Homeಮುಖಪುಟಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ ಭಾರೀ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತಕ್ಷಣವೇ ದೇಶದ ಜನತೆಗೆ ಸ್ಪಷ್ಟೀಕರಣ ನೀಡಬೇಕು ಎಂದು ಕಾಂಗ್ರೆಸ್ ಮಂಗಳವಾರ ತೀವ್ರವಾಗಿ ಒತ್ತಾಯಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಸೋಮವಾರ ನ್ಯಾಯಾಲಯದಲ್ಲಿ ನಡೆಯಿತು. ಈ ವೇಳೆ ಪ್ರತಿವಾದಿಯ ವಕೀಲರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತ್ಯಕಿ ಸಾವರ್ಕರ್, “ತಮ್ಮ ತಾಯಿಯ ಅಜ್ಜ ನಾಥೂರಾಮ್ ಗೋಡ್ಸೆ ಮತ್ತು ಅವರ ಸಹೋದರ ಗೋಪಾಲ್ ಗೋಡ್ಸೆ ಇಬ್ಬರೂ ಆರ್‌ಎಸ್‌ಎಸ್‌ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂಬುದು ನಿಜ” ಎಂದು ಒಪ್ಪಿಕೊಂಡಿದ್ದಾರೆ. ಜೊತೆಗೆ ನಾಥೂರಾಮ್ ಗೋಡ್ಸೆ ಅವರು ಹಿಂದೂ ಮಹಾಸಭಾದ ಕಾರ್ಯಕರ್ತರಾಗಿಯೂ ಸಕ್ರಿಯರಾಗಿದ್ದರು ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. 

ಆದರೆ, ಗೋಪಾಲ್ ಗೋಡ್ಸೆ ಅವರು ಜನವರಿ 28, 1994 ರಂದು ‘ಫ್ರಂಟ್‌ಲೈನ್’ ನಿಯತಕಾಲಿಕೆಗೆ ನೀಡಿದ್ದ ಸಂದರ್ಶನದ ಕುರಿತು ಅಥವಾ ನಾಥೂರಾಮ್ ಗೋಡ್ಸೆ 1944 ರಲ್ಲಿ ಆರೆಸ್ಸೆಸ್‌ನ “ಬೌದ್ಧಿಕ್ ಕಾರ್ಯವಾಹ” ಆಗಿ ಕಾರ್ಯನಿರ್ವಹಿಸುತ್ತಿದ್ದರೆ ಎಂಬ ಪ್ರಶ್ನೆಗಳಿಗೆ ತಮಗೆ ಮಾಹಿತಿ ಇಲ್ಲ ಎಂದು ಸತ್ಯಕಿ ಸ್ಪಷ್ಟಪಡಿಸಿದರು. ವಿಚಾರಣೆಯ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮತ್ತು ಗಾಂಧೀಜಿ ಹತ್ಯೆಗೆ ಸಂಬಂಧಿಸಿದ ಪ್ರಶ್ನೆಗಳನ್ನು ಎತ್ತಿದಾಗ, ಸತ್ಯಕಿ ಪರ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಆಕ್ಷೇಪ ವ್ಯಕ್ತಪಡಿಸಿ, ಈ ಪ್ರಶ್ನೆಗಳು ಪ್ರಸ್ತುತ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ವಾದಿಸಿದರು.

ಈ ಬೆಳವಣಿಗೆಯ ಬೆನ್ನಲ್ಲೇ ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಅವರು ‘X’ (ಟ್ವಿಟರ್) ತಾಣದಲ್ಲಿ ಪೋಸ್ಟ್ ಮಾಡಿ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “1948 ರ ಜನವರಿಯಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯಾದಾಗಿನಿಂದಲೂ, ಗೋಡ್ಸೆ ಸಹೋದರರಿಗೂ ತಮ್ಮ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದೇ ಆರ್‌ಎಸ್‌ಎಸ್ ಪ್ರತಿಪಾದಿಸುತ್ತಾ ಬಂದಿದೆ. ಆದರೆ ಈಗ ಸಾವರ್ಕರ್ ಕುಟುಂಬದ ಸದಸ್ಯರೇ ನ್ಯಾಯಾಲಯದಲ್ಲಿ ಈ ಸತ್ಯವನ್ನು ಬಹಿರಂಗಪಡಿಸಿದ್ದಾರೆ. ಹೀಗಾಗಿ ಆರ್‌ಎಸ್‌ಎಸ್ ಇಷ್ಟು ದಿನ ಜನರಿಗೆ ಸುಳ್ಳು ಹೇಳುತ್ತಿತ್ತೇ ಎಂಬುದಕ್ಕೆ ಸ್ಪಷ್ಟ ಉತ್ತರ ನೀಡಬೇಕು” ಎಂದು ಸಾವಂತ್ ಆಗ್ರಹಿಸಿದ್ದಾರೆ.

ತಮ್ಮ ಪೋಸ್ಟ್‌ನಲ್ಲಿ ಅವರು ಸೆಪ್ಟೆಂಬರ್ 11, 1948 ರಂದು ಆಗಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರಿಗೆ ಬರೆದಿದ್ದ ಐತಿಹಾಸಿಕ ಪತ್ರವನ್ನು ಉಲ್ಲೇಖಿಸಿದ್ದಾರೆ. ಗಾಂಧೀಜಿಯವರ ನಿಧನದ ನಂತರ ಆರ್‌ಎಸ್‌ಎಸ್‌ನ ಕೆಲ ಸದಸ್ಯರು ಸಂತೋಷ ವ್ಯಕ್ತಪಡಿಸಿ ಸಿಹಿತಿಂಡಿಗಳನ್ನು ಹಂಚಿದ್ದರು, ಈ ಕಾರಣಕ್ಕಾಗಿಯೇ ಸಂಘದ ವಿರುದ್ಧ ಸಾರ್ವಜನಿಕ ವಿರೋಧ ತೀವ್ರಗೊಂಡಿತ್ತು ಎಂದು ಪಟೇಲ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು ಎಂಬುದನ್ನು ಸಾವಂತ್ ನೆನಪಿಸಿದ್ದಾರೆ.

ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಿ.ಡಿ. ಸಾವರ್ಕರ್ ಅವರು ಒಮ್ಮೆ ಮುಸ್ಲಿಂ ವ್ಯಕ್ತಿಯೊಬ್ಬನನ್ನು ತಮ್ಮ ಸ್ನೇಹಿತರು ಹೊಡೆಯುತ್ತಿದ್ದಾಗ ಅದನ್ನು ನೋಡಿ ಸಂತೋಷಪಟ್ಟಿದ್ದರು ಎಂದು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಸಾವರ್ಕರ್ ಅವರು ತಮ್ಮ ಯಾವುದೇ ಪುಸ್ತಕದಲ್ಲೂ ಅಂತಹ ಬರಹವನ್ನು ಬರೆದಿಲ್ಲ, ರಾಹುಲ್ ಗಾಂಧಿ ಅವರು ಸಾವರ್ಕರ್ ಅವರಿಗೆ ಅವಹೇಳನ ಉಂಟುಮಾಡುವ ಉದ್ದೇಶದಿಂದ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸತ್ಯಕಿ ಸಾವರ್ಕರ್ 2023 ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಮಾನನಷ್ಟ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ಪ್ರಸ್ತುತ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...