Homeಕರ್ನಾಟಕಬಂದ ಪುಟ್ಟಾ... ಹೋದ ಪುಟ್ಟಾ...

ಬಂದ ಪುಟ್ಟಾ… ಹೋದ ಪುಟ್ಟಾ…

- Advertisement -
- Advertisement -

ಬೆಲ್ಲದ ಕಟ್ಟೆಯ ಕಟ್ಟಿ
ಬೇವಿನ ಬೀಜವ ಬಿತ್ತಿ
ಜೇನು ಮಳೆಗರೆದರೆ
ವಿಷ ಹೋದಿತೇನಯ್ಯಾ?

ದಾಸರ ಈ ನುಡಿಮುತ್ತುಗಳು ಪ್ರಸ್ತುತ ಸನ್ನಿವೇಶಕ್ಕೆ ಹೇಳಿಮಾಡಿಸಿದಂತಿವೆ. ಜಾತ್ಯತೀತ, ಧರ್ಮಾತೀತ ಪರಂಪರೆಯ ಹಿನ್ನೆಲೆಯುಳ್ಳ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದು ಅಪ್ಪಟ ಚುನಾವಣಾ ಪ್ರಚಾರದ ಭಾಷಣ. ಮಕ್ಕಳನ್ನು ಮುಂದಿಟ್ಟುಕೊಂಡು ತಿಳಿವಳಿಕೆ ಮೂಡಿಸಬೇಕಿತ್ತು. ಮುಂದಿನ ಗುರಿ, ಉದ್ದೇಶಗಳ ಕುರಿತು ಅರಿವು ಹೇಳಬೇಕಿತ್ತು. ಮಕ್ಕಳ ಸಮಯಪ್ರಜ್ಞೆ, ಪ್ರಶ್ನಿಸುವ ಮನೋಭಾವದ ಕುರಿತು ಗಮನಸೆಳೆಯಬೇಕಿತ್ತು. ಮಕ್ಕಳ ಮನಸ್ಸಿನಲ್ಲಿ ಸುಂದರ ಕನಸು ಬಿತ್ತಬೇಕಿತ್ತು. ಇದ್ಯಾವುದನ್ನು ಮಾಡದ ಪ್ರಧಾನಿ ಮಕ್ಕಳ ಮನದೊಳಗೆ ದ್ವೇಷದ ಕಿಡಿ ಹೊತ್ತಿಸಿಹೋದರು. ಮುಂದೆ ಇದೇ ಕಿಡಿಗಳು ತನ್ನನ್ನೇ ಆಹುತಿ ತೆಗೆದುಕೊಳ್ಳಬಹುದು ಎಂಬುದನ್ನು ಮರೆತರು.

ಮೋದಿಯವರು 370 ಕಲಂ ರದ್ದುಮಾಡಿ ಜಮ್ಮು-ಕಾಶ್ಮೀರದ ವಿಶೇಷ ಮಾನ್ಯತೆ ತೆಗೆದುಹಾಕಿದ್ದು, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಯ ಕುರಿತು ಹೇಳಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಮಠದ ನೂರಾರು ವರ್ಷಗಳ ಇತಿಹಾಸದಲ್ಲಿ ಬಂದುಹೋದ ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೂಡ ಇಂತಹ ಕೊಳಕು ಭಾಷಣ ಮಾಡಿರಲಿಲ್ಲ ಎಂಬುದು ಹಿರಿಯರು ಅನುಭವದ ಮಾತು.

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ ಯಾವುದೇ ಫಲವನ್ನು ಕೊಡಲು ವಿಫಲವಾಗಿದೆ. ಪ್ರಧಾನಿ ಬಂದುಹೋಗಿದ್ದಕ್ಕೆ ಖರ್ಚಾಯಿತೇ ವಿನಃ ಜನರಿಗೇನೂ ಪ್ರಯೋಜನವಾಗಲಿಲ್ಲ. ರೈತ ಸಮಾವೇಶದಲ್ಲಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ನಾಲ್ಕನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಿಸುವ ಗೋಜಿಗೇ ಹೋಗಲಿಲ್ಲ. ತುಮಕೂರು ಫುಡ್‍ಪಾರ್ಕ್, ಎಚ್.ಎ.ಎಲ್ ಅಭಿವೃದ್ಧಿ, ಡಾ.ಶಿವಕುಮಾರ ಸ್ವಾಮಿಗಳಿಗೆ ಭಾರತರತ್ನ ಪ್ರಕಟಿಸುವ ಪ್ರಸ್ತಾಪ ಮಾಡಬಹುದೆಂಬ ಜನರ ನಿರೀಕ್ಷೆಗೆ ಹುಸಿಯಾಗಿದೆ. ಚುನಾವಣೆ ಸಮಯದಲ್ಲಿ ತುಮಕೂರು ಜಿಲ್ಲೆಗೆ ನೀಡಿದ್ದ ಭರವಸೆಗಳ ಬಗ್ಗೆಯೂ ಚಕಾರ ಎತ್ತಲಿಲ್ಲ. ತೆಂಗು, ಅಡಿಕೆ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ತೆಂಗು ಪಾರ್ಕ್ ನಿರ್ಮಾಣದ ಬಗ್ಗೆ ಮೋದಿ ಮೌನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ತುಮಕೂರು ಹಲವು ಹಬ್‍ಗಳನ್ನು ಹೊಂದಿದೆ. ಕಾರಿಡಾರ್‍ಗಳು ಇವೆ. ಕೈಗಾರಿಕೆಗಳು ಸಾಕಷ್ಟಿವೆ. ಇವುಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳೇನು ಎಂಬುದನ್ನು ಭಾಷಣದಲ್ಲಿ ಪ್ರಸ್ತಾಪಿಸಲಿಲ್ಲ. ತುಮಕೂರು ನಗರವನ್ನು ಸ್ಮಾರ್ಟ್‍ಸಿಟಿಯಡಿ ಆಯ್ಕೆ ಮಾಡಿದೆಯಾದರೂ, ಅದು ಅಭಿವೃದ್ದಿಯಾಗಿಲ್ಲ. ಇನ್ನು ದೇಶದಲ್ಲಿರುವ ಸ್ಮಾರ್ಟ್ ಸಿಟಿಗಳು ಯಾವ ಹಂತದಲ್ಲಿವೆ? ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಚಕಾರವೆತ್ತಲಿಲ್ಲ. ಪ್ರವಾಹ ಪರಿಹಾರ, ರೈತರ ಆತ್ಮಹತ್ಯೆ, 2020ಕ್ಕೆ ರೈತರ ಆದಾಯ ಡಬಲ್, ಜಿಎಸ್‍ಟಿ ರಾಜ್ಯದ ಪಾಲಿನ ಹಣ ಬಿಡುಗಡೆ – ಹೀಗೆ ಯಾವುದೇ ವಿಷಯ ಮಾತನಾಡುವ ಗೊಡವೆಗೆ ಹೋಗಲಿಲ್ಲ ಪ್ರಧಾನಿ.

ಕರ್ನಾಟಕ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರಿ ನೌಕರರ ವೇತನ ಪಾವತಿಸುವುದು ಇದನ್ನು ಪುಷ್ಟೀಕರಿಸುತ್ತದೆ. ಹೀಗಾಗಿಯೇ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪನವರು ರೈತರ ಸಮಾವೇಶದ ಬಹಿರಂಗ ಸಭೆಯಲ್ಲೇ ನೇರವಾಗಿ ಕೇಳಿದರು. ರಾಜ್ಯ ಹಿಂದೆಂದೂ ಕಂಡರಿಯದ ಪ್ರವಾಹದಿಂದ ತತ್ತರಿಸಿದೆ. ನೂರಾರು ಗ್ರಾಮಗಳು ಮುಳುಗಡೆಯಾಗಿವೆ. ಮೂರು ಲಕ್ಷ ಮನೆಗಳು ಕುಸಿದುಬಿದ್ದಿವೆ. ಸಂತ್ರಸ್ತರು ಮನೆಗಳಿಲ್ಲದೆ ತೊಂದರೆಗೊಳಗಾಗಿದ್ದಾರೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ಇದರಿಂದ 30 ಸಾವಿರ ಕೋಟಿ ನಷ್ಟವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಧಾನಿಗೆ ನಾಲ್ಕು ಬಾರಿ ಮನವಿ ಮಾಡಿದರೂ ಕೇವಲ 1200 ಕೋಟಿ ಬಿಡುಗಡೆ ಮಾಡಿದ್ದು ಬಿಟ್ಟರೆ ಉಳಿದ ಹಣ ಬಂದಿಲ್ಲ ಎಂದು ಗೋಗರೆದರು. ಮುಖ್ಯಮಂತ್ರಿಗಳು ಮನವಿಪೂರ್ವಕ ಒತ್ತಾಯ ಮಾಡಿದರೂ ಪ್ರಧಾನಿ ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ತುಟಿಬಿಚ್ಚಲಿಲ್ಲ.

ಒಂದು ರಾಜ್ಯದ ಮುಖ್ಯಮಂತ್ರಿ, ಅದೂ ತನ್ನದೇ ಪಕ್ಷದ ಮುಖ್ಯಮಂತ್ರಿಯೊಬ್ಬರು ಮನವಿ ಮಾಡಿದರೂ ಪ್ರಧಾನಿ ಹಣ ಬಿಡುಗಡೆಗೆ ಮೌನ ವಹಿಸಿದರು. ಕರ್ನಾಟಕದ ಮುಖ್ಯಮಂತ್ರಿ ಮತ್ತು ರಾಜ್ಯದ ಜನತೆಗೆ ಪ್ರಧಾನಿ ಅವಮಾನ ಮಾಡಿದರು. ಪ್ರಧಾನಿಯ ನಡವಳಿಕೆಗೆ ವಿರೋಧ ಪಕ್ಷಗಳು ಕಿಡಿಕಾರಿದವು. ಪ್ರಧಾನಿ ಬಂದ ಪುಟ್ಟ, ಹೋದ ಪುಟ್ಟ ಅನ್ನುವಂತೆ ಮಾಡಿದರು. ಪ್ರಧಾನಿಯ ಕರ್ನಾಟಕ ಭೇಟಿಯ ಉದ್ದೇಶ ಕೇವಲ ರೈತರ ಖಾತೆಗಳಿಗೆ 2000 ರೂಪಾಯಿ ಭಿಕ್ಷೆ ಹಾಕುವುದು ಬಿಟ್ಟರೆ ಬೇರೇನೂ ಆಗಿರಲಿಲ್ಲ.

ರೈತರ ಸಮಾವೇಶದಲ್ಲಿ ದಕ್ಷಿಣ ಭಾರತದ ಪ್ರಮುಖ ಬೆಳೆಗಳನ್ನು ಪ್ರಸ್ತಾಪಿಸಿದರು. ಸಮಾವೇಶದಲ್ಲಿ ಸೇರಿದ್ದ ರೈತರಿಗೆ ಅದರ ಅವಶ್ಯಕತೆ ಇರಲಿಲ್ಲ. ದಕ್ಷಿಣದ ರಾಜ್ಯಗಳಿಂದಲೇ ನವಭಾರತದ ಕನಸು ಸಾಕಾರಗೊಳ್ಳಲು ಸಾಧ್ಯ. ದಕ್ಷಿಣ ಭಾರತ ಹೊಸ ಸಂಶೋಧನೆಗೆ ಶಕ್ತಿ ತುಂಬಲಿವೆ ಎಂಬ ಮಾತುಗಳನ್ನಾಡಿದರು. ನವಭಾರತದಲ್ಲಿ ದಕ್ಷಿಣ ರಾಜ್ಯಗಳನ್ನು ಕೇಂದ್ರ ಸರ್ಕಾರ ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ನಾವೆಲ್ಲರೂ ನೋಡುತ್ತಿದ್ದೇವೆ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...