Homeಮುಖಪುಟಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ ಅಂತರದಲ್ಲಿ, ಮಹಾರಾಷ್ಟ್ರದಲ್ಲಿ ಈ ವರ್ಷದ ನವರಾತ್ರಿ ಆಚರಣೆಯ ಸಮಯದಲ್ಲಿ ಗಾರ್ಬಾ ಮತ್ತು ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಘೋಷಿಸಿದೆ.

ನವರಾತ್ರಿಗೆ ಮುನ್ನ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ವಿಎಚ್‌ಪಿ, ಕಾರ್ಯಕ್ರಮದ ಆಯೋಜಕರು ಭಾಗವಹಿಸುವವರ ಗುರುತನ್ನು ಆಧಾರ್ ಕಾರ್ಡ್‌ಗಳ ಮೂಲಕ ಪರಿಶೀಲಿಸಬೇಕು. ಪ್ರವೇಶದ್ವಾರದಲ್ಲಿ ಹಣೆಗೆ ತಿಲಕ ಹಚ್ಚುವುದನ್ನು ಕಡ್ಡಾಯಗೊಳಿಸಬೇಕು ಎಂದು ನಿರ್ದೇಶಿಸಿದೆ.

ವಿಎಚ್‌ಪಿ ರಾಷ್ಟ್ರೀಯ ವಕ್ತಾರ ಹಾಗೂ ಜಂಟಿ ಪ್ರಧಾನ ಕಾರ್ಯದರ್ಶಿ ಶ್ರೀರಾಜ್ ನಾಯರ್ ಅವರ ಪ್ರಕಾರ, ಒಂಬತ್ತು ದಿನಗಳ ಕಾಲ ನಡೆಯುವ ಈ ಹಿಂದೂ ಹಬ್ಬದ ಸಂದರ್ಭದಲ್ಲಿ ನಡೆಯುವ ಗಾರ್ಬಾ ಮತ್ತು ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ಪಾಲ್ಗೊಳ್ಳಲು ಅವಕಾಶ ನೀಡದಿರಲು ಸಂಸ್ಥೆ ನಿರ್ಧರಿಸಿದೆ.

ಆಂಗ್ಲ ಸುಂದ್ದಿ ಸಂಸ್ಥೆಯೊಂದಕ್ಕೆ ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಜ್ ನಾಯರ್, “ನವರಾತ್ರಿ ಎನ್ನುವುದು ಕೇವಲ ಸಾಂಸ್ಕೃತಿಕ ಅಥವಾ ಮನರಂಜನೆಯ ಕಾರ್ಯಕ್ರಮವಲ್ಲ, ಅದು ದುರ್ಗಾ ದೇವಿಯ ಆರಾಧನೆಗೆ ಸಂಬಂಧಿಸಿದ ಧಾರ್ಮಿಕ ಹಬ್ಬವಾಗಿದೆ. ನವರಾತ್ರಿ ಎಂದರೆ ಕೇವಲ ನೃತ್ಯ ಮತ್ತು ಮನರಂಜನೆಯಲ್ಲ. ಇದು ತಾಯಿ ದುರ್ಗೆಯ ಆರಾಧನೆಗೆ ಮೀಸಲಾದ ಹಬ್ಬ. ಮೂರ್ತಿ ಪೂಜೆಯಲ್ಲಿ ನಂಬಿಕೆ ಇಲ್ಲದವರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಈ ನಿರ್ಧಾರವನ್ನು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧದ ಪ್ರಚಾರ ಎಂದು ನೋಡಬಾರದು. ಧಾರ್ಮಿಕ ಸಂಪ್ರದಾಯಗಳನ್ನು ಕಾಪಾಡಿಕೊಲ್ಳುವ ಜೊತೆಗೆ ಆಚರಣೆಯ ಸಮಯದಲ್ಲಿ ಭದ್ರತೆಯನ್ನು ಕಾಯ್ದುಕೊಳ್ಳಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ನಾಯರ್ ಹೇಳಿದ್ದಾರೆ.

“ಹಿಂದೂ ಹಬ್ಬಗಳು ದೇಶದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿವೆ. ಅವುಗಳ ಮೂಲ ಸ್ವರೂಪವನ್ನು ರಕ್ಷಿಸಬೇಕಾಗಿದೆ” ಎಂದು ಅವರು ಹೇಳಿದರು.

ಭಾಗವತ್ ಅವರ ಹೇಳಿಕೆಗಳು ಮತ್ತು ವಿಎಚ್‌ಪಿ ನಿರ್ಧಾರದ ನಡುವಿನ ವ್ಯತ್ಯಾಸದ ಕುರಿತು ಕೇಳಿದಾಗ, ನಾಯರ್ ನೇರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು. ವಿಎಚ್‌ಪಿ ಕೂಡ ಸಾಮಾಜಿಕ ಸೌಹಾರ್ದತೆ ಮತ್ತು ಶಾಂತಿಯನ್ನು ನಂಬುತ್ತದೆ ಎಂದು ಮಾತ್ರ ಹೇಳಿದರು.

ಸಂಸ್ಥೆಯ ನಿಲುವನ್ನು ವಿವರಿಸಿದ ನಾಯರ್, ನವರಾತ್ರಿಯನ್ನು ಆಚರಿಸಲು ಬಯಸುವ ಮುಸ್ಲಿಂ ಸಮುದಾಯದ ಸದಸ್ಯರು ತಮ್ಮದೇ ಆದ ಪ್ರದೇಶಗಳಲ್ಲಿ ಮತ್ತು ಸಾಮಾಜಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂದು ಹೇಳಿದರು.

ಈ ನಿರ್ಬಂಧಗಳು ನವರಾತ್ರಿ ಆಚರಣೆಯ ಧಾರ್ಮಿಕ ಸ್ವರೂಪವನ್ನು ಉಳಿಸುವ ಉದ್ದೇಶವನ್ನು ಹೊಂದಿವೆಯೇ ಹೊರತು ರಾಜಕೀಯ ಆಧಾರದ ಮೇಲೆ ಜನರನ್ನು ಹೊರಗಿಡುವುದಲ್ಲ ಎಂದು ವಿಎಚ್‌ಪಿ ಪ್ರತಿಪಾದಿಸುತ್ತದೆ.

ಆದರೆ, ಧರ್ಮದ ಆಧಾರದ ಮೇಲೆ ಸಾರ್ವಜನಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಜನರನ್ನು ತಡೆಯುವುದು ತಾರತಮ್ಯಕ್ಕೆ ಸಮನಾಗಿದೆ, ಕೋಮು ವಿಭಜನೆಯನ್ನು ಹೆಚ್ಚಿಸುವ ಅಪಾಯವನ್ನುಂಟುಮಾಡುತ್ತದೆ ಎಂದು ಕೆಲವರು ವಾದಿಸುತ್ತಾರೆ.

ಮಹಾರಾಷ್ಟ್ರದಲ್ಲಿ ನವರಾತ್ರಿ ಸಿದ್ಧತೆಗಳು ಚುರುಕುಗೊಳ್ಳುತ್ತಿದ್ದಂತೆ ಈ ಚರ್ಚೆಯು ತೀವ್ರಗೊಳ್ಳುವ ಸಾಧ್ಯತೆಯಿದೆ.

ಈ ನಿರ್ದೇಶನವನ್ನು ಎಷ್ಟು ವ್ಯಾಪಕವಾಗಿ ಜಾರಿಗೆ ತರಲು ವಿಎಚ್‌ಪಿ ಉದ್ದೇಶಿಸಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಮಾರ್ಗಸೂಚಿಗಳು ವಿಎಚ್‌ಪಿ ನೇರವಾಗಿ ಆಯೋಜಿಸಿದ, ಪ್ರಾಯೋಜಿಸಿದ ಅಥವಾ ಬೆಂಬಲಿಸಿದ ಕಾರ್ಯಕ್ರಮಗಳಿಗೆ ಮಾತ್ರ ಅನ್ವಯಿಸುತ್ತವೆಯೇ ಅಥವಾ ಮಹಾರಾಷ್ಟ್ರದಾದ್ಯಂತ ಇರುವ ಖಾಸಗಿ ಗಾರ್ಬಾ ಮತ್ತು ದಾಂಡಿಯಾ ಆಯೋಜಕರು ಸಹ ಇದೇ ರೀತಿಯ ನಿರ್ಬಂಧಗಳನ್ನು ಅಳವಡಿಸಿಕೊಳ್ಳಬೇಕೆಂದು ಸಂಸ್ಥೆ ನಿರೀಕ್ಷಿಸುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...