Homeನಿಜವೋ ಸುಳ್ಳೋಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ...

ಹೊಸ ವರ್ಷದಲ್ಲಿ ನಾವು ನಂಬಿಬಿಟ್ಟಿದ್ದ ಟಾಪ್‌ ಸುಳ್ಳು ಸುದ್ದಿಗಳು ಇಲ್ಲಿವೆ…

- Advertisement -
- Advertisement -
  1. ಗ್ರಾಮ ಪಂಚಾಯಿತಿ ಚುನಾವಣೆ ಏಪ್ರಿಲ್ 5 ಮತ್ತು 9ಕ್ಕೆ: ಇದು ಸುಳ್ಳು ಸುದ್ದಿ

ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 10ನೇ ತರಗತಿ ಪಾಸಾಗಿರಬೇಕು, ಪಾನ್ ಕಾರ್ಡ್ ಮತ್ತು ಆಧಾರ ಕಾರ್ಡ್ ಕಡ್ಡಾಯ ಎಂಬ ಸುದ್ದಿ ಹರಿದಾಡಿತ್ತು. ಏಪ್ರಿಲ್ 5 ಮತ್ತು 9ಕ್ಕೆ ಚುನಾವಣೆ ಸಹ ನಡೆಯಲಿದೆ ಎಂಬ ಆದೇಶವೂ ಬಂದಿತ್ತು.]

ಆದರೆ ಇದು ಸುಳ್ಳು ಸುದ್ದಿ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಇನ್ನು ಅಧಿಸೂಚನೆ ಹೊರಡಿಸಿಲ್ಲ ಮತ್ತು ಯಾವುದೇ ನಿಯಮಗಳಿಲ್ಲ ಎಂದು ಹೊಸ ಪ್ರಕಟಣೆ ಹೊರಡಿಸಿದೆ.

2. ಚಪಾಕ್ ಚಿತ್ರದಲ್ಲಿ ಮುಸ್ಲಿಂ ಆರೋಪಿಯ ಹೆಸರನ್ನು ಹಿಂದೂ ಹೆಸರಾಗಿ ಬದಲಾಯಿಸಲಾಗಿದೆಯೇ?

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಆಸಿಡ್ ದಾಳಿಗೊಳಗಾದ ಹೆಣ್ಣುಮಗಳ ಬದುಕಿನ ಘಟನೆಯಾಧಾರಿತ ಚಪಾಕ್ ಎಂಬ ಚಿತ್ರದಲ್ಲಿ ಹಣ ಹೂಡಿದ್ದಲ್ಲದೇ ತಾನೂ ನಟಿಸಿದ್ದಾಳೆ. ಈ ಚಿತ್ರವೂ ಜನವರಿ 10ರಂದು ಬಿಡುಗಡೆಯಾಗಿದೆ.

ಇದಕ್ಕೂ ಮೊದಲು ಜನವರಿ 05ರಂದು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಎಬಿವಿಪಿ, ಬಿಜೆಪಿ ಗೂಂಡಾಗಳು ನುಗ್ಗಿ ಹಲ್ಲೆ ಮಾಡಿದ್ದನ್ನು ಖಂಡಿಸಿ ದೀಪಿಕಾ ಪಡುಕೋಣೆ ಜೆಎನ್‌ಯುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು.

ಇಷ್ಟಕ್ಕೆ ದೀಪಿಕಾ ವಿರುದ್ಧ ದ್ವೇಷ ಸಾಧಿಸಿದ ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಸುಳ್ಳು ಹರಡಲು ಮುಂದಾಗಿದ್ದರು. ಅದರಲ್ಲಿ ಮುಖ್ಯವಾದುದು ಅವರ ಚಪಾಕ್ ಚಿತ್ರದಲ್ಲಿ ಸಂತ್ರಸ್ತೆ ಮೇಲೆ ಆಸಿಡ್ ಎರಚಿದ ಆರೋಪಿ ನದೀಮ್ ಖಾನ್ ಎಂಬ ಹೆಸರನ್ನು ರಾಜೇಶ್ ಶರ್ಮಾ ಎಂದು ಬದಲಿಸಲಾಗಿದೆ ಎಂಬ ಆರೋಪ..

ಒಪಿಇಂಡಿಯಾ, ಸ್ವರಾಜ್ಯ ಎಂಬ ಬಿಜೆಪಿ ಬೆಂಬಲಿತ ವೆಬ್‌ಗಳು ಇದನ್ನು ವ್ಯವಸ್ಥಿತವಾಗಿ ಪ್ರಚಾರ ಮಾಡಿದ್ದವು. ಸುಬ್ರಮಣ್ಯಸ್ವಾಮಿ ಅಂತೂ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದರು. ಹಲವು ಬಿಜೆಪಿ ಸಂಸದರಿಂದ ಶುರುವಾಗಿ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಇದನ್ನು ಷೇರ್ ಮಾಡಿದ್ದರು.

ಆದರೆ ಸಿನಿಮಾ ನೋಡಿದ ಬಹುತೇಕರು ಸ್ಪಷ್ಟಪಡಿಸಿರುವುದೇನೆಂದರೆ ನದೀಮ್ ಖಾನ್ ಬದಲಾಗಿ ಬಶೀರ್ ಎಂದು ಮುಸ್ಲಿಂ ಹೆಸರನ್ನೇ ಇಡಲಾಗಿದೆ. ಅಂದರೆ ಬಿಜೆಪಿಗರು, ಸ್ವರಾಜ್ ಹೇಳಿದ್ದೆಲ್ಲ ಹಸಿ ಸುಳ್ಳು ಎಂದು ಜಗಜ್ಜಾಹೀರಾಗಿದೆ.

3. ಇಂದಿರಾಗಾಂಧಿ 1975ರಲ್ಲಿ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿಸಿದ್ದರೆ?

“1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿ, ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿದ್ದ ಸಿಪಿಐ ಮುಖಂಡ ಸೀತಾರಾಮ್ ಯೆಚೂರಿಗೆ ಹೊಡೆದು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು ಮತ್ತು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದಕ್ಕೆ ಕ್ಷಮೆಯಾಚಿಸುವ ಪತ್ರವನ್ನು ಸೀತಾರಾಮ್ ಯೆಚೂರಿ ಓದಿದರು. ಇದನ್ನು ಕಮ್ಯುನಿಸ್ಟರೊಂದಿಗೆ ವ್ಯವಹರಿಸುವ ಉಕ್ಕಿನಹಸ್ತ ಎಂದು ಕರೆಯಲಾಗುತ್ತದೆ. ಅಮಿತ್ ಶಾ ಅವರ ಮುಂದೆ ಸಂತನಾಗಿ ಕಾಣಿಸುತ್ತಾನೆ.”

ಈ ರೀತಿಯ ಸಂದೇಶವೊಂದನ್ನು ಮೋಹನ್ ದಾಸ್ ಪೈ ‘ಇದು ನಿಜವೇ’ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿದ್ದಾರೆ.

ಈ ಕುರಿತು ಫ್ಯಾಕ್ಟ್ ಚೆಕ್ ಮಾಡಲು ಬೂಮ್‌ಲೈವ್ ಸೀತಾರಾಂ ಯೆಚೂರಿಯವರನ್ನು ಸಂಪರ್ಕಿಸಿತು. ಆಗ ಅವರು “ಇದು 1975ರ ಚಿತ್ರವಲ್ಲ ಬದಲಿಗೆ 1977ರ ಸೆಪ್ಟಂಬರ್‌ನಲ್ಲಿ ತೆಗೆದ ಚಿತ್ರ. ಇಂದಿರಾಗಾಂಧಿಯವರು ಜೆಎನ್‌ಯು ವಿವಿಯ ಉಪಕುಲಪತಿಗಳಾಗಿದ್ದರು. ಅದನ್ನು ವಿರೋಧಿಸಿ ನಾವು ದೊಡ್ಡ ಹೋರಾಟ ನಡೆಸಿದ್ದವು. ಆಗ ಅವರು ಜೆಎನ್‌ಯುಗೆ ಬಂದಾಗ ನಾನು ನಮ್ಮ ಹಕ್ಕೊತ್ತಾಯ ಪತ್ರವನ್ನು ಓದಿ ರಾಜೀನಾಮೆಗೆ ಒತ್ತಾಯಿಸಿದೆವು. ಅಂತೆಯೇ ಅವರು ರಾಜೀನಾಮೆ ನೀಡಿದ್ದರು” ಎಂದಿದ್ದಾರೆ.

ನಂತರ ಬೂಮ್ “ಅವರು ನಿಮ್ಮ ಮೇಲೆ ಹಲ್ಲೆ ನಡೆಸಿದ್ದರೆ ಎಂಬ ಪ್ರಶ್ನೆಗೆ, ಇಲ್ಲ ಅವರು ಹಲ್ಲೆ ಮಾಡಿಸಿರಲಿಲ್ಲ, ಏಕೆಂದರೆ ಅವರು ನಾಗರಿಕರಾಗಿದ್ದರು ಎಂಬ ಉತ್ತರ ನೀಡಿದ್ದಾರೆ. ಅವರು ಅಲ್ಲಿಂದ ನಿಧಾನವಾಗಿ ನಡೆದುಕೊಂಡು ಹೋದರು ಅಷ್ಟೇ ಎಂದು ಅವರು ತಿಳಿಸಿದ್ದಾರೆ.

4 ಜೆಎನ್‌ಯು ಮೇಲೆ ದಾಳಿ ಮಾಡಿದ್ದು ನಾನೇ ಎಂದು ಒಪ್ಪಿಕೊಂಡ ಅಕ್ಷತ್ ಅವಾಸ್ಥಿ ನಮ್ಮ ಸದಸ್ಯನಲ್ಲ: ಎಬಿವಿಪಿ

ಜನವರಿ 10ರಂದು ಇಂಡಿಯಾ ಟುಡೆ ಟಿವಿಯು ಸ್ಟಿಂಗ್ ಆಪರೇಷನ್ ನಡೆಸಿತು. ಆಗ ಎಬಿವಿಪಿ ಸದಸ್ಯ ಅಕ್ಷತ್ ಅವಾಸ್ಥಿ ಎಂಬುವವನು ನಾನು 20 ಜನರನ್ನು ಒಟ್ಟುಗೂಡಿಸಿ ಹಲ್ಲೆ ನಡೆಸಿದೆ, ಗಡ್ಡಬಿಟ್ಟಿದ್ದ ಕಾಶ್ಮೀರದವನ ಹಾಗೆ ಕಾಣುತ್ತಿದ್ದವನ ಮೇಲೆ ಹೊಡೆದು ಎಂದು ಒಪ್ಪಿಕೊಂಡಿದ್ದ.

ನಂತರ ಎಬಿವಿಪಿ ಯಥಾಪ್ರಕಾರ ಆತ ನಮ್ಮ ಸದಸ್ಯನಲ್ಲ ಎಂದು ಜಾರಿಕೊಂಡಿತ್ತು.

ಆಲ್ಟ್‌ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿತು. ಆಗ ಆತ ಹಲವಾರು ಬಿಜೆಪಿ/ಎಬಿವಿಪಿ ಕಾರ್ಯಕ್ರಮ ಪ್ರತಿಭಟನೆಗಳನ್ನು ಭಾಗವಹಿಸಿರುವ ಫೋಟೊ, ವಿಡಿಯೋಗಳನ್ನು ಹುಡುಕಿ ಪ್ರಕಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...