Homeಕರ್ನಾಟಕವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ...?

ವಿಜಯನಗರ ಜಿಲ್ಲೆ ತಡೆಯಲು ಸೋಮಶೇಖರ್ ರೆಡ್ಡಿ ಮಾಡಿದರೆ ಉಗ್ರ ಭಾಷಣ…?

- Advertisement -
- Advertisement -

ಕಳೆದ ವಾರ ಬಳ್ಳಾರಿಯ ಸಿಎಎ ಪರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಇದ್ದಕ್ಕಿದ್ದಂತೆಯೇ ಮುಸ್ಲಿಮರ ವಿರುದ್ಧ ಉಗ್ರ ಭಾಷಣ ಬಿಗಿದಿದ್ದರು. ಖಡ್ಗ ಮಚ್ಚು ತಂದು ಕೊಚ್ಚಿ ಹಾಕ್ತೀವಿ ಎನ್ನುವವರೆಗೂ ತನ್ನ ನಾಲಗೆ ಹರಿಯಬಿಟ್ಟಿದ್ದರು. ಆತನ ಮಾತುಗಳಿಂದ ಸ್ವತಃ ಬಿಜೆಪಿಗರೆ ಆಶ್ರ‍್ಯಚಕಿತರಾಗಿದ್ದರು. ಆತ ಮುಂಚೆ ಹಾಗಿರಲಿಲ್ಲ, ಈಗೇಕೆ ರೊಚ್ಚಿಗೆದ್ದರು ಎಂದು ಹುಡುಕಿ ಹೊರಟರೆ ಅದರ ಮೂಲ ವಿಜಯನಗರ ಜಿಲ್ಲೆಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ: ಮುಸ್ಲಿಮರೆ ಜಾಸ್ತಿ ನಖರಾ ಮಾಡಿದರೆ ಉಫ್‌ ಅಂತ ಊದಿಬಿಡ್ತೇವೆ: ಬಹಿರಂಗ ಕೋಮು ಪ್ರಚೋದಾನಕಾರಿ ಭಾಷಣ ಮಾಡಿದ BJP ಶಾಸಕ ಸೋಮಶೇಖರ್‌ರೆಡ್ಡಿ

ಹೌದು, ಹೊಸಪೇಟೆಯ ಶಾಸಕ ಆನಂದ್ ಸಿಂಗ್ ವಿಜಯನಗರ ಜಿಲ್ಲೆ ಆಗಬೇಕೆಂದು ಯಡಿಯೂರಪ್ಪ ಬಳಿ ಮನವಿ ಮಾಡಿದಾಕ್ಷಣ ಯಡಿಯೂರಪ್ಪ ಒಪ್ಪಿ ಸಹಿ ಹಾಕಿದ್ದು ನಿಮಗೆ ಗೊತ್ತೆ ಇದೆ. ಉಜ್ಜಯಿನಿ ಸ್ವಾಮೀಜಿಗಳು, ಸಂಗನಬಸವ ಸ್ವಾಮೀಜಿಗಳ ಒತ್ತಡವೂ ಇದಕ್ಕೆ ಕಾರಣವಾಗಿತ್ತು. ಆದರೆ ಏನು ಕಾರಣವೋ ಯಾವ ಒತ್ತಡವೋ ಆ ಆದೇಶ ವಾಪಸ್ ಹಿಂದಕ್ಕೆ ತೆಗೆದುಕೊಂಡುಬಿಟ್ಟರು. ಅದೇ ಸಮಯದಲ್ಲಿ ಒಬ್ಬರಿಗೊಬ್ಬರು ಆಗದವರಂತಿದ್ದ ಸೋಮಶೇಖರ್‌ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ವಿಜಯನಗರ ಜಿಲ್ಲೆ ಆಗಬಾರದು ಎಂದು ಒಟ್ಟಿಗೆ ದನಿಯೆತ್ತಿದ್ದರು. ಹಾಗೇನಾದರೂ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಆದರೆ ಒಂದುವೇಳೆ ವಿಜಯನಗರ ಜಿಲ್ಲೆ ರಚನೆಯಾದಲ್ಲಿ ಅದು ಈ ರೆಡ್ಡಿಗಳ ಅಸ್ತಿತ್ವವನ್ನು ಅಲ್ಲಾಡಿಸುವುದರಲ್ಲಿ ಅನುಮಾನವೇ ಇಲ್ಲ. ಆಗ ಸಂಡೂರು, ಬಳ್ಳಾರಿ, ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕುಗಳು ಮಾತ್ರ ಬಳ್ಳಾರಿ ಜಿಲ್ಲೆಗೆ ಉಳಿದುಕೊಳ್ಳುತ್ತವೆ. ಬಳ್ಳಾರಿಗೆ ಹತ್ತಿರವಿದ್ದರೂ ಸಹ ಕೂಡ್ಲಿಗಿ, ಕಂಪ್ಲಿ ತಾಲ್ಲೂಕುಗಳು ಸಹ ವಿಜಯನಗರಕ್ಕೆ ಸೇರಲು ಒತ್ತಾಯಿಸುತ್ತಿವೆ. ಪ್ರತ್ಯೇಕ ಜಿಲ್ಲೆಯಾದರೆ ರೆಡ್ಡಿಗಳ ಆಟಾಟೋಪ ಇರುವುದಿಲ್ಲ, ಡ್ಯಾಂ ಇದೆ, ಪ್ರವಾಸೋದ್ಯಮವಿದೆ, ಹಾಗಾಗಿ ಅದು ಅಭಿವೃದ್ಧಿಯಾಗುತ್ತದೆ ಎಂಬುದು ಅಲ್ಲಿಯ ಜನರ ಅಭಿಮತ.

ವಿಜಯನಗರ ಜಿಲ್ಲೆ ಆದಲ್ಲಿ ಈಗಾಗಲೇ ಲೂಟಿಯಾಗಿರುವ ಬಳ್ಳಾರಿ ಜಿಲ್ಲೆ ಮತ್ತಷ್ಟು ಸೊರಗುತ್ತದೆ. ಇತ್ತೀಚೆಗೆ ರೆಡ್ಡಿಗಳು ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಜನರ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆ ಬೆಳೆದಿದೆ ಎನ್ನಲಾಗುತ್ತಿದೆ. ಆನಂದ್ ಸಿಂಗ್ ಮಂತ್ರಿಯಾಗುವುದರ ಜೊತೆಗೆ ವಿಜಯನಗರ ಜಿಲ್ಲೆಯ ಹರಿಕಾರನಾಗಿ ಮೆರೆಯುತ್ತಾರೆ, ಆಗ ಬಳ್ಳಾರಿಯಲ್ಲಿ ತಮ್ಮ ಹಿಡಿತ ಕಡಿಮೆಯಾಗುತ್ತದೆ ಎಂಬುದು ರೆಡ್ಡಿ ಸಹೋದರರ ಚಿಂತೆ. ಈಗಾಗಲೇ ಜನರಿಂದ ದೂರವಾಗುತ್ತಿರುವ ರೆಡ್ಡಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಶತಾಯಗತಾಯ ವಿಜಯನಗರ ಜಿಲ್ಲೆ ತಡೆಯಬೇಕು ಮತ್ತು ಮತ್ತೆ ಚಾಲ್ತಿಗೆ ಬರಬೇಕಿದೆ. ಇಂತಹ ಸಂದರ್ಭದಲ್ಲಿ ಸಿಎಎ ಅವರಿಗೆ ವರವಾಗಿ ಬಂದಿದೆ.

ಹೌದು ಹಂಪಿ ಉತ್ಸವದಲ್ಲಿ ವಿಜಯನಗರ ಜಿಲ್ಲೆ ಘೋಷಣೆಯಾಗುತ್ತೆ ಅಂತ ಪುಕಾರು ಎಬ್ಬಿತ್ತು. ಇದರಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮತ್ತು ತನಗೂ ಜನರ ಬೆಂಬಲವಿದೆ ಎಂದು ಘೋಷಿಸುವುದು ರೆಡ್ಡಿಗಳಿಗೆ ಅನಿವಾರ್ಯವಾಗಿತ್ತು. ಹಾಗಾಗಿಯೇ ಸೋಮಶೇಖರ್ ರೆಡ್ಡಿ ಉಗ್ರ ಭಾಷಣ ಮಾಡಿದ್ದಾರೆ. ಆಶ್ರ‍್ಯ ಎಂದರೆ ಅಷ್ಟು ದಿನ ಜನಾರ್ದನ ರೆಡ್ಡಿ ಬಲಗೈ ಬಂಟನಂತಿದ್ದ ಮೆಹಫೂಜ್ ಅಲಿಖಾನ್ ಸೋಮಶೇಖರ್ ರೆಡ್ಡಿಗಳ ವಿರುದ್ಧವೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾನೆ. ಅಂದರೆ ಆ ವಿಚಾರವನ್ನು ಚಾಲ್ತಿಯಲ್ಲಿಡುವುದು ಅವರಿಗೆ ಅನಿವಾರ್ಯವಾಗಿದೆ.

ಇದರಿಂದ ಏಕಕಾಲದಲ್ಲಿ ಪ್ರಚಾರವೂ, ಆರ್‌ಎಸ್‌ಎಸ್ ಬೆಂಬಲವೂ ರೆಡ್ಡಿಗಳಿಗೆ ಸಿಕ್ಕಿದೆ. ಅವರ ಹೇಳಿಕೆ ಕೇಳಿದೊಡನೆಯು ಸ್ಥಳೀಯ ಆರ್‌ಎಸ್‌ಎಸ್ ಮುಖಂಡರು ಸೋಮಶೇಖರ್ ರೆಡ್ಡಿ ಪರವಾಗಿ ನಿಂತಿದ್ದಾರೆ. ಬಳ್ಳಾರಿಯಲ್ಲಿ ಹೆಚ್ಚು ಕೋಮುಗಲಭೆಗಳು ನಡೆದ ಉದಾಹರಣೆಗಳಿಲ್ಲ. ಮುಂದೇನಾದರೂ ಆದಲ್ಲಿ ಅದು ಬಿಜೆಪಿಗೆ ವರವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. ಆದರೂ ಸೋಮಶೇಖರ್ ರೆಡ್ಡಿ ಇಷ್ಟಕ್ಕೆ ಸುಮ್ಮನಿದ್ದಿಲ್ಲ. ನಿನ್ನೆ ರೆಡ್ಡಿಗೆ ಸವಾಲು ಹಾಕಿ ಬಳ್ಳಾರಿಗೆ ಬಂದಿದ್ದ ಜಮೀರ್ ಅಹ್ಮದ್ ಖಾನ್ ಬಂಧನ, ಬಿಡುಗಡೆಯ ಬಳಿಕ ಆತ ನನಗೆ ಹೆದರಿಕೊಂಡು ವಾಪಸ್ ಹೋಗಿದ್ದಾನೆ ಎಂದು ತನ್ನ ವರಸೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿಗೆ ಬರ್ತೀನಿ, ಅದೇನ್‌ ಮಾಡ್ತಿಯೋ ನೋಡ್ತೀನಿ: ಸೋಮಶೇಖರ್‌ ರೆಡ್ಡಿಗೆ ತೊಡೆ ತಟ್ಟಿದ ಜಮೀರ್‌ ಅಹ್ಮದ್‌

ಇನ್ನು ಜಿಲ್ಲೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ತೋರಬಹುದಿದ್ದ ಕಾಂಗ್ರೆಸ್ ಸಂಪೂರ್ಣ ಮಲಗಿದೆ. ಜಮೀರ್ ಆಹ್ಮದ್ ಬರಬಾರದು ಎಂದು ಅರ್ಜಿ ಕೊಟ್ಟ ಕಾಂಗ್ರೆಸ್ ಮುಖಂಡ ಕೆ.ಸಿ ಕೊಂಡಯ್ಯ ಸೋಮಶೇಖರ್ ರೆಡ್ಡಿಯ ವಿರುದ್ಧ ಒಂದೂ ಹೇಳಿಕೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ನಾಯಕರು ಬಿಜೆಪಿಗೆ ಮಾರಾಟವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದೆಲ್ಲದರ ಲಾಭ ಪಡೆದುಕೊಳ್ಳಲು ರೆಡ್ಡಿ ಸಹೋದರರು ಮುಂದಾಗಿದ್ದಾರೆ.

ಇನ್ನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಬಿ.ಶ್ರೀರಾಮುಲುಗೆ ಇದೆಲ್ಲಾ ಬೇಕಾಗಿಲ್ಲ. ಅದಕ್ಕಾಗಿಯೇ ಸೋಮಶೇಖರ್ ರೆಡ್ಡಿ ಹೇಳಿಕೆ ಕೊಟ್ಟ ಮರುದಿನವೇ ಮುಸ್ಲಿಂ ಮದುವೆಯೊಂದರಲ್ಲಿ ರೆಡ್ಡಿ ಜೊತೆ ಭಾಗವಹಿಸಿದ್ದಲ್ಲದೇ ಮುಸ್ಲಿಂ ಮುಖಂಡರ ಮುಂದೆ ಅಂಗಲಾಚಿ ಮಾತನಾಡಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ, ನಾವೆಲ್ಲರೂ ಅಣ್ಣತಮ್ಮಂದಿರಂತೆ ಇದ್ದೀವಿ, ಇದನ್ನೆಲ್ಲ ಮನಸ್ಸಿಗೆ ಹಾಕಿಕೊಳ್ಳಬೇಡಿ ಎಂದು ಮನವಿ ಮಾಡುವ ವಿಡಿಯೋ ವೈರಲ್ ಆಗಿತ್ತು.

ಶ್ರೀರಾಮುಲು ಮುಸ್ಲಿಮರ ವಿರುದ್ಧ ನೇರವಾಗಿ ಮಾತಾಡುವುದಿಲ್ಲ. ಆದರೆ ಸೋಮಶೇಖರ್ ರೆಡ್ಡಿಯನ್ನು ಬಿಟ್ಟುಕೊಡುವಂತಿಲ್ಲ. ಏಕೆಂದರೆ ಬಳ್ಳಾರಿಯ ಹಿಡಿತ ತಪ್ಪುವುದು ಅವರಿಗೂ ಬೇಕಿಲ್ಲ. ತಮ್ಮ ಕುಟುಂಬದ ಅಸ್ತಿತ್ವ ಕಾಪಾಡಲು ಸಿಎಎ ಅವರಿಗೆ ಒಂದು ನೆಪವಾಗಿ ಸಿಕ್ಕಿದೆಯಷ್ಟೇ.

ಒಟ್ಟಿನಲ್ಲಿ ಸೋಮಶೇಖರ್ ರೆಡ್ಡಿ ಪ್ಲಾನ್ ವರ್ಕೌಟ್ ಆದಂತೆ ಕಾಣುತ್ತಿದೆ. ಒಂದು ಕಡೆ ರಾಜ್ಯಮಟ್ಟದ ಪ್ರಚಾರ, ಇನ್ನೊಂದು ಕಡೆ ಆರ್‌ಎಸ್‌ಎಸ್ ಬೆಂಬಲ.. ಇನ್ನು ವಿಜಯನಗರ ಜಿಲ್ಲೆಯ ಸೊಲ್ಲೆ ಕೇಳಿಬಂದಿಲ್ಲ ಎಂದಮೇಲೆ ಅವರಿಗೂ ಅದೇ ಬೇಕಿತ್ತು ತಾನೇ?

(ವಿವಿಧ ಲೇಖಕರು ತಮ್ಮ ಲೇಖನಗಳಲ್ಲಿ ಬರೆಯುವ ಅಭಿಪ್ರಾಯಗಳು ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅಭಿಪ್ರಾಯಗಳು ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...