Homeಮುಖಪುಟಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

- Advertisement -
- Advertisement -

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ ರೂಪಾಯಿ ಪಾವತಿಸುವಂತೆ ಗುವಾಹಟಿ ಹೈಕೋರ್ಟ್ ಅಸ್ಸಾಂ ಸರ್ಕಾರಕ್ಕೆ ಆದೇಶಿಸಿದೆ.

ಮುಮ್ತಾಝ್ ಬೇಗಂ ಎಂಬ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ನಂತರ, ಅವರ ಪತಿ ಮುಝಮ್ಮಿಲ್ ಹಕ್ ಅವರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯ, ಮೇಲಿನ ಆದೇಶ ನೀಡಿದೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಸೆಪ್ಟೆಂಬರ್ 3ರಂದು ನ್ಯಾಯಮೂರ್ತಿಗಳಾದ ಕಲ್ಯಾಣ್ ರಾಯ್ ಸುರಾನಾ ಮತ್ತು ಸುಸ್ಮಿತಾ ಫುಕನ್ ಕೌಂಡ್ ಅವರಿದ್ದ ವಿಭಾಗೀಯ ಪೀಠವು ಹಕ್ ಪರವಾಗಿ ತೀರ್ಪು ನೀಡಿದೆ. ಗಡಿಪಾರಿಗೆ ಸಂಬಂಧಪಟ್ಟ ಸ್ಥಾಪಿತ ನಿಯಮಗಳನ್ನು ಉಲ್ಲಂಘಿಸಿ, ವ್ಯಕ್ತಿಯೊಬ್ಬರನ್ನು ಬಲವಂತವಾಗಿ ಬಾಂಗ್ಲಾದೇಶಕ್ಕೆ ತಳ್ಳಿದ್ದಕ್ಕಾಗಿ ನ್ಯಾಯಾಲಯ ಸರ್ಕಾರಕ್ಕೆ ದಂಡ ವಿಧಿಸಿರುವುದು ಇದೇ ಮೊದಲ ಬಾರಿಯಾಗಿದೆ.

ಮುಮ್ತಾಜ್ ಬೇಗಂ ಅವರ ಪ್ರಕರಣದಲ್ಲಿ ನ್ಯಾಯಾಧೀಕರಣವು ಕಾನೂನು ನಿಯಮಗಳನ್ನು ಗಾಳಿಗೆ ತೂರಿ, ಆಕೆಗೆ ನ್ಯಾಯ ಕೇಳಲು ಅವಕಾಶವನ್ನೇ ನೀಡದೆ ತರಾತುರಿಯಲ್ಲಿ ತೀರ್ಪು ನೀಡಿತ್ತು. ಇದನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ವಿದೇಶಿಯರ ನ್ಯಾಯಾಧೀಕರಣಗಳು (ಫಾರಿನರ್ಸ್ ಟ್ರಿಬ್ಯೂನಲ್ಸ್) ಎಂಬುದು ಅಕ್ರಮ ವಲಸಿಗರೆಂದು ಶಂಕಿಸಲ್ಪಟ್ಟ ವ್ಯಕ್ತಿಗಳು ಕಾನೂನುಬದ್ಧ ನಾಗರಿಕರೇ ಅಥವಾ ವಿದೇಶಿಯರೇ ಎಂಬುದನ್ನು ನಿರ್ಧರಿಸುವ ಜವಾಬ್ದಾರಿ ಹೊಂದಿರುವ ಅರೆ-ನ್ಯಾಯಾಂಗ ಸಂಸ್ಥೆಗಳಾಗಿವೆ.

ಈ ಹಿಂದೆಯೂ ಮುಮ್ತಾಜ್ ಬೇಗಂ ಅವರು ಗುವಾಹಟಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಅವರು ಸಲ್ಲಿಸಿದ್ದ ಎಲ್ಲಾ ಸಾಕ್ಷ್ಯಗಳನ್ನು ವಿದೇಶಿಯರ ನ್ಯಾಯಾಧೀಕರಣವು (ಟ್ರಿಬ್ಯೂನಲ್) ಸರಿಯಾಗಿ ಪರಿಶೀಲಿಸಿಲ್ಲ ಎಂದು ಹೈಕೋರ್ಟ್ ಕಂಡುಕೊಂಡಿತ್ತು. ಹಾಗಾಗಿ, ಪ್ರಕರಣವನ್ನು ಮರುಪರಿಶೀಲಿಸುವಂತೆ ನ್ಯಾಯಾಧೀಕರಣಕ್ಕೆ ವಾಪಸ್ ಕಳುಹಿಸಿತ್ತು.

ಆದರೆ, ನ್ಯಾಯಾಧೀಕರಣವು ಪ್ರಕರಣವನ್ನು ಮತ್ತೊಮ್ಮೆ ಪರಿಶೀಲಿಸಿದಾಗಲೂ ಮುಮ್ತಾಝ್ ಅವರ ಪರವಾಗಿ ದಾಖಲೆಗಳಿದ್ದರೂ ಸಹ, ಮೇ 30ರಂದು ಅವರ ವಿರುದ್ಧವೇ ತೀರ್ಪು ನೀಡಿತ್ತು. ಅವರನ್ನು ಭಾರತದ ನಾಗರಿಕಳಲ್ಲ, ವಿದೇಶಿ ಪ್ರಜೆ ಎಂದು ಘೋಷಿಸಿತ್ತು.

ಮೇ 30ರ ಆದೇಶದ ಬಗ್ಗೆ ಮುಮ್ತಾಝ್ ಬೇಗಂ ಅವರಿಗೆ ಮಾಹಿತಿ ನೀಡಿದ ತಕ್ಷಣವೇ, ಆಕೆಗೆ ಆ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ ತಕ್ಷಣವೇ ವಶಕ್ಕೆ ಪಡೆಯಲಾಗಿತ್ತು ಎಂಬುವುದನ್ನು ಪ್ರಸ್ತುತ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಪೀಠವು ಗಮನಿಸಿದೆ.

ಮುಮ್ತಾಝ್ ಅವರನ್ನು ಯಾವಾಗ ಮತ್ತು ಹೇಗೆ ಬಂಧಿಸಲಾಯಿತು ಎಂಬ ವಿಷಯದಲ್ಲಿ ನ್ಯಾಯಾಧೀಕರಣದ ಸದಸ್ಯರು ಮತ್ತು ಪೊಲೀಸರು ನೀಡಿದ ಹೇಳಿಕೆಗಳು ಪರಸ್ಪರ ಭಿನ್ನವಾಗಿದ್ದವು. ಈ ಗೊಂದಲದ ಮತ್ತು ವಿರೋಧಾಭಾಸದ ವರದಿಗಳ ಬಗ್ಗೆಯೂ ನ್ಯಾಯಾಧೀಶರು ತೀವ್ರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಘಟನೆಗಳು ನಡೆದ ಸರಣಿಯನ್ನು ಗಮನಿಸಿದ ಹೈಕೋರ್ಟ್ ಪೀಠವು, ಇದು ವಿದೇಶಿ ಪ್ರಜೆಗಳ ಗಡಿಪಾರು ಪ್ರಕ್ರಿಯೆಗೆ ಸಂಬಂಧಿಸಿದ ‘ಪ್ರಮಾಣಿತ ಕಾರ್ಯಾಚರಣೆ ವಿಧಾನದ’ (Standard Operating Procedure – SOP) ನೇರ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ನಿಯಮಗಳ ಪ್ರಕಾರ, ಯಾವುದೇ ವ್ಯಕ್ತಿಯನ್ನು ದೇಶದಿಂದ ಹೊರಹಾಕುವ ಮುನ್ನ ಅವರಿಗೆ ಲಭ್ಯವಿರುವ ಎಲ್ಲಾ ಕಾನೂನುಬದ್ಧ ಹೋರಾಟ ಮತ್ತು ಮೇಲ್ಮನವಿ ಅವಕಾಶಗಳನ್ನು ಬಳಸಿಕೊಳ್ಳಲು ನ್ಯಾಯಸಮ್ಮತವಾದ ಕಾಲಾವಕಾಶ ನೀಡಬೇಕಾಗುತ್ತದೆ. ಆದರೆ ಬೇಗಂ ಅವರ ಪ್ರಕರಣದಲ್ಲಿ ಈ ನಿಯಮವನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿತ್ತು.

ಮುಮ್ತಾಝ್ ಬೇಗಂ ಅವರು ಹೈಕೋರ್ಟ್ ಮೆಟ್ಟಿಲೇರುವ ಮತ್ತು ನ್ಯಾಯ ಕೇಳುವ ತಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸದಂತೆ ಅಸ್ಸಾಂ ಸರ್ಕಾರವು ಸಂಪೂರ್ಣವಾಗಿ ತಡೆದಿದೆ ಎಂದು ಹೈಕೋರ್ಟ್ ಪೀಠವು ತೀರ್ಪು ನೀಡಿದೆ. ಸರ್ಕಾರದ ಈ ಬೇಜವಾಬ್ದಾರಿ ನಡೆಗಾಗಿ, ಸಂತ್ರಸ್ತ ಮಹಿಳೆಯ ಪತಿಗೆ ಮಧ್ಯಂತರ ಪರಿಹಾರವಾಗಿ 2 ಲಕ್ಷ ರೂಪಾಯಿ ಹಣವನ್ನು ಪಾವತಿಸುವಂತೆ ಅಸ್ಸಾಂ ಸರ್ಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ, “ಈಗ ನೀಡಲಾಗಿರುವ 2 ಲಕ್ಷ ರೂಪಾಯಿ ಮಧ್ಯಂತರ ಪರಿಹಾರವು ಕೇವಲ ಒಂದು ತಾತ್ಕಾಲಿಕ ಸಮಾಧಾನಕರ ಹಣವಷ್ಟೇ ಆಗಿದೆ” ಎಂದು ಸ್ಪಷ್ಟಪಡಿಸಿದೆ.

ಈ ಆದೇಶದಿಂದಾಗಿ ಅರ್ಜಿದಾರರು (ಪತಿ) ಭವಿಷ್ಯದಲ್ಲಿ ತಮಗಾದ ಅನ್ಯಾಯ ಮತ್ತು ಮಾನಸಿಕ ತೊಂದರೆಗೆ ದೊಡ್ಡ ಮೊತ್ತದ ಸೂಕ್ತ ಪರಿಹಾರವನ್ನು ಕೇಳಿ ಸಿವಿಲ್ ನ್ಯಾಯಾಲಯದಲ್ಲಿ ಪ್ರತ್ಯೇಕ ಮೊಕದ್ದಮೆ ಹೂಡುವ ಹಕ್ಕನ್ನು ಕಳೆದುಕೊಳ್ಳುವುದಿಲ್ಲ. ಸಿವಿಲ್ ನ್ಯಾಯಾಲಯಕ್ಕೆ ಹೋಗುವ ಅವರ ಕಾನೂನುಬದ್ಧ ಹಕ್ಕು ಹಾಗೇ ಇರುತ್ತದೆ.

ಮೇ 30ರ ನ್ಯಾಯಾಧೀಕರಣದ ಆದೇಶವನ್ನು ಅಸಲಿಗೆ ಯಾವ ದಿನ ಮತ್ತು ಯಾವ ಸಮಯದಲ್ಲಿ ಬರೆಯಲಾಗಿತ್ತು (ಡ್ರಾಫ್ಟ್ ಮಾಡಲಾಗಿತ್ತು) ಎಂಬುದರ ನಿಖರವಾದ ಟೈಮ್‌ಲೈನ್ ಪತ್ತೆಹಚ್ಚಲು ಹೈಕೋರ್ಟ್ ಆದೇಶಿಸಿದೆ. ಇದಕ್ಕಾಗಿ ಅಗತ್ಯ ಬಿದ್ದರೆ ನ್ಯಾಯಾಧೀಕರಣದ ಸದಸ್ಯರು ಬಳಸುತ್ತಿದ್ದ ಕಂಪ್ಯೂಟರ್ ಅನ್ನು ಜಪ್ತಿ ಮಾಡಿ, ವಿಧಿವಿಜ್ಞಾನ ತನಿಖೆಗೆ ಒಳಪಡಿಸಬೇಕಾಗಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಇಡೀ ಗೊಂದಲದ ಪ್ರಕ್ರಿಯೆಯ ಹಿಂದೆ ಅಸಲಿ ಸತ್ಯ ಏನೆಂಬುದನ್ನು ವಿವರವಾಗಿ ಪತ್ತೆಹಚ್ಚಲು ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಇಲಾಖೆಗೆ ಹೈಕೋರ್ಟ್ ಪೀಠವು ಕಟ್ಟುನಿಟ್ಟಿನ ತನಿಖೆ ನಡೆಸುವಂತೆ ಆದೇಶ ನೀಡಿದೆ.

ಯಾರನ್ನಾದರೂ ‘ವಿದೇಶಿ ಪ್ರಜೆ’ ಎಂದು ಘೋಷಿಸಿದರೆ, ಅವರನ್ನು ವಶಕ್ಕೆ ಪಡೆಯುವ (ಬಂಧಿಸುವ) ಮುನ್ನ ಅವರಿಗೆ ನ್ಯಾಯಾಧೀಕರಣದ ಆದೇಶದ ಪ್ರತಿಯನ್ನು ನೀಡಿ, ಆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಪೀಠವು ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಘೋಷಿತ ವಿದೇಶಿ ಪ್ರಜೆಯನ್ನು ಆಯಾ ಜಿಲ್ಲೆಯಿಂದ ಬೇರೆಡೆಗೆ ಅಥವಾ ಡಿಟೆನ್ಷನ್ ಸೆಂಟರ್‌ಗೆ ಸ್ಥಳಾಂತರಿಸುವ ಮುನ್ನ, ಅವರ ಕುಟುಂಬದ ಕನಿಷ್ಠ ಒಬ್ಬರು ವಯಸ್ಕ ಸದಸ್ಯರಿಗೆ ಕಡ್ಡಾಯವಾಗಿ ಮುಂಚಿತವಾಗಿಯೇ ಮಾಹಿತಿ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಇದರಿಂದಾಗಿ ಪೊಲೀಸರು ತರಾತುರಿಯಲ್ಲಿ ಅಥವಾ ರಹಸ್ಯವಾಗಿ ಜನರನ್ನು ಗಡಿಪಾರು ಮಾಡುವುದಕ್ಕೆ ಬ್ರೇಕ್ ಬಿದ್ದಂತಾಗಿದೆ.

ಹೈಕೋರ್ಟ್ ಪೀಠವು ಈ ಪ್ರಕರಣದಲ್ಲಿ ಭಾರತ ಸರ್ಕಾರದ ಕೇಂದ್ರ ವಿದೇಶಾಂಗ ಸಚಿವಾಲಯವನ್ನು ಒಂದು ಪಕ್ಷಗಾರನನ್ನಾಗಿ ಮಾಡಿದೆ.

ಬಾಂಗ್ಲಾದೇಶದಲ್ಲಿರುವ ಮುಮ್ತಾಝ್ ಬೇಗಂ ಅವರನ್ನು ಅಲ್ಲಿ ಹುಡುಕಲು ಅಗತ್ಯ ಪ್ರಯತ್ನಗಳನ್ನು ಮಾಡಬೇಕು ಮತ್ತು ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯವು ವಿದೇಶಾಂಗ ಸಚಿವಾಲಯಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಆ ಮೂಲಕ ಮಹಿಳೆಗೆ ತನಗಾದ ಅನ್ಯಾಯದ ವಿರುದ್ಧ ಭಾರತದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲು ನ್ಯಾಯಸಮ್ಮತವಾದ ಅವಕಾಶ ಸಿಗುವಂತೆ ಮಾಡುವುದು ಹೈಕೋರ್ಟ್‌ನ ಉದ್ದೇಶವಾಗಿದೆ.




ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...