HomeಅಂಕಣಗಳುKarnataka against SIRASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

- Advertisement -
- Advertisement -

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ ವಿಷಯದಲ್ಲೂ ಸರಿಯಾದ ಕ್ರಮ ವಹಿಸಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಯೋಗ ನೀಡಿರುವ ಅಧಿಕೃತ ಹೇಳಿಕೆ ಮತ್ತು ವಾಸ್ತವ ಸ್ಥಿತಿಯ ನಡುವೆ ಅಜಾಗಜಾಂತರ ವ್ಯತ್ಯಾಸವಿರುವುದು ಗೋಚರಿಸಿದೆ.

ಆಗಸ್ಟ್ 12ರಂದು ನಡೆದ ಚುನಾವಣಾಧಿಕಾರಿಗಳ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) ಅನ್ಬುಕುಮಾರ್, “ಎಎಸ್‌ಡಿಡಿಒ ಪಟ್ಟಿಯನ್ನು ಎಲ್ಲ ಬೂತ್ ಮಟ್ಟದ ಅಧಿಕಾರಿಗಳು (BLO), ಇಆರ್‌ಒ ಮತ್ತು ನೋಂದಾಯಿತ ರಾಜಕೀಯ ಪಕ್ಷಗಳಿಗೆ ತಲುಪಿಸಲಾಗಿದೆ. ಅಷ್ಟೇ ಅಲ್ಲದೆ, ಪ್ರತಿಯೊಂದು ಗ್ರಾಮ ಪಂಚಾಯತ್ ಭವನಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಈ ಪಟ್ಟಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದರು.

ಕ್ಷೇತ್ರ ಮಟ್ಟದಲ್ಲಿ ಪ್ರಕಟವಾಗಲೇ ಇಲ್ಲ ಪಟ್ಟಿ!

ಮುಖ್ಯ ಚುನಾವಣಾಧಿಕಾರಿಗಳ ಈ ಹೇಳಿಕೆಯ ಬೆನ್ನಲ್ಲೇ ‘ನಾಗರಿಕ ಮತಕಾವಲು ಸಮಿತಿ’ ಸೇರಿದಂತೆ ವಿವಿಧ ಜಾಗೃತ ಸಂಘಟನೆಗಳು ಪ್ರತ್ಯಕ್ಷ ಪರಿಶೀಲನೆಗೆ ಇಳಿದಿದ್ದವು. ಬೆಂಗಳೂರಿನ ಪದ್ಮನಾಭನಗರ, ಶಾಂತಿನಗರ ಸೇರಿದಂತೆ ತುಮಕೂರು, ಹಾಸನ, ಚಿಕ್ಕಮಗಳೂರು, ರಾಯಚೂರು ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಸಿದ ಈ ಪರಿಶೀಲನೆ ವೇಳೆ ಇದುವರೆಗೆ ಯಾವುದೇ ಪಂಚಾಯತ್‌ನಲ್ಲಾಗಲಿ ಅಥವಾ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಾಗಲಿ ಎಎಸ್‌ಡಿಡಿಒ ಪಟ್ಟಿಯನ್ನು ಸಾರ್ವಜನಿಕ ಪ್ರದರ್ಶನಕ್ಕೆ ಪ್ರಕಟಿಸಿಲ್ಲ ಎಂಬುದು ಸ್ಪಷ್ಟವಾಗಿದೆ.

ಶಾಶ್ವತವಾಗಿ ಒಂದೇ ವಿಳಾಸದಲ್ಲಿ ವಾಸಿಸುತ್ತಿರುವವರನ್ನೂ ‘ಶಾಶ್ವತ ಸ್ಥಳಾಂತರ’ ಅಥವಾ ‘ಗೈರು’ ಎಂದು ತಪ್ಪಾಗಿ ಎಎಸ್‌ಡಿಡಿಒ ಪಟ್ಟಿಗೆ ಸೇರಿಸಿರುವ ದೂರುಗಳು ರಾಜ್ಯಾದ್ಯಂತ ವ್ಯಾಪಕವಾಗಿವೆ. ಇಂತಹ ಸಂದರ್ಭದಲ್ಲಿ ಆ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಬದಲಿಗೆ ಮತದಾರರು ತಮ್ಮ ಹೆಸರು ಪರಿಶೀಲಿಸಿಕೊಂಡು ಆಕ್ಷೇಪಣೆ ಸಲ್ಲಿಸಲು ಇರುವ ಮೂಲಭೂತ ಹಕ್ಕು. ಆದರೆ ಪಟ್ಟಿಯೇ ಸಿಗದಿದ್ದ ಮೇಲೆ ಸಾಮಾನ್ಯ ಮತದಾರ ತನ್ನ ಹೆಸರು ಕಡಿತಗೊಂಡಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದಾದರೂ ಹೇಗೆ?  ಅಯೋಗದ ವೆಬ್‌ಸೈಟ್‌ನಲ್ಲಿ ನೋಡಲು ಎಲ್ಲರಿಗೂ ಸಾಧ್ಯವಿಲ್ಲ ಎಂಬುದು ಆಯೋಗಕ್ಕೆ ತಿಳಿದಿಲ್ಲವೇ?

ಆಯೋಗ ಸೂಚನೆ ನೀಡಿರುವುದಕ್ಕೂ, ಅದು ವಾಸ್ತವದಲ್ಲಿ ಜಾರಿಯಾಗಿರುವುದಕ್ಕೂ ಅಂತರವಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಾರ್ವಜನಿಕವಾಗಿ ಕೆಲವು ಪ್ರಶ್ನೆಗಳಿಗೆ ತಕ್ಷಣ ಸ್ಪಷ್ಟನೆ ನೀಡಬೇಕಿದೆ:

  • ರಾಜ್ಯದ ಎಷ್ಟು ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಟ್ಟಿಯನ್ನು ಪ್ರಕಟಿಸಲಾಗಿದೆ?
  • ಪಟ್ಟಿ ಪ್ರಕಟಿಸಲು ನಿಗದಿಪಡಿಸಿದ್ದ ಅಂತಿಮ ದಿನಾಂಕ ಯಾವುದು?
  • ಪ್ರಕಟಿಸದ ಅಧಿಕಾರಿಗಳ ವಿರುದ್ಧ ಆಯೋಗ ಕೈಗೊಂಡ ಕ್ರಮವೇನು?
  • ಈ ಸೂಚನೆ ಕೇವಲ ಕಾಗದದ ಮೇಲಷ್ಟೇ ಉಳಿದಿದೆಯೇ?

“ರಾಜಕೀಯ ಪಕ್ಷಗಳಿಗೆ ಪಟ್ಟಿ ಕೊಟ್ಟ ತಕ್ಷಣವೇ ಆಯೋಗ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. SIR ಪ್ರಕ್ರಿಯೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವುದು ರಾಜಕೀಯ ಪಕ್ಷಗಳ ಕೆಲಸವಲ್ಲ, ಅದು ಚುನಾವಣಾ ಆಯೋಗದ ಮೂಲಭೂತ ಕರ್ತವ್ಯ. ಆ.12ರಂದು ನೀಡಿದ ಸೂಚನೆಗಳು ತಳಮಟ್ಟಕ್ಕೆ ತಲುಪಿವೆಯೇ ಎಂಬುದನ್ನು ಆಯೋಗ ಬಹಿರಂಗಪಡಿಸಬೇಕು” ಎಂದು ನಾಗರಿಕ ಮತಕಾವಲು ಸಮಿತಿಯ ವರದರಾಜೇಂದ್ರ ಆಗ್ರಹಿಸಿದ್ದಾರೆ.

ಬೆಳಗಿನಿಂದ ಸಂಜೆಯವರೆಗೆ ಕಚೇರಿ ಅಲೆಯುವ ಸಾಮಾನ್ಯ ನಾಗರಿಕನ ಮತಹಕ್ಕನ್ನು ಕಸಿಯುವ ಇಂತಹ ಪ್ರಮಾದಗಳ ಬಗ್ಗೆ ಚುನಾವಣಾ ಆಯೋಗವು ತಕ್ಷಣವೇ ಎಚ್ಚೆತ್ತುಕೊಂಡು, ಪ್ರತಿಯೊಂದು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಪಟ್ಟಿಯನ್ನು ಸಾರ್ವಜನಿಕವಾಗಿ ಲಭ್ಯಗೊಳಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...