Homeಕರ್ನಾಟಕಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ...

ಹನೂರು | ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ : ಇಲಾಖೆಯಿಂದ ತಪ್ಪಾಗಿದೆ ಎಂದ ಸಚಿವ ಪುಟ್ಟರಂಗಶೆಟ್ಟಿ

- Advertisement -
- Advertisement -

ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ (ಆ.15) ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್‌ನಲ್ಲಿ ಘಟನೆ ನಡೆದಿದ್ದು, ಮೃತರನ್ನು ತೊಮಿಯರ್ ಪಾಳ್ಯ ಗ್ರಾಮದ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಎಂದು ಗುರುತಿಸಲಾಗಿದೆ. ಮರಿಯ ಮಂಗಲದ ಮಹಿಮಾದಾಸ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದರೆನ್ನಲಾದ ನಾಲ್ವರು ವನ್ಯ ಪ್ರಾಣಿಯನ್ನು ಬೇಟೆಯಾಡಿ, ಅದರ ಮಾಂಸವನ್ನು ಹಂಚಿಕೆ ಮಾಡಿಕೊಳ್ಳುವ ಸಮಯದಲ್ಲಿ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಗುಂಡಿನ ದಾಳಿ ನಡೆದಿದೆ. ಪರಿಣಾಮ ಅಂತೊಣಿಸ್ವಾಮಿ , ಪೀಟರ್ , ಕುಮಾರ್ ಸಾವನ್ನಪ್ಪಿದ್ದು, ಪರಾರಿಯಾಗಿರುವ ಮಹಿಮಾದಾಸ್ ಸೆರೆಗಾಗಿ ಅರಣ್ಯಾಧಿಕಾರಿಗಳು ಶೋಧನಾ ಕಾರ್ಯ ಮುಂದುವರೆಸಿದ್ದಾರೆ ಎಂದು ವರದಿಗಳು ಹೇಳಿವೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರ ಮೃತ ದೇಹಗಳನ್ನು ಮೊದಲು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿತ್ತು. ನಂತರ ಪೊಲೀಸ್ ಬಂದೂಬಸ್ತ್ ನೊಂದಿಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಲಾಗಿದೆ.

ಗ್ರಾಮಸ್ಥರಿಂದ ಆಕ್ರೋಶ

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಹತ್ಯೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮದ ಕೆಲವರು ಶಾಗ್ಯದಲ್ಲಿರುವ ಸಹಾಯಕ ವಲಯ ಅರಣ್ಯಾಧಿಕಾರಿಗಳ ಕಛೇರಿಯ ಮೇಲೆ ದಾಳಿ ನಡೆಸಿ ಕಛೇರಿಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ತೊಮಿಯರ್ ಪಾಳ್ಯ, ಶಾಗ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.

ಅರಣ್ಯ ಇಲಾಖೆ ಪ್ರತಿಕ್ರಿಯೆ

“ಮೃತರು ಬೇಟೆಯಾಡಲು ಹೋಗಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಎದುರಾಗಿದ್ದಾರೆ. ಈ ವೇಳೆ ಅವರು ನಾಡಬಂದೂಕಿನಿಂದ ಸಿಬ್ಬಂದಿ ಮೇಲೆ ಗುಂಡು ಹಾರಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಬಳಿಕ ಅವರನ್ನು ರಕ್ಷಣೆ ಮಾಡಲು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರಲ್ಲಿ ಮೂವರೂ ಸಾವನ್ನಪ್ಪಿದ್ದಾರೆ” ಎಂದು ಎಸಿಎಫ್​​​ ಮರಿಸ್ವಾಮಿ ಹೇಳಿರುವುದಾಗಿ ನ್ಯೂಸ್ 18 ಕನ್ನಡದ ವರದಿ ಉಲ್ಲೇಖಿಸಿದೆ.

ಅರಣ್ಯ ಇಲಾಖೆಯಿಂದ ದೊಡ್ಡ ತಪ್ಪಾಗಿದೆ : ಸಚಿವ ಪುಟ್ಟರಂಗಶೆಟ್ಟಿ

“ಶೂಟೌಟ್ ಮಾಡಿದ ಮೇಲೆ ಯಾಕೆ ಮೃತದೇಹಗಳನ್ನು ಮೈಸೂರಿಗೆ ತಂದರು ಎಂದು ನನಗೂ ಗೊತ್ತಿಲ್ಲ. ಒಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪಾಗಿದೆ” ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಘಟನೆಯ ಕುರಿತು ಹೇಳಿದ್ದಾರೆ.

ಮೃತದೇಹಗಳನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪಾಗಿದೆ. ಪ್ರಕರಣದ ಬಗ್ಗೆ ಇಲಾಖೆಯವರು ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ ಒಂದೊಂದು ರೀತಿ ನಮಗೆ ಸುಳ್ಳು ಹೇಳುತ್ತಿದ್ದಾರೆ. ನನಗೆ ಇಡೀ ಪ್ರಕರಣದ ಬಗ್ಗೆ ಸತ್ಯಾಸತ್ಯತೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಬೇಟೆಯಾಡಿಕೊಂಡು ವಾಪಸ್ ಬರುವಾಗ ಗುಂಡು ಹೊಡೆದರು ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದನ್ನು ನಂಬುವ ಸ್ಥಿತಿಯಲ್ಲಿ ನಾನಿಲ್ಲ. ಎನ್‌ಕೌಂಟರ್ ಮಾಡಿದ ಮೇಲೆ ಮೃತ ದೇಹ ಯಾಕೆ ಅಲ್ಲಿಂದ ಮೈಸೂರಿಗೆ ಶಿಫ್ಟ್ ಮಾಡಿದರು. ಯಾರನ್ನು ಕೇಳದೆ ಮೈಸೂರಿಗೆ ಮೃತದೇಹ ಏಕೆ ಬಂತು? ನನಗೆ ಅರಣ್ಯ ಇಲಾಖೆಯವರು ಹೇಳುತ್ತಿರುವುದು ಸುಳ್ಳು. ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇವೆ. ಈ ಕುರಿತು ಸಮಗ್ರ ತನಿಖೆ ಮಾಡಿಸುತ್ತೇವೆ ಎಂದು ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಮೃತಪಟ್ಟಿರುವವರು ಬೇಟೆಗಾರರು ಎಂದು ನನಗೆ ಅನಿಸುವುದಿಲ್ಲ. ಅರಣ್ಯ ಇಲಾಖೆಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಪ್ರಕರಣದಿಂದ ಸರ್ಕಾರಕ್ಕೂ ಮುಜುಗರ ಆಗಿದೆ. ಪ್ರಕರಣದ ಬಗ್ಗೆ ಇನ್ನು ಯಾರು ದೂರು ಕೊಟ್ಟಿಲ್ಲ. ಎಫ್‌ಐಆರ್ ಆಗದೆ ಮರಣೋತ್ತರ ಪರೀಕ್ಷೆ ಆಗಲ್ಲ‌ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ...

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು 'ಹತಾಶೆಯ ಸ್ಪಷ್ಟ ಸಂಕೇತ' ಎಂದು ತಿರುಗೇಟು ನೀಡಿದ್ದಾರೆ. ಮೋದಿಯವರು ಈ...

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...