Homeಚಳವಳಿಅಂಬೇಡ್ಕರ್ ಪಟ - ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಅಂಬೇಡ್ಕರ್ ಪಟ – ತ್ರಿವರ್ಣ ಧ್ವಜ ಹಿಡಿದ ಮುಸ್ಲಿಂ ಮಹಿಳೆಯರು:ದೆಹಲಿಯಲ್ಲಿ ಹರ್ ಶಾಮ್ ಶಾಹೀನ್ ಬಾಗ್!

ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು. ಅಲ್ಲಿಂದ ಅದು ಒಂದೂವರೆ ಲಕ್ಷಕ್ಕೆ ಏರಿದೆ...

- Advertisement -
- Advertisement -

ರಾಮ್ ರಾಮ್, ಅಲ್ಲಾ ಹೋ ಅಕ್ಬರ್, ವಾಹೇ ಗುರೂ… ಹಿಂದು-ಮುಸ್ಲಿಮ್-ಸಿಖ್- ಕ್ರೈಸ್ತ ಧಾರ್ಮಿಕ ಜಯಕಾರಗಳು, ಜನಗಣಮನ… ಒಂದೇ ಚಪ್ಪರದಡಿ ಕುಳಿತ ಜನಸಮೂಹದಿಂದ ಮೊಳಗುತ್ತವೆ… ಪುರೋಹಿತರು ಹವನ ನೆರವೇರಿಸಿದರೆ ಮುಸಲ್ಮಾನರು ಭಕ್ತಿಯಿಂದ ಕೈ ಮುಗಿದು ಕುಳಿತಿರುತ್ತಾರೆ… ಖುರಾನ್, ಗೀತೆ, ಬೈಬಲ್ ಹಾಗೂ ಗುರು ಗ್ರಂಥಸಾಹೇಬದ ಪಠಣ ಅಕ್ಕಪಕ್ಕದಲ್ಲಿ ಜರುಗುತ್ತದೆ.. ದೇಶಭಕ್ತಿಯ ಘೋಷಣೆಗಳು, ಸಂವಿಧಾನದ ಮುನ್ನುಡಿಯ ವಾಚನ.. ಪ್ರತಿಭಟನೆಯ ಕವಿತೆಗಳು, ಚರ್ಚೆಗಳು, ಭಾಷಣಗಳು.. ಅಂಬೇಡ್ಕರ್- ಗಾಂಧೀ ಚಿತ್ರಪಟಗಳು, ಮೇಣದ ಬತ್ತಿ ಮೆರವಣಿಗೆಗಳು, ತಲೆಗಳಿಗೆ ಸುತ್ತಿಕೊಂಡ ತ್ರಿವರ್ಣ ಧ್ವಜಗಳು.. ಕತ್ತಲಲ್ಲಿ ತಾರೆಗಳಂತೆ ಒಮ್ಮೆಲೆ ಮಿನುಗುವ ಸಾವಿರಾರು ಮೊಬೈಲ್ ಫೋನುಗಳ ಬೆಳಕು… ದೆಹಲಿಯ ಶಾಹೀನ್ ಬಾಗ್ ನಲ್ಲಿ ನಿತ್ಯ ರಾತ್ರಿ ಕಾಣಬರುತ್ತಿರುವ ಮನತುಂಬುವ ಈ ನೋಟಗಳಿಗೆ, ಕಿವಿ ತುಂಬುವ ದನಿಗಳಿಗೆ ತಿಂಗಳು ತುಂಬಿದೆ.

ಎನ್.ಆರ್.ಸಿ-ಸಿಎಎ ವಿರೋಧಿಸಿ ನಡೆಯುತ್ತಿರುವ ಈ ಶಾಂತಿಯುತ ಪ್ರತಿಭಟನಾ ಸಭೆ ದಿನದಿಂದ ದಿನಕ್ಕೆ ದಾಖಲೆ ಸೃಷ್ಟಿಸತೊಡಗಿದೆ. ಇತಿಹಾಸ ರಚಿತವಾಗುತ್ತಿದೆ. ಮೊನ್ನೆ ಭಾನುವಾರ ಇಲ್ಲಿ ಸೇರಿದ್ದ ಜನಸಮೂಹದ ಅಂದಾಜು ಒಂದೂವರೆ ಲಕ್ಷ! ಪುಟ್ಟ ಮುಸ್ಲಿಮ್ ಬಾಲಕಿಯ ಕೈಯಲ್ಲಿನ ಭಿತ್ತಿಪತ್ರ ಇಲ್ಲಿನ ಪ್ರದರ್ಶನಕಾರರ ಮಾಡು ಇಲ್ಲವೇ ಮಡಿ ಹೋರಾಟದ ಮನೋಧರ್ಮವನ್ನು ಪ್ರತಿನಿಧಿಸುತ್ತದೆ.

ಜಹಾಂ ಪೈದಾ ಹುಯೋ ವಹಾಂ

ದಫನ್ ಭೀ ಹೋಂಗೇ (ಪಕ್ಕದಲ್ಲಿ ಭಾರತದ ಪುಟ್ಟ ಭೂಪಟ)

ಜೀತ್ ಗಯೇ ತೋ ವತನ್

ಮುಬಾರಕ್

ಹಾರ್ ಗಯೇ ತೋ ಕಫನ್

ಮುಬಾರಕ್

ನೋ ಎನ್.ಆರ್.ಸಿ.

ನೋ ಸಿಎಎ

(ಎಲ್ಲಿ ಜನಿಸಿದ್ದೇವೆಯೋ ಅಲ್ಲಿಯೇ

ಮಣ್ಣಾಗುತ್ತೇವೆ ಕೂಡ

ಗೆದ್ದರೆ ದೇಶ ದಕ್ಕುವ

ಅಭಿನಂದನೆ

ಸೋತರೆ ಸಾವಿನ

ಅಭಿನಂದನೆ)

ತ್ರಿವರ್ಣ ಧ್ವಜಗಳನ್ನು ಹಿಡಿದು ಬೀಸುತ್ತ ಆಜಾದಿ ಘೋಷಣೆಗಳ ಕೂಗುವ ಜನಸಮೂಹ. ತಾಪಮಾನ ಹತ್ತು ಡಿಗ್ರಿಗಳಿಗೆ ಕುಸಿದರೂ, ಚಳಿ ಮೈ ಮರಗಟ್ಟಿಸಿದರೂ ಜಗ್ಗದ ಜನಸಮೂಹ. ಶಾಹೀನ್ ಬಾಗ್ ನ ಸಾರ್ವಜನಿಕ ರಸ್ತೆಯಲ್ಲೇ ಎದ್ದು ನಿಂತಿರುವ ಪ್ರತಿಭಟನಾ ನೆಲೆಯಿದು. ನೆಲದ ಮೇಲೆ ಬಿಡಿಸಿದ ಸಿಎಎ-ಎನ್.ಆರ್.ಸಿ. ವಿರೋಧಿ ಬೃಹತ್ ಚಿತ್ರಗಳು… ಅವುಗಳ ಪಕ್ಕ ಉರಿಯುವ ಮೇಣದ ಬತ್ತಿಗಳು. ಬಾನೆತ್ತರದಲ್ಲಿ ಹಾರಾಡುವ ಕೇಸರಿ ಬಿಳಿ ಹಸಿರಿರುವ ಬಲೂನುಗಳು…

ಮರಗಟ್ಟಿಸುವ ಚಳಿ, ಮಳೆ, ಬೆದರಿಕೆಗಳಿಗೆ ಜಗ್ಗದ ಹೆಣ್ಣುಮಕ್ಕಳು ಇವರು. ನಮ್ಮ ಸಂವಿಧಾನ, ನಮ್ಮ ದೇಶ, ನಮ್ಮ ಉಳಿವಿಗಾಗಿ ಇಲ್ಲಿ ಸೇರುತ್ತಿದ್ದೇವೆ ಎನ್ನುತ್ತಾರೆ. ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯಕ್ಕೆ ನುಗ್ಗಿ ವಿದ್ಯಾರ್ಥಿ ಪ್ರತಿಭಟನಾಕಾರರನ್ನು ಮನಬಂದಂತೆ ಥಳಿಸಿ, ಗುಂಡು ಹಾರಿಸಿ ಪುಂಡಾಟ ನಡೆಸಿದ ಪೊಲೀಸರ ಹೇಯ ವರ್ತನೆಯ ನಂತರ ಆರಂಭವಾದ ಪ್ರತಿಫಟನೆಯಿದು. ಮೊದಲ ರಾತ್ರಿ ಇಲ್ಲಿ ಪ್ರತಿಭಟನೆಗೆ ಸೇರಿದವರು ಕೇವಲ ನಾಲ್ವರು ಮಹಿಳೆಯರು ಮತ್ತು ಆರು ಮಂದಿ ಪುರುಷರು. ಮರುದಿನದಿಂದ ಪುರುಷರು ಉದ್ಯೋಗಕ್ಕೆ ಹೋದರೂ ಮಹಿಳೆಯರ ಸಂಖ್ಯೆ ಏರುತ್ತಲೇ ಹೋಯಿತು.

ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಮುಖ್ಯ ಸಭಿಕರು. ಹಸುಗೂಸು ಮಕ್ಕಳಿಂದ ಹಿಡಿದು ವೃದ್ದೆಯರವರೆಗೆ ಎಲ್ಲ ವಯೋಮಾನದ ಮಹಿಳೆಯರು. ಹಸಿ ಬಾಣಂತಿಯರು… ಪುಟ್ಟ ಮಕ್ಕಳನ್ನು ಕರೆತಂದ ಅಮ್ಮಂದಿರು..ಯುವತಿಯರು… ವಿದ್ಯಾರ್ಥಿನಿಯರು… ಎಲ್ಲರೂ ನಿರ್ಭೀತರು… ಮನಸಿನ ಮಾತನ್ನು ಗಟ್ಟಿದನಿಯಲ್ಲಿ ಹೇಳುವವರು.. ತಾತ ಮುತ್ತಾತಂದಿರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಸತ್ತವರು…ಇದೇ ನಾವು ಹುಟ್ಟಿದ ಮಣ್ಣು….ಇಲ್ಲಿಯೇ ಮಣ್ಣು ಸೇರುತ್ತೇವೆ… ನಮಗೆ ನಾಗರಿಕತೆ ನಿರಾಕರಿಸುವುದು ಪರಮ ಅನ್ಯಾಯ… ಈ ಕಾನೂನು ವಾಪಸಾಗುವ ತನಕ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎನ್ನುವವರು… ಮಧ್ಯರಾತ್ರಿ ಸಮೀಪಿಸುತ್ತಿದ್ದಂತೆ ಜನಸಮೂಹ ಹಿಗ್ಗುತ್ತದೆಯೇ ವಿನಾ ಕುಗ್ಗುವುದಿಲ್ಲ.

ಟ್ರಕ್ಕುಗಳಲ್ಲಿ ಚಹಾ, ಹಾಲು, ಊಟ ಬರುತ್ತದೆ.. ಅಜ್ಞಾತ ಹಿತೈಷಿಗಳ ಕೊಡುಗೆ. ಸ್ಥಳೀಯ ರಾಜಕಾರಣಿಗಳನ್ನು ದೂರ ಇರಿಸಲಾಗಿದೆ.

ಗುಂಪು ಹತ್ಯೆಗಳಿಗೆ ಮುಸಲ್ಮಾನರು ಬಲಿಯಾದಾಗ ಬೀದಿಗಿಳಿಯದ ಮುಸಲ್ಮಾನ ಹೆಣ್ಣುಮಕ್ಕಳು ಈಗ ಪ್ರತಿಭಟನೆಯ ಕಣಕ್ಕೆ ಇಳಿದಿದ್ದಾರೆ… ಹಿಮ್ಮೆಟ್ಟುವುದಿಲ್ಲ ಎನ್ನುವ ದೃಢನಿಶ್ಚಯ ಅವರದು. ಬುರ್ಖಾಗಳನ್ನು ಹಿಂದಿಟ್ಟು ಬಂದಿದ್ದಾರೆ… ಕಳೆದು ಹೋಗಿದ್ದ ದನಿಗಳನ್ನು ಮರಳಿ ಪಡೆದು ಬಂದಿದ್ದಾರೆ… ನಮ್ಮ ಸಂವಿಧಾನದ ಅಳಿವು ಉಳಿವಿನ ಪ್ರಶ್ನೆಯಿದು, ನಮ್ಮ ಮಕ್ಕಳು ಮೊಮ್ಮಕ್ಕಳ ಭವಿಷ್ಯದ ಪ್ರಶ್ನೆ… ನಮ್ಮ ಅಪ್ಪಂದಿರು… ತಾತಂದಿರು ಕೂಡ ಈ ಮಣ್ಣಿಗಾಗಿ ತ್ಯಾಗ ಮಾಡಿದ್ದಾರೆ.. ನಮ್ಮನ್ನೇಕೆ ಹೊರದಬ್ಬಲಾಗುತ್ತಿದೆ… ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಅರ್ಥವೇನು ಎಂಬ ನೋವಿನ ಕಣ್ಣೀರು ಕೆನ್ನೆಗಿಳಿಯುತ್ತವೆ… ಹಿಂದುಸ್ತಾನ್ ಎಂಬುದು ಗುಲದಸ್ತಾನ್… ಈ ಹೂಗೊಂಚಲಿನಲ್ಲಿ ಬಗೆಬಗೆಯ ಹೂವುಗಳು… ಪರಿಮಳಗಳು ಇಲ್ಲದಿದ್ದರೆ ಹೂಗೊಂಚಲಿನ ವಿಶೇಷತೆಯೇನು ಉಳಿಯುತ್ತದೆ? ಮುಸ್ಲಿಂ ಮಹಿಳೆಯರ ಕಷ್ಟ ಕಣ್ಣೀರು ಅಳಿಸಲೆಂದು ತ್ರಿವಳಿ ತಲಾಖ್ ರದ್ದುಗೊಳಿಸಿ ಕಾನೂನು ತಂದ ನರೇಂದ್ರ ಮೋದಿಯವರಿಗೆ ನಮ್ಮ ಈಗಿನ ಸಂಕಟ ಯಾಕೆ ಅರ್ಥವಾಗುತ್ತಿಲ್ಲ? ನಮಗೆ ಗುಂಡೇಟು, ಲಾಠಿಯೇಟು ಬಿದ್ದರೂ ನಾವು ಲೆಕ್ಕಿಸುವುದಿಲ್ಲ ಎನ್ನುತ್ತಾರೆ.

ಈ ಪ್ರತಿಭಟನೆ ಈಗಾಗಲೆ ಕಣ್ಣುಗಳನ್ನು ಕೆಂಪಾಗಿಸಿದೆ… ದಮನದ ಸಿಡಿಲು ಯಾವ ಕ್ಷಣದಲ್ಲಿ ಬಡಿಯುವುದೋ ಬಲ್ಲವರಾರು… ಆದರೆ ಈ ಮಹಿಳೆಯರ ಮನೋನಿಶ್ಚಯ ದಮನಗಳ ಬಿಸಿಗೆ ಕರಗುವಂತಹುದಲ್ಲ. ಲಕ್ಷ ವಾಹನಗಳು ಸಂಚರಿಸುವ ಈ ರಸ್ತೆಯನ್ನು ಪುನಃ ಸಂಚಾರಕ್ಕೆ ತೆರೆಯಬೇಕೆಂಬ ಅಹವಾಲು ಹೈಕೋರ್ಟ್ ಮೆಟ್ಟಿಲೇರಿದೆ. ಬಲಪ್ರಯೋಗ ನಡೆಸದೆ ಈ ಕ್ರಮ ಜರುಗಿಸುವಂತೆ ನ್ಯಾಯಾಲಯ ಹೇಳಿದೆ.

ಕೈಫಿ ಆಜ್ಮಿಯವರ ಉಠ್ ಮೇರೀ ಜಾನ್.. ಕವಿತೆಯ ಕೆಲ ಸಾಲುಗಳು…

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ

ಖಲ್ಬ್ ಎ ಮಾಹೋಲ್ ಮೇ ಲರ್ಜಾ ಶರರ್ ಎ ಜಂಗ್ ಹೈ ಆಜ್

ಹೋಸಲೇ ವಕ್ತ್ ಕೇ ಔರ್ ಜೀಸ್ತ್ ಕೆ ಯಕ್-ರಂಗ್ ಹೈ ಆಜ್

ಅಬಾಗೀನೋ ಮೇ ತಪಾಂ ವಲ್ವಲಾ-ಎ-ಸಂಗ್ ಹೈ ಆಜ್

ಹುಸ್ನ್ ಔರ್ ಇಶ್ಕ್ ಹಮ್ ಆವಾಜ್ ಓ ಹಮ್- ಆಹಂಗ್ ಹೈ ಆಜ್

ಜಿಸ್ ಮೇಂ ಜಲತಾ ಹೂಂ ಉಸೀ ಆಗ ಮೇ ಜಲನಾ ಹೈ ತುಝೇ

ಉಠ್ ಮೇರೀ ಜಾನ್ ಮೇರೇ ಸಾಥ್ ಹೀ ಚಲನಾ ಹೈ ತುಝೇ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...