HomeಮುಖಪುಟDUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 3ರಿಂದ ಸಂಜೆ 7:30ರವರೆಗೆ ಮತದಾನ ನಿಗದಿಯಾಗಿದೆ. ಸೆಪ್ಟೆಂಬರ್ 19ರಂದು ಮತ ಎಣಿಕೆ ನಡೆಯಲಿದ್ದು, ಈ ಬಾರಿ ಒಟ್ಟು 1,51,842 ವಿದ್ಯಾರ್ಥಿಗಳು ಮತದಾನದ ಹಕ್ಕನ್ನು ಹೊಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ನಡೆದ ನಿಯಮ ಉಲ್ಲಂಘನೆ, ಹಿಂಸಾಚಾರ, ವಾಹನಗಳ ರ್‍ಯಾಲಿ ಹಾಗೂ ಕ್ಯಾಂಪಸ್‌ನಲ್ಲಿ ನಡೆದ ಅಹಿತಕರ ಘಟನೆಗಳನ್ನು ದೆಹಲಿ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಫಲಿತಾಂಶ ಪ್ರಕಟವಾದ ಬಳಿಕ ಯಾವುದೇ ರೀತಿಯ ವಿಜಯೋತ್ಸವ ಮೆರವಣಿಗೆ ನಡೆಸದಂತೆ ನ್ಯಾಯಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಸಾರ್ವಜನಿಕ ರಸ್ತೆ, ಕ್ಯಾಂಪಸ್ ಹಾಗೂ ಹಾಸ್ಟೆಲ್‌ಗಳಲ್ಲಿ ಇಂತಹ ಮೆರವಣಿಗೆ ಮತ್ತು ಪ್ರದರ್ಶನಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

140 ಅಭ್ಯರ್ಥಿಗಳಿಗೆ ನೋಟಿಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ನ್ಯಾಯಪೀಠವು, DUSU ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಲ್ಲ 140 ಅಭ್ಯರ್ಥಿಗಳು ಮತ್ತು ಸಂಬಂಧಿತ ವಿದ್ಯಾರ್ಥಿ ಸಂಘಟನೆಗಳಿಗೆ ನೋಟಿಸ್ ಜಾರಿ ಮಾಡಿದೆ. ಲಿಂಗ್ಡೋ ಸಮಿತಿಯ ಶಿಫಾರಸುಗಳು, ಚುನಾವಣಾ ನೀತಿ ಸಂಹಿತೆ ಹಾಗೂ ನ್ಯಾಯಾಲಯದ ಹಿಂದಿನ ಆದೇಶಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಏಕೆ ಚುನಾವಣಾ ದಂಡ ಹಾಗೂ ಹಾನಿ ಪರಿಹಾರ ಶುಲ್ಕ ವಿಧಿಸಬಾರದು ಎಂದು ಸ್ಪಷ್ಟನೆ ಕೋರಿದೆ.

ಫಲಿತಾಂಶದ ನಂತರ ವಿಜಯೋತ್ಸವದ ಹೆಸರಿನಲ್ಲಿ ಮೆರವಣಿಗೆ, ಘೋಷಣೆ ಕೂಗುವುದು ಅಥವಾ ಡ್ರಮ್‌ ಬಾರಿಸುತ್ತಾ ಸಾರ್ವಜನಿಕ ಪ್ರದರ್ಶನ ನಡೆಸುವುದಕ್ಕೆ ತಡೆ ಒಡ್ಡಲಾಗಿದೆ. ನಿಯಮ ಮೀರಿ ನಡೆದುಕೊಂಡರೆ ಕಠಿಣ ಕ್ರಿಮಿನಲ್ ಹಾಗೂ ಆಡಳಿತಾತ್ಮಕ ಕ್ರಮ ಜರುಗಿಸುವುದಾಗಿ ನ್ಯಾಯಾಲಯ ಎಚ್ಚರಿಸಿದೆ.

ಹಿಂಸಾಚಾರ, ವಾಹನ ರ್‍ಯಾಲಿ ವಿರುದ್ಧ ಕೋರ್ಟ್ ಅಸಮಾಧಾನ

ಪ್ರಚಾರದ ಸಂದರ್ಭದಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನಗಳ ಬಳಕೆ, ರ್‍ಯಾಲಿ, ಶಸ್ತ್ರಾಸ್ತ್ರ ಪ್ರದರ್ಶನ ಮತ್ತು ಶಿಕ್ಷಕರ ಮೇಲಿನ ದಾಳಿ ಆರೋಪಗಳ ಕುರಿತು ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂಬಂಧ ದೆಹಲಿ ಪೊಲೀಸರು ಇದುವರೆಗೆ 49 ವಾಹನಗಳನ್ನು ಜಪ್ತಿ ಮಾಡಿದ್ದು, 5,400ಕ್ಕೂ ಹೆಚ್ಚು ಚಲನ್ ಜಾರಿಗೊಳಿಸಿದ್ದಾರೆ ಹಾಗೂ ನಾಲ್ವರನ್ನು ಬಂಧಿಸಿದ್ದಾರೆ ಎಂದು ಕೋರ್ಟ್‌ಗೆ ತಿಳಿಸಲಾಗಿದೆ.

“ವಿದ್ಯಾರ್ಥಿಗಳು ಎಂಬ ಕಾರಣಕ್ಕೆ ಕಾನೂನು ಉಲ್ಲಂಘಿಸುವವರಿಗೆ ಯಾವುದೇ ವಿನಾಯಿತಿ ನೀಡಬಾರದು” ಎಂದು ದೆಹಲಿ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ನಿಯಮ ಪಾಲನೆ ಮತ್ತು ಕ್ಯಾಂಪಸ್‌ನಲ್ಲಿ ಶಾಂತಿ ಕಾಪಾಡುವಂತೆ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಹಾಗೂ ಪೊಲೀಸರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಮತದಾನಕ್ಕೆ ಬಿಗಿ ಪೊಲೀಸ್ ಭದ್ರತೆ

ಚುನಾವಣೆಯಲ್ಲಿ ಪ್ರಮುಖ 4 ಹುದ್ದೆಗಳಿಗೆ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನಕ್ಕಾಗಿ 1,100ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು (EVM) ಬಳಸಲಾಗುತ್ತಿದ್ದು, 158 ಮತಗಟ್ಟೆಗಳು ಹಾಗೂ 12 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಭದ್ರತೆಗಾಗಿ ದೆಹಲಿ ಪೊಲೀಸರು ‘ಕ್ವಿಕ್ ರಿಯಾಕ್ಷನ್ ಟೀಮ್’ (QRT) ಸೇರಿದಂತೆ ವಿಶೇಷ ಪಡೆಗಳನ್ನು ನಿಯೋಜಿಸಿದ್ದಾರೆ.

ABVP, NSUI, AISA-SFI ನಡುವೆ ತ್ರಿಕೋನ ಸ್ಪರ್ಧೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP), ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಹಾಗೂ AISA-SFI ಮೈತ್ರಿಕೂಟಗಳ ನಡುವೆ ಪ್ರಮುಖ ಸ್ಪರ್ಧೆ ಏರ್ಪಟ್ಟಿದೆ. ಅಧ್ಯಕ್ಷ ಸ್ಥಾನಕ್ಕೆ ABVPಯಿಂದ ಯಶ್ ದಾಬಾಸ್, NSUIಯಿಂದ ವಿಜಯ್ ಶಂಕರ್ ಮೀನಾ ಹಾಗೂ AISA-SFI ಮೈತ್ರಿಕೂಟದಿಂದ ಅನನ್ಯಾ ರಾತುರಿ ಕಣದಲ್ಲಿದ್ದಾರೆ.

ಹಾಸ್ಟೆಲ್ ಕೊರತೆ, ವಿದ್ಯಾರ್ಥಿನಿಯರ ಸುರಕ್ಷತೆ, ಕ್ಯಾಂಪಸ್ ಮೂಲಸೌಕರ್ಯ, ಕೈಗೆಟುಕುವ ಸಾರಿಗೆ ವ್ಯವಸ್ಥೆ ಹಾಗೂ ಶೈಕ್ಷಣಿಕ ಸೌಲಭ್ಯಗಳು ಈ ಬಾರಿಯ ಚುನಾವಣಾ ಪ್ರಚಾರದಲ್ಲಿ ಪ್ರಮುಖವಾಗಿ ಚರ್ಚೆಯಾದ ವಿಷಯಗಳಾಗಿವೆ. ಮತದಾನ ಪೂರ್ಣಗೊಂಡ ಬಳಿಕ ಸೆಪ್ಟೆಂಬರ್ 19ರಂದು ಮತ ಎಣಿಕೆ ನಡೆಯಲಿದ್ದು, ಹೈಕೋರ್ಟ್ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಫಲಿತಾಂಶದ ನಂತರದ ಬೆಳವಣಿಗೆಗಳ ಮೇಲೆಯೂ ವಿಶೇಷ ನಿಗಾ ವಹಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...