Homeಚಳವಳಿಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ, ಬಾಕಿ ಉಳಿದಿವೆ 34000 ಪ್ರಕರಣಗಳು: ಕ್ರಮ ಕೈಗೊಳ್ಳದ ಕೇಂದ್ರ

- Advertisement -
- Advertisement -

ರಾಷ್ಟ್ರೀಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ನಿವೃತ್ತಿಯಾಗಿ ಒಂದು ವಾರ ಕಳೆದರೂ ಕೇಂದ್ರ ಸರ್ಕಾರ ಆ ಹುದ್ದೆಗೆ ಅರ್ಹ ಮುಖ್ಯ ಆಯುಕ್ತರನ್ನು ನೇಮಕ ಮಾಡಲು ಮುಂದಾಗಿಲ್ಲ ಇದರಿಂದ ಮುಖ್ಯಸ್ಥರಿಲ್ಲದ ಆಯೋಗದಲ್ಲಿ ಸಿಬ್ಬಂದಿಯ ಕೊರತೆ ಎದುರಾಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಸಾರ್ವಜನಿಕರು ರಾಷ್ಟ್ರೀಯ ಮಾಹಿತಿ ಆಯೋಗದ ಮುಂದೆ ಸಲ್ಲಿಸಿರುವ  34 ಸಾವಿರ ಮನವಿಗಳು ಮತ್ತು ದೂರುಗಳ ಬಾಕಿ ಇದ್ದು ಅವುಗಳನ್ನು ವಿಲೇವಾರಿ ಮಾಡಲು ಯಾರೂ ಇಲ್ಲದಂತೆ ಆಗಿದೆ ಎಂದು ಸೆಟಾರ್ಕ್ ನಾಗರಿಕ ಸಂಘಟೆಯ ಅಧ್ಯಕ್ಷೆ ಸುಧಾ ಭಾರದ್ವಾಜ್ ಹೇಳಿದ್ದಾರೆ.

ರಾಷ್ಟ್ರೀಯ ಮಾಹಿತಿ ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರು ಸೇರಿ 11 ಮಂದಿ ಆಯುಕ್ತರು ಇರಬೇಕು. ಆದರೆ ಆಯೋಗದಲ್ಲಿ ಕೇವಲ ಐದು ಮಂದಿ ಆಯುಕ್ತರು ಮಾತ್ರ ಇದ್ದು, ಉಳಿದ 6 ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ಯಾವುದೇ ಹೊಸ ಹುದ್ದೆಗಳ ನೇಮಕದ ಗೈರುಹಾಜರಿ ಎದ್ದುಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಮುಖ್ಯ ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಜನವರಿ 11ರಂದು ನಿವೃತ್ತಿ ಹೊಂದಿದರು. ಇದು ಸಹಜ ಮತ್ತು ಸಾಮಾನ್ಯ ನಿವೃತ್ತಿ. ಭಾರ್ಗವ ಅವರಿಗೆ ನಿವೃತ್ತಿ ದಿನ ಗೊತ್ತಾದ ಸಮಯದಿಂದ ಆಯೋಗಕ್ಕೆ ಹೊಸ ಅಧ್ಯಕ್ಷರನ್ನು ನೇಮಕದ ಬಗ್ಗೆ ಚಿಂತನೆ ಮಾಡಿದರು. ಆದರೂ ಕೇಂದ್ರ ಸರ್ಕಾರ ಮುಖ್ಯ ಆಯುಕ್ತರನ್ನು ನೇಮಕ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಆಯೋಗದಲ್ಲಿ ಮುಖ್ಯ ಮಾಹಿತಿ ಆಯುಕ್ತರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದ್ದಾರೆ.

ಸುಧಾ ಭಾರದ್ವಾಜ್

ದೇಶಾದ್ಯಂತ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅಂಜಲಿ ಭಾರದ್ವಾಜ್ ಮತ್ತು ಲೋಕೇಶ್ ಬಾತ್ರ ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2019ರ ಫೆಬ್ರವರಿಯಲ್ಲಿ ಮಾಹಿತಿ ಆಯೋಗದಲ್ಲಿ ಖಾಲಿರುವ ಆಯುಕ್ತರ ಹುದ್ದೆಗಳನ್ನು ವಿಳಂಬ ಮಾಡದೆ ಭರ್ತಿ ಮಾಡಬೇಕು. ನೇಮಕಾತಿ ಪ್ರಕ್ರಿಯೆಯನ್ನು ಒಂದೆರಡು ತಿಮಗಳಲ್ಲಿ ಪೂರ್ಣಗೊಳಿಸಬೇಕೆಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ನಾಲ್ಕು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಜಾಹಿರಾತು ನೀಡಿತು. ಆದರೆ ಇದುವರೆಗೂ ಒಂದು ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಭಾರದ್ವಾಜ್ ದೂರಿದ್ದಾರೆ.

ಸೆಪ್ಟೆಂಬರ್ 19, 2019ರಂದು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದ್ದು ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ಈ ಸಂಬಂಧ 2019 ಡಿಸೆಂಬರ್ 16ರ ಆದೇಶದಲ್ಲಿ ಸುಪ್ರೀಂಕೊರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿ ಕೂಡಲೇ ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನ ಸಮಿತಿ ರಚಿಸುವಂತೆಯೂ ಮತ್ತು ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಮತ್ತು ಮೂರು ತಿಂಗಳೊಳಗೆ ನೇಮಕಾರಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಬೇಕು ಎಂದು ಸೂಚಿಸಿತು. ಆದರೆ ಈವರೆಗೆ ಯಾವುದೇ ಪ್ರಕ್ರಿಯೆಗಳು ನಡೆದಿಲ್ಲ ಎಂದು ದೂರಲಾಗಿದೆ.

2014 ರಿಂದ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ನಿವೃತ್ತಿ ಹೊಂದುತ್ತಿದ್ದು 9 ತಿಂಗಳು ಕಳೆದರೂ ಹೊಸ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡಲು ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಬಂದಿದೆ. ಸಾರ್ವಜನಿಕರು ನ್ಯಾಯಾಲಯಕ್ಕೆ ಹೋಗಿ ಖಾಲಿ ಹುದ್ದೆಗಳ ನೇಮಕ ಸಂಬಂಧ ಭರ್ತಿ ಮಾಡುವಂತೆ ಒತ್ತಾಯಿಸುತ್ತಿದ್ದರೂ ವಿಳಂಬ ಮಾಡುತ್ತಲೇ ಬರುತ್ತಿದೆ ಎಂದು ಭಾರದ್ವಾಜ್ ಮತ್ತು ಅಮಿತವ್ ಜೋಹ್ರಾ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಾಹಿತಿ ಆಯೋಗದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಕೆಲಸ ಮೇಲೆ ಪರಿಣಾಮ ಬೀರುತ್ತಿದೆ ಎಂದು ಲೋಕೇಶ್ ಬಾತ್ರ ಹೇಳಿದ್ದಾರೆ. ಆಯೋಗದಲ್ಲಿ 34,347 ಪ್ರಕರಣಗಳು ವಿಲೇಯಾಗದೆ ಬಾಕಿ ಉಳಿದಿವೆ ಎಂದು ಜನವರಿ 15ರಂದು ಸಿಐಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಭಾರ್ಗವ ನಿವೃತ್ತಿಯಾದ ನಂತರ ಮುಖ್ಯ ಮಾಹಿತಿ ಆಯುಕ್ತರ ಹುದ್ದೆ ಖಾಲಿ ಇದೆ. ಆದರೆ ಕೇಂದ್ರ ಸರ್ಕಾರ ಸಿಐಸಿ ಅವರನ್ನು ನೇಮಕ ಮಾಡುವ ಸಂಬಂಧ ಪಾರದರ್ಶಕತೆಗೆ ಆದ್ಯತೆ ನೀಡುತ್ತಿಲ್ಲ ಮತ್ತು ಮಾಹಿತಿ ಹಕ್ಕು ಕಾಯ್ದೆಯನ್ನು ಕೊಲ್ಲುತ್ತಿದೆ ಎಂದು ಆರ್‌ಟಿಐ ಕಾರ್ಯಕರ್ತರು ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...