Homeಕರ್ನಾಟಕಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

- Advertisement -
- Advertisement -

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ನೇತೃತ್ವದಲ್ಲಿ ಗುರುವಾರ (ಆಗಸ್ಟ್ 20) ಬೆಂಗಳೂರಿನಲ್ಲಿ ಬೃಹತ್ ರಾಜ್ಯಮಟ್ಟದ ಪ್ರತಿಭಟನೆ ನಡೆಯಿತು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು, ನೇರ ವೇತನ ಪಾವತಿ ಪದ್ಧತಿ ತರುವುದು ಹಾಗೂ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೆ ತರಬೇಕು ಎಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್ ಡಿ’ರೋಜಾರಿಯೊ ಅವರು, ರಾಜ್ಯದ ಕಾರ್ಖಾನೆಗಳು, ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಸಂಬಂಧಿಸಿದ ನಿರಂತರ ಹಾಗೂ ಮೂಲಭೂತ ಸ್ವರೂಪದ ಕೆಲಸಗಳನ್ನು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದಲ್ಲೇ ನಿರ್ವಹಿಸಲಾಗುತ್ತಿದೆ. ಅನೇಕ ಕಾರ್ಮಿಕರು ಒಂದೇ ಸಂಸ್ಥೆಯಲ್ಲಿ 10, 20, 25 ಹಾಗೂ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಖಾಯಂ ಉದ್ಯೋಗ, ಉದ್ಯೋಗ ಭದ್ರತೆ ಹಾಗೂ ಸೂಕ್ತ ಸಾಮಾಜಿಕ ಭದ್ರತೆ ಸಿಗುತ್ತಿಲ್ಲ. ನಿಯಮಿತ ನೌಕರರಷ್ಟೇ ಕೆಲಸ ಮಾಡುವ ಈ ಕಾರ್ಮಿಕರಿಗೆ ಸಮಾನ ವೇತನ ಹಾಗೂ ಕಾನೂನುಬದ್ಧ ಸೌಲಭ್ಯಗಳನ್ನು ನಿರಾಕರಿಸುವ ಈ ಶೋಷಣಾತ್ಮಕ ವ್ಯವಸ್ಥೆ ಕೂಡಲೇ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಮಾತನಾಡಿದ ಎಐಸಿಸಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರಿ ಕೃಷ್ಣನ್ ಅವರು, 2026ರ ಮೇ 22ರಂದು ಸರ್ಕಾರ ಅಧಿಸೂಚಿಸಿರುವ ಪರಿಷ್ಕೃತ ಕನಿಷ್ಠ ವೇತನ ಜಾರಿಯನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬಾರದು ಅಥವಾ ವಿಳಂಬಗೊಳಿಸಬಾರದು ಎಂದರು. ಅಧಿಸೂಚಿತ ವೇತನಕ್ಕಿಂತ ಕಡಿಮೆ ನೀಡುವ ಉದ್ಯೋಗದಾತರ ವಿರುದ್ಧ ಕಾರ್ಮಿಕ ಇಲಾಖೆ ತಕ್ಷಣ ತಪಾಸಣೆ ನಡೆಸಿ, ಬಾಕಿ ವೇತನ ವಸೂಲಿ ಮಾಡಿಸಬೇಕು. ನಿಯಮ ಉಲ್ಲಂಘಿಸುವ ಉದ್ಯೋಗದಾತರ ವಿರುದ್ಧ ದೋಷಾರೋಪಣೆ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ನಿರಂತರವಾಗಿ ಏರುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಕಾರ್ಮಿಕರ ಕನಿಷ್ಠ ವೇತನವನ್ನು ತಿಂಗಳಿಗೆ 42,000 ರೂಪಾಯಿಗೆ ಪರಿಷ್ಕರಿಸಬೇಕು ಎಂದು ಪಟ್ಟುಹಿಡಿದರು.

ಇಎಸ್‌ಐ ವೇತನ ಮಿತಿ ಪರಿಷ್ಕರಣೆಯ ಮಹತ್ವವನ್ನು ಒತ್ತಿಹೇಳಿದ ಒಕ್ಕೂಟವು, 2016ರಲ್ಲಿ 15,000 ರೂಪಾಯಿಯಿಂದ 21,000 ರೂಪಾಯಿಗೆ ಹೆಚ್ಚಿಸಲಾಗಿದ್ದ ಈ ಮಿತಿಯನ್ನು ಹಲವು ವರ್ಷಗಳಿಂದ ಪರಿಷ್ಕರಿಸಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಪ್ರಸ್ತುತ ಕೆಲವು ಅನುಸೂಚಿತ ಉದ್ಯೋಗಗಳಲ್ಲಿ ಕಾನೂನುಬದ್ಧ ಕನಿಷ್ಠ ವೇತನವೇ 21,000 ರೂಪಾಯಿಗಿಂತ ಹೆಚ್ಚಿರುವುದರಿಂದ ಕಾರ್ಮಿಕರು ಇಎಸ್‌ಐ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ, ಕರ್ನಾಟಕ ಹೈಕೋರ್ಟ್‌ನ W.P. No.18258 of 2026 (L-ESI) ಪ್ರಕರಣದಲ್ಲಿ 2026ರ ಆಗಸ್ಟ್ 4ರಂದು ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಪ್ರಸ್ತುತ ವೇತನ ಹಾಗೂ ಜೀವನ ವೆಚ್ಚಕ್ಕೆ ತಕ್ಕಂತೆ ಇಎಸ್‌ಐ ಮಿತಿ ಹೆಚ್ಚಿಸಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ತಕ್ಷಣ ಪತ್ರ ಬರೆದು ಒತ್ತಡ ಹೇರಬೇಕು ಎಂದು ಆಗ್ರಹಿಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಾಘು ಹಾಗೂ ಕಾರ್ಮಿಕ ಆಯುಕ್ತರಾದ ರಾಗಪ್ರಿಯ ಅವರು ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿದರು. ಈ ವೇಳೆ ನೌಕರರು ಎದುರಿಸುತ್ತಿರುವ ಕನಿಷ್ಠ ವೇತನ, ನೇರ ವೇತನ ಪಾವತಿ, ಉದ್ಯೋಗ ಭದ್ರತೆ, ಇಎಸ್‌ಐ ಹಾಗೂ ಸಾಮಾಜಿಕ ಭದ್ರತೆಯಂತಹ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು. ಮನವಿಯನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಸಚಿವರ ಗಮನಕ್ಕೆ ತಂದು, ಕಾಲಮಿತಿಯೊಳಗೆ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಈ ಹೋರಾಟದಲ್ಲಿ ಮೂಲಭೂತ ಹಾಗೂ ನಿರಂತರ ಕೆಲಸಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ/ದಿನಗೂಲಿ ಪದ್ಧತಿ ರದ್ದುಪಡಿಸಿ ದೀರ್ಘಕಾಲದ ನೌಕರರನ್ನು ಖಾಯಂಗೊಳಿಸುವುದು, ನೇರ ವೇತನ ಪಾವತಿ ಜಾರಿಗೊಳಿಸುವುದು, 22.05.2026ರ ಕನಿಷ್ಠ ವೇತನ ಅಧಿಸೂಚನೆ ಜಾರಿ, ಕಡಿಮೆ ವೇತನ ನೀಡುವವರ ವಿರುದ್ಧ ಕ್ರಮ, ಇಎಸ್‌ಐ ಸೌಲಭ್ಯ ವಿಸ್ತರಣೆ, ಉದ್ಯೋಗಕ್ಕೆ ಸೇರಿದ ಮೊದಲ ದಿನದಿಂದಲೇ ಭದ್ರತೆ, ಆರೋಗ್ಯ, ಹೆರಿಗೆ, ಪಿಂಚಣಿ ಸೇರಿ ಸಮಗ್ರ ಸಾಮಾಜಿಕ ಭದ್ರತೆ, ಮಹಿಳಾ ಕಾರ್ಮಿಕರಿಗೆ ಸುರಕ್ಷಿತ ಹಾಗೂ ಕಿರುಕುಳಮುಕ್ತ ವಾತಾವರಣ, ಕಾರ್ಮಿಕರ ಸಂಘಟನೆ ಮತ್ತು ಹೋರಾಟದ ಹಕ್ಕುಗಳ ರಕ್ಷಣೆ ಹಾಗೂ ಕನಿಷ್ಠ ವೇತನವನ್ನು 42,000 ರೂಪಾಯಿಗೆ ಹೆಚ್ಚಿಸುವ ಪ್ರಮುಖ 10 ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಅಪ್ಪಣ್ಣ (ರಾಜ್ಯಾಧ್ಯಕ್ಷರು), ನಿರ್ಮಲಾ, ನಾಗರಾಜ ಪೂಜಾರ್, ಮೋಹನ್, ರಾಮಣ್ಣ ವಿಟ್ಲ ಮಾತನಾಡಿದರು. ಪ್ರತಿಭಟನೆಯಲ್ಲಿ ಕೆ. ನಾಗಲಿಂಗಸ್ವಾಮಿ, ಅಜೀಜ್ ಜಾಗೀದಾರ್, ಕೇಶವ ನಾಯಕ್, ಅಶೋಕಗೌಡ, ಮಾಯಮ್ಮ, ಪರಶುರಾಮ, ಉಮಾ, ಭಾನುಪ್ರಕಾಶ್, ಬಸವರಾಜ ಎಂ., ಗೌರಿ, ಚಂದ್ರಶೇಖರ್ ಶಿರುಗುಪ್ಪಿ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಮಿಕರು ಭಾಗವಹಿಸಿದ್ದರು. ಕಾರ್ಮಿಕರ ಈ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಕಾಲಮಿತಿಯೊಳಗೆ ಸ್ಪಂದಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಐಸಿಸಿಟಿಯು ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...