Homeಮುಖಪುಟಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

- Advertisement -
- Advertisement -

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾದ ‘ಪ್ರತಿಭಟಿಸುವ ಹಕ್ಕಿಗೂ’ ಹಣ ತೆರಬೇಕೇ ಎಂಬ ಪ್ರಶ್ನೆ ತೀವ್ರವಾಗಿ ಎದ್ದ ಬೆನ್ನಲ್ಲೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಈ ಕುರಿತು ಸ್ಪಷ್ಟನೆ ನೀಡಿದೆ.

ಜಿಬಿಎ ಸ್ಪಷ್ಟನೆ ಮತ್ತು ಗೊಂದಲದ ಮೂಲ

ಉದ್ಯಾನವನಗಳ ಬಳಕೆಗೆ ನಿಗದಿಪಡಿಸಲಾದ ಪರಿಷ್ಕೃತ ಶುಲ್ಕಗಳು ಚಲನಚಿತ್ರ ಚಿತ್ರೀಕರಣ, ಪ್ರದರ್ಶನಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಾಹ ಫೋಟೋಶೂಟ್‌ಗಳಿಗೆ ಮಾತ್ರ ಅನ್ವಯಿಸುತ್ತವೆ ಎಂದು ಜಿಬಿಎ ಸ್ಪಷ್ಟಪಡಿಸಿದೆ. ಆದರೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾದ ‘ಇತರೆ ಸಭೆ-ಸಮಾರಂಭಗಳು’ ಎಂಬ ಅಸ್ಪಷ್ಟ ವರ್ಗೀಕರಣದ ಅಡಿಯಲ್ಲಿ ಸಾರ್ವಜನಿಕ ಪ್ರತಿಭಟನೆಗಳು ಒಳಪಡುತ್ತವೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಈ ಗೊಂದಲಕ್ಕೆ ಮುಖ್ಯ ಕಾರಣವಾಗಿದೆ.

ಸುತ್ತೋಲೆಯಲ್ಲಿ ಸೂಚಿಸಲಾದ ಹೊಸ ಶುಲ್ಕದ ವಿವರ:

  • ಸಿನಿಮಾ ಶೂಟಿಂಗ್ ಹಾಗೂ ಪ್ರದರ್ಶನಗಳು: ₹75,000 (ಹಿಂದೆ ₹25,000 ಇತ್ತು)
  • ಧಾರಾವಾಹಿ ಹಾಗೂ ಕಿರುಚಿತ್ರ ಶೂಟಿಂಗ್: ₹25,000 (ದಿನಕ್ಕೆ)
  • ವಿವಾಹಪೂರ್ವ/ನಂತರದ ಫೋಟೋಶೂಟ್‌ಗಳು: ₹5,000
  • ಸಾಂಸ್ಕೃತಿಕ ಕಾರ್ಯಕ್ರಮಗಳು: ₹3,000(ಇದರೊಂದಿಗೆ ಮುಂಗಡ ಠೇವಣಿ ಹಾಗೂ ಇತರೆ ವೆಚ್ಚಗಳನ್ನು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಪ್ರತ್ಯೇಕವಾಗಿ ನಿರ್ಧರಿಸಲಿದ್ದಾರೆ.)

ಧರಣಿ ನಡೆಸುವುದೂ ಕೇವಲ ಶ್ರೀಮಂತರ ಹಕ್ಕೇ?

ಪ್ರತಿಭಟನೆಗಳಿಗೆ ಶುಲ್ಕ ವಿಧಿಸುವ ಪ್ರಸ್ತಾಪವನ್ನು ಆಲ್ ಇಂಡಿಯಾ ಸೇವ್ ಎಜುಕೇಶನ್ ಕಮಿಟಿಯ (ಕರ್ನಾಟಕ) ವಿ.ಎನ್. ರಾಜಶೇಖರ್ ಕಟುವಾಗಿ ಖಂಡಿಸಿದ್ದಾರೆ. ಸ್ವಾತಂತ್ರ್ಯ ಮತ್ತು ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನ ಜನ್ಮಸಿದ್ಧ ಹಕ್ಕು. ಅದನ್ನು ಕೇವಲ ಹಣವುಳ್ಳವರಿಗೆ ಸಿಗುವ ಸರಕನ್ನಾಗಿ ಮಾಡಲು ಸಾಧ್ಯವಿಲ್ಲ. ತಮ್ಮ ಕುಂದುಕೊರತೆಗಳು ಬೇರೆಲ್ಲೂ ಬಗೆಹರಿಯದಿದ್ದಾಗ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು ಹಾಗೂ ಶೋಷಿತ ಸಮುದಾಯಗಳು ಸರ್ಕಾರದ ಗಮನ ಸೆಳೆಯಲು ಧರಣಿ ನಡೆಸುತ್ತಾರೆ. ಈಗಾಗಲೇ ನಗರದಲ್ಲಿ ಪ್ರತಿಭಟನೆಗಳನ್ನು ಒಂದೇ ಸ್ಥಳಕ್ಕೆ ಸೀಮಿತಗೊಳಿಸಲಾಗಿದೆ. ಈಗ ಆರ್ಥಿಕ ನಿರ್ಬಂಧವನ್ನೂ ಹೇರಿದರೆ, ಪ್ರಜಾಪ್ರಭುತ್ವದ ಆಶಯಕ್ಕೇ ಧಕ್ಕೆಯಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಏಕೈಕ ಪ್ರತಿಭಟನಾ ಸ್ಥಳ: ಹಕ್ಕುಗಳ ಮುಷ್ಟಿ ಮೈದಾನ

ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಹೈಕೋರ್ಟ್ ನಿರ್ದೇಶನದಂತೆ ಈ ಹಿಂದೆ ಎಂ.ಜಿ. ರಸ್ತೆ, ಟೌನ್‌ಹಾಲ್ ಮತ್ತು ಬನ್ನಪ್ಪ ಪಾರ್ಕ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ನಿಷೇಧಿಸಿ, ಫ್ರೀಡಂ ಪಾರ್ಕ್ ಅನ್ನು ಏಕೈಕ ಅಧಿಕೃತ ಪ್ರತಿಭಟನಾ ಸ್ಥಳವನ್ನಾಗಿ ಸರ್ಕಾರ ಗೊತ್ತುಪಡಿಸಿತ್ತು. ಬ್ರಿಟಿಷರ ಕಾಲದ ಕೇಂದ್ರ ಕಾರಾಗೃಹವಾಗಿದ್ದ ಈ 21 ಎಕರೆ ಪ್ರದೇಶದ ಪಾರ್ಕ್‌ನಲ್ಲಿ ಸುಮಾರು 5 ಎಕರೆ ಜಾಗವನ್ನು ಧರಣಿಗಳಿಗೆ ಕಾಯ್ದಿರಿಸಲಾಗಿದೆ. 2018ರಲ್ಲೇ ಪ್ರತಿಭಟನಾಕಾರರಿಗಾಗಿ ವಾಹನ ನಿಲುಗಡೆ ಸೇರಿ ಹಲವು ಸೌಲಭ್ಯಗಳ ಕಟ್ಟಡ ನಿರ್ಮಿಸಲಾಗಿದ್ದರೂ, ಇತ್ತೀಚೆಗಷ್ಟೇ ಅದನ್ನು ಮುಕ್ತಗೊಳಿಸಲಾಗಿದೆ.

ಮೂಲಸೌಕರ್ಯಗಳ ಕೊರತೆ:

ಶುಲ್ಕ ಹೆಚ್ಚಳದ ಮಾತುಗಳ ನಡುವೆ, ಫ್ರೀಡಂ ಪಾರ್ಕ್‌ನಲ್ಲಿ ಕನಿಷ್ಠ ಮೂಲಸೌಕರ್ಯಗಳೂ ಇಲ್ಲದಿರುವುದು ಸರ್ಕಾರದ ಕಾಳಜಿಯನ್ನು ಪ್ರಶ್ನಿಸುವಂತೆ ಮಾಡಿದೆ. ಫ್ರೀಡಂ ಪಾರ್ಕ್‌ನಲ್ಲಿ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲಯಗಳಿಲ್ಲ.  ರಾತ್ರಿ ವೇಳೆ ಧರಣಿ ಮುಂದುವರಿಸುವ ಮಹಿಳೆಯರು ಮತ್ತು ಮಕ್ಕಳು ತೀವ್ರ ಅಭದ್ರತೆ ಹಾಗೂ ಸಂಕಷ್ಟ ಎದುರಿಸುತ್ತಿದ್ದಾರೆ. ಯಾವುದೇ ಕನಿಷ್ಠ ಸೌಕರ್ಯಗಳನ್ನೂ ಕಲ್ಪಿಸದ ಜಾಗಕ್ಕೆ ಭಾರೀ ಶುಲ್ಕ ವಸೂಲಿ ಮಾಡುವ ಯೋಚನೆ ಅತ್ಯಂತ ಖಂಡನೀಯ. ಸಾರ್ವಜನಿಕ ಪ್ರತಿಭಟನೆಗಳಿಗೆ ಯಾವುದೇ ರೀತಿಯ ಶುಲ್ಕ ಅನ್ವಯಿಸುವುದಿಲ್ಲ ಎಂಬುದನ್ನು ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಬೇಕು ಮತ್ತು ತಕ್ಷಣವೇ ಫ್ರೀಡಂ ಪಾರ್ಕ್‌ನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂಬುದು ಹೋರಾಟಗಾರರ ಒಕ್ಕೊರಲಿನ ಆಗ್ರಹವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...