Homeಚಳವಳಿಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

ಶಬರಿಮಲೆಗೆ ಮಹಿಳೆಯರ ಪ್ರವೇಶ: ಅಯ್ಯಪ್ಪ ಅಯೋನಿಜ ಸರಿ? ಪೂಜಕರೆಲ್ಲ ಯೋನಿಜರಲ್ಲವೇ?

- Advertisement -
- Advertisement -

ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಅಯೋನಿಜ ಇರಬಹುದು?! ಆದರೆ ಅಂತಹ ಅಯೋನಿಜ ಅಯ್ಯಪ್ಪನನ್ನು ಪೂಜಿಸುವವರೆಲ್ಲ ಯೋನಿಜರಲ್ಲವೇ? ದೇವಳದ ಅರ್ಚಕರು, ಭಕ್ತರು ಕೂಡ ಯೋನಿಜರೇ ಆಗಿದ್ದಾರೆ. ಅಂದರೆ ಅವರೆಲ್ಲ ಜನಿಸಿರುವುದು ಮಹಿಳೆಯರ ಗರ್ಭದಿಂದಲೇ ಅಲ್ಲವೇ? ಯೋನಿಜ ಪುರುಷಭಕ್ತರು ಅಯ್ಯಪ್ಪನ ಸನ್ನಿಧಿಗೆ ಹೋಗಬಹುದಾದರೆ, ಮಹಿಳೆಯರಿಗೆ ಏಕೆ ಪ್ರವೇಶವಿಲ್ಲ. ಇಂತಹ ಸಾಮಾನ್ಯ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ. ಕೇವಲ ಮುಟ್ಟಿನ ಕಾರಣಕ್ಕೆ ಮಹಿಳಾ ಭಕ್ತರಿಗೆ ಪ್ರವೇಶ ನಿರಾಕರಿಸುವುದಾದರೆ ಪುರುಷಭಕ್ತರೂ ಹೋಗುವಂತಿಲ್ಲ.

ಮಹಿಳೆ-ಪುರುಷ ಏಕವಾಗಿ ಮುಟ್ಟೆಂಬುದು ನಿಂತ ಮೇಲೆಯೇ ಮತ್ತೊಂದು ಕೂಸಿನ ಜನನ. ಇದು ಪ್ರಕೃತಿ ಸಹಜ. ವೇದ- ಶಾಸ್ತ್ರ-ಪುರಾಣ ಗ್ರಂಥಗಳು ‘ಪ್ರಕೃತಿ ಮಾತೆ’ ಎಂದು ಕರೆದಿವೆ. ಪ್ರಕೃತಿಯೇ ಎಲ್ಲ ಸೃಷ್ಟಿಗೂ ಕಾರಣವೆಂಬ ಸತ್ಯ ಒಪ್ಪಿಕೊಳ್ಳಲು ಹಿಂದೆಮುಂದೆ ನೋಡುವುದೇಕೆ? ಅಯ್ಯಪ್ಪನೇ ‘ಪ್ರಕೃತಿಮಾತೆ’ ಮಡಿಲಲ್ಲಿ ಇದ್ದಾಗ ಅಂತಹ ಸಷ್ಟಿಗೆ ಕಾರಣರಾದ ಮಹಿಳೆಯರನ್ನೇಕೆ ದೇವಳಕ್ಕೆ ಪ್ರವೇಶ ನಿರಾಕರಿಸುವುದು? ಹೋಗಲಿ ನಾವು ರಾಜಪ್ರಭುತ್ವ ಕಾಲದಲ್ಲಿದ್ದೇವೆಯೇ? ಇಲ್ಲವಲ್ಲ. ರಾಜ ಮಾಡಿದ  ಆಜ್ಞೆ ಉಲ್ಲಂಘಿಸಿದರೆ ಅದು ಶಕ್ಷೆಗೆ ಗುರಿಪಡಿಸುತ್ತದೆ. ಆದರೆ ಈಗ ಇರುವುದು ರಾಜಪ್ರಭುತ್ವವಲ್ಲ, ಪ್ರಜಾಪ್ರಭುತ್ವ. ಇಲ್ಲಿ ನಾವೆಲ್ಲರೂ ಸಮಾನರು.

ಭಾರತದ ಸಂವಿಧಾನವನ್ನು ನಮಗೆ ನಾವೇ ಒಪ್ಪಿಕೊಂಡಿದ್ದೇವೆ.”ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ಕಾನೂನಿನ ಮುಂದೆ ಸಮಾನ ಸ್ಥಾನಮಾನ ಮತ್ತು ಅವಕಾಶಗಳು; ಮತ್ತು ಕಾನೂನು ಮತ್ತು ಸಾರ್ವಜನಿಕ ಸದಾಚಾರದ ಮಿತಿಗಳಲ್ಲಿನ ಮಾತು, ಅಭಿವ್ಯಕ್ತಿ, ನಂಬಿಕೆ, ಭಕ್ತಿ, ಆರಾಧನೆ, ಉದ್ಯೋಗ, ಸಂಗ-ಸಹವಾಸ ಮತ್ತು ಕೃತ್ಯಗಳ ಮೂಲಭೂತ ಹಕ್ಕುಗಳು ಆಶ್ವಾಸಿತವಾಗಿದೆ ಮತ್ತಿವುಗಳು ಒದಗಿಸಲ್ಪಡುತ್ತವೆ;” ಅಂದರೆ ತಾರತಮ್ಯ ನೀತಿಯಿಂದ ಯಾರೊಬ್ಬರ ಹಕ್ಕುಗಳು ಬಾಧಿತವಾಗಬಾರದು ಎಂಬುದು ಸಂವಿಧಾನದ ಆಶಯ. ನಂಬಿಕೆಯೊಂದರ ನೆಪದಲ್ಲಿ ಸಂವಿಧಾನದ ಆಶಯಗಳನ್ನು ಉಲ್ಲಂಘಿಸುವುದು ಸರಿಯಾದ ಕ್ರಮವಲ್ಲ.

ಪುರಾಣ-ಶಾಸ್ತ್ರಗಳನ್ನು ಒಪ್ಪುವ ಮಹಿಳಾ ವಿರೋಧಿಗಳು ಮಹಿಳೆ ಕ್ಷಮಯಾಧರಿತ್ರಿ ‘ಯತ್ರಾ ನಾರೀ ಪೂಜ್ಯಂತೆ ರಮಂತೇ’ ಎನ್ನುವ ಪುರೋಹಿತಶಾಹಿ ಮನಸ್ಥಿತಿಗಳು ಅದೇ ಹೆಣ್ಣಿನ ಮೇಲೆ ಪಾಶ್ವದೃಷ್ಟಿ ಹರಿಸುವುದೇಕೆ? ಹೆಣ್ಣು ಭೂಮಿಯಾದರೆ ಮುಟ್ಟಿನ ಕಾರಣಕ್ಕೆ ಅಯ್ಯಪ್ಪ ಸ್ವಾಮಿ ಅಲ್ಲಿರಲು ಹೇಗೆ ಅರ್ಹ? ಭೂಮಿಗೆ ಮಹಿಳೆಯನ್ನು ಹೋಲಿಸುವುದಾದರೆ ಅದೇ ಭೂಮಿಯ ಮೇಲೆ ನೆಲೆಸಿರುವ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಅಡ್ಡಿಪಡಿಸುವುದೇಕೆ? ಇದು ಪುರೋಹಿತಶಾಹಿಗಳು ಮತ್ತು ಅವರ ಬೆಂಬಲಿಗರ ದ್ವಂದ್ವವೂ, ಪುರುಷ ಪ್ರಧಾನ ದೌರ್ಜನ್ಯವೂ  ಆಗಿದೆ ಎಂದು ಬೇರೆ ಹೇಳಬೇಕಾಗಿಲ್ಲ. ಮಹಿಳೆಯರಿಗೆ ಅಯ್ಯಪ್ಪ ದೇವಳ ಪ್ರವೇಶ ಕಲ್ಪಿಸದೆ ಅವಮಾನಿಸುವುದು ಭೂಮಿಯನ್ನೇ ಅವಮಾನಿಸಿದಂತೆ.

ಅಯ್ಯಪ್ಪ ಸ್ವಾಮಿಗೆ ಪಡಿ ಹೊರುವವರು ಬೀಡಿ, ಸಿಗರೇಟು, ಗುಟುಕ, ಮಾಂಸ ಮಹಿಳೆಯ ಸಂಪರ್ಕ ಹೀಗೆ ಎಲ್ಲಾ ತ್ಯಜಿಸುತ್ತಾರೆ ಎನ್ನುವುದು ಸತ್ಯ. ಅವುಗಳನ್ನು ತೊರೆದ ಮಾತ್ರಕ್ಕೆ ಅವರು ದೇವಳಕ್ಕೆ ಹೋಗಬಹುದಾದರೆ, ಮಹಿಳೆಯರು ಯಾಕೆ ಹೋಗಬಾರದು? ಆದ್ಯವಚನಕಾರ ದೇವರ ದಾಸಿಮಯ್ಯ ತನ್ನ ವಚನವೊಂದರಲ್ಲಿ ‘ಬರಿ ಸಟಗನ ಭಕ್ತಿ ನೆಚ್ಚಲು ಬೇಡ, ಮಠದ ಬೆಕ್ಕು ಇಲಿಯ ಕಂಡು ಪುಟನೆಗೆದಂತಾಯ್ತು’ ಎನ್ನುತ್ತಾನೆ. ಅಂದರೆ ಒಂದು ತಿಂಗಳು ಮಾತ್ರ ಎಲ್ಲವನ್ನೂ ತ್ಯಜಿಸಿದವರದು ಬೆಕ್ಕಿನ ಭಕ್ತಿ. ಭಕ್ತಿ ಮುಗಿದ ಮೇಲೆ ಕಾಮನೆಗಳು ಚಿಮ್ಮುತ್ತವೆ. ಇಂಥ ಸುಳ್ಳಿನ ಭಕ್ತಿ ಬೇಡ ಎನ್ನುತ್ತಾನೆ ದಾಸಿಮಯ್ಯ.

“ಕಿರಣ ಸೋಂಕದ ಮುನ್ನ, ಅಳಿ ಮುಟ್ಟದ ಹೂ, ಎಂಜಲಾಗದ ನೀರು ತಂದು” ಪೂಜಿಸು ಎನ್ನುತ್ತಾನೆ ಹರಿಹರ. ಅಯ್ಯಪ್ಪನಿಗೆ ನೀವು ತೆಗೆದುಕೊಂಡು ಹೋಗುವುದು ಅದೇ ಮಹಿಳೆಯರು ಮುಟ್ಟಿದ ವಸ್ತುಗಳನ್ನು ತಾನೆ? ಎಲ್ಲೋ ಒಂದು ಕಡೆ ಅಯ್ಯಪ್ಪ ಭಕ್ತರು ತೆಗೆದುಕೊಂಡು ಹೋಗುವ ಮುಡಿ ಮತ್ತು ಅದರಲ್ಲಿನ ವಸ್ತುಗಳನ್ನು ಮಹಿಳೆ ಮುಟ್ಟಿಯೇ ಮುಟ್ಟಿರುತ್ತಾಳೆ. ಅಂಥ ಮುಟ್ಟಿನ ವಸ್ತುವನ್ನು ಅಯ್ಯಪ್ಪನಿಗೆ ಅರ್ಜಪಿಸಿದಾಗ ಮೈಲಿಗೆಯಾಗುವುದಿಲ್ಲವೇ? ಅಯ್ಯಪ್ಪನೇ ಹುಟ್ಟೇ ವಿಚಿತ್ರದ್ದು ಎಂದು ನಂಬಿರುವ ಭಕ್ತರು ಅದನ್ನು ಪ್ರಶ್ನಿಸಲು ಹೋಗುವುದಿಲ್ಲ. ಇಬ್ಬರು ಯೋನಿಜರೇ ಕೂಡಿಯೇ ಅಯ್ಯಪ್ಪ ಹುಟ್ಟಿದ್ದು. ಅಂದಮೇಲೆ ಮಹಿಳೆಯರಿಗೆ ಪ್ರವೇಶ ನೀಡುವುದು ಉಚಿತವಾದ ಕ್ರಮ.

ನೈಸರ್ಗಿಕ ನ್ಯಾಯದ ಪ್ರಕಾರ ಮಹಿಳೆ ಎಲ್ಲಾ ದೇವಾಲಯ ಪ್ರವೇಶಕ್ಕೂ ಹಕ್ಕಿದೆ. ನೈಸರ್ಗಿಕ ನ್ಯಾಯವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯುವಂತಹ ತೀರ್ಪುಗಳನ್ನು ನೀಡಿದಾಗ ಸಾಮಾನ್ಯ ಜನರು ನ್ಯಾಯಾಲಯದ ಬಗ್ಗೆ ಹೆಚ್ಚಿನ ನಂಬಿಕೆ ಇಟ್ಟುಕೊಳ್ಳುತ್ತಾರೆ. ನೈಸರ್ಗಿಕ ನ್ಯಾಯ ಎಲ್ಲ ಜೀವಿಗಳು ಸಮಾನವಾಗಿ ಇರುವಂತೆ ನೋಡಿಕೊಳ್ಳುತ್ತದೆ. ಸಮಾನತೆಯೇ ನೈಸರ್ಗಿಕ ನ್ಯಾಯದ ಜೀವಾಳ. ಈ ಹಿನ್ನೆಲೆಯಲ್ಲಿ ಶಬರಿಮಲೆಗೆ ಮಹಿಳೆಯರ ಪ್ರವೇಶ ಏಕೆ ಕೂಡದು? ಎಂಬುದನ್ನು ಎಲ್ಲರೂ ಕೇಳಬೇಕಾಗಿದೆ.

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...