Homeಕರ್ನಾಟಕದೇಶದ ಯಾರೊಬ್ಬರನ್ನು ಹೊರಹಾಕುವುದನ್ನು ಉಸಿರಿರುವವರೆಗೂ ವಿರೋಧಿಸುತ್ತೇನೆ: ಜಲೀಲ್‌ ಮುಕ್ರಿ ಅವರಿಗೊಂದು ಪ್ರತಿಪತ್ರ...

ದೇಶದ ಯಾರೊಬ್ಬರನ್ನು ಹೊರಹಾಕುವುದನ್ನು ಉಸಿರಿರುವವರೆಗೂ ವಿರೋಧಿಸುತ್ತೇನೆ: ಜಲೀಲ್‌ ಮುಕ್ರಿ ಅವರಿಗೊಂದು ಪ್ರತಿಪತ್ರ…

- Advertisement -
- Advertisement -

(ನನ್ನ ನೆರೆಹೊರೆಯವರು ದೇಶಬಿಟ್ಟು ಹೋಗು ಎಂದರೆ ಪ್ರೀತಿಯಿಂದ ಹೋಗುವೆ, ಆದರೆ ರಾಜಕೀಯ ಪಕ್ಷಗಳು ಹೇಳಿದರೆ ಹೋರಾಡುವೆ ಎಂದು ಭಾವನಾತ್ಮಕ ಪತ್ರ ಬರೆದಿದ್ದ ಜಲೀಲ್‌ ಮುಕ್ರಿ ಅವರಿಗೊಂದು ಪ್ರತಿಪತ್ರ ಬರೆದಿದ್ದಾರೆ ಮಹಾಲಿಂಗಪ್ಪ ಆಲಬಾಳರವರು…)

ಹಿರಿಯ ಸಹೋದರ ಜಲೀಲ ಸಾಹೇಬರೇ ತಾವು ಪಕ್ಕದ್ಮನೆಯವರಿಗೆ ಬರೆದ ಭಾವನಾತ್ಮಕ ಪತ್ರ ಓದಿ ಮನಸ್ಸು ಮತ್ತು ಹೃದಯ ಎರಡೂ ಭಾರವಾದಂತಾಗಿ ಕಣ್ಣಲ್ಲಿ ನೀರಾಡಿತು.

ಹುಟ್ಟಿ ಆಡಿ ಬೆಳೆದ ನಮ್ಮ ನೆಲದಲ್ಲೇ ನಾವು ಅನಾಥ ಪ್ರಜ್ಞೆ ಅನುಭವಿಸುವುದಿದೆಯಲ್ಲ, ಅದು ಭಯಾನಕವಾದದ್ದು, ವರ್ಣಿಸಲಸಾಧ್ಯವಾದದ್ದು. ಮತ್ತು ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಬಗ್ಗೆ ಎಂಥ ನಿರಾಸೆ ಮತ್ತು ಆತಂಕವಾಗುತ್ತದೆ ಎಂಬುದು ಮಾನವೀಯತೆ ಇರುವ ಪ್ರತಿಯೊಬ್ಬರಿಗೂ ಅರ್ಥವಾಗುವಂತದ್ದು.
ನಿಮ್ಮ ನೋವಿಗೆ ಸದ್ಯದ ಸಂದರ್ಭ ಕಾರಣವಾಗಿರಬಹುದು.

ಆದರೇ ಜಲೀಲ ಸಾಹೇಬರೇ ಒಂದು ಮಾತು ಹೇಳಲಿಚ್ಚಿಸುತ್ತೇನೆ. ಭಾರತದ ಒಬ್ಬನೇ ಒಬ್ಬ ಮುಸಲ್ಮಾನರನ್ನೂ ದೇಶದಿಂದ ಹೊರಹಾಕುವುದನ್ನು ನಾನು ನನ್ನ ಜೀವ ಇರುವವರೆಗೂ ವಿರೋಧಿಸುತ್ತೇನೆ. ಉಸಿರು ನಿಲ್ಲುವವರೆಗೂ ನಾನು ನನ್ನ ಪಕ್ಕದ ಮನೆಯ ಮುಸಲ್ಮಾನರನ್ನು ಅವರ ಜಾಗದಿಂದ ಕದಲಿಸುವ ಪ್ರಯತ್ನದ ವಿರುದ್ಧ ಹೋರಾಡುತ್ತೇನೆ.

ಜಲೀಲ ಸಾಹೇಬರೇ ನಾನು ಈ ಬರಹವನ್ನು ನಿಮ್ಮ ಪತ್ರವನ್ನೋದಿ ಮನಕಲಕಿ ನಾನು ನಿಮ್ಮ ಬೆಂಬಲಕ್ಕಿದ್ದೇನೆ ಎಂದು ಭರವಸೆ ನೀಡಲು ಬರೆಯುತ್ತಿಲ್ಲ.
ನನ್ನ ಸ್ವಾರ್ಥಕ್ಕಾಗಿ ಬರೆಯುತ್ತಿದ್ದೇನೆ.
ನನಗೆ ಆತಂಕವಾಗುತ್ತಿರುವುದು ನನ್ನ ಬಗ್ಗೆ.

ನಾನು ಚಿಕ್ಕವನಿದ್ದಾಗ ಅಲಾಬ್ ಸಮಯದಲ್ಲಿ ತಿಂಗಳುಗಳ ಕಾಲ ಸಂಭ್ರಮದಿಂದ ಚಿನ್ನಿಕೋಲು ಕಲಿತು ಸಂಭ್ರಮಿಸಿ ಅದನ್ನು ಹಬ್ಬದಲ್ಲಿ ಆಡಿದಾಗ ನನ್ನ ತಾಯಿ ನೋಡಿ ಸಂತಸದಿಂದ ನನ್ನನ್ನು ಎದೆಗವಚಿಕೊಂಡು ಪ್ರೀತಿಸಿದ್ದನ್ನು ನಾನು ಜೀವನಪರ್ಯಂತ ಮರೆಯಲು ಸಾಧ್ಯವಿಲ್ಲ. ಆ ನೆನಪುಗಳ ಜೀವಂತಿಕೆಯನ್ನು ಉಳಿಸಿಕೊಳ್ಳಲು ಹೋರಾಡುತ್ತೇನೆ.

ನಮ್ಮೂರಿನ ದರ್ಗಾ ಜಾತ್ರೆಗೆ ಬೆಸಿಗೆ ಕಾಲದಲ್ಲಿ ಬರೀಗಾಲಲ್ಲಿ ನದಿಯಲ್ಲಿನ ಮರಳಲ್ಲಿ ಹಾದು ಹೋಗಿ ಹಚ್ಚ ಹಸುರಿನ ನಿಸರ್ಗದ ಮಡಿಲಿನಲ್ಲಿ ಜಾತ್ರೆ ಮಾಡಿ ಬೆಂಡು, ಬೆತ್ತಾಸು ತಿಂದು ಸಂಭ್ರಮಿಸಿದ ನೆನಪುಗಳನ್ನು ನಾನು ಉಳಿಸಿಕೊಳ್ಳದಿದ್ದರೆ ಆ ಕಾಲ ನನ್ನಿಂದ ಕಳೆದು ಹೋಗುತ್ತದೆ.

ನಂತರ ನಾನು ಶಿಕ್ಷಣಕ್ಕಾಗಿ, ದುಡಿಮೆಗಾಗಿ ಊರಿನಿಂದ ದೂರವಾದಾಗಲೂ ಈ ಸುಂದರ ನೆನಪುಗಳು ನನ್ನ ಬದುಕನ್ನು ಹಸಿಯಾಗಿರಿಸಿಕೊಳ್ಳಲು ನೆರವಾಗಿವೆ.

ನಂತರವೂ ಊರಿಗೆ ಹತ್ತಿರವಾದಾಗ ಪ್ರತಿ ವರ್ಷ ದರ್ಗಾ ಜಾತ್ರೆ (ನಮ್ಮೂರಲ್ಲಿ ಉರುಸು ಅಂತ ಕರೆಯದೇ ಜಾತ್ರೆ ಅಂತಲೇ ಕರೆಯುವುದು)ಗೆ ಬರಲೇಬೇಕು ಸರ್ ಅಂತ ಸ್ಪರ್ಧೆಗೆ ಬಿದ್ದವರಂತೆ ಕರೆದು, ನಮ್ಮಲ್ಲೂ ಎರಡು ತುತ್ತು ತಿನ್ನಲೇಬೇಕು ಅಂತ ಪ್ರೀತಿಯಿಂದ ಬಲವಂತ ಮಾಡಿ ಅಲ್ಲಿ ಹರಕೆಗೆ ಮಾಡಿದ ಕುರಿ ಮಾಂಸದ ರುಚಿರುಚಿಯಾದ ಅಡುಗೆಯನ್ನು ಹೊಟ್ಟೆ ಬಿರಿಯುವಷ್ಟು, ಎದೆ ಬಿರಿಯುವಷ್ಟು ಪ್ರೀತಿಯಿಂದ ತಿನ್ನಿಸಿ ಮುಂದಿನ ವರ್ಷ ಹೇಳ್ತೀನಿ, ಅಲ್ಲಿದ್ದೀನಿ, ಇಲ್ಲಿದ್ದೀನಿ ಅಂತ ನೆಪ ಹೇಳದೇ ಬರಬೇಕು ಸರ್, ಊಟ ನಿಮಗೆ ಛಲೋ ಅನಿಸ್ತೋ ಇಲ್ಲೋ ಎಂದು ಸಂಕೋಚದಿಂದ ಬಿಳ್ಕೊಡುವ ನಮ್ಮೂರಿನ ಅಕ್ಬರ್, ಇಕ್ಬಾಲ್, ರಂಜಾನ್, ಶಬ್ಬೀರ್ ಮೇಸ್ತ್ರೀ, ಇರ್ಫಾನ್, ಇನ್ನೂ ಹಲವಾರು ಜನ.

ನೀವು ಏನೇನ್ ಹಾಕ್ತೀರಿ ಎಲ್ಲ ಹಾಕಿದ್ರೂ ನಮ್ಮ ಮನೆಯಲ್ಲಿ ಬಿರಿಯಾನಿ ನಿಮ್ಮ ಮನೆ ಥರಾ ಆಗೋದೇ ಇಲ್ಲಲ್ಲೋ ಮಗನೇ ಏನ್ ಮಾಡ್ತೀರಿ ಅಂತ ಬೈದಾಗ, ಅದು ಆಗೋದಿಲ್ಲ ಬಿಡೋ…ಅಂತ ಹೇಳಿ, ಮನೆಯಲ್ಲಿ ಮಾಡಿಸಿ ಬೋಗಾಣಿಗಟ್ಟಲೇ ಬಿರಿಯಾನಿ ತಂದು ಕೊಡುವ ಗೆಳೆಯ ಉಸ್ಮಾನ್.

ಈಗ ನಮ್ಮೂರಿನ ಬಸ್ ನಿಲ್ಧಾಣದಲ್ಲಿ ಬಾಳೆ ಹಣ್ಣು ಮಾರುವ ಫಾತೀಮಾ ಅಜ್ಜಿ ನಮ್ಮ ಅಜ್ಜಿಯ ಗೆಳತಿ. ಮೊದಲು ಬೋರೆ ಹಣ್ಣು ಮಾರುತ್ತಿದ್ದಳು. ಶಾಲೆಗೆ ಹೋಗುವಾಗ ಹಣ ಇಲ್ಲದೇ ತಿನ್ನುವ ಆಸೆಯಿಂದ ನೋಡುತ್ತ ನಿಂತಾಗ ಅದೆಷ್ಟು ಸಲ ಬೊಗಸೆ ತುಂಬ ಬೋರೆ ಹಣ್ಣು ಕೊಟ್ಟು ಕಳಿಸಿಲ್ಲ?. ಈಗಲೂ ಅದೇ ದಾಟಿ. ಬಾಳೆ ಹಣ್ಣಿನ ಬೆಲೆ ಕೇಳಿದಾಗ” ಅದನ್ನೆಲ್ಲ ಏನ್ ಮಾಡ್ತಿ, ಎಷ್ಟು ಬೇಕೋ ಅಷ್ಟು ತಗೊಂಡು ಹೋಗೋ ಬಾಡ್ಯಾ” ಅಂತ ಬೈದು ಕೈಗಿಟ್ಟಷ್ಟು ಸಾಕು ಹೋಗು ಎನ್ನುವ ಆ ಹಿರಿಯ ಜೀವ.

ಗಾಡಿ ರಿಪೇರಿಗೆ ಅಂತ ಗ್ಯಾರೆಜಿಗೆ ಬಿಟ್ಟು, ಎಷ್ಟಾಯಿತು? ಅಂತ ಕೇಳಿದಾಗ, ನಾಲ್ಕು ನೂರು ಆಗಿದೆ ಎಷ್ಟಾದ್ರೂ ಕೊಡಿ ಸರ್ ಎಂದು ಕೊಟ್ಟಷ್ಟು ತೆಗೆದುಕೊಂಡು ಅದರಲ್ಲೇ ಚಹಾ ತರಿಸಿ ಕುಡಿಸಿ ನನ್ನ ವೈಯಕ್ತಿಕ ಬದುಕಿನ ಬಗ್ಗೆ ನನಗಿಂತ ಹೆಚ್ಚು ಕಾಳಜಿ ವಹಿಸುವ ನಮ್ಮೂರಿನ ಸೈಯ್ಯದ್ ಸಾಬ್.

ಬೆಳಿಗ್ಗೆ ವಾಕಿಂಗ್ ಹೋಗುವಾಗ ಇನ್ನೂ ಬೆಳಕು ಹರಿಯದಿದ್ದರೂ ಚಹಾ ಮಾಡಿ ಇಟ್ಟುಕೊಂಡು ಕರೆದು ಚಹಾ ಕುಡಿದು ಹೋಗ್ರೀ ಸರ್ ಅಂತ ಪ್ರೀತಿಯ ಬಲವಂತದಿಂದ ಚಹಾ ಕುಡಿಸಿ ಕಳಿಸುವ ನಜೀರ್.

“ಏಯ್ ಸರ್ ಕೋ ಅಚ್ಛಾ ಕರೋ” ಅಂತ ಅಡುಗೆ ಮಾಡುವವನಿಗೆ ಕೂಗಿ ಹೇಳಿ, ನೀವು ಇಲ್ಲಿ ಬನ್ನಿ ಸರ್ ಅಂತ ಜಾಗವನ್ನು ಎರಡೆರಡು ಬಾರಿ ಸ್ವಚ್ಚಗೊಳಿಸಿ ಊಟ ಬಡಿಸಿ, ಮತ್ತೇನ್ ಬೇಕು ಸರ್ ಅನ್ನುತ್ತ ಓಡಾಡುವ ನಿಯಾಜ್ ದಾಬಾದ ಸಲೀಂ.

“ಮೀನು ಸರಿ ಇಲ್ಲ. ಇಲ್ಲಿ ಊಟ ಬೇಡ ಸರ್. ಅಂತ ಪ್ರಾಮಾಣಿಕ ಕಾಳಜಿ ಮಾಡುವ, ಮೀನು ಚನ್ನಾಗಿದೆ ಸಕ್ಕತ್ತಾಗಿ ಮಾಡಿಕೊಡ್ತೀನಿ ನೀವು ಊಟ ಮಾಡ್ಕೊಂಡೇ ಹೋಗಿ ಸರ್. ಅನ್ನುತ್ತ ಎಂದೂ ಬಿಲ್ ಬಗ್ಗೆ ಯೋಚನೆನೇ ಮಾಡದ ರಸೂಲ್ ದಾದಾ.

ಇನ್ನೂ ಎಷ್ಟು ಉದಾಹರಣೆ ಕೊಡಲಿ. ನನ್ನ ಜೀವನ ಚರೀತ್ರೆಯೇ ಆದೀತು. ಇವರೆಲ್ಲ ನನ್ನ ಬದುಕಿನ ಭಾಗವಾಗಿಯೇ ಹೋಗಿದ್ದಾರೆ ಎನ್ನುವುದಕ್ಕಿಂತ ಬದುಕಿನ ಭಾಗವೇ ಹೌದು. ಅವರ ಇತಿಹಾಸ ನಮ್ಮ ಇತಿಹಾಸದಷ್ಟೇ ಆಳವಾಗಿದೆ. ಹೃದಯದ ಪಸೆಯಲ್ಲೂ ವ್ಯತ್ಯಾಸವಿಲ್ಲ…….

ಇನ್ನೂ ಮುಖ್ಯವಾಗಿ ಸಾಹಿತಿ, ಕವಿ, ನನ್ನ ಹಿರಿಯ ಮಿತ್ರ, ಮಾರ್ಗದರ್ಶಕರಾದ ಪೀರ್ ಭಾಷಾ ಅವರಿಂದ ನಾನು ಜನರನ್ನು, ಈ ದೇಶವನ್ನು ಪ್ರೀತಿಸುವ ಬಗೆಯನ್ನು ಕಲಿತಿದ್ದೇನೆ. ಜನರ ನೋವಿಗೆ ಮಿಡಿಯುವ ಅಂತರಂಗವನ್ನು ರೂಢಿಸಿಕೊಂಡಿದ್ದೇನೆ. ಹಂಚಿಕೆಯಾಗಿದೆ. ತರಿಕೆರೆಯವರಂಥ ಸಾಹಿತ್ಯ ಸಂತನನ್ನು ಮರು ರೂಪಿಸಲು ಈ ನಾಡಿಗೆ ಸಾಧ್ಯವೇ?

ನಾನು ಅವರಿಂದ, ಅವರನ್ನು ಗಮನಿಸುತ್ತ, ಅವರ ಪುಸ್ತಕಗಳನ್ನು ಓದುತ್ತ ಮಾನವೀಯವಾದ ಆಲೋಚನಾ ಕ್ರಮಗಳನ್ನು ಕಲಿತ್ತಿದ್ದೇನೆ. ಒಂದು ದಿನ ಬೆಳಗಿನ ಜಾವ ಧಾರವಾಡದ ಬೀದಿಯಲ್ಲಿ ಅವರೊಂದಿಗೆ ಸುತ್ತುತ್ತ ಸಿರಿಯಾದಲ್ಲಿನ ನಾಗರಿಕ ಹತ್ಯೆ ಬಗ್ಗೆ ಕೇಳಿದೆ… ‘ಮನುಷ್ಯ ಇಷ್ಟು ಕ್ರೂರಿ ಯಾಕಾಗ್ತಾನೆ ಅಂತ ಗೊತ್ತಿಲ್ಲ ಆಲಬಾಳ… ಎನ್ನುತ್ತ… ಅಂದ ಹಾಗೇ ಸಾಕಷ್ಟು ಜನರ ಸಂಪರ್ಕ ಇರುವ ನೀವು ಈ ಪ್ರಶ್ನೆಯನ್ನು ನನಗೆ ಏಕೆ ಕೇಳುತ್ತಿದ್ದಿರಿ’ ಎಂದಾಗ ನನ್ನ ಮೂರ್ಖತನಕ್ಕೆ ನನಗೇ ನಾಚಿಕೆಯಾಗಿತ್ತು. ತಲೆ ತಗ್ಗಿಸಿ ಅವರ ಸೂಕ್ಷ್ಮತೆಯೊಳಗಿನ ಸ್ವಲ್ಪನ್ನಾದರೂ ನಾನು ರೂಢಿಸಿಕೊಳ್ಳಬೇಕು ಅಂತ ನಿರಧರಿಸಿದೆ.

ಇನ್ನೂ, ನಾನು ಬಳ್ಳಾರಿ ಕಡೆ ಬರ್ತೀನಿ ಅಂತ ಹೇಳಿದ್ದೆ ತಡ. ಈಗ ಎಲ್ಲಿಗೆ ಬಂದ್ರೀ… ನಾನು ಬಸ್ ನಿಲ್ದಾಣದಲ್ಲಿದ್ದೀನಿ ಆರಾಮಾಗಿ ಬನ್ನಿ ಎನ್ನುತ್ತ ತಾಸುಗಟ್ಟಲೇ ಕಾದು. ಸಿಕ್ಕ ತಕ್ಷಣ ಮೊದಲೇ ನಿಗದಿ ಮಾಡಿದ ಭೋಜನ ಕೂಟಕ್ಕೆ ಕರೆದೊಯ್ದು ಕುಡಿಸಿ, ತಿನ್ನಿಸಿ ಮಲಗುವವರೆಗೂ ಕಾಳಜಿ ಮಾಡಿ ನಂತರ ಮಲಗುವ ಗೆಳೆಯ ಇರ್ಫಾನ್ ಮುದುಗಲ್.

ನೀನು ನನ್ನ ಹಿರಿಯ ಮಗ ಅಂತ ಹೇಳಿ ಮನೆಯ ವ್ಯವಹಾರಗಳಿಗೆಲ್ಲ ನನ್ನನ್ನೇ ಕೇಳುವ ಅವನ ತಂದೆ ತಾಯಿ. ಅಣ್ಣ ಎನ್ನುತ್ತ ತಮ್ಮ ಶಿಕ್ಷಣ, ಓದು ಎಲ್ಲದರ ಕುರಿತು ವರದಿ ಒಪ್ಪಿಸುವ ಅವರ ತಂಗಿಯರು ಅವರ್ಯಾರು ನನಗೆ ಜೀವಮಾನದಲ್ಲೆಂದೂ, ಧರ್ಮದ ಕಾರಣಕ್ಕಾಗಿ ಬೇರೆಯವರು ಅನ್ನಿಸಲೇ ಇಲ್ಲ.

ಬರೆಯುತ್ತ ಹೋದರೆ ಬಹಳ ಆಗುತ್ತದೆ ಜಲೀಲ್ ಸಾಹೇಬರೆ..
ಇವರೆಲ್ಲ, ಇಂಥ ಸಾವಿರಾರು ಜನ ನನ್ನ ಬದುಕಿನ ಭಾಗವಾಗಿದ್ದಾರೆ. ನಾನು ಸವೆಸಿದ ಆಯಸ್ಸಿನ ಭಾಗವಾಗಿದ್ದಾರೆ. ನನ್ನ ಸಂತಸದ, ನೆನಪುಗಳ ಭಾಗವಾಗಿದ್ದಾರೆ.
ನಾನು ಇವರಿಂದ ದೂರವಾಗುವುದೆಂದರೆ ನನ್ನ ಬದುಕಿದ ಬದುಕಿನಿಂದಲೇ ದೂರವಾದಂತಾಗುವುದಿಲ್ಲವೇ? ನಾನು ಕಳೆದ ಕಾಲ, ನೋವು, ನಲಿವು, ಅನುಭವಿಸಿದ ಅನುಭವ, ಮುಖ್ಯವಾಗಿ ನಾನು ಮರು ಕಟ್ಟಿಕೊಳ್ಳಲು ಸಾಧ್ಯವಿರದಂಥ ನೆನಪುಗಳು ಎಲ್ಲವುಗಳಿಂದಲೂ ದೂರವಾದಂತಾಗುವುದಿಲ್ಲವೇ?
ಆಗ ನಾನು ಬದುಕಿದ ಆ ಕ್ಷಣಗಳು ಕಳೆದು ಹೋಗುತ್ತವೆ. ಇಲ್ಲವೇ ಆ ಕ್ಷಣಗಳಲ್ಲಿ ನಾನು ಬದುಕಿಯೇ ಇರಲಿಲ್ಲ ಎಂದು ಭಾವಿಸಿಕೊಳ್ಳಬೇಕಾಗುತ್ತದೆ.

ಜಲೀಲ್ ಸಾಹೇಬರೇ ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ. ಇದರಲ್ಲಿ ನನ್ನ ಸ್ವಾರ್ಥವಿದೆ.
ನಾನು ಬದುಕಿದ ಯಾವೊಂದು ಕ್ಷಣಗಳನ್ನು ನಾನು ಬದುಕಿಲ್ಲ ಎಂದು ಹೇಳಲು ನಾನು ಸಿದ್ದನಿಲ್ಲ.
ಅದಕ್ಕಾಗಿ ಈ ನೆಲದಿಂದ ಈ ನೆಲದವರೇ ಆದ ಯಾವೊಬ್ಬ ಮುಸಲ್ಮಾನರನ್ನೂ ಕದಲಿಸಲು ನಾನು ಕೈ ಕಟ್ಟಿಕೊಂಡು ಕುಳಿತು ಅವಕಾಶ ಕೊಡುವುದಿಲ್ಲ ಏಕೆಂದರೆ ನನ್ನ ಬದುಕು ಅವರೊಂದಿಗೆ ಹಂಚಿಕೆಯಾಗಿದೆ.

– ಮಹಾಲಿಂಗಪ್ಪ ಆಲಬಾಳ.

ಜಲೀಲ್‌ ಮುಕ್ರಿಯವರ ಪತ್ರ ಓದಿಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...