Homeಮುಖಪುಟರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

- Advertisement -
- Advertisement -

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (NDRF) ಅಡಿಯಲ್ಲಿ ಮಂಜೂರಾದ ಒಟ್ಟು ಹಣದಲ್ಲಿ ಅರ್ಧದಷ್ಟನ್ನೂ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಬಿಡುಗಡೆ ಮಾಡಿಲ್ಲ ಎಂಬ ಕಳವಳಕಾರಿ ಸತ್ಯವನ್ನು ಭಾರತೀಯ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲರ (CAG) ವರದಿ ಬಹಿರಂಗಪಡಿಸಿದೆ.

ಸಂಸತ್ತಿನಲ್ಲಿ ಮಂಡಿಸಲಾದ 2024-25ರ ಕೇಂದ್ರ ಸರ್ಕಾರದ ಲೆಕ್ಕಪತ್ರ ವರದಿಯನ್ನು ವಿಶ್ಲೇಷಿಸಿರುವ ಸಿಎಜಿ, ಕೇಂದ್ರ ಸರ್ಕಾರವು ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಅನುದಾನವನ್ನು ತಡೆಹಿಡಿಯುತ್ತಿರುವ ಶೈಲಿಯನ್ನು ಸಂಪೂರ್ಣವಾಗಿ ಬಯಲಿಗೆಳೆದಿದೆ.

ಸ್ವರೂಪದ ಪ್ರಕೃತಿ ವಿಕೋಪಗಳ ಪರಿಹಾರಕ್ಕಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ಒಟ್ಟು ₹11,474 ಕೋಟಿ ಮಂಜೂರಾಗಿತ್ತು. ಆದರೆ, ರಾಜ್ಯಗಳಿಗೆ ತಲುಪಿದ್ದು ಕೇವಲ ₹5,356 ಕೋಟಿ ಮಾತ್ರ. ಅಂದರೆ, ಶೇ. 53 ಕ್ಕಿಂತಲೂ ಹೆಚ್ಚು ಅನುದಾನ (₹6,117.97 ಕೋಟಿ) ಬಳಕೆಯಾಗದೆ ಕೇಂದ್ರದ ಬೊಕ್ಕಸದಲ್ಲೇ ಉಳಿದುಕೊಂಡಿದೆ.

ರಾಷ್ಟ್ರೀಯ ವಿಪತ್ತು ಶಮನ ನಿಧಿ (NDMF) ಅಡಿಯಲ್ಲಿ ಮಂಜೂರಾಗಿದ್ದ ₹2,868 ಕೋಟಿಗಳ ಪೈಕಿ ರಾಜ್ಯಗಳಿಗೆ ವರ್ಗಾವಣೆಯಾಗಿದ್ದು ಕೇವಲ ₹719.72 ಕೋಟಿ ಮಾತ್ರ. ಶೇ. 75 ರಷ್ಟು ಅನುದಾನ ಬಳಕೆಯಾಗದೆ ಬಾಕಿ ಉಳಿದಿದೆ.

ರಾಜ್ಯಗಳಿಗೆ ನೀಡಲಾಗುವ ‘ವಿಶೇಷ ನೆರವು’ ಯೋಜನೆಗೆ ₹20,000 ಕೋಟಿ ನಿಗದಿಪಡಿಸಲಾಗಿದ್ದರೂ, ವೆಚ್ಚ ಮಾಡಿದ್ದು ಕೇವಲ ₹3,350 ಕೋಟಿ. ಉಳಿದ ಶೇ. 83 ರಷ್ಟು ಹಣ ಬಿಡುಗಡೆಯೇ ಆಗಿಲ್ಲ.ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ‘ಮುಂಗಡ ನೆರವಿನ ಸಾಲ’ವಾಗಿ ನೀಡಲು ಕಾಯ್ದಿರಿಸಲಾಗಿದ್ದ ₹100 ಕೋಟಿ ಅನುದಾನದಿಂದ ಒಂದು ಪೈಸೆಯನ್ನೂ ಬಳಸಲಾಗಿಲ್ಲ.

ಇದಷ್ಟೇ ಅಲ್ಲದೆ, 2022-23ರಲ್ಲಿ ₹67,882 ಕೋಟಿ, 2023-24ರಲ್ಲಿ ₹46,012.89 ಕೋಟಿ ಹಾಗೂ 2024-25ರಲ್ಲಿ ₹36,219 ಕೋಟಿ ಹಣವು ರಾಜ್ಯಗಳಿಗೆ ತಲುಪದೆ ಬಾಕಿ ಉಳಿದಿದೆ ಎಂದು ಸಿಎಜಿ ಕಳವಳ ವ್ಯಕ್ತಪಡಿಸಿದೆ.ಪ್ರಕೃತಿ ವಿಕೋಪಗಳ ಸಮಯದಲ್ಲಿ ಕೇಂದ್ರದಿಂದ ಸೂಕ್ತ ಪರಿಹಾರ ಸಿಗದೆ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳು ನಿರಂತರವಾಗಿ ಪರದಾಡುವಂತಾಗಿದೆ.

ಕರ್ನಾಟಕ: 2024ರಲ್ಲಿ ಭೀಕರ ಬರಗಾಲ ಎದುರಿಸಿದ್ದ ಕರ್ನಾಟಕ ಸರ್ಕಾರವು ₹18,000 ಕೋಟಿ ಪರಿಹಾರ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕೇವಲ ₹3,499 ಕೋಟಿ ಮಾತ್ರ. ಈ ತಾರತಮ್ಯವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು.

ತಮಿಳುನಾಡು: ಮಿಚೌಂಗ್ ಚಂಡಮಾರುತದಿಂದಾದ ಹಾನಿಗೆ ₹37,907.21 ಕೋಟಿ ಪರಿಹಾರ ಕೋರಿತ್ತು. ಆದರೆ ದೊರೆತದ್ದು ಕೇವಲ ₹276 ಕೋಟಿ.

ಕೇರಳ: ವಯನಾಡ್ ಭೀಕರ ಭೂಕುಸಿತದ ಸರಣಿ ದುರಂತಕ್ಕೆ ಕೇರಳ ₹2,221 ಕೋಟಿ ಪರಿಹಾರ ಕೋರಿತ್ತಾದರೂ, ಕೇಂದ್ರ ಅನುಮೋದಿಸಿದ್ದು ಕೇವಲ ₹260.56 ಕೋಟಿ. ಈ ಅನ್ಯಾಯವನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದೆ.

ಅಸ್ಸಾಂ: ಪ್ರವಾಹದಿಂದ ತತ್ತರಿಸಿದ್ದ ಅಸ್ಸಾಂ ರಾಜ್ಯ ಕೋರಿದ್ದ ಒಟ್ಟು ಹಣದಲ್ಲಿ ಕೇಂದ್ರ ಬಿಡುಗಡೆ ಮಾಡಿದ್ದು ಕೇವಲ ಶೇ. 2.4 ರಷ್ಟು ಮಾತ್ರ.

ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ನಿಯಮಾವಳಿಗಳ ಪ್ರಕಾರ, ರಾಜ್ಯ ವಿಪತ್ತು ಸ್ಪಂದನಾ ನಿಧಿ (SDRF) ಖಾಲಿಯಾದಾಗ ಅಥವಾ ತೀವ್ರ ಸ್ವರೂಪದ ದುರಂತ ಸಂಭವಿಸಿದಾಗ ರಾಜ್ಯಗಳು ಸಲ್ಲಿಸುವ ನಷ್ಟದ ವರದಿಯನ್ನು ಆಧರಿಸಿ ಕೇಂದ್ರದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಬೇಕಾಗುತ್ತದೆ. ತದನಂತರ NDRF ಅಡಿಯಲ್ಲಿ ಹಣ ಬಿಡುಗಡೆ ಮಾಡುವುದು ಕೇಂದ್ರದ ಕರ್ತವ್ಯ.

ಆದರೆ, ಸಿಎಜಿ ವರದಿಯೇ ಸ್ಪಷ್ಟಪಡಿಸಿರುವಂತೆ, ಮಂಜೂರಾದ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೆ ತನ್ನ ಬಳಿಯೇ ಇಟ್ಟುಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಆಪತ್ತಿನಲ್ಲಿರುವ ರಾಜ್ಯಗಳಿಗೆ ಮತ್ತು ಸಂಕಷ್ಟದಲ್ಲಿರುವ ಜನರಿಗೆ ಸ್ಪಷ್ಟ ವಂಚನೆ ಎಸಗುತ್ತಿದೆ ಎಂಬುದು ಸಾಬೀತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...