್ನು ಸಮಾಜ ದ್ರೋಹಿಗಳು ಕರೆದಿದ್ದಾರೆ. ಸಂಪೂರ್ಣ ಸಾಮಾಜಿಕ ಬಹಿಷ್ಕಾರ ಜಾರಿಗೊಳಿಸುವಂತೆ ಇತರೆ ಸಮುದಾಯದ ನಿವಾಸಿಗಳಿಗೆ ಕರೆ ನೀಡಿದ್ದಾರೆ. ಗೋಪಾಲಪುರವು ಐತಿಹಾಸಿಕವಾಗಿ ಸಂಪೂರ್ಣವಾಗಿ ಹಿಂದೂಗಳಾಗಿದ್ದು, ಭವಿಷ್ಯದಲ್ಲಿ ಹಿಂದೂಗಳು ಮಾತ್ರ ಇಲ್ಲಿ ವಾಸಿಸಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರು ಪರಿಣಾಮಕಾರಿಯಾಗಿ ತಮ್ಮ ನಂಬಿಕೆಯನ್ನು ತ್ಯಜಿಸಬೇಕು, ಘರ್‌ ವಾಪ್ಸಿಯಾಗದಿದ್ದರೆ ತಮ್ಮ ಮನೆಗಳನ್ನು ತೊರೆಯಬೇಕು ಎಂದು ಬರದರಿಕೆ ಹಾಕುತ್ತಿದ್ದಾರೆ.

ಲೌಡ್‌ಸ್ಪೀಕರ್ ಸಂದೇಶವು ಕ್ರಿಶ್ಚಿಯನ್ ಸಮುದಾಯದ ಪೂಜಾ ಸ್ಥಳಗಳನ್ನು ಸಹ ಗುರಿಯಾಗಿರಿಸಿಕೊಂಡಿದೆ. ಗ್ರಾಮದ ಸಾಮಾಜಿಕ ಸುವ್ಯವಸ್ಥೆಗೆ ಚರ್ಚ್‌ಗಳು ಅಪಾಯಕಾರಿ ಎಂದು ಅವರು ಆರೋಪಿಸಿದ್ದಾರೆ. ಇಂದು ಚರ್ಚ್‌ಗಳಿಗೆ ಅನುಮತಿ ನೀಡಿದರೆ, ನಾಳೆ ಮಸೀದಿಗಳು ನಿರ್ಮಾಣವಾಗುತ್ತವೆ ಎಂದು ಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸ ಮಾಡಿದ್ದಾರೆ. ಈ ಬೆಳವಣಿಗೆಯು ಭಾರತದ ಅತಿದೊಡ್ಡ ಧಾರ್ಮಿಕ ಅಲ್ಪಸಂಖ್ಯಾತರನ್ನು ಅಪಾಯವೆಂದು ಬಿಂಬಿಸುತ್ತದೆ. ಓರ್ವ ಭಾಷಣಕಾರನು ಕ್ರಿಶ್ಚಿಯನ್ ಅವಕಾಶ ನೀಡುವುದರಿಂದ ಗ್ರಾಮವು “ಹಾಳಾಗುತ್ತದೆ” ಎಂದು ಹೇಳಿದ್ದಾನೆ.

ಗೋಪಾಲಪುರವು ಒಂದು ಸಣ್ಣ ಹೊಸ ಬಡಾವಣೆಯಾಗಿದೆ. 2011 ರಲ್ಲಿ ನಡೆದ ಕೊನೆಯ ಜನಗಣತಿಯಲ್ಲಿ, ಇದು 411 ಕುಟುಂಬಗಳಲ್ಲಿ 2,387 ನಿವಾಸಿಗಳನ್ನು ಹೊಂದಿತ್ತು. ಈಗ ಕ್ರಿಶ್ಚಿಯನ್ ಸಮುದಾಯದ 42 ಕುಟುಂಬಗಳು ನೆಲೆ ನಿಂತಿವೆ.

ಭದ್ರತಾ ಕಾಳಜಿಗಳನ್ನು ಉಲ್ಲೇಖಿಸಿದ ಹೆಸರು ಬಹಿರಂಗಪಡಿಸಲು ಬಯಸದ ಕ್ರಿಶ್ಚಿಯನ್ ನಿವಾಸಿಯೊಬ್ಬರು, ಸಮುದಾಯವು ದೀರ್ಘಕಾಲದಿಂದ ಒತ್ತಡವನ್ನು ಎದುರಿಸುತ್ತಿದೆ ಎಂದು ಹೇಳಿದರು.

ಹಿಂದುತ್ವ ಗುಂಪುಗಳು ಭಾರತೀಯ ಕ್ರೈಸ್ತರು ಮತ್ತು ಮುಸ್ಲಿಮರು ಹಿಂದೂಗಳ ವಂಶಸ್ಥರು, ಅವರನ್ನು ಮತ್ತೆ ಹಿಂದೂ ಧರ್ಮಕ್ಕೆ ತರಬೇಕು ಎಂದು ವಾದಿಸಲು ‘ಘರ್ ವಾಪ್ಸಿ’ ಎಂಬ ಪರಿಕಲ್ಪನೆಯನ್ನು ಬಹಳ ಹಿಂದಿನಿಂದಲೂ ಬಳಸುತ್ತಿವೆ.

ಈ ಘಟನೆಯು ಸಾಂವಿಧಾನಿಕ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದು ಮಾನವ ಹಕ್ಕುಗಳ ಪರ ವಕೀಲರು ಹೇಳಿದ್ದಾರೆ. ಜೆಸ್ಯೂಟ್ ಪಾದ್ರಿ ಮತ್ತು ಕಾರ್ಯಕರ್ತ ಫಾದರ್ ಸೆಡ್ರಿಕ್ ಪ್ರಕಾಶ್ ಅವರು, ಇಡೀ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಪ್ರತ್ಯೇಕತೆಗೆ ಕರೆಗಳು ಧಾರ್ಮಿಕ ವಿವಾದವನ್ನು ಮೀರಿ ಭಾರತದ ಸಾಂವಿಧಾನಿಕ ಖಾತರಿಗಳಾದ ಆತ್ಮಸಾಕ್ಷಿಯ ಸ್ವಾತಂತ್ರ್ಯ ಮತ್ತು ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೇರವಾಗಿ ಪ್ರಶ್ನಿಸುತ್ತವೆ ಎಂದು ಹೇಳಿದರು.

ಈ ದ್ವೇಷ ಭಾಷಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಾಷಿಂಗ್ಟನ್ ಮೂಲದ ಇಂಡಿಯಾ ಹೇಟ್ ಲ್ಯಾಬ್ 2025 ರಲ್ಲಿ ದ್ವೇಷ ಭಾಷಣ ಎಂದು ಕರೆಯಲಾದ 1,318 ಪ್ರಕರಣಗಳನ್ನು ದಾಖಲಿಸಿದೆ. ಇದು 2024 ರಲ್ಲಿ 1,165 ಮತ್ತು 2023 ರಲ್ಲಿ 668 ರಷ್ಟಿತ್ತು.

2025 ರ ಘಟನೆಗಳಲ್ಲಿ, 1,164 ಘಟನೆಗಳು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ಅದರ ಮಿತ್ರ ಪಕ್ಷಗಳು ಆಡಳಿತ ನಡೆಸುವ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...