Homeಸಿನಿಮಾಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ...

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ಪಟ್ಟಿಯಿಂದ ಧೋನಿ ಹೊರಕ್ಕೆ..

- Advertisement -
- Advertisement -

ಭಾರತದ ಮಾಜಿ ಕ್ಯಾಪ್ಟನ್‌, ಮೊದಲ ಟಿ20 ಪ್ರಶಸ್ತಿ ಗೆದ್ದುಕೊಟ್ಟ, ಎರಡನೇ ವಿಶ್ವಕಪ್‌ ಗೆದ್ದುಕೊಟ್ಟ, ಲಕ್ಷಾಂತರ ಅಭಿಮಾನಿಗಳ ಪಾಲಿನ ಹೆಲಿಕ್ಯಾಪ್ಟರ್‌ ಶೂಟರ್‌ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನ ಮುಗಿಯಿತೆ ಎಂಬ ಪ್ರಶ್ನೆಗಳು ಇಂದು ಜೋರಾಗಿ ಕೇಳಿಬಂದಿವೆ. ಇದಕ್ಕೆ ಕಾರಣ ಅವರನ್ನು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಋತುವಿಗೆ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದ್ದು ಮಹತ್ವದ ಹೆಜ್ಜೆಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಟ್ಟಿದೆ. ಅವರು ಕಳೆದ ಋತುವಿನಲ್ಲಿ ’ಎ’ ಗ್ರೇಡ್‌ನಲ್ಲಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಮೂವರು ಉನ್ನತ ವಿಭಾಗದಲ್ಲಿ (ಎ +) 7 ಕೋಟಿಗಳಿಂದ ವೇತನವನ್ನು ಪಡೆಯುತ್ತಾರೆ.

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಧೋನಿ ಫಾರ್ಮ್‌ ಚೆನ್ನಾಗಿಲ್ಲ. ಇದರಿಮದ ಭಾರತೀಯ ತಂಡದಲ್ಲಿ ಧೋನಿಯ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಕಂಡುಬಂದಿವೆ.

ಎಂಎಸ್ ಧೋನಿ 50 ಓವರ್ ಮತ್ತು 20 ಓವರ್‌ಗಳ ವಿಶ್ವಕಪ್ ಗೆದ್ದ ಏಕೈಕ ಅಂತರರಾಷ್ಟ್ರೀಯ ನಾಯಕ. ಅವರು 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಪ್ರಶಸ್ತಿಗೆ ದಕ್ಕಿಸಿಕೊಟ್ಟಿದ್ದರು. ಭಾರತಕ್ಕಾಗಿ 90 ಟೆಸ್ಟ್ ಪಂದ್ಯಗಳಲ್ಲಿ ಧೋನಿ 4876 ರನ್ ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 50.57 ರ ಸರಾಸರಿಯಲ್ಲಿ ಅವರ 10,773 ರನ್ ಗಳಿಸುವಿಕೆಯು ಭಾರತದ ಅತ್ಯುತ್ತಮ 50 ಓವರ್‌ಗಳ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. 98 ಟಿ20 ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ.

“ಈ ಐತಿಹಾಸಿಕ ನಾಯಕ ಶೀಘ್ರದಲ್ಲೇ ತನ್ನ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಬಹುದು ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಏಕೆಂದರೆ ಅವರು ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌‌ನಲ್ಲಿದ್ದಾರೆ” ಎಂದು ಮುಖ್ಯ ತರಬೇತುದಾರ ರವಿಶಾಸ್ತ್ರಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದಲ್ಲಿ ದೈತ್ಯ ದಾಪುಗಾಲಿಟ್ಟಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ವೇಗದ ಬೌಲರ್‌ ಆಗಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರು ಕೊಹ್ಲಿ ಮತ್ತು ರೋಹಿತ್ ಅವರ ಸಮನಾದ ಉನ್ನತ ಶ್ರೇಣಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರೂ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರನ್ನು ಗ್ರೇಡ್ ಬಿ ಯಿಂದ ಗ್ರೇಡ್ ಎ ಆಗಿ ಬಡ್ತಿ ನೀಡಲಾಗಿದೆ.

ನಾಲ್ಕು ವಿಭಾಗಗಳಾಗಿ 27 ಆಟಗಾರರನ್ನು ವಿಂಗಡಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಅವರು ಎ + ವಿಭಾಗದಲ್ಲಿರುವ ಮೂವರಾಗಿದ್ದಾರೆ.

ಧೋನಿಯೊಂದಿಗೆ ಅಂಬಾಟಿ ರಾಯುಡು, ಖಲೀಲ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಒಪ್ಪಂದದಿಂದ ಕೈಬಿಡಲಾಗಿದೆ. ಟೆಸ್ಟ್ ಓಪನರ್ ಮಾಯಾಂಕ್ ಅಗರ್ವಾಲ್ ಅವರು ವರ್ಗ ಬಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನವದೀಪ್ ಸೈನಿ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸಿ ವರ್ಗದಲ್ಲಿ ಸೇರಿಸಲಾಗಿದೆ.

ಮುಂಬರುವ ‌ಋತುವಿನಲ್ಲಿ ಬಿಸಿಸಿಐ ಒಪ್ಪಂದವು ಹೀಗಿದೆ:

ವರ್ಗ ಎ: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್

ವರ್ಗ ಬಿ: ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್.

ವರ್ಗ ಸಿ: ಕೇದಾರ ಜಾಧವ್, ನವದೀಪ್ ಸೈನಿ, ದೀಪಕ್ ಚಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...