HomeಮುಖಪುಟNALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

- Advertisement -
- Advertisement -

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ.

ಹೈದರಾಬಾದ್‌ನ ನಲ್ಸಾರ್ ವಿಶ್ವವಿದ್ಯಾಲಯದ 2026ರ ಬ್ಯಾಚ್‌ನ ವಿದ್ಯಾರ್ಥಿಗಳು ವಕೀಲರಾಗಿ ನೋಂದಣಿ ಮಾಡಿಕೊಳ್ಳುವುದನ್ನು ತಡೆಯಲು ಬಿಸಿಐ ಈ ಹಿಂದೆ ಆದೇಶಿಸಿತ್ತು. ವಿದ್ಯಾರ್ಥಿಗಳು ಘಟಿಕೋತ್ಸವಕ್ಕೆ ಮುಖ್ಯ ನ್ಯಾಯಮೂರ್ತಿಗಳನ್ನು ಆಹ್ವಾನಿಸುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಈ ನಿರ್ಧಾರಕ್ಕೆ ಕಾನೂನು ವಲಯ ಮತ್ತು ಸುಪ್ರೀಂ ಕೋರ್ಟ್‌ನಿಂದ ತೀವ್ರ ವಿರೋಧ ವ್ಯಕ್ತವಾದ ನಂತರ, ಬಿಸಿಐ ತನ್ನ ಆದೇಶವನ್ನು ಹಿಂತೆಗೆದುಕೊಂಡಿತ್ತು.

ಈ ಬೆನ್ನಲ್ಲೇ, ಸ್ವಾತಂತ್ರ್ಯ ದಿನಾಚರಣೆಯಂದು ಪತ್ರ ಬರೆದಿರುವ ಮನನ್ ಕುಮಾರ್ ಮಿಶ್ರಾ ಅವರು, ತಮ್ಮ ಮಾತುಗಳು ಅಥವಾ ನಿರ್ದೇಶನಗಳು ವಿದ್ಯಾರ್ಥಿಗಳ ಮನಸ್ಸಿಗೆ ನೋವುಂಟು ಮಾಡಿದ್ದರೆ ಅದಕ್ಕಾಗಿ ಪ್ರಾಮಾಣಿಕವಾಗಿ ವಿಷಾದ ವ್ಯಕ್ತಪಡಿಸುವುದಾಗಿ ಮತ್ತು ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.

“ಪ್ರಸ್ತುತ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಯಾವುದೇ ಮಾತುಗಳು ಅಥವಾ ಪತ್ರಗಳು ನಮ್ಮ ಕಾನೂನು ವಿದ್ಯಾರ್ಥಿಗಳ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ಅದಕ್ಕಾಗಿ ನಾನು ಪ್ರಾಮಾಣಿಕವಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸುತ್ತೇನೆ” ಎಂದು ಮಿಶ್ರಾ ಅವರು ಪತ್ರದಲ್ಲಿ ಹೇಳಿದ್ದಾರೆ.

“ಹೀಗೆ ಹೇಳಲು ಯಾವುದೇ ಹಿಂಜರಿಕೆ ಇರಬಾರದು. ವಿಷಾದ ವ್ಯಕ್ತಪಡಿಸುವುದು ಗೌರವ ಅಥವಾ ಅಹಂಕಾರದ ವಿಷಯವಲ್ಲ. ಇದು ಕೇವಲ ನಮ್ಮ ವಿದ್ಯಾರ್ಥಿಗಳ ಭಾವನೆಗಳು ಮತ್ತು ಕಾಳಜಿಗಳು ನಮಗೆ ಮುಖ್ಯ ಎಂಬುದನ್ನು ಒಪ್ಪಿಕೊಳ್ಳುವ ವಿಧಾನವಾಗಿದೆ” ಎಂದು ಮಿಶ್ರಾ ಪತ್ರದಲ್ಲಿ ತಿಳಿಸಿದ್ದಾರೆ. ಆದರೆ, ಅವರು ಪತ್ರದಲ್ಲಿ ಯಾವುದೇ ವಿಶ್ವವಿದ್ಯಾಲಯದ ಹೆಸರನ್ನು ಉಲ್ಲೇಖಿಸಿಲ್ಲ ಅಥವಾ ನಿರ್ದಿಷ್ಟ ವಿವಾದದ ಬಗ್ಗೆ ನೇರವಾಗಿ ಪ್ರಸ್ತಾಪಿಸಿಲ್ಲ.

ನಲ್ಸಾರ್ (NALSAR) ಮತ್ತು ಎನ್ಎಲ್ಎಸ್ಐಯು (NLSIU) ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಮಿಶ್ರಾ ಅವರಿಂದ ಬೇಷರತ್ ಕ್ಷಮೆಯಾಚನೆಗೆ ಒತ್ತಾಯಿಸಿದ್ದರು. ಎನ್ಎಲ್ಎಸ್ಐಯು ವಿದ್ಯಾರ್ಥಿಗಳು ತಮ್ಮ ಘಟಿಕೋತ್ಸವ ಸಮಾರಂಭದಲ್ಲಿ ಮಿಶ್ರಾ ಅವರು ಭಾಗವಹಿಸುವುದಕ್ಕೂ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ತಮ್ಮ ಮೂರು ಪುಟಗಳ ಪತ್ರದಲ್ಲಿ, ವಿಶೇಷವಾಗಿ ಘಟಿಕೋತ್ಸವ ಸಮಾರಂಭಗಳನ್ನು ಉಲ್ಲೇಖಿಸಿದ ಮಿಶ್ರಾ, ಇವು ವರ್ಷಗಳ ಕಠಿಣ ಪರಿಶ್ರಮ ಮತ್ತು ವಿದ್ಯಾರ್ಥಿಗಳ ಜೀವನದ ಪ್ರಮುಖ ಬದಲಾವಣೆಯನ್ನು ಗುರುತಿಸುವ ವಿಶೇಷ ಸಂದರ್ಭಗಳಾಗಿವೆ ಎಂದು ಬಣ್ಣಿಸಿದ್ದಾರೆ. ಈ ಸಮಾರಂಭದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ಎಂಬ ಅಂತಿಮ ನಿರ್ಧಾರವು ವಿದ್ಯಾರ್ಥಿಗಳಿಗೇ ಬಿಟ್ಟಿದ್ದಾಗಿರಬೇಕು ಎಂದಿದ್ದಾರೆ.

“ಯಾವ ವಿದ್ಯಾರ್ಥಿಯನ್ನೂ ಹಾಜರಾಗಲು ಒತ್ತಾಯಿಸಬಾರದು ಮತ್ತು ಯಾವ ವಿದ್ಯಾರ್ಥಿಯೂ ದೂರವಿರಲು ಒತ್ತಾಯಿಸಲ್ಪಟ್ಟಂತೆ ಭಾವಿಸಬಾರದು” ಎಂದು ಹೇಳಿದ ಮಿಶ್ರಾ, ವಿಷಯವನ್ನು ಸಂಪೂರ್ಣವಾಗಿ ಪರಿಗಣಿಸಿದ ನಂತರ ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

ನ್ಯಾಯಾಂಗ, ಬಾರ್, ವಿಶ್ವವಿದ್ಯಾಲಯಗಳು ಮತ್ತು ಕಾನೂನು ವಿದ್ಯಾರ್ಥಿಗಳ ನಡುವಿನ ಸಂಬಂಧವು ಯಾವುದೇ ತಾತ್ಕಾಲಿಕ ವಿವಾದಕ್ಕಿಂತ ಹೆಚ್ಚು ಆಳವಾದದ್ದು ಮತ್ತು ದೀರ್ಘಕಾಲ ಉಳಿಯುವಂತದ್ದು ಎಂದು ಮಿಶ್ರಾ ಹೇಳಿದ್ದಾರೆ. ಭಿನ್ನಾಭಿಪ್ರಾಯಗಳನ್ನು ಅಂತಿಮವಾಗಿ ಸಂವಾದ, ಸ್ಪಷ್ಟೀಕರಣ ಮತ್ತು ಪರಸ್ಪರ ಗೌರವದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳನ್ನು ಕಾನೂನು ವೃತ್ತಿಯ ಭವಿಷ್ಯ ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಪರಿಗಣಿಸುತ್ತದೆ ಎಂದಿರುವ ಮಿಶ್ರಾ, ಹಾಗೆಯೇ ಅವರ ಗೌರವ, ಸ್ವತಂತ್ರ ಆಲೋಚನೆ ಮತ್ತು ನ್ಯಾಯಸಮ್ಮತವಾದ ಕಾಳಜಿಗಳನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಅವರು, ಸಂವಾದ, ಪರಸ್ಪರ ಗೌರವ ಮತ್ತು ಸಾಂವಿಧಾನಿಕ ಮೌಲ್ಯಗಳ ಮಹತ್ವವನ್ನು ಒತ್ತಿಹೇಳಿದ್ದಾರೆ.

ಪ್ರಸ್ತುತ ಸಮಸ್ಯೆಯನ್ನು ‘ನ್ಯಾಯೋಚಿತತೆ ಮತ್ತು ಸಾಮರಸ್ಯದ ಮನೋಭಾವ’ದಿಂದ ಪರಿಗಣಿಸಬೇಕು ಎಂದಿರುವ ಮಿಶ್ರಾ, ಇದು ‘ಹೊರಗಿನ ಪ್ರಭಾವದಿಂದ ರಾಜಕೀಯ ಅಥವಾ ಬಾಹ್ಯ ಸ್ವರೂಪ’ವನ್ನು ಪಡೆದುಕೊಳ್ಳಬಾರದು ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸ್ವತಂತ್ರ ಆಲೋಚನೆಯನ್ನು ಗೌರವಿಸುವಂತೆ ಅವರು ಸಂಸ್ಥೆಗಳಿಗೆ ಒತ್ತಾಯಿಸಿದ್ದು, ಯಾವುದೇ ಅಡ್ಡಿಯಿಲ್ಲದೆ ಸಂವಾದ ನಡೆಸಲು ಹಾಗೂ ಮುನ್ನಡೆಯಲು ಮುಕ್ತ ಅವಕಾಶವಿರಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...

ಮಮತಾ ಬ್ಯಾನರ್ಜಿ ಆಪ್ತ, ಮಾಜಿ ಡೆಪ್ಯೂಟಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ TMC ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ಮುಖಂಡ ಆಶಿಶ್ ಬ್ಯಾನರ್ಜಿ ಅವರು, ಭಾನುವಾರ (ಆ.16) ಬೆಳಿಗ್ಗೆ ಬೀರ್‌ಭೂಮ್ ಜಿಲ್ಲೆಯ ರಾಂಪುರಹತ್‌ನ ಹಟ್ಟಾಲಾ ಪಾರಾದಲ್ಲಿರುವ ಅವರ...

ದೇಶದ ಜನರಿಗೆ ‘SIR, EVM, ECI’ಗಳಿಂದ ಸ್ವಾತಂತ್ರ್ಯ ಬೇಕಿದೆ: ಎದ್ದೇಳು ಕರ್ನಾಟಕ

ಬೆಂಗಳೂರು: ಭಾರತವು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ, ದೇಶದ ಪ್ರಜೆಗಳು ತಮ್ಮ ಅತಿ ಅಮೂಲ್ಯವಾದ ‘ಮತದಾನದ ಹಕ್ಕನ್ನು’ ಕಳೆದುಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಈ ದೇಶದ ಜನರಿಗೆ ಈಗ ‘SIR (ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ),...