Homeಮುಖಪುಟಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರನ್ನು ಶೂಟ್‌ ಮಾಡ್ಬೇಕು: ಬಿಜೆಪಿ ಮುಖಂಡನ ಬೇಜವಾಬ್ದಾರಿ ಹೇಳಿಕೆ

ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡುವವರನ್ನು ಶೂಟ್‌ ಮಾಡ್ಬೇಕು: ಬಿಜೆಪಿ ಮುಖಂಡನ ಬೇಜವಾಬ್ದಾರಿ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ “ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವವರನ್ನು ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಮಾಡುತ್ತಿರುವಂತೆ ಗುಂಡು ಹಾರಿಸಿ ಸಾಯಿಸಬೇಕು” ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ದಿಲೀಪ್ ಘೋಷ್, ರಾಜ್ಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ರೈಲ್ವೆ ಮತ್ತು ಸಾರ್ವಜನಿಕ ಸಾರಿಗೆಗೆ ಹಾನಿ ಮಾಡಿದವರ ಮೇಲೆ ಗುಂಡು ಹಾರಿಸದೆ, ಲಾಠಿ ಚಾರ್ಜ್‌ ಮಾಡಬೇಕು. ಆದರೆ ಅವರು ಕೈಕಟ್ಟಿ ಕುಳಿತಿದ್ದಾರೆ ಎಂದು ಟೀಕಿಸಿದ್ದಾರೆ.

“ಅವರು ನಾಶಪಡಿಸುತ್ತಿರುವ ಸಾರ್ವಜನಿಕ ಆಸ್ತಿ ಯಾರಿಗೆ ಸೇರಿದೆ ಎಂದು ಅವರು ಭಾವಿಸುತ್ತಾರೆ? ಅವರ ತಂದೆಯದ್ದೆ? ಸಾರ್ವಜನಿಕ ಆಸ್ತಿ ತೆರಿಗೆದಾರರಿಗೆ ಸೇರಿದೆ … ನೀವು ಇಲ್ಲಿಗೆ ಬರುತ್ತೀರಿ, ನಮ್ಮ ಆಹಾರವನ್ನು ತಿನ್ನುತ್ತೀರಿ, ಇಲ್ಲಿಯೇ ಇದ್ದು ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸುತ್ತೀರಿ. ಇದು ನಿಮ್ಮ ಪಾಳೆಗಾರಿಕೆಯೇ ನಿಮ್ಮನ್ನು ಲಾಠಿಗಳಿಂದ ಹೊಡೆದುರುಳಿಸಿ, ಗುಂಡು ಹಾರಿಸಿ ಜೈಲಿಗೆ ಹಾಕುತ್ತೇವೆ” ಎಂದು ಘೋಷ್ ಘೋಷಿಸಿದ್ದಾರೆ.

“ಮಮತಾ ಬ್ಯಾನರ್ಜಿಯ ಪೊಲೀಸರು ಸಾರ್ವಜನಿಕ ಆಸ್ತಿಗಳನ್ನು ನಾಶಪಡಿಸಿದ ಜನರ ವಿರುದ್ಧ ಕ್ರಮ ಕೈಗೊಂಡಿಲ್ಲ. ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕದ ನಮ್ಮ ಸರ್ಕಾರಗಳು ಈ ಜನರನ್ನು ನಾಯಿಗಳಂತೆ ಹೊಡೆದುರುಳಿಸಿವೆ” ಎಂದು ಬಿಜೆಪಿ ನಾಯಕ ಹೇಳುವ ಮೂಲಕ ನಾವು “ಸರಿಯಾದ ಕೆಲಸ” ಮಾಡಿದ್ದೆವೆ ಎಂದಿದ್ದಾರೆ.

ದೇಶದಲ್ಲಿ ಎರಡು ಕೋಟಿ “ಮುಸ್ಲಿಂ ಒಳನುಸುಳುಕೋರರು” ಇದ್ದಾರೆ ಎಂದು ಹೇಳಿದ ಅವರು ಅದರಲ್ಲಿ ಒಂದು ಕೋಟಿ ಪಶ್ಚಿಮ ಬಂಗಾಳದಲ್ಲಿಯೇ ನೆಲೆಸಿದ್ದಾರೆ. ಹಿಂದೂ ಬಂಗಾಳಿಗಳ “ಹಿತಾಸಕ್ತಿಗಳನ್ನು ಹಾಳುಮಾಡುವ ಇಂಥವರನ್ನು ಮಮತಾ ಬ್ಯಾನರ್ಜಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್‌ರವರು “ಹಾಗಿದ್ದಲ್ಲಿ ದೆಹಲಿ ಪೊಲೀಸರು JNU ಮೆಲೆ ದಾಳಿ ಮಾಡಿದ ಎಬಿವಿಪಿ / ಬಿಜೆಪಿ ಗೂಂಡಾಗಳನ್ನು ನಾಯಿಗಳಂತೆ ಏಕೆ ಶೂಟ್ ಮಾಡಲಿಲ್ಲ. ನೀವು ಬಳಸುವ ಭಾಷೆ ಪೀಡಕನ ಭಾಷೆಯಾಗಿದೆ, ಜನರನ್ನು ಅಧೀನಗೊಳಿಸಲು ಸರ್ಕಾರಿ ಯಂತ್ರೋಪಕರಣಗಳ ದುರ್ಬಳಕೆಯಿಂದ ಕೂಡಿದೆ”ಎಂದು ಅವರು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...