Homeಚಳವಳಿಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ನಿವೃತ್ತಿಯಾಗಿ ಒಂದು ವಾರ ಕಳೆದರೂ ಕೇಂದ್ರ ಸರ್ಕಾರ ಆ ಹುದ್ದೆಗೆ ಅರ್ಹ ಮುಖ್ಯ ಆಯುಕ್ತರನ್ನು ನೇಮಕ ಮಾಡಲು ಮುಂದಾಗಿಲ್ಲ ಇದರಿಂದ ಮುಖ್ಯಸ್ಥರಿಲ್ಲದ ಆಯೋಗದಲ್ಲಿ ಸಿಬ್ಬಂದಿಯ ಕೊರತೆ ಎದುರಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಿರುವ  34 ಸಾವಿರ ಮನವಿಗಳು ಮತ್ತು ದೂರುಗಳ ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲದಂತೆ ಆಗಿದೆ ಎಂದು ಸೆಟಾರ್ಕ್ ನಾಗರಿಕ ಸಂಘಟೆಯ ಅಧ್ಯಕ್ಷೆ ಸುಧಾ ಭಾರದ್ವಾಜ್ ಹೇಳಿದ್ದಾರೆ.

ರಾಷ್ಟ್ರೀಯ ಮಾಹಿತಿ ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರು ಸೇರಿ 11 ಮಂದಿ ಆಯುಕ್ತರು ಇರಬೇಕು. ಆದರೆ ಆಯೋಗದಲ್ಲಿ ಕೇವಲ ಐದು ಮಂದಿ ಆಯುಕ್ತರು ಮಾತ್ರ ಇದ್ದು, ಉಳಿದ 6 ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ಯಾವುದೇ ಹೊಸ ಹುದ್ದೆಗಳ ನೇಮಕದ ಗೈರುಹಾಜರಿ ಎದ್ದುಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಜನವರಿ 11ರಂದು ನಿವೃತ್ತಿ ಹೊಂದಿದರು. ಇದು ಸಹಜ ಮತ್ತು ಸಾಮಾನ್ಯ ನಿವೃತ್ತಿ. ಭಾರ್ಗವ ಅವರಿಗೆ ನಿವೃತ್ತಿ ದಿನ ಗೊತ್ತಾದ ಸಮಯದಿಂದ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನೇಮಕದ ಬಗ್ಗೆ ಚಿಂತನೆ ಮಾಡಿದರು. ಆದರೂ ಕೇಂದ್ರ ಸರ್ಕಾರ ಮುಖ್ಯ ಆಯುಕ್ತರನ್ನು ನೇಮಕ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.

ಸುಧಾ ಭಾರದ್ವಾಜ್

ದೇಶಾದ್ಯಂತ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅಂಜಲಿ ಭಾರದ್ವಾಜ್ ಮತ್ತು ಲೋಕೇಶ್ ಬಾತ್ರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2019ರ ಫೆಬ್ರವರಿಯಲ್ಲಿ ಮಾಹಿತಿ ಆಯೋಗದಲ್ಲಿ ಖಾಲಿರುವ ಆಯುಕ್ತರ ಹುದ್ದೆಗಳನ್ನು ವಿಳಂಬ ಮಾಡದೆ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ಒಂದೆರಡು ತಿಮಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ನಾಲ್ಕು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಜಾಹಿರಾತು ನೀಡಿತು. ಆದರೆ ಇದುವರೆಗೂ ಒಂದು ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಭಾರದ್ವಾಜ್ ದೂರಿದ್ದಾರೆ.

ಸೆಪ್ಟೆಂಬರ್ 19, 2019ರಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದ್ದು ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ಈ ಸಂಬಂಧ 2019 ಡಿಸೆಂಬರ್ 16ರ ಆದೇಶದಲ್ಲಿ ಸುಪ್ರೀಂಕೊರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿ ಕೂಡಲೇ ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನ ಸಮಿತಿ ರಚಿಸುವಂತೆಯೂ ಮತ್ತು ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಮತ್ತು ಮೂರು ತಿಂಗಳೊಳಗೆ ನೇಮಕಾರಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಎಂದು ಸೂಚಿಸಿತು. ಆದರೆ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ ಎಂದು ದೂರಲಾಗಿದೆ.

2014 ರಿಂದ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ನಿವೃತ್ತಿ ಹೊಂದುತ್ತಿದ್ದು 9 ತಿಂಗಳು ಕಳೆದರೂ ಹೊಸ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಬಂದಿದೆ. ಸಾರ್ವಜನಿಕರು ನ್ಯಾಯಾಲಯಕ್ಕೆ ಹೋಗಿ ಖಾಲಿ ಹುದ್ದೆಗಳ ನೇಮಕ ಸಂಬಂಧ ಭರ್ತಿ ಮಾಡುವಂತೆ ಒತ್ತಾಯಿಸುತ್ತಿದ್ದರೂ ವಿಳಂಬ ಮಾಡುತ್ತಲೇ ಬರುತ್ತಿದೆ ಎಂದು ಭಾರದ್ವಾಜ್ ಮತ್ತು ಅಮಿತವ್ ಜೋಹ್ರಾ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಾಹಿತಿ ಆಯೋಗದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲಸ ಮೇಲೆ ಪರಿಣಾಮ ಬೀರುತ್ತಿದೆ ಎಂದು ಲೋಕೇಶ್ ಬಾತ್ರ ಹೇಳಿದ್ದಾರೆ. ಆಯೋಗದಲ್ಲಿ 34,347 ಪ್ರಕರಣಗಳು ವಿಲೇಯಾಗದೆ ಬಾಕಿ ಉಳಿದಿವೆ ಎಂದು ಜನವರಿ 15ರಂದು ಸಿಐಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಭಾರ್ಗವ ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಆದರೆ ಕೇಂದ್ರ ಸರ್ಕಾರ ಸಿಐಸಿ ಅವರನ್ನು ನೇಮಕ ಮಾಡುವ ಸಂಬಂಧ ಪಾರದರ್ಶಕತೆಗೆ ಆದ್ಯತೆ ನೀಡುತ್ತಿಲ್ಲ ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ಕೊಲ್ಲುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...