Homeಕರ್ನಾಟಕನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

- Advertisement -
- Advertisement -

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ ಮೇಲಿನ ಷಡ್ಯಂತ್ರ- ಕುತಂತ್ರಕ್ಕೆ ಸಿಕ್ಕ ಗೆಲುವು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ನಾಗೇಂದ್ರ ಅವರ ರಾಜೀನಾಮೆಯನ್ನು ‘ಒಂದು ವಿಕೆಟ್ ಬಿದ್ದಿದೆ’ ಎಂದು ಸಂಭ್ರಮಿಸುತ್ತಿದ್ದಾರೆ. ರಾಜಕೀಯ ಎಂದರೆ ಐಪಿಎಲ್ ಕ್ರಿಕೆಟ್ ಪಂದ್ಯವಲ್ಲ. ವಿಕೆಟ್ ಬಿದ್ದಿದೆ ಎನ್ನುವವರು ಮೊದಲು ಬಿಜೆಪಿ ತಂಡದಲ್ಲಿ ಎಷ್ಟು ಜನ ಚಾರ್ಜ್‌ಶೀಟ್ ಹಾಕಿಸಿಕೊಂಡಿದ್ದಾರೆ, ಜೈಲುವಾಸ ಅನುಭವಿಸಿದ್ದಾರೆ, ತನಿಖೆ ಎದುರಿಸುತ್ತಿದ್ದಾರೆ, ಜಾಮೀನಿನ ಮೇಲೆ ಹೊರಗಡೆ ಇದ್ದು ಎಷ್ಟು ಜನ ಬ್ಯಾಟಿಂಗ್, ಬೌಲಿಂಗ್ ಮಾಡುತ್ತಿದ್ದಾರೆ ಎಂದು ನೋಡಿಕೊಳ್ಳಲಿ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ಆರೋಪ ಮಾಡುವುದು ತನಿಖಾ ಸಂಸ್ಥೆಗಳ ಕೆಲಸ; ಅಪರಾಧಿ ಹೌದೋ ಅಲ್ಲವೋ ತೀರ್ಮಾನಿಸುವುದು ನ್ಯಾಯಾಲಯದ ಕೆಲಸ. ಬಿಜೆಪಿ ಕಚೇರಿ ನ್ಯಾಯಾಲಯವೂ ಅಲ್ಲ; ತೀರ್ಪು ಕೊಡಲು ಬಿಜೆಪಿ ನಾಯಕರು ನ್ಯಾಯಧೀಶರೂ ಅಲ್ಲ ” ಎಂದು ಕಿಡಿಕಾರಿದರು.

“ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂದ ತಕ್ಷಣ ನಮ್ಮ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿತ್ತು. ತನಿಖೆಯಿಂದ ಸತ್ಯಾಸತ್ಯತೆ ಹೊರಗಡೆ ಬಂದು, ಅಧಿಕಾರಿಗಳ ಮೇಲೆ ಕ್ರಮ ತೆಗದುಕೊಂಡಿದ್ದೇವೆ. ಇದನ್ನೂ ಮೀರಿ ಇಡಿ ತನಿಖೆ ನಡೆಸಿದೆ. ಆದರೂ ಕೂಡ ನಾಗೇಂದ್ರ ಸಹಕಾರ ನೀಡಿದ್ದಾರೆ. ಅನಗತ್ಯವಾಗಿ ಒಬ್ಬ ದಲಿತ ಸಮುದಾಯದ ಜನಪ್ರತಿನಿಧಿಯನ್ನ ಯಾವುದೇ ಸಾಕ್ಷ್ಯ ಇಲ್ಲದೆ ಜೈಲಿಗೆ ಕಳಿಸಿದರು. ಇದಕ್ಕಲ್ಲಾ ನಾಗೇಂದ್ರ ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣವೇ ಹೊರತು ಬೇರೆ ಏನೂ ಇರಲಿಲ್ಲ” ಎಂದರು.

“ತನಿಖೆಯಲ್ಲಿ ನಾಗೇಂದ್ರ ಅವರ ಪಾತ್ರವೇ ಇಲ್ಲ ಎಂದು ರಿಪೋರ್ಟ್ ಬಂದಿದೆ. ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ ಕೋರ್ಟ್ ಏನು ಹೇಳಿದೆ ಎಂದು ಬಿಜೆಪಿ ನಾಯಕರು ಅರ್ಥ‌ಮಾಡಿಕೊಳ್ಳಬೇಕು. ಇಡಿ ತನಿಖೆಯ ಪ್ರಕಾರ ರೂ. 94.73 ಕೋಟಿ ಹಣವನ್ನು ನಾಗೇಂದ್ರ ಸ್ವೀಕರಿಸಿದ್ದಾರೆ ಅಥವಾ ಬಳಸಿದ್ದಾರೆ ಎಂಬುದನ್ನು ತೋರಿಸುವ ಸಾಕ್ಷ್ಯ ನೀಡಿಲ್ಲ ಎಂದು ವಿಶೇಷ ನ್ಯಾಯಾಲಯವೇ ಜಾಮೀನು ಆದೇಶದಲ್ಲಿ ದಾಖಲಿಸಿದೆ” ಎಂದು ಹೇಳಿದರು.

“ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಆರೋಪಿಯಾಗಿರಲಿಲ್ಲ.ವಾಲ್ಮೀಕಿ ಹಗರಣವನ್ನು ಸಿಬಿಐ ತನಿಖೆ ಮಾಡಲಿ, ಇಡಿ ತನಿಖೆ ಮಾಡಲಿ, ದಾಖಲೆ ಇದ್ದರೆ ನ್ಯಾಯಾಲಯದಲ್ಲಿ ಸಾಬೀತುಪಡಿಸಲಿ. ಆದರೆ ಆರೋಪವನ್ನೇ ಶಿಕ್ಷೆಯಾಗಿ ಬಿಂಬಿಸುವ ರಾಜಕೀಯವನ್ನು ಒಪ್ಪಲು ಸಾಧ್ಯವಿಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದ್ದರೆ ಬಳ್ಳಾರಿಯಿಂದಲೇ ಚರ್ಚೆ ಮಾಡೋಣ ಬನ್ನಿ. 2011ರ ಲೋಕಾಯುಕ್ತ ಅಕ್ರಮ ಗಣಿಗಾರಿಕೆ ವರದಿ, ರೆಡ್ಡಿ ಸಹೋದರರು ಹಾಗೂ ಆ ಕಾಲದ ಬಳ್ಳಾರಿ ರಾಜಕಾರಣ ಇವೆಲ್ಲವನ್ನೂ ಕರ್ನಾಟಕದ ಜನ ಮರೆತಿಲ್ಲ. ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೂರು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ವಿಶೇಷ ಸಿಬಿಐ ನ್ಯಾಯಾಲಯ ಶಿಕ್ಷೆಯನ್ನೂ ವಿಧಿಸಿತು. ಇವರೆಲ್ಲ ಭ್ರಷ್ಟಾಚಾರದ ಕುರಿತು ಮಾತನಾಡುತ್ತಾರೆ” ಎಂದು ಬಿಜೆಪಿಗೆ ತಿರುಗೇಟು ನೀಡಿದರು.

“ಸ್ವಂತ ತಂದೆಯನ್ನೇ ಚೆಕ್ ನಲ್ಲಿ ಲಂಚ ತೆಗೆದುಕೊಂಡು ಜೈಲಿಗೆ ಕಳಿಸಿದ ಜೂನಿಯರ್ ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇದೆಯೇ? ಬಿ.ಎಸ್. ಯಡಿಯೂರಪ್ಪ 2011ರಲ್ಲಿ ನ್ಯಾಯಾಂಗ ಬಂಧನಕ್ಕೆ ಹೋಗಿದ್ದನ್ನು ಕರ್ನಾಟಕ ಮರೆತಿಲ್ಲ. ನಾಗೇಂದ್ರ ‘ಚಿಕ್ಕ ಮೀನು’ ಎಂದು ವಿಜಯೇಂದ್ರ ಹೇಳಿದ್ದಾರೆ. ಹಾಗಾದರೆ ನಿಮ್ಮ ಬಳಿ ಇರುವ ‘ದೊಡ್ಡ ಮೀನು’ ಯಾರು ಎಂಬ ದಾಖಲೆ ಇದ್ದರೆ, ಬಿಜೆಪಿಯವರ ಭಾಷೆಯಲ್ಲಿ ಹೇಳುವುದಾದರೆ ಧಮ್ಮು, ತಾಕತ್ ಇದ್ದರೆ ಸಾಬೀತು ಮಾಡಲಿ” ಎಂದು ಸವಾಲು ಹಾಕಿದರು.

“2014 ನಂತರ ಕೇಂದ್ರ ತನಿಖಾ ಸಂಸ್ಥೆಗಳ ಕ್ರಮ ಎದುರಿಸುತ್ತಿದ್ದ 25 ಪ್ರಮುಖ ವಿರೋಧ ಪಕ್ಷದ ನಾಯಕರು ಬಿಜೆಪಿ ಅಥವಾ ಬಿಜೆಪಿ ನೇತೃತ್ವದ ಮೈತ್ರಿಗೆ ಹೋದರು. 23 ಪ್ರಕರಣಗಳಲ್ಲಿ ಅವರಿಗೆ ರಿಲೀಫ್ ಸಿಕ್ಕಿದೆ. ಮೂರು ಪ್ರಕರಣಗಳು ಮುಚ್ಚಲ್ಪಟ್ಟಿದೆ. ‘ನಾ ಖಾವೂಂಗಾ ನಾ ಖಾನೇದೂಂಗಾ” ಎಂದು ಹೇಳುತ್ತಿದ್ದ ಪ್ರಧಾನಿಗಳೇ ಭ್ರಷ್ಟಾರಿಗಳ ಜೊತೆಗೆ ಶಾಮೀಲಾಗಿದ್ದಾರೆ. ಭ್ರಷ್ಟರನ್ನೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಈಗ ನಾಗೇಂದ್ರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ” ಎಂದು ಹರಿಪ್ರಸಾದ್ ಪ್ರಶ್ನಿಸಿದರು.

“ಬಿಜೆಪಿಯವರು ನಿರುದ್ಯೋಗಿಗಳು ಪಾದಯಾತ್ರೆ ಮಾಡುವುದಾದರೆ ಮಾಡಲಿ, ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದು. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಬಿಜೆಪಿಯವರಿಗಿಲ್ಲ. ನಾಗೇಂದ್ರ ನಾಲ್ಕು ಬಾರಿ ಶಾಸಕರಾಗಿದ್ದವರು. ಎಸ್‌ಟಿ ಸಮುದಾಯದ ಬಲಿಷ್ಟ ನಾಯಕರು. ಅವರನ್ನು ಪಕ್ಷ ನಡುನೀರಿನಲ್ಲಿ ಕೈ ಬಿಡುವುದಿಲ್ಲ; ಸೂಕ್ತ ಸ್ಥಾನಮಾನ ನೀಡುತ್ತೇವೆ” ಎಂದು ಭರವಸೆ ನೀಡಿದರು.

“ಬರದ ಬಗ್ಗೆ ಚರ್ಚೆ ಮಾಡಲು ಬಿಜೆಪಿಗೆ ಧೈರ್ಯ ಇಲ್ಲ, ಸದನದಲ್ಲಿ ಚರ್ಚೆ ಮಾಡಿದರೆ ಕೇಂದ್ರದಿಂದ ಬರುವ ಪಾಲನ್ನು ಕೇಳುತ್ತೇವೆ ಎಂದು ಬಿಜೆಪಿ ನಾಯಕರು ಚರ್ಚೆಗೆ ಬರದೆ ನಾಗೇಂದ್ರ ಅವರ ವಿಷಯದಲ್ಲಿ ಕಲಾಪವನ್ನೇ ಹಾಳು ಮಾಡಿದ್ದಾರೆ. ಇಡಿ ಸಿಬಿಐ ತನಿಖಾ ಸಂಸ್ಥಗಳು ವಿರೋಧ ಪಕ್ಷದ ನಾಯಕರ ಮೇಲೆ ಮಾತ್ರ ತನಿಖೆ ನಡೆಸುತ್ತಿದೆ. ರಾಜ್ಯಪಾಲರು ತ್ರಿಶಂಕುವಿನಲ್ಲಿದ್ದಾರೆ. ರಾಜ್ಯಪಾಲರ ಕಚೇರಿ ಮೇಲೆ ಕೇಂದ್ರದವರು ಒತ್ತಡ ಹಾಕಿ ಪ್ರಾಸಿಕ್ಯೂಷನ್‌ಗೆ ಪರ್ಮಿಷನ್ ಕೊಡಿಸುತ್ತಾರೆ” ಎಂದು ಆರೋಪಿಸಿದರು.

“ಬಿಜೆಪಿ ನಾಯಕರು ಯಾರೂ ಸತ್ಯಹರಿಶ್ಚಂದ್ರರಲ್ಲ. ಆಪಾದನೆ ಬಂದ ತಕ್ಷಣ ಯಾರಾದರೂ ರಾಜೀನಾಮೆ ನೀಡಿದ್ದಾರಾ? ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...