HomeಅಂಕಣಗಳುKarnataka against SIR‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ,...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

- Advertisement -
- Advertisement -

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. 

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, ಮತದಾರರ ಪಟ್ಟಿಯಿಂದ ಸತ್ತವರ ಹೆಸರುಗಳನ್ನು ತೆಗೆಯುವುದು, ಹೊಸ ಮತದಾರರನ್ನು ಸೇರಿಸುವುದು ಮತ್ತು ಸ್ಥಳಾಂತರಗೊಂಡವರಿಗೆ ಸೂಕ್ತ ಬೂತ್‌ನಲ್ಲಿ ಮತದಾನದ ಹಕ್ಕು ಕಲ್ಪಿಸುವುದು ಆಯೋಗದ ಕರ್ತವ್ಯ ಎಂದು ಹೇಳಿದರು. ಆದರೆ ಈಗಾಗಲೇ ಪಟ್ಟಿಯಲ್ಲಿರುವ ಮತದಾರರಿಂದಲೇ ನಮೂನೆಗಳನ್ನು ಭರ್ತಿ ಮಾಡಿಸಿಕೊಳ್ಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಒಂದರಿಂದ ಒಂದೂವರೆ ತಿಂಗಳ ಅವಧಿಯಲ್ಲಿ ರಾಜ್ಯದ ಸುಮಾರು ಐದು ಕೋಟಿ ಜನರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸುವುದು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಈ ಪ್ರಕ್ರಿಯೆಯಿಂದ ಚುನಾವಣಾ ಸಿಬ್ಬಂದಿ ಮತ್ತು ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಒತ್ತಡ ಬಂದಿದೆ ಎಂದು ಅವರು ಗಮನಸೆಳೆದರು. ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಗಳ ಸಾವಿಗೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದರು.

ಮನೆ ಭೇಟಿ ಸಂದರ್ಭದಲ್ಲಿ ಜನರು ಕೆಲಸಕ್ಕೆ ಹೊರಗೆ ಹೋಗಿರಬಹುದು, ಮಹಿಳೆಯರು ತವರಿಗೆ ತೆರಳಿರಬಹುದು ಅಥವಾ ಮನೆಯಲ್ಲಿರುವ ವಯೋವೃದ್ಧರಿಗೆ ಮಾಹಿತಿ ತಿಳಿದಿರದಿರಬಹುದು. ಇಂತಹ ಕಾರಣಗಳಿಗಾಗಿ ಹೆಸರುಗಳನ್ನು ಅಳಿಸುವುದು ಸರಿಯಲ್ಲ ಎಂದು ಪ್ರಕಾಶ್ ರಾಜ್ ಹೇಳಿದರು. ಬಂಡೀಪುರದ ಜನರು ಆರು ತಿಂಗಳು ವಯನಾಡಿಗೆ ವಲಸೆ ಹೋಗುತ್ತಾರೆ. ಉತ್ತರ ಕರ್ನಾಟಕದ ಕೂಲಿಕಾರರೂ ಬೇರೆಡೆಗೆ ದುಡಿಯಲು ಹೋಗುತ್ತಾರೆ. ರೈತರು ಮತ್ತು ಅಲೆಮಾರಿಗಳ ಬಗ್ಗೆ ಯೋಚನೆ ಮಾಡದೆ ಅವರ ಹೆಸರುಗಳನ್ನು ತೆಗೆಯುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು. ಜನರು ತೆರಿಗೆ ಕಟ್ಟುತ್ತಿರುವುದು ಸರ್ಕಾರ ನಡೆಸಲು. ಸಂವಿಧಾನದ ಪ್ರಕಾರ ಒಬ್ಬರಿಗೆ ಒಂದು ಮತ ಎಂಬುದು ಹಕ್ಕು. ಅದನ್ನು ಕಿತ್ತುಕೊಳ್ಳುವುದು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಹೇಳಿದರು. ನೋಟಿಸ್ ಕೊಡದೆ ಪ್ರಜೆಗಳನ್ನು ತಮ್ಮ ಹಕ್ಕಿಗಾಗಿ ಬೇಡಿಕೊಳ್ಳುವಂತೆ ಮಾಡುವುದು ಹೇಗೆ? ಒಂದು ಸಮುದಾಯ ಮತ್ತು ವ್ಯಕ್ತಿಯ ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಅವರು ಮನವಿ ಮಾಡಿದರು.

ಮುಂದಿನ ಚುನಾವಣೆಗೆ ಇನ್ನೂ ಎರಡು ವರ್ಷಗಳಿರುವಾಗ ಇಷ್ಟೊಂದು ಅವಸರ ಯಾಕೆ ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದರು. ಸ್ವಚ್ಛ ಭಾರತ ಯೋಜನೆಗಿಂತ ಅದರ ಜಾಹೀರಾತಿಗೆ ಹೆಚ್ಚು ಖರ್ಚು ಮಾಡುವವರು, SIR ಪ್ರಕ್ರಿಯೆಗೆ ಆರು ತಿಂಗಳ ಮುಂಚಿತವಾಗಿ ಜಾಗೃತಿ ಮೂಡಿಸದಿರುವುದು ಯಾಕೆ ಎಂದು ಅವರು ಟೀಕಿಸಿದರು. ಜಾಗೃತಿ ಮೂಡಿಸದೆ ಏಕಾಕಿಯಾಗಿ ಬಂದು ಬಾಗಿಲು ತಟ್ಟಿ, ಅವರು ಇಲ್ಲ ಎಂದು ವರದಿ ಮಾಡಿ, ಫಾರ್ಮ್ ಸಹಿ ಮಾಡಿ ಕೊಡದಿದ್ದಕ್ಕಾಗಿ ಹೆಸರು ಅಳಿಸುವುದು ಸರಿಯಲ್ಲ ಎಂದು ಅವರು ಹೇಳಿದರು. ಈಗಾಗಲೇ ನೋಟು ಅಮಾನ್ಯೀಕರಣದಿಂದ ಜನರನ್ನು ಕಾಡಿಸಿದ್ದಾರೆ. ದಿನಗೂಲಿ ನೌಕರ ಒಂದು ದಿನ ರಜೆ ಹಾಕಿದರೆ ಅವನ ಕೂಲಿ ನಷ್ಟವಾಗುತ್ತದೆ ಎಂದು ತಿಳಿಸಿದರು,

ಅಲ್ಲದೇ ಮನೆ ಬದಲಾಯಿಸಿದವರಿಗೆ ಫಾರ್ಮ್ 8 ನೀಡಬೇಕು, ಫಾರ್ಮ್ 6 ಅಲ್ಲ. ಹಳೆಯ ಮತದಾರರಿಗೆ ಫಾರ್ಮ್ 8 ಕೇಳುವುದು ಮತ್ತು ಮನೆ ಬದಲಾಯಿಸಿದವರಿಗೆ ಫಾರ್ಮ್ 6 ಕೇಳುವುದು ಸರಿಯಲ್ಲ ಎಂದು ಅವರು ಹೇಳಿದರು. ಆರು ತಿಂಗಳ ಹೆಚ್ಚುವರಿ ಸಮಯ ತೆಗೆದುಕೊಂಡು, ಕೊನೆಯ ಮತದಾರನಿಗೂ ಅರಿವು ಮೂಡಿಸಿ ಪ್ರಕ್ರಿಯೆಯನ್ನು ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.

ಕೂಲಿಗಾಗಿ ಬೇರೆಡೆ ಹೋಗಿರುವವರ ಹಕ್ಕು ರಕ್ಷಿಸಿ, ಹೊಸ ಮತದಾರರನ್ನು ಸೇರಿಸಿ, ಸತ್ತವರ ಹೆಸರನ್ನು ಮಾತ್ರ ಅಳಿಸಿ ಎಂದು ಮನವಿ ಮಾಡಿದ ಅವರು, ಇದು ನನ್ನ ವೈಯಕ್ತಿಕ ಸಮಸ್ಯೆಯಲ್ಲ, ಇದು ದೇಶದ ಸಮಸ್ಯೆ. ಧ್ವನಿ ಇಲ್ಲದ ಜನರ ಪರವಾಗಿ ನಾವು ನಿಲ್ಲಬೇಕು ಎಂದು ಹೇಳಿದರು. ಇದು ಸಾಧ್ಯವಾಗದಿದ್ದರೆ ಬೀದಿ ಹೋರಾಟಕ್ಕೆ ಇಳಿಯುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದರು. 

ಇದೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎದ್ದೇಳು ಕರ್ನಾಟಕದ ನೂರ್ ಶ್ರೀಧರ್, “ಪ್ರಕಾಶ್ ರಾಜ್ ಅವರ ಹೆಸರನ್ನು ಡಿಲೀಟ್ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದಗಳು” ಎಂದು ಹೇಳಿದರು. ನಾಗರಿಕ ಸಂಘಟನೆಗಳು 200ಕ್ಕೂ ಹೆಚ್ಚು ಪತ್ರಗಳನ್ನು ಬರೆದಿದ್ದರೂ ಆಯೋಗ ಪ್ರತಿಕ್ರಿಯೆ ನೀಡಿಲ್ಲ ಎಂದ ಅವರು ಇದು ಕರ್ನಾಟಕದ ಸುಮಾರು 1 ಕೋಟಿ 10 ಲಕ್ಷ ಮತದಾರರ ವಿಷಯವಾಗಿದೆ. ಆಯೋಗವು ಮೂರು ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಮೊದಲ SIR ನಲ್ಲಿ ವೋಟರ್ ಲಿಸ್ಟ್ ಸಂಖ್ಯೆ ಹೆಚ್ಚಾಗಿತ್ತು. ಈಗ ಅದು ಕಡಿಮೆಯಾಗುತ್ತಿರುವುದು ಹೇಗೆ ಎಂದು ಅವರು ಪ್ರಶ್ನಿಸಿದರು. ಉತ್ತರ ಭಾರತದಲ್ಲಿ ಮೊದಲು ಹೆಸರುಗಳನ್ನು ಅಳಿಸಲಾಗಿತ್ತು. ಬಿಹಾರದಲ್ಲಿ ವಲಸೆ ಕಾರಣ ಎಂದುಕೊಂಡಿದ್ದೆವು. ಉತ್ತರ ಪ್ರದೇಶದಲ್ಲಿ ಎರಡು ಕೋಟಿ ಹೆಸರುಗಳನ್ನು ಅಳಿಸಲಾಗಿತ್ತು, ಅದನ್ನೂ ವಲಸೆ ಎಂದು ಭಾವಿಸಿದ್ದೆವು. ತಮಿಳುನಾಡಿನಲ್ಲಿ 90 ಲಕ್ಷ ಹೆಸರುಗಳು ಕಡಿಮೆಯಾಗಿವೆ. ಕರ್ನಾಟಕದಲ್ಲೂ ಇದೇ ಪ್ರಕ್ರಿಯೆ ನಡೆಯುತ್ತಿದೆ. ಉತ್ತರ ಮತ್ತು ದಕ್ಷಿಣ ಭಾರತದಲ್ಲಿ ಹೇಗೆ ಇದು ನಡೆಯುತ್ತಿದೆ ಎಂದು ಅವರು ಕೇಳಿದರು. ವಲಸಿಗರಿಂದ ತುಂಬಿರುವ ಬೆಂಗಳೂರಿನಲ್ಲಿ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿರುವುದು ಹೇಗೆ ಎಂದು ಅವರು ಪ್ರಶ್ನಿಸಿದರು.

ಹಿಂದಿನ SIR ನಲ್ಲಿ ಮನೆಮನೆ ಭೇಟಿ ಸಂದರ್ಭದಲ್ಲಿ ಸತ್ತವರು, ಹೊಸ ಮತದಾರರು ಮತ್ತು ಸ್ಥಳಾಂತರಗೊಂಡವರಿಂದ ಫಾರ್ಮ್ ಪಡೆದು ತುಂಬುತ್ತಿದ್ದರು. ಈ ಬಾರಿ ಫಾರ್ಮ್ 6 ಮತ್ತು 8 ಬದಲಿಗೆ ಎನ್ಯುಮರೇಷನ್ ಫಾರ್ಮ್ ಬಳಸಿದ್ದು ಯಾಕೆ ಎಂದು ಅವರು ಪ್ರಶ್ನಿಸಿದರು. ಸಣ್ಣ ಕಾರಣಗಳಿಗೆ ಹೆಸರುಗಳನ್ನು ಅಳಿಸುತ್ತಿರುವುದು ಯಾಕೆ? ಶಿಫ್ಟ್ ಅಥವಾ ಅಬ್ಸೆಂಟ್ ಆಗಿದ್ದರೆ ಅಳಿಸಿದ್ದು ಯಾಕೆ? ಅಧಿಕಾರಿಗಳು ಹೋದಾಗ ಜನರು ದುಡಿಯಲು ಹೋಗಿರುತ್ತಾರೆ. ಬಾಡಿಗೆ ಮನೆ ಬದಲಾಯಿಸಿದವರ ಹೆಸರನ್ನು ಅಳಿಸುವಂತಿಲ್ಲ ಎಂದು ನೂರ್ ಶ್ರೀಧರ್ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಹಾಗೂ ಎದ್ದೇಳು ಕರ್ನಾಟಕದ ನೂರ್ ಶ್ರೀಧರ್ , ತಾರಾ ರಾವ್ ಹಾಗೂ ‘ನನ್ನ ಮತ, ನನ್ನ ಹಕ್ಕು’ ವೇದಿಕೆಯ ಮೃದುಲ, ತನ್ವೀರ್, ರಂಜಿತ್, ಮಧು, ಐಶ್ವರ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...