HomeಅಂಕಣಗಳುKarnataka against SIRSIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08 ಕೋಟಿಗೂ ಹೆಚ್ಚು ಜನರನ್ನು ‘ಎಎಸ್‌ಡಿಡಿಒ’ (ಗೈರುಹಾಜರಿ, ಸ್ಥಳಾಂತರ, ಮರಣ, ನಕಲಿ ಮತ್ತು ಇತರೆ) ವರ್ಗಕ್ಕೆ ಸೇರಿಸಿ ಕಡು ಆತಂಕ ಸೃಷ್ಟಿಸಿದೆ.ಇದರ ಪರಿಣಾಮವಾಗಿ ಕರಡು ಮತದಾರರ ಪಟ್ಟಿಯಲ್ಲಿ ಸಂಖ್ಯೆ 4.46 ಕೋಟಿಗೆ ಇಳಿಕೆಯಾಗಿದ್ದು, ಈ ಪೈಕಿ ಬರೋಬ್ಬರಿ 43.81 ಲಕ್ಷ ಮತದಾರರನ್ನು ಆಯೋಗವು ಅನುಮಾನದ ಕಣ್ಣಿನಿಂದ ನೋಡುತ್ತಿದೆ.

ಶುಕ್ರವಾರದಿಂದಲೇ ಈ 43.81 ಲಕ್ಷ ಮತದಾರರಿಗೆ ನೋಟಿಸ್‌ ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಟ್ಟು ಕರಡು ಮತದಾರರಲ್ಲಿ ಶೇ. 9.8ರಷ್ಟು ಅಂದರೆ 43.81 ಲಕ್ಷ ಮಂದಿ ನೋಟಿಸ್‌ ಪಡೆಯಲಿದ್ದಾರೆ.ನೋಟಿಸ್ ಪಡೆಯುವ ಪ್ರತಿಯೊಬ್ಬ ಮತದಾರನೂ ತಾನು ಈ ದೇಶದ ಸಿಂಧುವಾದ ನಾಗರಿಕ ಎಂಬುದನ್ನು ಸಾಬೀತುಪಡಿಸಲು ಸೂಕ್ತ ದಾಖಲೆಗಳ ಸಮೇತ ಚುನಾವಣಾಧಿಕಾರಿಗಳ ಕಚೇರಿ ಅಥವಾ ಅಧಿಕಾರಿಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾದ ದುಸ್ಥಿತಿ ಎದುರಾಗಿದೆ.

ರಾಜಧಾನಿ ಬೆಂಗಳೂರೇ ಇಲಾಖೆಯ ಮುಖ್ಯ ಟಾರ್ಗೆಟ್!

ನೋಟಿಸ್‌ ಪಡೆಯಲಿರುವ ಒಟ್ಟು ಮತದಾರರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ ಶೇಕಡಾ 55ರಷ್ಟು (24,05,717) ಮತದಾರರು ರಾಜಧಾನಿ ಬೆಂಗಳೂರಿನವರೇ ಆಗಿದ್ದಾರೆ.

  • ಬೆಂಗಳೂರು ನಗರ:9,45,798 ಮತದಾರರಿಗೆ ನೋಟಿಸ್
  • ಬಿಬಿಎಂಪಿ ಉತ್ತರ: 6,12,963 ಮತದಾರರು
  • ಬಿಬಿಎಂಪಿ ಕೇಂದ್ರ: 4,29,345 ಮತದಾರರು
  • ಬಿಬಿಎಂಪಿ ದಕ್ಷಿಣ: 4,17,611 ಮತದಾರರು

ಇತರ ಜಿಲ್ಲೆಗಳ ಅಂಕಿ-ಅಂಶಗಳ ಚಿತ್ರಣ:

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ಪ್ರಮುಖ ಜಿಲ್ಲೆಗಳಲ್ಲೂ ಸಾವಿರಾರು ಮತದಾರರಿಗೆ ನೋಟಿಸ್‌ ತಲುಪಲಿದೆ:

  • ಮಂಡ್ಯ: 1,50,269
  • ದಕ್ಷಿಣ ಕನ್ನಡ: 1,50,144
  • ಕೋಲಾರ: 1,42,184
  • ಮೈಸೂರು: 1,28,132
  • ತುಮಕೂರು: 1,11,874
  • ಕಲಬುರಗಿ: 1,05,486
  • ಉಡುಪಿ: 97,702
  • ಚಿಕ್ಕಮಗಳೂರು: 91,612
  • ಬೆಳಗಾವಿ: 84,415
  • ಹಾಸನ: 79,772

ಈ ಬೃಹತ್ ನೋಟಿಸ್ ನೀಡಿಕೆ ಮತ್ತು ಪರಿಶೀಲನಾ ಪ್ರಕ್ರಿಯೆಯನ್ನು ನಿರ್ವಹಿಸಲು ರಾಜ್ಯಾದ್ಯಂತ ಒಟ್ಟು 4,262 ಸಹಾಯಕ ಚುನಾವಣಾ ನೋಂದಣಾಧಿಕಾರಿಗಳನ್ನು (AERO) ನಿಯೋಜಿಸಲಾಗಿದೆ. ಇದರಲ್ಲಿ 336 ನಿಯಮಿತ AEROಗಳು ಹಾಗೂ 3,926 ಹೆಚ್ಚುವರಿ AEROಗಳು ಕಾರ್ಯನಿರ್ವಹಿಸಲಿದ್ದಾರೆ. ಮತದಾರರು ಸಲ್ಲಿಸುವ ಆಕ್ಷೇಪಣಾ ಅರ್ಜಿ ಪರಿಶೀಲನೆ, ಹೆಸರು ಸೇರ್ಪಡೆ ಅಥವಾ ಪಟ್ಟಿಯಿಂದ ಅಳಿಸಿಹಾಕುವ ಅಂತಿಮ ಅಧಿಕಾರ ಈ ಅಧಿಕಾರಿಗಳ ಕೈಯಲ್ಲಿದೆ.

ವಿಶೇಷ ಮತದಾರರ ನೋಂದಣಿ ಅಭಿಯಾನ

SIR ಪ್ರಕ್ರಿಯೆಯಲ್ಲಿ ಹೆಸರು ಬಿಟ್ಟುಹೋದವರು, ತಿದ್ದುಪಡಿ ಬಯಸುವವರು ಹಾಗೂ ಹೊಸದಾಗಿ ಹೆಸರು ಸೇರಿಸಬೇಕಾದವರಿಗಾಗಿ ಆಯೋಗವು ವಿಶೇಷ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಂಡಿದೆ. ಆಗಸ್ಟ್ 29 ಮತ್ತು 30 ಹಾಗೂ ಸೆಪ್ಟೆಂಬರ್ 19 ಮತ್ತು 20ಸಾರ್ವಜನಿಕರು ಈ ದಿನಗಳಲ್ಲಿ ತಮ್ಮ ವ್ಯಾಪ್ತಿಯ ಬೂತ್‌ ಮಟ್ಟದ ಅಧಿಕಾರಿಗಳನ್ನು (BLO) ಸಂಪರ್ಕಿಸಿ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಕ್ಕಾದ ‘ಮತದಾನದ ಹಕ್ಕು’ ಪಡೆಯಲು ಸಾಮಾನ್ಯ ನಾಗರಿಕರು ಅಧಿಕಾರಿಗಳ ಬಾಗಿಲಿಗೆ ಅಲೆಯುವಂತೆ ಮಾಡುತ್ತಿರುವ ಆಯೋಗದ ಈ ಧೋರಣೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...