Homeದಲಿತ್ ಫೈಲ್ಸ್ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

- Advertisement -
- Advertisement -

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ.

ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ಮಾಡಿದ್ದಾರೆ. ಆಕೆ ತನ್ನ ಇಚ್ಛೆಯಂತೆ ಮದುವೆಯಾಗಿರುವುದಾಗಿ ಸ್ಥಳೀಯ ನ್ಯಾಯಾಲಯದಲ್ಲಿ ಒಪ್ಪಿಕೊಂಡ ನಂತರ ಈ ಸಾಂಕೇತಿಕ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಲಾಗಿದೆ. ಪೂರ್ಣಿಯಾದ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಚಪಾಯ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ.

ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿನಿಯಾದ ರಿಯಾ, ಸೆಪ್ಟೆಂಬರ್ 8 ರಂದು 24 ವರ್ಷದ ಮಿನಾಲ್ ಕುಮಾರ್ ಜತೆ ಓಡಿಹೋಗಿ ಕೋರ್ಟ್‌ನಲ್ಲಿ ವಿವಾಹವಾಗಿದ್ದಳು.

ಆಕೆಯ ತಂದೆ ಮನೋಜ್ ಕುಮಾರ್ ಗೋಸ್ವಾಮಿ, ತನ್ನ ಮಗಳು ಅಪಹರಣಕ್ಕೊಳಗಾಗಿದ್ದಾಳೆ ಎಂದು ಶಂಕಿಸಿ ಮರಂಗಾ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಗ್ರಾಮಸ್ಥರ ಪ್ರಕಾರ, ರಿಯಾ ಮತ್ತು ಮಿನಾಲ್ ಸುಮಾರು ಮೂರು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು. ಇವರ ಮನೆಗಳು ಪರಸ್ಪರ ಕೇವಲ 100 ಮೀಟರ್ ದೂರದಲ್ಲಿದ್ದವು.

ರಿಯಾ ಕಾಲೇಜಿಗೆ ಪ್ರಯಾಣಿಸುವಾಗ ಇಬ್ಬರೂ ಮೊದಲು ಪರಸ್ಪರ ಪರಿಚಯವಾಗಿದ್ದರು, ಕ್ರಮೇಣ ಭೇಟಿಯಾಗಿ ಮಾತನಾಡಲು ಶುರು ಮಾಡಿದ್ದರು. ಎರಡು ದಿನಗಳ ಹಿಂದೆ ಪೊಲೀಸರು ದೆಹಲಿಯಿಂದ ರಿಯಾವನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಲಾಯಿತು.

ಆಕೆಯು ಮಿನಾಲ್ ಪರವಾಗಿ ಮಾತನಾಡಿ, ತಾನು ಸ್ವಯಂಪ್ರೇರಿತವಾಗಿ ಮದುವೆಯಾಗಿರುವುದಾಗಿ ಹೇಳಿದಾಗ ಆಕೆಯ ತಂದೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಅವರು ಅಂತ್ಯಕ್ರಿಯೆಯ ಸಮಾರಂಭದ ಮೂಲಕ ತಮ್ಮ ಮಗಳ ಜತೆಗಿನ ಸಂಬಂಧವನ್ನು ಸಾಂಕೇತಿಕವಾಗಿ ಮುಗಿಸಲು ನಿರ್ಧರಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ, ಸೋಮವಾರ ರಾತ್ರಿಯೇ ಕುಟುಂಬವು ರಿಯಾಳ ಪ್ರತಿಕೃತಿಯನ್ನು ತಯಾರಿಸಿ, ಆಕೆಯ ಫೋಟೋವಿರುವ ಪೋಸ್ಟರ್ ಅನ್ನು ಸಿದ್ಧಪಡಿಸಿತ್ತು. ಮೆರವಣಿಗೆಯಲ್ಲಿ ಭಾಗವಹಿಸಲು ಮರುದಿನ ಬೆಳಿಗ್ಗೆ ಗ್ರಾಮಸ್ಥರನ್ನು ಆಹ್ವಾನಿಸಿದ್ದರು.

ನಂತರ ಪ್ರತಿಕೃತಿಯನ್ನು ಮನೆಯಿಂದ ಹೊತ್ತುಕೊಂಡು ಗ್ರಾಮದಾದ್ಯಂತ ಶವಯಾತ್ರೆ ನಡೆಸಲಾಯಿತು. ಮನೋಜ್ ಸಾಂಕೇತಿಕ ದಹನ ಕ್ರಿಯೆಯನ್ನು ನೆರವೇರಿಸುವ ಮೊದಲು ಜನರು ಹಿಂದೂ ಅಂತ್ಯಕ್ರಿಯೆಯ ಜಪವಾದ “ರಾಮ್ ನಾಮ್ ಸತ್ಯ ಹೈ” ಎಂದು ಘೋಷಣೆಗಳನ್ನು ಕೂಗಿದರು.

ಕುಟುಂಬವು 10 ಮತ್ತು 13 ನೇ ದಿನಗಳ ನಡುವೆ ಶ್ರಾದ್ಧ ಮತ್ತು ಪಿಂಡ-ದಾನ ಸೇರಿದಂತೆ ಸಾವಿಗೆ ಸಂಬಂಧಿಸಿದ ವಿಧಿಗಳನ್ನು ನಿರ್ವಹಿಸುವುದಾಗಿ ತಿಳಿಸಿದೆ.

ರಿಯಾಳ ಮದುಲೆಯನ್ನು ಈಗಾಗಲೇ ನಿಶ್ಚಯಿಸಲಾಗಿತ್ತು ಎಂದು ಮನೋಜ್ ಹೇಳಿದ್ದಾರೆ. ನವೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಪಡಿಸಲಾಗಿತ್ತು.

“ನಾವು ಮಗಳ ಮದುವೆಗೆ ಸಿದ್ಧತೆಗಳನ್ನು ಆರಂಭಿಸಿದ್ದೆವು. ಅಷ್ಟರಲ್ಲಿ ನನ್ನ ಅವಳು ಓಡಿಹೋಗಿ ತನ್ನ ಇಚ್ಛೆಯಂತೆ ಮದುವೆಯಾಗಿದ್ದಾಳೆ. ಈಗ ನಾನು ಆ ಇನ್ನೊಂದು ಕುಟುಂಬಕ್ಕೆ ಏನು ಹೇಳಲಿ? ಅವರ ಎದುರು ಹೇಗೆ ಮುಖ ತೋರಿಸಲಿ?” ಎಂದು ಅವರು ಬೇಸರ ವ್ಯಕ್ತಪಡಿಸಿದರು.

“ನಾನು ನನ್ನ ಮಗಳಿಗೆ ಶಿಕ್ಷಣ ನೀಡಿದೆ, ಬೆಳೆಸಿದೆ ಮತ್ತು ಆಕೆ ನಮ್ಮ ತಲೆ ತಗ್ಗಿಸುವಂತೆ ಮಾಡಿದ್ದಾಳೆ. ಯಾರಿಗೂ ಇಂತಹ ಮಗಳು ಸಿಗದಂತೆ ದೇವರು ನೋಡಿಕೊಳ್ಳಲಿ. ನಾವು ಈಗ ಯಾರಿಗೂ ಮುಖ ತೋರಿಸುವ ಸ್ಥಿತಿಯಲ್ಲಿಲ್ಲ” ಎಂದು ಹೇಳಿದರು.

ನಮ್ಮ ಪಾಲಿಗೆ ಈಗ ರಿಯಾ ಸತ್ತಿದ್ದಾಳೆ, ಆಕೆಯೊಂದಿಗೆ ತಮಗೆ ಯಾವುದೇ ಸಂಬಂಧವಿರುವುದಿಲ್ಲ ಎಂದು ಕುಟುಂಬ ಸ್ಪಷ್ಟಪಡಿಸಿದೆ.

ಈ ವಿವಾದವನ್ನು ಬಗೆಹರಿಸಲು ಸಮುದಾಯದ ಸದಸ್ಯರು ಈ ಹಿಂದೆ ಪ್ರಯತ್ನಿಸಿದ್ದರು ಎಂದು ಗ್ರಾಮಸ್ಥ ಅವಧೇಶ್ ಕುಮಾರ್ ತಿಳಿಸಿದ್ದಾರೆ. ಇಬ್ಬರನ್ನೂ ಸಭೆಗೆ ಕರೆದು ಸಾಮಾಜಿಕ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಲಾಗಿತ್ತು.

“ನಾವು ಮೊದಲು ಸಭೆ ನಡೆಸಿ ಎರಡೂ ಕಡೆಯವರನ್ನು ಕರೆದಿದ್ದೆವು. ಸಾಮಾಜಿಕ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದ್ದೆವು. ಹಿಂದೆ ಹೇಗಿದ್ದರೋ ಹಾಗೆ ಬದುಕಿ, ಇಬ್ಬರನ್ನೂ ಬೇರೆ ಮಾಡುವಂತೆ ಹೇಳಿದ್ದೆವು, ಆದರೆ ಹಾಗೆ ನಡೆಯಲಿಲ್ಲ” ಎಂದು ಅವಧೇಶ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...