Homeಅಂತರಾಷ್ಟ್ರೀಯಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

- Advertisement -
- Advertisement -

“ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ” ಎಂದು ಭಾರತೀಯ ಮಿಲಿಟರಿ ತಜ್ಞರೊಬ್ಬರು ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ‘ಒಬ್ಸರ್ವರ್ ರಿಸರ್ಚ್ ಫೌಂಡೇಶನ್ (ORF) ಅಮೆರಿಕ’ ಶುಕ್ರವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್. ಧಿಲ್ಲೋನ್, “ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದಲ್ಲಿ ಭಾರಿ ನಷ್ಟ ಅನುಭವಿಸಿದರೂ, ಇರಾನ್ ದೀರ್ಘಕಾಲೀನ ಯುದ್ಧ” (attritional warfare) ನಡೆಸುವ ಸಾಮರ್ಥ್ಯವನ್ನು ಕಾಯ್ದುಕೊಂಡಿದೆ” ಎಂದಿದ್ದಾರೆ.

“ಈ ಯುದ್ಧದಿಂದ ಕಲಿಯಬೇಕಾದ ಪ್ರಮುಖ ಪಾಠವೆಂದರೆ ಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ರಾಷ್ಟ್ರೀಯ ಗುರಿ ಮತ್ತು ಸೂಕ್ತವಾದ ನಿರ್ಗಮನ ತಂತ್ರದ ಅಗತ್ಯತೆ” ಎಂದು ಹೇಳಿದರು.

“ನೀವು ಯುದ್ಧವನ್ನು ಪ್ರಾರಂಭಿಸುವ ಮೊದಲು ಕೆಲವು ವಿಷಯಗಳನ್ನು ಮೊದಲೇ ತಿಳಿದುಕೊಳ್ಳುವುದು ಅತ್ಯಗತ್ಯ. ನಿಮ್ಮ ಘೋಷಿತ ರಾಷ್ಟ್ರೀಯ ಗುರಿಯು ನಿಮಗೂ, ನಿಮ್ಮ ಸೇನೆಗೂ ಮತ್ತು ಸರ್ಕಾರದಲ್ಲಿರುವ ಜನರಿಗೂ ಸ್ಪಷ್ಟವಾಗಿರಬೇಕು. ಹಾಗೆಯೇ ವಿಜಯವನ್ನು ಘೋಷಿಸಬಹುದಾದ ಅಂತಿಮ ಹಂತದ ಬಗ್ಗೆಯೂ ಸ್ಪಷ್ಟತೆ ಇರಬೇಕು” ಎಂದು ಅವರು ಹೇಳಿದರು.

“ನಂತರ, ನಿರ್ಗಮನ ತಂತ್ರ, ವಿಶೇಷವಾಗಿ ಅದು ವಿದೇಶಿ ನೆಲದ ಯುದ್ಧವಾಗಿದ್ದಾಗ, ಆ ಪ್ರದೇಶದಿಂದ ನಾನು ಹೊರಬರುವುದು ಹೇಗೆ?” ಎಂದು ಅವರು ಪ್ರಶ್ನಿಸಿದರು. “ಅಲ್ಲದೆ, ಯುದ್ಧಕ್ಕೆ ಹೋಗುವ ದೇಶಗಳು ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್‌ನಂತಹ ಶಕ್ತಿಗಳನ್ನು ಒಟ್ಟಿಗೆ ಎದುರಿಸುವಾಗ, ಯುದ್ಧದ ತೀವ್ರತೆಯ ಹೆಚ್ಚಳವನ್ನು ನಿಯಂತ್ರಿಸಲು ಯೋಜನೆ ರೂಪಿಸಿಕೊಳ್ಳಬೇಕು” ಎಂದು ಅವರು ಹೇಳಿದರು.

“ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವ ಸಾಧ್ಯತೆಯನ್ನೂ ಒಳಗೊಂಡಂತೆ, ಕಳೆದ 40 ವರ್ಷಗಳಲ್ಲಿ ತಾನು ಪರಿಕಲ್ಪನೆ ಮಾಡಿದ ಮಾರ್ಗಗಳಲ್ಲೇ ಇರಾನ್ ಯುದ್ಧ ಮಾಡಿದೆ” ಎಂದು ಧಿಲ್ಲೋನ್ ಹೇಳಿದರು.

“ಇರಾನ್ ಮೊಸಾಯಿಕ್ ಸಿದ್ಧಾಂತವನ್ನು (mosaic doctrine) ಅಳವಡಿಸಿಕೊಂಡಿದೆ. ಕೇಂದ್ರ ನಾಯಕತ್ವವು ನಾಶವಾದರೂ ಕೆಲಸ ಮಾಡುವುದನ್ನು ಮುಂದುವರಿಸಬಹುದಾದ 31 ಸ್ವತಂತ್ರ ಪ್ರಧಾನ ಕಚೇರಿಗಳಾಗಿ ತನ್ನ ಸಶಸ್ತ್ರ ಪಡೆಗಳನ್ನು ವಿಕೇಂದ್ರೀಕರಿಸಿದೆ” ಎಂದು ಅವರು ಹೇಳಿದರು.

“ದೀರ್ಘಕಾಲದ ಸಂಘರ್ಷದಲ್ಲಿ ಬಲಹೀನ ಬದಿಗೆ ಅನುಕೂಲಕರವಾಗುವ ಸವಕಳಿ ಯುದ್ಧವನ್ನು ನಡೆಸುವ ಸಾಮರ್ಥ್ಯವನ್ನು ಇರಾನ್ ಉಳಿಸಿಕೊಂಡಿದೆ” ಎಂದು ಅವರು ತಿಳಿಸಿದರು.

“ಇರಾಕ್ ಮತ್ತು ಸೌದಿ ಅರೇಬಿಯಾದ ತೆರೆದ ಮರುಭೂಮಿಗಳಿಗೆ ಹೋಲಿಸಿದರೆ, ಇರಾನ್‌ನ ಪರ್ವತಮಯ ಭೂಪ್ರದೇಶವು ಎದುರಾಳಿಗಳಿಗೆ ಭೂಸೇನೆಯ ಆಕ್ರಮಣವನ್ನು ಕಷ್ಟಕರವಾಗಿಸಿದೆ. ಇರಾನ್ ಎನ್ನುವುದು ಸುತ್ತಲೂ ಪರ್ವತಗಳಿಂದ ಆವೃತವಾದ ತಟ್ಟೆಯಂತಿದ್ದು, ಒಳಭಾಗದಲ್ಲಿ ಮರುಭೂಮಿ ಇದೆ. ಬೇಸಿಗೆಯಲ್ಲಿ ಇಲ್ಲಿನ ತಾಪಮಾನವು 55 ರಿಂದ 60 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ” ಎಂದು ಅವರು ಹೇಳಿದರು.

“ಇರಾನ್‌ನ ಹೃದಯಭಾಗವನ್ನು ತಲುಪಲು ಆ ಪರ್ವತಗಳನ್ನು ದಾಟಬೇಕು. ನೀವು ಪ್ರತಿಯೊಂದು ಸೇನಾ ನೆಲೆಯನ್ನೂ ವಶಪಡಿಸಿಕೊಳ್ಳಬೇಕಾಗುತ್ತದೆ, ಆದ್ದರಿಂದ ನೇರ ಭೂಸೇನಾ ಆಕ್ರಮಣ ಸಾಧ್ಯವಿಲ್ಲದ ಮಾತಾಗಿತ್ತು” ಎಂದು ಧಿಲ್ಲೋನ್ ಹೇಳಿದರು.

“ಸಾಗರಗಳಲ್ಲಿ ಅಮೆರಿಕವನ್ನು ನೇರವಾಗಿ ಎದುರಿಸಲು ಇರಾನ್ ಬಳಿ ವಿಮಾನವಾಹಕ ನೌಕೆಗಳಾಗಲಿ ಅಥವಾ ಬಲವಾದ ವಾಯುಪಡೆಯಾಗಲಿ ಇಲ್ಲ. ಬದಲಿಗೆ ಹೊರ್ಮುಜ್ ಜಲಸಂಧಿಯ ರಕ್ಷಣೆಗೆ ಸೂಕ್ತವಾದ ಸಾಮರ್ಥ್ಯಗಳನ್ನು ಅದು ಅಭಿವೃದ್ಧಿಪಡಿಸಿದೆ” ಎಂದು ಹೇಳಿದರು.

“ವೇಗದ ದೋಣಿಗಳು, ಟಾರ್ಪಿಡೊ ದೋಣಿಗಳು, ಕರಾವಳಿ ಬಂದೂಕುಗಳು, ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಬಳಸಿಕೊಂಡು ಜಲಸಂಧಿಗಳನ್ನು ತಡೆಯುವ ತಂತ್ರವನ್ನು ಇರಾನ್ ಅಳವಡಿಸಿಕೊಂಡಿದೆ. ಪ್ರಮುಖ ಜಲಮಾರ್ಗದ ರಕ್ಷಣೆಗಾಗಿ ಮುಖ್ಯವಾಗಿ ವಿನ್ಯಾಸಗೊಳಿಸಲಾದ ನೌಕಾಪಡೆ ಇದಕ್ಕೆ ಬೆಂಬಲ ನೀಡಿದೆ” ಎಂದು ಧಿಲ್ಲೋನ್ ತಿಳಿಸಿದರು.

“ಇರಾನ್ ವಾಯುಪಡೆಯನ್ನು ನಿರ್ಮಿಸಲಿಲ್ಲ; ಅದು ಕ್ಷಿಪಣಿಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಂದಿತ್ತು, ಆ ಮೂಲಕವೇ ಅದು ಹೋರಾಡಿತು” ಎಂದು ಅವರು ಹೇಳಿದರು.

“ಇವು ಮಿಲಿಟರಿ ತಜ್ಞರಿಗೆ ಪಾಠಗಳು. ಈ ದೇಶವು ಅತ್ಯಂತ ಪ್ರಬಲ ಶತ್ರುವಿನ ವಿರುದ್ಧ ಹೋರಾಡುತ್ತಿದೆ. 40 ವರ್ಷಗಳಿಂದ ಈ ಯುದ್ಧಕ್ಕೆ ಸಿದ್ಧವಾಗಿದ್ದರಿಂದಲೇ ಇಂದಿಗೂ ಸಂಪೂರ್ಣವಾಗಿ ನಾಶವಾಗಿಲ್ಲ” ಎಂದು ಧಿಲ್ಲೋನ್ ಹೇಳಿದರು.

ಧಿಲ್ಲೋನ್ ಅವರು ತಮ್ಮ ಹೊಸ ಪುಸ್ತಕ, “ಆಪರೇಷನ್ ಸಿಂಧೂರ್: ದಿ ಅನ್‌ಟೋಲ್ಡ್ ಸ್ಟೋರಿ ಆಫ್ ಇಂಡಿಯಾಸ್ ಡೀಪ್ ಸ್ಟ್ರೈಕ್ಸ್ ಇನ್‌ಸೈಡ್ ಪಾಕಿಸ್ತಾನ್” ಅನ್ನು ಅಮೆರಿಕದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಿಲ್ಲೋನ್ ಅವರನ್ನು ಇಂಡಿಯನ್ ಅಮೆರಿಕನ್ ಡಯಾಸ್ಪೊರಾ ಅಸೋಸಿಯೇಷನ್ ಗೌರವಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...