Homeಮುಖಪುಟರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

- Advertisement -
- Advertisement -

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ.

ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರಜತ್ ವರ್ಮಾ ಅವರು ಈ ಆದೇಶವನ್ನು ಹೊರಡಿಸಿದ್ದು, ಸೆಪ್ಟೆಂಬರ್ 21 ರಂದು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ ಎಂದು ಆರೋಪಿಗಳ ಪರ ವಕೀಲರಾದ ಕುಲ್ ಶೇಖರ್ ಸಿಂಗ್ ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಅಲ್ಲದೆ, ಮುಂದಿನ ವಿಚಾರಣೆಯಂದು ಪ್ರಕರಣದ ಡೈರಿ ಹಾಗೂ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಸಿಂಗ್ ತಿಳಿಸಿದ್ದಾರೆ.

ದೇಣಿಗೆ ಎಣಿಕೆ ಪ್ರಕ್ರಿಯೆಯೊಂದಿಗೆ ಗುರುತಿಸಿಕೊಂಡಿದ್ದ ಎಂಟು ಆರೋಪಿಗಳನ್ನು, ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪ್ರಾಥಮಿಕ ವರದಿಯ ಆಧಾರದ ಮೇಲೆ ಜೂನ್ 25 ರಂದು ಎಫ್‌ಐಆರ್ ದಾಖಲಿಸಿದ ನಂತರ ಬಂಧಿಸಲಾಗಿತ್ತು.

ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವ್ ಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮ್ ಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಅಲಿಯಾಸ್ ಟಿನ್ನು ಯಾದವ್ ಬಂಧಿತ ಆರೋಪಿಗಳಾಗಿದ್ದಾರೆ.

ಅಧಿಕಾರಿಗಳು ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ವಿಫಲರಾದ ಕಾರಣ, ಆರೋಪಿಗಳ ಜಾಮೀನು ಅರ್ಜಿಗಳ ವಿಚಾರಣೆಯನ್ನು ಪದೇ ಪದೇ ಮುಂದೂಡಲಾಗಿದೆ ಎಂದು ಸಿಂಗ್ ತಿಳಿಸಿದರು. ಈಗ ತನಿಖಾಧಿಕಾರಿಗಳು ಪ್ರಕರಣದ ಡೈರಿಯೊಂದಿಗೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಮುಂದಿನ ವಿಚಾರಣೆಯಂದು ಪೊಲೀಸರು ಕೇಸ್ ಡೈರಿ ಹಾಜರುಪಡಿಸಲು ವಿಫಲವಾದರೆ, ಆರೋಪಿಗಳಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವುದಾಗಿ ಸಿಂಗ್ ಹೇಳಿದರು.

ರಾಮಮಂದಿರದಲ್ಲಿ ಭಕ್ತರು ಅರ್ಪಿಸಿದ ನಗದು ಮತ್ತು ಬೆಲೆಬಾಳುವ ವಸ್ತುಗಳ ದುರುಪಯೋಗಕ್ಕೆ ಸಂಬಂಧಿಸಿದ್ದಾಗಿದೆ ಈ ಪ್ರಕರಣ. ತನಿಖಾಧಿಕಾರಿಗಳು ಇದುವರೆಗೆ 79.85 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಆರೋಪಿಗಳಲ್ಲಿ ಹೆಚ್ಚಿನವರು ದೇವಸ್ಥಾನದಲ್ಲಿ ನಗದು ದೇಣಿಗೆ ಎಣಿಕೆಗಾಗಿ ನಿಯೋಜಿಸಲ್ಪಟ್ಟ ಬ್ಯಾಂಕ್ ಉದ್ಯೋಗಿಗಳಾಗಿದ್ದರೆ, ಶ್ರೀವಾಸ್ತವ ಅವರು ದೇಣಿಗೆ ಎಣಿಕೆ ಪ್ರಕ್ರಿಯೆಯ ಉಸ್ತುವಾರಿಯಾಗಿದ್ದರು. ಟಿನ್ನು ಯಾದವ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ತಮ್ಮ ಜಾಮೀನು ಅರ್ಜಿಯಲ್ಲಿ, ತಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಶ್ರೀವಾಸ್ತವ ತಿಳಿಸಿದ್ದು, ದೇಣಿಗೆ ಎಣಿಕೆ ಪ್ರಕ್ರಿಯೆಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಬಂಧಿತ ಎಂಟು ಆರೋಪಿಗಳಲ್ಲದೆ, ಎಣಿಕೆ ಪ್ರಕ್ರಿಯೆಯಲ್ಲಿ ಇತರ ಹಲವರು ಭಾಗಿಯಾಗಿದ್ದಾರೆ ಎಂದು ಅವರು ವಾದಿಸಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...