Homeಸಿನಿಮಾಸಿನಿ ಸುದ್ದಿ'ವೆಟ್ಟುವಂ' ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

- Advertisement -
- Advertisement -

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವೆಟ್ಟುವಂ’ ಚಿತ್ರವನ್ನು ‘ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್’ ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ ‘ನೀಲಂ ಪ್ರೊಡಕ್ಷನ್ಸ್’ ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ ‘ವರ್ಲ್ಡ್ ಆಫ್ ವೆಟ್ಟುವಂ’ ವೀಡಿಯೊ ಈಗಾಗಲೇ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ಇಂದು ಸಂಜೆ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಲಿದೆ.

‘ವರ್ಲ್ಡ್ ಆಫ್ ವೆಟ್ಟುವಂ’ ವೀಡಿಯೊ ತಮಿಳು ಮಾತ್ರವಲ್ಲದೆ ಕನ್ನಡ, ಹಿಂದಿ, ತೆಲುಗು ಮತ್ತು ಮಲಯಾಳಂ  ಭಾಷೆಗಳಲ್ಲೂ ಬಿಡುಗಡೆಯಾಗಿದೆ. ಈ ಚಿತ್ರದ ಪ್ಯಾನ್ ಇಂಡಿಯಾ ಬಿಡುಗಡೆಯನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ, ಕನ್ನಡ ಆವೃತ್ತಿಗೆ ನಟ ಕಿಚ್ಚ ಸುದೀಪ್, ಹಿಂದಿ ಆವೃತ್ತಿಗೆ ನಟ ಪಂಕಜ್ ತ್ರಿಪಾಠಿ, ತೆಲುಗು ಆವೃತ್ತಿಗೆ ನಟ ರಾಣಾ ದಗ್ಗುಬಾಟಿ ಮತ್ತು ಮಲಯಾಳಂ ಆವೃತ್ತಿಗೆ ನಟ ಸೌಬಿನ್ ಸಾಹಿರ್ ಧ್ವನಿ ನೀಡಿದ್ದಾರೆ. ನಿರ್ದೇಶಕ ಪಾ.ರಂಜಿತ್ ತಮಿಳು ಅವತರಣಿಕೆಗೆ ಧ್ವನಿ ನೀಡಿದ್ದಾರೆ.

ಅಪೋಕಲಿಪ್ಸ್ ಹಿನ್ನೆಲೆಯಲ್ಲಿ, ಭವ್ಯವಾದ ಆಕ್ಷನ್ ದೃಶ್ಯಗಳೊಂದಿಗೆ ತಯಾರಾಗಿರುವ ‘ವೆಟ್ಟುವಂ’, ವಿವಿಧ ಗುಂಪುಗಳ ನಡುವಿನ ಪೈಪೋಟಿ, ಘರ್ಷಣೆಗಳು ಮತ್ತು ಅವುಗಳಿಂದ ಉಂಟಾಗುವ ಅನಿರೀಕ್ಷಿತ ಘಟನೆಗಳನ್ನು ಕಥೆಯ ವಸ್ತುವಾಗಿ ಹೊಂದಿದೆ. ವಿಶಿಷ್ಟವಾದ ಜಾಗತಿಕ ಪರಿಸರದಲ್ಲಿ ರೂಪುಗೊಂಡಿರುವ ಈ ಚಿತ್ರವು ಭವ್ಯವಾದ ದೃಶ್ಯಾವಳಿಗಳನ್ನು ಮತ್ತು ಬಲವಾದ ಆಕ್ಷನ್ ಕಥಾಹಂದರವನ್ನು ಹೊಂದಿದೆ.

ಚಿತ್ರದಲ್ಲಿರುವ ಆಕ್ಷನ್ ದೃಶ್ಯಗಳನ್ನು ‘ಅಡಿಮುರೈ’ ಮತ್ತು ‘ಮಲ್ಲಕಂಬ’ ಸೇರಿದಂತೆ ಸಾಂಪ್ರದಾಯಿಕ ಆತ್ಮರಕ್ಷಣೆ ಮತ್ತು ಸಮರ ಕಲೆಗಳ ಆಧಾರದ ಮೇಲೆ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ಚಿತ್ರದಲ್ಲಿ ನಟಿಸಿರುವ ಎಲ್ಲಾ ನಟರು ವ್ಯವಸ್ಥಿತವಾಗಿ ಈ ಕಲೆಗಳ ತರಬೇತಿಯನ್ನು ಪಡೆದಿದ್ದಾರೆ. ಇದರಿಂದಾಗಿ ಆಕ್ಷನ್ ದೃಶ್ಯಗಳಿಗೆ ನೈಸರ್ಗಿಕ ಸ್ಪರ್ಶ ಸಿಕ್ಕಿದ್ದು, ವಿಭಿನ್ನವಾದ ದೃಶ್ಯ ಅನುಭವವನ್ನು ತೆರೆಯ ಮೇಲೆ ಸೃಷ್ಟಿಸಲಾಗಿದೆ.

ಆರ್ಯ, ದಿನೇಶ್, ಶಬೀರ್, ಶೋಭಿತಾ ಧುಲಿಪಾಲ, ಕಲೈಯರಸನ್ ಸೇರಿದಂತೆ ಪ್ರಮುಖ ನಟರು ನಟಿಸಿರುವ ಈ ಚಿತ್ರವು ಭವ್ಯವಾದ ಪ್ರಪಂಚ, ಅದ್ಭುತ ಆಕ್ಷನ್ ಮತ್ತು ಕಮರ್ಷಿಯಲ್ ಅಂಶಗಳೊಂದಿಗೆ ಮೂಡಿಬಂದಿದೆ.

‘ವೆಟ್ಟುವಂ’ ಸಿನಿಮಾ ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಹೀಗೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುವ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು , ಸಿನಿಮಾ ಘೋಷಣೆಯಾದ ದಿನದಿಂದಲೇ, ಇದರ ಭವ್ಯವಾದ ಪ್ರಪಂಚ ಮತ್ತು ಪಾ.ರಂಜಿತ್ ಅವರ ನಿರ್ದೇಶನದ ಮೇಲಿನ ನಿರೀಕ್ಷೆಯು ಭಾರತೀಯ ಚಿತ್ರರಂಗದ ಗಮನ ಸೆಳೆದಿದೆ. 

ಪಾ. ರಂಜಿತ್ ಭಾರತದಲ್ಲಿ ಗಮನ ಸೆಳೆಯುತ್ತಿರುವ ನಿರ್ದೇಶಕರಾಗಿರುವುದರಿಂದ, ‘ವೆಟ್ಟುವಂ’ ಚಿತ್ರದ ಘೋಷಣೆಯು ವಿವಿಧ ಚಲನಚಿತ್ರ ವಲಯಗಳಲ್ಲಿ ಗಮನಾರ್ಹ ನಿರೀಕ್ಷೆಯನ್ನು ಸೃಷ್ಟಿಸಿದೆ.

ಚಿತ್ರದ ತಾಂತ್ರಿಕ ತಂಡದಲ್ಲಿ ಕಲಾ ನಿರ್ದೇಶಕರಾಗಿ ಎಸ್.ಎಸ್. ಮೂರ್ತಿ, ಛಾಯಾಗ್ರಾಹಕರಾಗಿ ರೂಪೇಶ್ ಶಾಜಿ, ಸಂಕಲನಕಾರರಾಗಿ ಸೆಲ್ವಾ ಆರ್.ಕೆ., ಸಂಗೀತ ನಿರ್ದೇಶಕರಾಗಿ ಜಿ.ವಿ. ಪ್ರಕಾಶ್ ಕುಮಾರ್ ಮತ್ತು ಸಾಹಸ ನಿರ್ದೇಶಕರಾಗಿ ದಿಲೀಪ್ ಸುಬ್ಬರಾಯನ್ ಕಾರ್ಯನಿರ್ವಹಿಸಿದ್ದಾರೆ.

‘ವರ್ಲ್ಡ್ ಆಫ್ ವೆಟ್ಟುವಂ’ ವೀಡಿಯೊ ಮೂಲಕ ಈ ಚಿತ್ರದ ವಿಶಿಷ್ಟ ಪ್ರಪಂಚವು ಪ್ರೇಕ್ಷಕರಿಗೆ ಪರಿಚಯವಾಗಿದ್ದು, ಇಂದು ಸಂಜೆ ಬಿಡುಗಡೆಯಾಗಲಿರುವ ಫಸ್ಟ್ ಲುಕ್, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವಂತಿದೆ.

‘ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್’ ಮತ್ತು ‘ನೀಲಂ ಪ್ರೊಡಕ್ಷನ್ಸ್’ ಜಂಟಿಯಾಗಿ ನಿರ್ಮಿಸುತ್ತಿರುವ ‘ವೆಟ್ಟುವಂ’, ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಭವ್ಯವಾದ ಪ್ಯಾನ್ ಇಂಡಿಯಾ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾವಾಗಿ ಹೊರಹೊಮ್ಮುತ್ತಿದೆ.

ರಂಗನಾಥ್ ಆರ್. ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...