Homeಕರ್ನಾಟಕಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ...

ಪಟ್ಟುಬಿಡದೇ ಸಾಹಿತ್ಯ ಸಮ್ಮೇಳನ ಆರಂಭಿಸಿದ ಚಿಕ್ಕಮಗಳೂರು ಕಸಾಪ.. ಸಂಘಪರಿವಾರಕ್ಕೆ ಮುಖಭಂಗ…

ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

- Advertisement -
- Advertisement -

ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಮಗಳೂರು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಗವಾಗಿ ನಡೆಯುತ್ತಿದ್ದು, ಸಂಘ ಪರಿವಾರದ ಬೆದರಿಕೆಗೆ ಸೊಪ್ಪು ಹಾಕದೇ ಯಶಸ್ವಿಯಾಗಿ ಸಮ್ಮೇಳನ ಮಾಡಿಯೇ ತೀರುವುದಾಗಿ ಜಿಲ್ಲ ಕನ್ನಡ ಸಾಹಿತ್ಯ ಪರಿಷತ್‌ ಪಣ ತೊಟ್ಟಿದೆ.

ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಹೋರಾಟಗಾರ ಮತ್ತು ಸಾಹಿತಿ ಕಲ್ಕುಳಿ ವಿಠಲ ಹೆಗಡೆಯವರ ಆಯ್ಕೆಯನ್ನು ವಿರೋಧಿಸಿ ಸಚಿವ ಸಿ.ಟಿ ರವಿ ನೇತೃತ್ವದಲ್ಲಿ ಸಂಘಪರಿವಾರ ಕ್ಯಾತೆ ತೆಗೆದಿತ್ತು. ಮೆರವಣಿಗೆ ಮಾಡಲು ಬಿಡುವುದಿಲ್ಲ, ಶೃಂಗೇರಿ ಬಂದ್‌ ಮಾಡುತ್ತೇವೆ ಎಂದು ಬೆದರಿಕೆ ಹಾಕಿತ್ತು. ಅಲ್ಲದೇ ಸಂಘಪರಿವಾರದ ಆದೇಶಕ್ಕೆ ಮಣಿದಿದ್ದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ಜಿಲ್ಲಾಡಳಿತ ಅನುಮತಿಯನ್ನೇ ನಿರಾಕರಿಸಿತ್ತು. ಪೊಲೀಸರು ಬ್ಯಾನರ್‌ ಬಂಟಿಂಗ್ಸ್‌ಗಳನ್ನು ಕಿತ್ತು ಹಾಕಿ ಮೆರವಣಿಗೆಗೆ ನಿಷೇಧ ಹೇರಿದ್ದರು. ಉಪನಿರ್ದೇಶಕರು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ನೀಡಿದ್ದ ಓಓಡಿಯನ್ನು ರದ್ದುಗೊಳಿಸಿದ್ದರು.

ಇಷ್ಟೆಲ್ಲಾ ಅಡ್ಡಿ ಆಂತಕಗಳಿದ್ದರೂ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕುಂದೂರು ಶ್ರೀನಿವಾಸ್‌ರವರು ಒಂಚೂರು ಜಗ್ಗಿರಲಿಲ್ಲ. ಸಮ್ಮೇಳಾನಾಧ್ಯಕ್ಷರ ಹೆಸರು ಸರ್ವರ ಸಮ್ಮತಿಯೊಂದಿಗೆ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಅಂಗೀಕಾರಗೊಂಡಿದೆ. ಅಲ್ಲದೇ ಶೃಂಗೇರಿಯಲ್ಲಿ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಕಲ್ಕುಳಿ ವಿಠಲ ಹೆಗಡೆಯವರು ಸಂಪೂರ್ಣ ಅರ್ಹ ವ್ಯಕ್ತಿಗಳಾಗಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಸ್ವಾಯುತ್ತ ಸಂಸ್ಥೆಯಾಗಿದ್ದು ಅದು ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಘೋಷಿಸಿದ್ದರು.

ಅಡ್ಡಿ ಆತಂಕಗಳನ್ನು ಧಿಕ್ಕರಿಸಿ ಸಮ್ಮೇಳನ ನಡೆಸುತ್ತೇವೆ. ಪರಿಷತ್ತು ಹಣ ನೀಡದಿದ್ದರೆ ಏನಂತೆ, ನಮ್ಮ ಕೈಯಿಂದ, ಜನರಿಂದ ಹಣ ಸಂಗ್ರಹಿಸಿ ಕಾರ್ಯಕ್ರಮ ನಡೆಸುತ್ತಿವೆ. ಸಾಹಿತ್ಯದಲ್ಲಿ ವಿಚಾರ ಬೇಧ ಸಲ್ಲದು. ನಮ್ಮ ಮೇಲಿನ ದಾಳಿ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ, ಇದಕ್ಕೆ ನಾವು ಬಗ್ಗುವುದಿಲ್ಲ ಎಂದು ಅವರು ಸಮ್ಮೇಳನ ನಡೆಸಿಯೇ ತೀರಿದ್ದಾರೆ.

ಅದರಂತೆ ರಾಜ್ಯದ್ಯಂತ ಸಮಾನ ಮನಸ್ಕರು, ಕನ್ನಡಪ್ರೇಮಿಗಳು ದೇಣಿಗೆ ನೀಡಿ ಸಮ್ಮೇಳನ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಜಿಲ್ಲಾ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು, ಕನ್ನಡ ಪ್ರೇಮಿಗಳು ಭಾಗವಹಿಸಿದ್ದಾರೆ.

ಇಂದು ಬೆಳಿಗ್ಗೆ ಮೆರವಣಿಗೆಗೆ ಪೊಲೀಸರು ಅಸಹಕಾರ ತೋರಿದ್ದರಿಂದ ಗಲಾಟೆಗೆ ಆಸ್ಪದ ನೀಡಬಾರದೆಂದು ಕಾರಿನಲ್ಲಿಯೇ ಚಿಕ್ಕಮಗಳೂರು ಸುತ್ತಾ ಅಧ್ಯಕ್ಷರ ಮೆರವಣಿಗೆ ನಡೆಸಿ ಶಾರದ ಮಠಕ್ಕೆ ಕರೆತರಲಾಯಿತು. ಅಭಿಮಾನಿಗಳನ್ನು ಅಧ್ಯಕ್ಷರನ್ನು ಹೊತ್ತು ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದರು. ನಾಡಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.

ಬರಗೂರು ರಾಮಚಂದ್ರಪ್ಪ, ಚಂದ್ರಶೇಖರ ಪಾಟೀಲ, ಪ್ರಸನ್ನ ಹೆಗ್ಗೋಡು, ಕಡಿದಾಳು ಶಾಮಣ್ಣ, ಕೆ.ಎಲ್‌ ಅಶೋಕ್‌, ದೇವರಾಜ್‌ ಕೊಪ್ಪ ಸೇರಿದಂತೆ ನಾಡಿನ ಹಲವಾರು ಸಾಹಿತಿ ಚಿಂತಕರು ಸಿ.ಟಿ ರವಿಯ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಜಿಲ್ಲಾ ಕಸಾಪದ ನಡೆಗೆ ಬೆಂಬಲ ನೀಡಿದ್ದರು.

ರಾಜ್ಯದ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಇಂದು ಯಶಸ್ವಿಯಾಗಿ ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುವ ಸೂಚನೆ ನೀಡಿದೆ. ಕನ್ನಡ ಪ್ರೇಮಿಗಳ ವಿರುದ್ಧ ನಿರ್ಧಾರ ತೆಗೆದುಕೊಂಡು ಸಮ್ಮೇಳನಕ್ಕೆ ಅಡ್ಡಿವುಂಟುಮಾಡಲು ಪ್ರಯತ್ನಿಸಿದ್ದ ಸಿ.ಟಿ ರವಿ ಪರಿವಾರಕ್ಕೆ ಮುಖಭಂಗವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...