Homeಕರ್ನಾಟಕಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮಂಗಳೂರು ವಿಡಿಯೋ ಬಿಡುಗಡೆ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ - ಎಚ್‌.ಡಿ.ಕೆ

- Advertisement -
- Advertisement -

ಕಳೆದ ಡಿಸೆಂಬರ್‌ 19ರಂದು ನಡೆದ ಮಂಗಳೂರು ಗಲಭೆ ಪ್ರಕರಣಕ್ಕೆ ಸಂಭಂದಿಸಿದಂತೆ, ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸುದ್ದಿಗೋಷ್ಠಿ ಕರೆದು ಸುಮಾರು 35 ದೃಶ್ಯಗಳ ವಿಡಿಯೋ ಸಿಡಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾಜ್ಯಸರ್ಕಾರ ಮತ್ತು ಮಂಗಳೂರು ಪೊಲೀಸರ ವಿರುದ್ಧ ಹರಿಹಾಯ್ದ ಅವರು ಮಂಗಳೂರು ಕಮಿಷನರ್ ಪಿ.ಎಸ್ ಹರ್ಷರವರ ನಡೆ ಅನುಮಾನಾಸ್ಪದವಾಗಿದೆ, ಪೋಲಿಸರಿಗೆ ಈ ಅಧಿಕಾರ ನೀಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪೊಲೀಸರಿಂದಲೇ ಈ ಘಟನೆ ಹಿಂಸೆರೂಪಕ್ಕೆ ತಿರುಗಿದ್ದು, ಕಾರಣರಾದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷರವರ ಅಮಾನತ್ತಿಗೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ

ಮಂಗಳೂರು ಹಿಂಸಾಚಾರ

ಮಂಗಳೂರು ಹಿಂಸಾಚಾರಕ್ಕೆ ಪೊಲೀಸರೇ ಕಾರಣವೇ? ಎಚ್‌.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ ವಿಡಿಯೋದಲ್ಲೇನಿದೆ? ನೋಡಿಬಿಡಿ

Posted by Naanu Gauri on Friday, January 10, 2020

ಜನಸಾಮಾನ್ಯರು, ಬಿದಿವ್ಯಾಪಾರಿಗಳ ಮೇಲೆನಡೆದ ದಾಳಿ ಅಮಾನವೀಯ ಎಂದ ಅವರು, ಈ ಹಿಂದೆ ಪೊಲೀಸ್ ಠಾಣೆಯ ಮೇಲೆ ಗಲಭೆಕೋರರ ದಾಳಿ ನಡೆಸಿ, ಶತ್ರಾಸ್ತ್ರಗಳನ್ನು ಕದ್ದೊಯ್ಯಲು ಯತ್ನಿಸಿದ್ದರಿಂದ ಪೊಲೀಸರಿಂದ ಗುಂಡು ಹಾರಿಸಬೇಕಾಯಿತು ಎಂಬ ಕಾರಣ ನೀಡಿದ್ದಾರೆ. ಸರ್ಕಾರ ಅಂಗಡಿಗೆ ದಾಳಿ ಮಾಡಿದರು ಅದಕ್ಕೆ ಗುಂಡು ಹಾರಿಸಬೇಕಾಯಿತು ಅನ್ನುತ್ತಿದೆ? ಯಾರನ್ನು ನಂಬುವುದು?

ಪೊಲೀಸರ್‌ ಠಾಣೆಯ ಹೊರಗೆ 360ಡಿಗ್ರಿ ಕವರ್‌ ಮಾಡುವ ಸಿಸಿ ಕ್ಯಾಮರ ಇದೆ. ಅದರ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದರೆ ಪ್ರಕರಣದ ನೈಜತೆ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗಲಭೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಲ್ಲಿಯವರೆಗೆ ಒಬ್ಬ ಅಧಿಕಾರಿಯನ್ನು ಸಹ ನಾನು ಆಸ್ಪತ್ರೆಯಲ್ಲಿ ನೋಡಿಲ್ಲ.

ಮ್ಯಾಜಿಸ್ಟ್ರೇಟ್‌ ತನಿಖೆ ಅಗತ್ಯವಿಲ್ಲ. ಈ ಬಗ್ಗೆ ಎಲ್ಲಾ ಪಕ್ಷದವರೂ ಸೇರಿದ ಸದನ ಸಮಿತಿ ರಚನೆಯಾಗಬೇಕು. ಈ ಕುರಿತು ಅಸೆಂಬ್ಲಿಯೊಳಗೆ ಒತ್ತಾಯಿಸುತ್ತೇನೆ ಎಂದರು.

ಈ ಎಲ್ಲಾ ದೃಶ್ಯಗಳನ್ನು ನಾನು ಸದನದಲ್ಲಿ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ ಮಂಗಳೂರಿನಲ್ಲಿ ನಿವೃತ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾದ ಗೋಪಾಲಗೌಡರ ನತೃತ್ವದಲ್ಲಿ ನಡೆಯಬೆಕ್ಕಿದ್ದ “ಪೀಪಲ್ಸ್ ಕೋರ್ಟ್” ಎಂಬ ಚರ್ಚಾ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಹಿನ್ನಲ್ಲೆಯಲ್ಲಿ, ಆ ಕ್ರಮವನ್ನು ಪ್ರಬಲವಾಗಿ ಖಂಡಿಸಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟು ಸಮಸ್ಯೆ ಉಂಟು ಮಾಡುತ್ತಿದ್ದೀರಿ, ಬಿಜೆಪಿಯವರು ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲು ಹೊರಟಿದ್ದೀರಿ. ಜನತೆಯಲ್ಲಿ ವಿಶ್ವಾಸ ಮೂಡಿಸದ್ದೇ ಇದ್ದರೆ ಎಷ್ಟು ದಿನ ಸರ್ಕಾರ ನಡೆಸುತ್ತೀರಿ? ಒಂದು ದಿನ ಜನರ ಆಕ್ರೋಶ ಚಿಮ್ಮುವುದಿಲ್ಲವೇ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರದಿಂದ ಕೂಲಿಕೆಲಸ ಮಾಡಲು ಬಂದಿದ್ದ ಕಾರ್ಮಿಕನಿಗೆ ಗುಂಡು ಹಾರಿಸಿದ್ದಾರೆ. ಇನ್ನೊಬ್ಬ ಪಿ.ಎಚ್‌.ಡಿ ಓದುತ್ತಿರುವ ಹುಡುಗನಿಗೂ ಗುಂಡು ಬಿದ್ದಿದೆ. ಅವರ ಆಸ್ಪತ್ರೆ ಖರ್ಚು 26 ಲಕ್ಷ ಬಿಲ್‌ ಆಗಿದೆ. ಯಾರು ಕಟ್ಟುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ನಂತರ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ.. ಸಿಎಎ, ಎನ್‌ಆರ್‌ಸಿ ವಿಷಯದಲ್ಲಿ ಜನರಿಗೆ ಸತ್ಯ ತಿಳಿಸಲು ಮುಂದಾಗಿ. ನನ್ನ ಮೇಲೆ ಲಘುವಾಗಿ ಮಾತಾಡುವುದುನ್ನು ಬಿಡಿ. ನಾನು ಬಿಡುವ ದಾಖಲೆಗಳಿಗೆ ಇತಿಹಾಸವಿದೆ. ಮಾಹಿತಿ ಸಂಗ್ರಹವಿಲ್ಲದೇ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದರು.

ಸರ್ಕಾರ ಸಿಎಎ ಬದಿಗಿರಿಸಿ, ನಿರುದ್ಯೋಗದ ಬಗ್ಗೆ ಗಮನಕೊಡಬೇಕು. ಇಂದು ಮೋದಿಯವರು ಆರ್ಥಿಕ ಸಚಿವರನ್ನು ಬಿಟ್ಟು ಸಭೆ ನಡೆಸಿದ್ದಾರೆ ಅಂದರೆ ಏನು ಅರ್ಥ? ಇದು ಈ ದೇಶದ ಪರಿಸ್ಥಿತಿ. ಎಲ್ಲಾ ಮಾಧ್ಯಮಗಳಲ್ಲಿ ಆರ್ಥಿಕತೆ ಹಳ್ಳ ಹಿಡಿಯುತ್ತಿರುವುದು ವರದಿಯಾಗುತ್ತಿದೆ ಎಂದರು.

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಬಿಜೆಪಿ ಸ್ನೇಹಿತರು ಬೆಂಕಿಯಿಡಲು ಹೊರಟಿದ್ದಾರೆ. ಇದು ನಾಗರಿಕ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...