Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...