Homeಮುಖಪುಟ'ರೋಹಿತ್ ವೇಮುಲ ಇಂದು ಬದುಕಿದ್ದರೆ…...' : ಅಗಲಿದ ಯುವಚೈತನ್ಯದ ಸ್ಮರಣೆ

‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ಕ್ಯಾಂಪಸ್ ಪ್ರಜಾತಂತ್ರ ಮತ್ತು ದೇಶದ ಪ್ರಜಾತಂತ್ರಗಳೆರಡೂ ತೀವ್ರ ಅಪಾಯದಲ್ಲಿರುವಾಗ, ಇವೆರಡಕ್ಕಾಗಿ ದನಿಯೆತ್ತಿ ಬಲಿಯಾದ ಹೋರಾಟನಿರತ ವಿದ್ಯಾರ್ಥಿಗಳ ಆತ್ಮಸಾಕ್ಷಿ ರೋಹಿತ್ ವೇಮುಲನ ಕುರಿತ ನೆನಪು!!

- Advertisement -
- Advertisement -
  • “ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು” ಎಂದು ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಆತನದು ಆತ್ಮಹತ್ಯೆಯಲ್ಲ ಬದಲಿಗೆ ಪ್ರಭುತ್ವ ಮುಂದೆ ನಿಂತು ಮಾಡಿದ ಕೊಲೆ. ಅಂದು ರೋಹಿತ್ ವೇಮುಲನೆಂಬ ಭಾರತದ ಪ್ರತಿಭಾನ್ವಿತ ಭವಿಷ್ಯವನ್ನು ಬಲಿತೆಗೆದುಕೊಂಡ ಪ್ರಭುತ್ವದ ದಾಹ ಇನ್ನು ತೀರಿಲ್ಲ. ಅದಕ್ಕಾಗಿ ಸಿಎಎ, ಎನ್ಆರ್ಸಿ, ಎನ್ಪಿಆರ್ ಎಂಬ ಕರಾಳ ನೀತಿಗಳ ಮೂಲಕ, ಶುಲ್ಕ ಹೆಚ್ಚಿಸಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿಸಿ ಕೇಸು ಹಾಕುವ ಮೂಲಕ, ಪ್ರಜಾಪ್ರಭುತ್ವದ ಪರ ದನಿ ಎತ್ತುತ್ತಿರುವವ ಮೇಲೆ ಸುಳ್ಳು ಕೇಸು ದಾಖಲಿಸಿ ಜೈಲಿಗೆ ತಳ್ಳುವ ಮೂಲಕ ತಳಸಮುದಾಯಗಳನ್ನು ದಿಕ್ಕುತಪ್ಪಿಸುವ ಹುನ್ನಾರ ನಡೆಸುತ್ತಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

“ವಿಜ್ಞಾನ, ನಕ್ಷತ್ರ, ಪ್ರಕೃತಿಯಿಂದ ಮನುಷ್ಯರು ವಿಚ್ಚೇದನ ಪಡೆದು ಬಹಳ ದಿನಗಳಾಯಿತು ಎಂಬುದನ್ನು ಅರಿಯದೆ ಮನುಷ್ಯರನ್ನು ಪ್ರೀತಿಸಿದೆ” ಎಂದು ರೋಹಿತ್ ವೇಮುಲ ಬರೆದಿದ್ದ. ಇಂದು ಇಡೀ ಭೂಮಂಡಲವನ್ನು ಕಬಳಿಸಲು ಕ್ರೋನಿ ಬಂಡವಾಳಶಾಹಿಗಳು ಬಾಯಿತೆರೆದಿದ್ದಾರೆ. ಆಳುವ ಸರ್ಕಾರಗಳು ಅವರ ಬೂಟು ನೆಕ್ಕುತ್ತಿವೆ. ರೈತರು ಕಾರ್ಮಿಕರು ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ದಲಿತ, ಮಹಿಳೆಯರ ಮೇಲೆ ದಿನನಿತ್ಯ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸಿದೆ. ರೋಹಿತ್ ವೇಮುಲಾ ಇಂದು ಬದುಕಿದ್ದರೆ ಹೇಗಿರುತ್ತಿದ್ದ? ಏನು ಮಾಡುತ್ತಿದ್ದ?

ಅಂದು ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಸೃಷ್ಟಿಸಿದ್ದ ಕೋಮು ದಳ್ಳುರಿಯಲ್ಲಿ ಬೆಂದು ಹೋದ ಮುಸ್ಲಿಮರ ಕುರಿತು ಆತನಿಗೆ ನೋವಿತ್ತು. ಆ ಸತ್ಯವನ್ನು ತಿಳಿಸಲೆಂದೇ ಹೈದರಾಬಾದಿನ ಕೇಂದ್ರೀಯ ವಿ.ವಿಯಲ್ಲಿ ‘ಮುಝಾಫರ್ ನಗರ್ ಅಭೀ ಬಾಕಿ ಹೈ’ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿ ಸಂವಾದ ನಡೆಸಿದ್ದ. ಆಗ ಅದಕ್ಕೆ ಅಲ್ಲಿನ ABVP ತಕರಾರು ತೆಗೆದಿತ್ತು ಮಾತ್ರವಲ್ಲ ರೋಹಿತ್ ಜೊತೆ ವಾಗ್ವಾದ ಮಾಡಿತ್ತು.

“ಒಬ್ಬ ಅಂಬೇಡ್ಕರ್‌ವಾದಿಯಾಗಿ, ಪಂಜಾಬ್ ನಲ್ಲಿ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 7 ಭಾರತೀಯ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಮತ್ತು ಮಣಿಪುರ ಭೂಕಂಪದಲ್ಲಿ ಮೃತಪಟ್ಟ 6 ಜನರಿಗೆ ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ತನ್ನ ಫೇಸ್ ಬುಕ್ ನಲ್ಲಿ ಜನವರಿ 06, 2016ರಂದು ಅಂದು ರೋಹಿತ್ ಬರೆದುಕೊಂಡಿದ್ದ. ಇಂತಹ ಅಪ್ಪಟ ದೇಶಪ್ರೇಮಿ ಅಂದರೆ ದೇಶದ ಜನರನ್ನು ಪ್ರೀತಿಸುವ ರೋಹಿತ್ ಮೇಲೆ ಹಗೆ ಸಾಧಿಸಿದರು ನಕಲಿ ದೇಶಪ್ರೇಮಿಗಳಾದ abvp ಗೂಂಡಾಗಳು..

ಕಂದಮಾಲ್ ನಲ್ಲಿ ಕ್ರಿಶ್ಚಿಯನ್ನರ ಮೇಲಿನ ದಾಳಿಯನ್ನು ಕಟುವಾಗಿ ವಿರೋಧಿಸಿದ್ದ ರೋಹಿತ್, ಅಚ್ಚೆ ದಿನದ ಹೆಸರಿನಲ್ಲಿ ಜನರ ಶೋಷಣೆಯನ್ನು ಬಯಲುಗೊಳಿಸಿದ್ದರು.
ಅಂದರೆ ತನ್ನ ಕ್ಯಾಂಪಸ್ನಲ್ಲಿ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ ಈ ಗ್ರಹದ ಮೇಲೆ ವಾಸಿಸಲು ನಾನು ನೀಡುವ ಬಾಡಿಗೆ” ಎಂಬ ಆಲಿಸ್ ವಾಕರ್ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಇಂದಿನ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆಗಳಿಗೆ ಹೇಗೆ ಪ್ರತಿಕ್ರಿಯಿಸುತ್ತಿದ್ದ?

ನಾನು ಖಂಡಿತವಾಗಿ ಹೇಳಬಲ್ಲೆ, ರೋಹಿತ್ ಇಂದು ಬದುಕಿದ್ದರೆ ನಮಗೆಲ್ಲಾ ನಾಯಕನಾಗಿರುತ್ತಿದ್ದ. ಧರ್ಮದ ಆಧಾರದಲ್ಲಿ ದೇಶ ಒಡೆಯುವವರ ವಿರುದ್ಧ ಪ್ರೀತಿಯಿಂದ ಲಕ್ಷಾಂತರ ಜನರನ್ನು ಒಟ್ಟುಗೂಡಿಸಿ ಹೋರಾಟ ಮುಂದುವರೆಸುತ್ತಿದ್ದ. ಜಾತೀಯತೆಯನ್ನು ಕಿತ್ತೊಗೆಯುವ ಕರೆ ನೀಡುತ್ತಿದ್ದ. ಭಾರತದ ಜಾತ್ಯತೀತ ಪರಿಕಲ್ಪನೆಯನ್ನು ಎತ್ತಿಹಿಡಿಯುತ್ತಿದ್ದ. ಧರ್ಮದ ಮೌಢ್ಯಗಳನ್ನು ಕಿತ್ತೆಸೆದು ಕಾರ್ಲ್ ಸಗಾನ್ ರೀತಿ ವಿಜ್ಞಾನವನ್ನು ಪ್ರಚಾರ ಮಾಡುತ್ತಿದ್ದ…..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ನಾವ್ಯಾರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಪ್ರಭುತ್ವ ಬಲಿ ತೆಗೆದುಕೊಂಡಿತು.

ಇಂದು ಹೀಗೆ ಒಂದು ಅಲ್ಪಸಂಖ್ಯಾತ ಸಮುದಾಯವನ್ನು ಒಂಟಿಯಾಗಿಸಿ ಬಲಿಯಾಗಿಸುವ ಹುನ್ನಾರ ನಮ್ಮ ಕಣ್ಣೆದುರು ನಡೆಯುತ್ತಿದೆ. ರೋಹಿತ್ ವೇಮುಲಾ‌ ಇಂದು ಬದುಕಿದ್ದಿದ್ದರೆ ಇದನ್ನು ನೋಡುತ್ತಾ ಸುಮ್ಮನಿರುತ್ತಿದ್ದನೆ?

ಸ್ನೇಹಿತರೆ, ನಾವೆಲ್ಲರೂ ರೋಹಿತ್ ವೇಮುಲಾನ ಸಾವಿಗೆ ನ್ಯಾಯ ದಕ್ಕಿಸಿಕೊಳ್ಳವುದೇ ಆಗಿದ್ದರೆ, ಅವನ ಸ್ಥಾನದಲ್ಲಿ ನಿಂತು ಹೋರಾಟ ಮುಂದುವರೆಸಬೇಕಿದೆ. ದೇಶದಲ್ಲಿ ಉದ್ಯೋಗಕ್ಕಾಗಿ, ರೈತರಿಗೆ ವೈಜ್ಞಾನಿಕ ಬೆಲೆಗಾಗಿ, ಗುತ್ತಿಗೆ ನೌಕರರಿಗೆ ನ್ಯಾಯಯುತ ಸಂಬಳಕ್ಕಾಗಿ, ಶೋಷಿತರ ಗೌರವಯುತ ಬದುಕಿಗಾಗಿ ಬೀದಿಯಲ್ಲಿ ಹೋರಾಟನಿರತರೊಂದಿಗೆ ನಾವು ಜೊತೆಗೂಡಬೇಕಿದೆ. ತುರ್ತು ಆದ್ಯತೆಯಲ್ಲಿ ಸಿಎಎ ಎನ್ಆರ್ಸಿ ವಿರುದ್ಧ ಹೋರಾಡುತ್ತಿರುವವರಿಗೆ ಬೆಂಬಲ ನೀಡಬೇಕಿದೆ. ಈ ಕಾಯ್ದೆಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲದೇ ದೇಶದ ಎಲ್ಲಾ ತಳಸಮುದಾಯಗಳನ್ನು ಅವರ ಪ್ರಜಾತಾಂತ್ರಿಕ ಹಕ್ಕುಗಳಿಂದ ವಂಚಿಸುವ ಕುತಂತ್ರವಾಗಿದೆ. ಇದರ ವಿರುದ್ಧ
ಪ್ರತಿಭಟನೆಗಳಲ್ಲಿ ಭಾಗವಹಿಸುವುದಲ್ಲದೇ ನೇರ ಹಳ್ಳಿಗಳಿಗೆ, ಬೀದಿಗಳಿಗೆ, ಸ್ಲಂಗಳಿಗೆ, ಆದಿವಾಸಿ ಪ್ರದೇಶಗಳಿಗೆ ನಾವೆಲ್ಲರೂ ತೆರಳಿ ಜನರೊಟ್ಟಿಗೆ ಮಾತನಾಡಬೇಕಿದೆ. ಇವುಗಳ ಅಪಾಯವನ್ನು ಚರ್ಚಿಸಬೇಕಾಗಿದೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ ಎಂಬುದನ್ನು ಮರೆಯಬಾರದು.
ಸಾವಿರಾರು ರೋಹಿತ್ ವೇಮಲಾಗಳು ಇಂದು ದನಿಯೆತ್ತಬೇಕಿದೆ. ಅಂಚಿಗೊತ್ತಲ್ಪಟ್ಟ ಎಲ್ಲರ ಪರವಾಗಿ ನಾವು ಹೋರಾಟಕ್ಕಿಳಿಯದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸುವುದೇ? ರೋಹಿತ್ ವೇಮುಲನ ವಾರಸುದಾರರು ನಾವಾಗಲು ಸಾಧ್ಯವೆ? ಬನ್ನಿ, ಇದೇ 17ರಂದು ರೋಹಿತ್ ವೇಮುಲನ ಬಲಿದಾನದ ದಿನದಂದು ಆತನ ನೆನಪಿನಲ್ಲಿ ವಿದ್ಯಾರ್ಥಿಗಳ ಐಕ್ಯತೆಯನ್ನು ಸಾರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...