Homeಮುಖಪುಟನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ ಎಂದು ವರದಿಯಾಗಿದೆ.

“ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಣದ ರೆಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾದ ರಬಿಯುಲ್ ಆಲಂ ಚೌಧರಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.”

“ಪಕ್ಷದ ಸಾಂಪ್ರದಾಯಿಕ ಮತ್ತು ಅಧಿಕೃತ ಚುನಾವಣಾ ಚಿಹ್ನೆಯಾದ ‘ಜೋಡಾ ಘಾಸ್ ಫುಲ್’ (ಹುಲ್ಲಿನ ಮೇಲಿನ ಜೋಡಿ ಹೂವುಗಳು) ಅನ್ನು ಪಡೆಯಲು ಸಾಧ್ಯವಾಗದಿರುವುದೇ ತಾವು ಹಿಂದೆ ಸರಿಯಲು ಮುಖ್ಯ ಕಾರಣ ಎಂದು ಅವರು ಉಲ್ಲೇಖಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕಾರ್ಯಕರ್ತರಿಗೆ ಮುಕ್ತವಾಗಿ ಮನೆಮನೆ ಪ್ರಚಾರ ಮಾಡಲು ಬಿಡುತ್ತಿಲ್ಲ ಮತ್ತು ಅವರ ಮೇಲೆ ತೀವ್ರ ಒತ್ತಡ ಹೇರಲಾಗುತ್ತಿದೆ, ಅಷ್ಟೇ ಅಲ್ಲದೆ ಈಗಾಗಲೇ ಹಲವು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ರಬಿಯುಲ್ ಆಲಂ ಚೌಧರಿ ಅವರು ಆರೋಪಿಸಿದ್ದಾರೆ ಎಂದು newindianexpress.com ವರದಿ ಉಲ್ಲೇಖಿಸಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಣದ ನಂದಿಗ್ರಾಮ ಉಪಚುನಾವಣೆಯ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ಅವರು ಶುಕ್ರವಾರ (ಸೆ.18) ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದರು. ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಕೈಗೊಂಡಿದ್ದರು. ಈ ಘಟನೆ ನಡೆದ ಮರುದಿನವೇ ಚೌಧರಿ ಅವರು ಕೂಡ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಶಿಕ್ಷಕಿಯಾಗಿರುವ ಸಂಚಿತಾ ಪ್ರಧಾನ್ ಡೇ ಅವರು ತಮ್ಮ ಪತಿ ಸತ್ಯಜಿತ್ ಅವರೊಂದಿಗೆ ಶುಕ್ರವಾರ ಮಧ್ಯಾಹ್ನ ರಾಜ್ಯ ಸಚಿವಾಲಯವಾದ ನಬನ್ನಾದಲ್ಲಿ ಮುಖ್ಯಮಂತ್ರಿ ಅಧಿಕಾರಿ ಅವರನ್ನು ಭೇಟಿ ಮಾಡಿದ್ದರು ವರದಿಯಾಗಿದೆ. ಈ ಭೇಟಿಯ ಬೆನ್ನಲ್ಲೇ ಅವರು ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದು, ಇದರಿಂದಾಗಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ಗೆ ಯಾವುದೇ ಅಭ್ಯರ್ಥಿಯಿ ಇಲ್ಲದಂತಾಗಿದೆ.

ತನ್ನ ಪಕ್ಷದ ಅಭ್ಯರ್ಥಿ ಇಲ್ಲದ ಹಿನ್ನೆಲೆ, ಮಮತಾ ಬ್ಯಾನರ್ಜಿ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಬೆಂಬಲ ಘೋಷಿಸಿತ್ತು. ಈ ಬೆನ್ನಲ್ಲೇ, ಹಳೆಯ ಕೊಲೆ ಪ್ರಕರಣವೊಂದರಲ್ಲಿ ಮಿಲನ್ ಪ್ರಧಾನ್ ಅವರನ್ನು ಬಂಧಿಸಲಾಗಿದ ಎಂದು ವರದಿಯಾಗಿದೆ.

ಚುನಾವಣಾ ಆಯೋಗವು ತೃಣಮೂಲ ಕಾಂಗ್ರೆಸ್‌ನ ಎರಡೂ ಪ್ರತಿಸ್ಪರ್ಧಿ ಬಣಗಳು ‘ಅಖಿಲ ಭಾರತ ತೃಣಮೂಲ ಕಾಂಗ್ರೆಸ್’ ಎಂಬ ಹೆಸರನ್ನು ಹಾಗೂ ಪಕ್ಷದ ಸಾಂಪ್ರದಾಯಿಕ ‘ಹುಲ್ಲಿನ ಮೇಲಿನ ಜೋಡಿ ಹೂವು’ (ಜೋಡಾ ಘಾಸ್ ಫುಲ್) ಚಿಹ್ನೆಯನ್ನು ಬಳಸದಂತೆ ನಿಷೇಧಿಸಿದ ನಂತರ, ನಂದಿಗ್ರಾಮ ಚುನಾವಣಾ ಕಣವು ನಾಟಕೀಯವಾಗಿ ಬದಲಾಗುತ್ತಿರುವ ನಡುವೆಯೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಬಣಕ್ಕೆ ಚುನಾವಣಾ ಆಯೋಗವು ಶುಕ್ರವಾರ “ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್” ಎಂಬ ಹೆಸರು ಹಾಗೂ ‘ಫುಟ್‌ಬಾಲ್ ಆಟಗಾರ’ನ ಹೊಸ ಚಿಹ್ನೆಯನ್ನು ಮಂಜೂರು ಮಾಡಿದೆ. ಇದೇ ವೇಳೆ, ಪ್ರತಿಸ್ಪರ್ಧಿ ಬಣಕ್ಕೆ “ಡೆಮಾಕ್ರಟಿಕ್ ತೃಣಮೂಲ ಕಾಂಗ್ರೆಸ್” ಎಂಬ ಹೆಸರು ಮತ್ತು ‘ಲಕೋಟೆ’ ಚಿಹ್ನೆಯನ್ನು ಹಂಚಿಕೆ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...