Homeಅಂತರಾಷ್ಟ್ರೀಯನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

- Advertisement -
- Advertisement -

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು ವರದಿ ಮಾಡಿದ್ದ 553 ಮರಣಗಳ ಸಂಖ್ಯೆಯು ಇದೀಗ ಮತ್ತಷ್ಟು ಏರಿಕೆಯಾಗಿದೆ.

ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ತಡೆ ಮತ್ತು ನಿರ್ವಹಣಾ ಪ್ರಾಧಿಕಾರವು ಎಕ್ಸ್‌ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಭಾರತ, ಮಲೇಷ್ಯಾ, ಆಸ್ಟ್ರೇಲಿಯಾ ಮತ್ತು ಅಮೆರಿಕದಂತಹ ವಿವಿಧ ದೇಶಗಳ ನೂರಾರು ಪ್ರಜೆಗಳು ಸೇರಿ ಒಟ್ಟು 1,924 ಜನರು ಇನ್ನೂ ಪತ್ತೆಯಾಗಿಲ್ಲ. ಈ ಸಂಖ್ಯೆಯು ನಾಪತ್ತೆಯಾದವರ ಬಗ್ಗೆ ಈ ಹಿಂದೆ ನೀಡಲಾಗಿದ್ದ ಅಂದಾಜಿಗಿಂತ ದುಪ್ಪಟ್ಟಾಗಿದೆ.

ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ಏಳು ಜನರು ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದು, ಇದರೊಂದಿಗೆ ಒಟ್ಟು ಮೃತರ ಸಂಖ್ಯೆ ಕನಿಷ್ಠ 623ಕ್ಕೆ ಏರಿಕೆಯಾಗಿದೆ ಎಂದು ಕೆಲ ಮಾಧ್ಯಮ ವರದಿಗಳು ಹೇಳಿವೆ. ಚೀನಾ ಭಾಗದಲ್ಲಿ 554 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ನಡುವೆ ತುರ್ತು ರಕ್ಷಣಾ ತಂಡಗಳು 623 ಶವಗಳನ್ನು ಹೊರತೆಗೆದಿದ್ದು, ಮೃತರಲ್ಲಿ ಕೆಲವು ಜನರು ನದಿಯ ಹರಿವಿಗೆ ಭಾರತದವರೆಗೆ ಕೊಚ್ಚಿಹೋಗಿರುವ ಸಾಧ್ಯತೆಯಿದೆ ಎಂದು ಎಎಫ್‌ಪಿ ವರದಿ ಹೇಳಿದೆ. ಇದರಿಂದಾಗಿ ಶುಕ್ರವಾರದ ವೇಳೆಗೆ ನಾಪತ್ತೆಯಾದವರ ಸಂಖ್ಯೆ 2,400ಕ್ಕೂ ಅಧಿಕವಾಗಿದೆ ಎಂದು ಹೇಳಲಾಗಿದೆ. ಮತ್ತೊಂದೆಡೆ, ನೇಪಾಳದಲ್ಲಿ ಇದುವರೆಗೆ 3,700ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ನೇಪಾಳದ ಪುನರ್‌ನಿರ್ಮಾಣಕ್ಕೆ ಬೇಕಿದೆ ಕನಿಷ್ಠ 4 ಬಿಲಿಯನ್ ಡಾಲರ್

ವಿನಾಶಕಾರಿ ಪ್ರವಾಹಕ್ಕೆ ತುತ್ತಾಗಿರುವ ನೇಪಾಳದ ಪುನರ್‌ ನಿರ್ಮಾಣಕ್ಕೆ 4 ರಿಂದ 5 ಬಿಲಿಯನ್ ಡಾಲರ್ ಅಗತ್ಯವಿದೆ ಎಂದು ಹಣಕಾಸು ಅಲ್ಲಿನ ಸಚಿವ ಸ್ವರ್ಣಿಮ್ ವಾಗ್ಲೆ ಶನಿವಾರ (ಆ.29) ಹೇಳಿರುವುದಾಗಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದು ಕೇವಲ ಒಂದು ಅಂದಾಜು ಮಾತ್ರ. ನಷ್ಟ ಮತ್ತು ಹಾನಿಯ ಮೌಲ್ಯಮಾಪನ ಇನ್ನೂ ನಡೆಯುತ್ತಿದೆ ಎಂದು ವಾಗ್ಲೆ ಅವರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸಮುದಾಯದಿಂದ ಯಾವುದೇ ಸಹಾಯವನ್ನು ನಿರಾಕರಿಸಿಲ್ಲ : ನೇಪಾಳ ಸ್ಪಷ್ಟನೆ

ಸ್ಥಳೀಯ ಪರಿಸರ ಪರಿಸ್ಥಿತಿಗಳು ಮತ್ತು ಕಠಿಣ ಭೂಪ್ರದೇಶಗಳ ಬಗ್ಗೆ ಉತ್ತಮ ಪರಿಚಯವಿರುವ ತನ್ನದೇ ಆದ ಭದ್ರತಾ ಪಡೆಗಳನ್ನು ಗರಿಷ್ಠ ಮಟ್ಟದಲ್ಲಿ ನಿಯೋಜಿಸಲು ಆದ್ಯತೆ ನೀಡಲು ಬಯಸುತ್ತಿರುವುದಾಗಿ ತಿಳಿಸಿರುವ ನೇಪಾಳವು, ತಾವು ಸ್ನೇಹಪರ ದೇಶಗಳು ಮತ್ತು ಅಂತಾರಾಷ್ಟ್ರೀಯ ಸಮುದಾಯದಿಂದ ಯಾವುದೇ ಸಹಾಯವನ್ನು ನಿರಾಕರಿಸಿಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ (ಆರ್‌ಎಸ್‌ಎಸ್‌) ಜೊತೆ ಮಾತನಾಡಿದ ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್, “ಅಂತಾರಾಷ್ಟ್ರೀಯ ನೆರವನ್ನು ತಿರಸ್ಕರಿಸಿಲ್ಲ. ಆದರೆ, ದೇಶದ ಸಾಮರ್ಥ್ಯ, ತಕ್ಷಣದ ಅಗತ್ಯತೆ ಮತ್ತು ನೇಪಾಳದ ವಿಶಿಷ್ಟ ಭೌಗೋಳಿಕ ಪರಿಸ್ಥಿತಿಯನ್ನು ಆಧರಿಸಿ ರಕ್ಷಣಾ ಕಾರ್ಯತಂತ್ರವನ್ನು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ.

“ಅಪರಿಚಿತ ಭೂಪ್ರದೇಶದಲ್ಲಿ ವಿದೇಶಿ ರಕ್ಷಣಾ ತಂಡವನ್ನು ನಿಯೋಜಿಸುವುದರಿಂದ ಸಮನ್ವಯ ಮತ್ತು ತಾಂತ್ರಿಕ ನಿರ್ವಹಣೆಯಲ್ಲಿ ಜಟಿಲತೆ ಹೆಚ್ಚಾಗಬಹುದು ಹಾಗೂ ಅನಿರೀಕ್ಷಿತ ಅಪಾಯಗಳು ಎದುರಾಗಬಹುದು. ಈ ಕಾರಣದಿಂದಾಗಿ, ಲಭ್ಯವಿರುವ ರಾಷ್ಟ್ರೀಯ ಸಾಮರ್ಥ್ಯವನ್ನು ಬಳಸಿಕೊಂಡೇ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ” ಎಂದಿದ್ದಾರೆ.

“ಅತ್ಯಂತ ಸಂಕೀರ್ಣವಾದ ಭೌತಿಕ ರಚನೆಗಳಿರುವ ಕಾರಣಕ್ಕಾಗಿ ವಿಶೇಷ ತಾಂತ್ರಿಕ ಕೌಶಲ್ಯಗಳ ಅವಶ್ಯಕತೆಯಿರುವ ಕಠಿಣ ಸಂದರ್ಭಗಳಲ್ಲಿ, ಅಂತಾರಾಷ್ಟ್ರೀಯ ನೆರವನ್ನು ಪಡೆದುಕೊಳ್ಳಲು ಸರ್ಕಾರವು ಸಿದ್ಧವಿದೆ” ಎಂದು ಖನಾಲ್ ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...