Homeಕರ್ನಾಟಕಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ಅಡ್ಯಾರ್‌ನಲ್ಲಿ ಮೊಳಗಿದ ಅಜಾದಿ ಘೋಷಣೆ: ಮಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧ ಭಾರೀ ಶಕ್ತಿ ಪ್ರದರ್ಶನ..

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ

- Advertisement -
- Advertisement -

CAA, NRC ವಿರುದ್ಧ ದೆಹಲಿಯ ಶಾಹೀನ್‌ ಭಾಗ್‌ನಲ್ಲಿ ಲಕ್ಷಾಂತರ ಜನರು ತಿಂಗಳುಗಟ್ಟಲೇ ಹೋರಾಟ ನಡೆಸಿ ದಾಖಲೆ ಸೃಷ್ಟಿಸಿದ್ದ ಬೆನ್ನಲ್ಲೇ ಕರ್ನಾಟಕದ ಮಂಗಳೂರಿನಲ್ಲಿಯೂ ಮತ್ತೊಂದು ದಾಖಲೆ ಸೃಷ್ಟಿಯಾಗಿದೆ. ಅಡ್ಯಾರ್‌ ಕಣ್ಣೂರಿನಲ್ಲಿ ನಿನ್ನೆ ನಡೆದ ಭಾರೀ ಶಕ್ತಿ ಪ್ರದರ್ಶನವೂ ಸಿಎಎ, ಎನ್‌ಪಿಆರ್‌ ಮತ್ತು ಎನ್‌ಆರ್‌ಸಿ ಹಿಂತೆಗೆದುಕೊಳ್ಳಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಶಹೀದ್‌ ಅಬ್ದುಲ್‌ ಜಲೀಲ್‌ ಕಂದಕ್‌ ಮತ್ತು ಕುದ್ರೋಳಿ ವೇದಿಕೆ ಎಂದು ಹೆಸರಿಟ್ಟ ಸಮಾವೇಶಕ್ಕೆ ದ.ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್‌ ಸೆಂಟ್ರಲ್‌ ಕಮಿಟಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ನೇತೃತ್ವ ವಹಿಸಿದ್ದವು.

ಮೂರು ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ ಈ ಸಮಾವೇಶದಲ್ಲಿ ಮುಖ್ಯವಾಗಿ ಡಿಸೆಂಬರ್‌ 19ರಂದು ನಡೆದ ಗೋಲಿಬಾರ್‌ ಅನ್ನು ಖಂಡತುಂಡವಾಗಿ ಖಂಡಿಸಲಾಯಿತ್ತಲ್ಲದೇ, ಘಟನೆಯಲ್ಲಿ ಭಾಗವಹಿಸಿದ ಪೊಲೀಸ್‌ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು. ಜೊತೆಗೆ ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು.

ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಮಾನವ ಹಕ್ಕು ಹೋರಾಟಗಾರ ಹರ್ಷಮಂದರ್‌ ಮಾತನಾಡಿ “ನಾವೆಲ್ಲರೂ ಹುಟ್ಟಿನಿಂದಲೇ ಈ ದೇಶದ ಪೌರತ್ವ ಪಡೆದಿದ್ದೇವೆ. ಆದರೆ ಮುಸ್ಲಿಮರನ್ನು, ದಲಿತ, ಆದಿವಾಸಿಗಳನ್ನು ಗುರಿಯಾಗಿಸಿ ಕೇಂದ್ರ ತರುತ್ತಿರುವ ಹೊಸ ಕಾಯ್ದೆಯನ್ನು ಖಂಡತುಂಡವಾಗಿ ಖಂಡಿಸುತ್ತೇನೆ. ನನ್ನ ಹೆಸರನ್ನು ಮುಸ್ಲಿಂ ಎಂದು ಬರೆಸುವುದಲ್ಲದೇ ಯಾವುದೇ ದಾಖಲೆ ತೋರಿಸುವುದಿಲ್ಲ. ಬಂಧನ ಕೇಂದ್ರಕ್ಕೂ ಹೋಗಲು ಸಿದ್ದನಿದ್ದೇನೆ ಎಂದು ಘೋಷಿಸಿದರು.

ಖ್ಯಾತ ಚಿಂತಕರಾದ ಶಿವಸುಂದರ್‌ ಮಾತನಾಡಿ, ಈ ದುಷ್ಟ, ಜನವಿರೋಧಿ ಕಾನೂನನ್ನು ತಡೆಯಲು ವಿರೋಧ ಪಕ್ಷಗಳು ಒಟ್ಟಾಗಬೇಕು. ಬರುವ ಅಧಿವೇಶನದಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎನ್‌ಪಿಆರ್‌ ಜಾರಿಗೊಳಿಸದಂತೆ ಪ್ರತಿಪಕ್ಷಗಳು ನಿರ್ಣಯ ಮಂಡಿಸಬೇಕು. ನಾಡಿನ ಎಲ್ಲಾ ಧರ್ಮದ ದೇಶಪ್ರೇಮಿ ಜನರು ಬೀದಿಯಲ್ಲಿ ನಿರಂತರ ಪ್ರತಿರೋಧ ತೋರಬೇಕು ಎಂದು ಕರೆ ನೀಡಿದರು.

ಸರ್ಕಾರದ ದುರಾಡಳಿತವನ್ನು ಜನ ಒಂದು ಮಟ್ಟದವರೆಗೆ ಮಾತ್ರ ಸಹಿಸಿಕೊಳ್ಳಬಹುದು. ಅದು ವಿಪರೀತಕ್ಕೆ ಮಟ್ಟ ತಲುಪಿದಾಗಿ ತಿರುಗಿ ಬೀಳುವುದು ಮಾನವ ಸಹಜ ಸ್ವಭಾವ. ಅದೇ ರೀತಿಯಲ್ಲಿ ಡಿಮಾನಿಟೈಜೇಸನ್‌, ಜಿ.ಎಸ್‌.ಟಿ, ನಿರುದ್ಯೋಗ ಏರಿಕೆ ಸೇರಿದಂತೆ ಹಲವು ಜನವಿರೋಧಿ ಕ್ರಮಗಳನ್ನು ಜನತೆ ಸಹಿಸಿಕೊಂಡಿತ್ತು. ಆದರೆ ಯಾವಾಗ ಪೌರತ್ವಕ್ಕೆ ಕೈ ಹಾಕಿತೋ ಅಲ್ಲಿಗೆ ಮೋದಿ ಸರ್ಕಾರದ ಕಥೆ ಮುಗಿದಂತೆ ಆಗಿದೆ. ಜನತೆ ಈಗ ಸಿಡಿದೆದ್ದಿದ್ದಾರೆ. ಈ ಕಾಯ್ದೆಗಳು ವಾಪಸ್‌ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಘೋಷಿಸಿದ್ದಾರೆ.

ಚಿಂತಕ ಸುಧೀರ್‌ ಕುಮಾರ್‌ ಮುರೋಳಿ, ಎಸ್‌ಡಿಪಿಐ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಗೋಲಿಬಾರ್‌ಗೆ ಕಾರಣವಾದ ಮಂಗಳೂರು ಕಮಿಷನರ್‌ ಹರ್ಷಾ ವಿರುದ್ಧ ಟೀಕೆಗಳ ಸುರಿಮಳೆಯಾಯಿತು.

ಎಲ್ಲರ ಕೈಯಲ್ಲಿಯೂ ತ್ರಿವರ್ಣ ಧ್ವಜಗಳು ಹಾರಾಡುತ್ತಿದ್ದವು. ಅದೇ ರೀತಿಯಲ್ಲಿ ದ್ರೋಣ್‌ ಕ್ಯಾಮರಾಗಳು ಎಲ್ಲಾ ದೃಶ್ಯಗಳನ್ನು ಸೆರೆಹಿಡಿಯುತ್ತಿದ್ದವು. ಅಡ್ಯಾರ್‌ ಭವನದ ಉದ್ದಗಲಕ್ಕೂ ಭಾರೀ ಜನಸ್ತೋಮ ನೆರೆದಿದ್ದಲ್ಲದೇ ಅಜಾದಿ ಘೋಷಣೆಗಳು ಮುಗಿಲು ಮುಟ್ಟಿದ್ದವು.

ದೇಶದ ಗಮನ ಸೆಳೆದಿರುವ ಅಡ್ಯಾರ್‌ ಸಮಾವೇಶವೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಎಲ್ಲೆಲ್ಲಿಯೂ ಜನಸಾಗರದ ಫೋಟೊ, ವಿಡಿಯೋಗಳು ತುಂಬಿಹೋಗಿವೆ.

ಪುಟ್ಟ ಮಕ್ಕಳು ಪೊಲೀಸರಿಗೆ ಗುಲಾಬಿ ಹೂ ನೀಡುವ ಮೂಲಕ ಗೋಲಿಬಾರ್‌ ಅನ್ನು ಸೂಚ್ಯವಾಗಿ ಟೀಕಿಸಲಾಯಿತು. ಸಾವಿರಾರು ಸ್ವಯಂ ಸೇವಕರು ಟ್ರಾಫಿಕ್‌ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದರು. ಸಮಾವೇಶಕ್ಕೂ ಮುನ್ನ ಬೈಕ್‌ ರ್‍ಯಾಲಿ ಗಮನ ಸೆಳೆಯಿತು. ಒಟ್ಟಿನಲ್ಲಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಭಾರೀ ಹೋರಾಟಕ್ಕೆ ಕರ್ನಾಟಕವೂ ಸಹ ಸಾಕ್ಷಿಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟೆಲ್ಲಾ ಆದರೂ ಮುಖ್ಯ ಪತ್ರಿಕೆಗಳಾದ ಉದಯವಾಣಿ ಮತ್ತು ಇನ್ನಿತರ ಪತ್ರಿಕೆಗಳು ಇದನ್ನು ತನ್ನ ಪತ್ರಿಕೆಯಲ್ಲಿ ಪ್ರಕಟಿಸಲೇ ಇಲ್ಲ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....