HomeಅಂಕಣಗಳುKarnataka against SIRKarnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

- Advertisement -
- Advertisement -

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ.

ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ ಎಫ್‌ಐಆರ್ ಬಿಡುಗಡೆ ಮಾಡಿರುವ ಸಂಘಟನೆಗಳು, ಇಡೀ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಕದವನ್ನೂ ತಟ್ಟಲಿದ್ದೇವೆ ಎಂದು ಘೋಷಿಸಿವೆ.

ಚುನಾವಣಾ ಆಯೋಗ ನಡೆಸಿರುವ ಎಸ್‌ಐಆರ್ ಪ್ರಕ್ರಿಯೆಯನ್ನಾಗಲೀ, ಅದು ನೀಡಿರುವ ಅಂಕಿ ಸಂಖ್ಯೆಯನ್ನಾಗಲೀ, ಅದರ ಹಿಂದಿರುವ ವಿವರಣೆಯನ್ನಾಗಲೀ ನಾವು ಒಪ್ಪಲು ಸಾಧ್ಯವಿಲ್ಲ. ಕರ್ನಾಟಕದ ನಾಗರಿಕ ಸಮಾಜ ಇದೊಂದು ದೋಷಭರಿತ ಅನಾಗರಿಕ ಪ್ರಕ್ರಿಯೆ ಎಂದು ಘೋಷಿಸುತ್ತದೆ ಮತ್ತು ತಿರಸ್ಕರಿಸುತ್ತದೆ ಎಂದು ಸಂಘಟನೆಗಳು ಹೇಳಿಕೊಂಡಿವೆ.

ಎಸ್‌ಐಆರ್‌ನಂತಹ ದೋಷ ಮತ್ತು ದುಷ್ಟತನದ ಪ್ರಕ್ರಿಯೆಯನ್ನು ರೂಪಿಸಿರುವ ಕೇಂದ್ರ ಚುನಾವಣಾ ಆಯೋಗ, ವಿಶೇಷವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ ರಾಜೀನಾಮೆಯನ್ನು ಕೊಡಬೇಕು ಎಂದು ಒತ್ತಾಯಿಸಿವೆ.

ಕೇಂದ್ರ ಚುನಾವಣಾ ಆಯುಕ್ತರು ಆಯ್ಕೆ ಮಾಡಲು ಕೇಂದ್ರ ಸರ್ಕಾರ ಮಾಡಿರುವ ಕಾನೂನು ತಿದ್ದುಪಡಿಯೇ ದುರುದ್ದೇಷದಿಂದ ಕೂಡಿದೆ. ಇಬ್ಬರು ಆಳುವ ಪಕ್ಷದ ಮತ್ತು ಒಬ್ಬರು ವಿರೋಧ ಪಕ್ಷದ ಸದಸ್ಯರಿದ್ದು ಆಯ್ಕೆ ಮಾಡುವ ಸಮಿತಿ ನಿಷ್ಪಕ್ಷಪಾತಿಯಾಗಿ ಇರಲು ಸಾಧ್ಯವಿಲ್ಲ. ಇದನ್ನು ಈ ಹಿಂದಿನಂತೆ ಒಬ್ಬರು ಆಳುವ , ಒಬ್ಬರು ವಿರೋಧ ಪಕ್ಷದ ಹಾಗೂ ಒಬ್ಬರು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಇರುವ ಸಮಿತಿ ಆಯ್ಕೆ ಮಾಡುವ ವಿಧಾನಕ್ಕೆ ಮರಳಬೇಕು ಎಂದು ಆಗ್ರಹಿಸಿವೆ.

ಎಸ್‌ಐಆರ್ ಅಕ್ರಮ ಪ್ರಕ್ರಿಯೆಯನ್ನು ಖಂಡಿಸಿ ಸೆಪ್ಟೆಂಬರ್‌ 1ರಂದು ಸಂತ್ರಸ್ತರ ಸಾಕ್ಷ್ಯಗಳೊಂದಿಗೆ ‘ಎಲೆಕ್ಷನ್‌ ಕಮಿಷನ್‌ ಚಲೋ’ ನಡೆಸಲಾಗುತ್ತಿದೆ ಎಂದು ನಾಗರಿಕ ಸಂಘಟನೆಗಳು ಘೋಷಿಸಿದ್ದು, ಇಡೀ ಪ್ರಕ್ರಿಯೆ ಹೇಗೆ ತಪ್ಪಾದುದು ಎಂಬುವುದನ್ನು ಕೇವಲ ತರ್ಕದ ಮೂಲಕವಲ್ಲ, ಜೀವಂತ ಸಾಕ್ಷಿಗಳ ಸಮೇತ ಚುನಾವಣಾ ಆಯೋಗದ ಮುಂದೆ ತರಲಿದ್ದೇವೆ ಎಂದು ಸವಾಲು ಹಾಕಿವೆ.

1.08 ಕೋಟಿ ಜನರನ್ನು ಎಎಸ್‌ಡಿಡಿಒ ಎಂದು ಡಿಲೀಟ್ ಪಟ್ಟಿಯಲ್ಲಿ ಇಟ್ಟಿರುದು ಮತ್ತು 43.80 ಲಕ್ಷ ಜನರಿಗೆ ದಾಖಲೆ ಕೇಳಿ ನೋಟಿಸ್ ನೀಡುವುದನ್ನು ನಾವು ಒಪ್ಪುವುದಿಲ್ಲ ಎಂದು ನಾಗರಿಕ ಸಂಘಟನೆಗಳು ಹೇಳಿಕೊಂಡಿವೆ.

ಎಎಸ್‌ಡಿಡಿಒ ಪಟ್ಟಿಯ ಕುರಿತು ಆಕ್ಷೇಪ ಎತ್ತಿರುವ ಸಂಘಟನೆಗಳು, ಡಿಲೀಟ್ ಪಟ್ಟಿಯಲ್ಲಿರುವ 1.08 ಕೋಟಿ ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ಗಂಭೀರ ಆರೋಪ ಮಾಡಿವೆ.

ಇನ್ನು ಅನ್‌ಮ್ಯಾಪಿಂಗ್ ಮತ್ತು ಅನಾಮಲಿಸ್ ಹೆಸರಿನಲ್ಲಿ 43.80 ಲಕ್ಷ ಜನರಿಗೆ ನೋಟಿಸ್ ನೀಡುವುದನ್ನು ಕೂಡ ಸಂಘಟನೆಗಳು ವಿರೋಧಿಸಿವೆ.

“ಒಟ್ಟು 43 ಲಕ್ಷ ಜನರನ್ನು ಅನುಮಾನಾಸ್ಪದ ಮತದಾರರನ್ನಾಗಿ ಗುರುತಿಸಿದ್ದೀರಿ..ಯಾರಿವರು? ಇವರ ಬಗ್ಗೆ ನಿಮಗೆ ಅನುಮಾನ ಬರಲು ಕಾರಣವೇನು? ಪಟ್ಟಿಯನ್ನೇಕೆ ಬಿಡುಗಡೆ ಮಾಡುತ್ತಿಲ್ಲ? ಇವರು ಪರದೇಶಗಳಿಂದ ಬಂದವರಾ? ಇಲ್ಲ ಎಂದು ನೀವೇ ಹೇಳಿದ್ದೀರಿ. ಹಾಗಿದ್ದ ಮೇಲೆ ನಮ್ಮ ನಾಗರೀಕರನ್ನೇ ಈ ರೀತಿ ಅನುಮಾನಿಸಿ ಅವಮಾನಿಸುವುದು ಹೇಗೆ ಸರಿ? ನಾವೇಕೆ ಇದನ್ನು ಸಹಿಸಬೇಕು? ಎಂದು ಖಾರವಾಗಿ ಪ್ರಶ್ನಿಸಿವೆ.

ಮೂಲಗಳ ಪ್ರಕಾರ, ಚುನಾವಣಾ ಆಯೋಗ ಎಎಸ್‌ಡಿಡಿಒ ಎಂದು ಈಗಾಗಲೇ ಮತ ಪಟ್ಟಿಯಿಂದ ಹೊರಗಿಟ್ಟಿರುವ ಅರ್ಹ ಮತದಾರರನ್ನು ನ್ಯಾಯಾಲಯದ ಮುಂದೆ ತಂದು ಇಡೀ ಎಸ್‌ಐಆರ್ ಪ್ರಕ್ರಿಯೆಯ ಲೋಪಗಳ ವಿರುದ್ದ ಕಾನೂನು ಸಮರ ನಡೆಸಲು ಸಂಘಟನೆಗಳು ಸಿದ್ದತೆ ನಡೆಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...