Homeಕರ್ನಾಟಕನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ...

ನಿಲ್ಲದ CAA, NRC ವಿರೋಧಿ ಪ್ರತಿಭಟನೆ: ತುಮಕೂರಿನಲ್ಲಿ ಮಹಿಳೆಯರಿಂದ ಮೊಳಗಿದ ಅಜಾದಿ ಘೋಷಣೆ, ರಾಷ್ಟ್ರಗೀತೆ, ಹಿಂದೂಸ್ತಾನ ಹಮಾರ ಹಾಡು

- Advertisement -
- Advertisement -

ತುಮಕೂರಿನಲ್ಲಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟದ ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್‌ಸಿ ಮತ್ತು ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಹಲವು ಕ್ರಾಂತಿಕಾರಕ ಪ್ರಸಂಗಗಳಿಗೆ ವೇದಿಕೆಯಾಯಿತು. ದೆಹಲಿಯ ಶಾಹಿನ ಬಾಗ್‌ ಮಾದರಿಯಲ್ಲಿ ಸಾವಿರಾರು ಮಹಿಳೆಯರು ಭಾರೀ ಪ್ರತಿಭಟನೆ ನಡೆಸಿದರೆ ಪುರುಷರು ಮತ್ತು ಯುವಕರು ಸ್ವಯಂಸೇವಕರಾಗಿ ದುಡಿದರು.

ಮೊದಲ ಬಾರಿಗೆ ಸಂಪ್ರದಾಯಿಕ ಮುಸ್ಲಿಂ ಮಹಿಳೆಯರು ಹೊಸಿಲು ದಾಟಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಜಾದಿ ಘೋಷಣೆ ಕೂಗಿದೆರು. ರಾಷ್ಟ್ರಗೀತೆ ಹಾಡಿದರು. ಹಿಂದೂಸ್ತಾನ ಹಮಾರ, ಹಮಾರ ಎಂದು ಒಕ್ಕೊರಲಿನಿಂದ ಕೂಗಿ ಹಾಡಿದರು. ಭಾಷಣಕಾರರ ನುಡಿಗಳಿಗೆ ಚಪ್ಪಾಳೆ ತಟ್ಟಿದರು. ಸುಮಾರು 2 ಗಂಟೆ ಅತ್ಯಂತ ಶಾಂತಿಯುತವಾಗಿ ಕುಳಿತು ಎಲ್ಲರ ಭಾಷಣ ಆಲಿಸಿದರು. ಮುಸ್ಲಿಮ್ ಸಮುದಾಯದ ಮಹಿಳೆಯರಲ್ಲಿ ಈ ಬದಲಾವಣೆಗಳಿಗೆ ವೇದಿಕೆ ಸಾಕ್ಷಿಯಾಯಿತು.

ವೇದಿಕೆ ಮೇಲೆಯೂ ಒಬ್ಬರೇ ಒಬ್ಬರು ಪುರುಷರು ಇರಲಿಲ್ಲ. ಸ್ವಾಗತ, ಕಾರ್ಯಕ್ರಮ ನಿರೂಪಣೆ, ವಂದನಾರ್ಪಣೆ, ಭಾಷಣ ಎಲ್ಲಾ ಕಾರ್ಯಗಳನ್ನು ಮಹಿಳೆಯರೇ ಅಚ್ಚುಕಟ್ಟಾಗಿ ನಿರ್ವಹಿಸಿದರು. ನಾವು ಭಾರತೀಯರು, ಇಲ್ಲೇ ಹುಟ್ಟಿ ಇಲ್ಲೇ ಬೆಳೆದಿದ್ದೇವೆ. ಸ್ವಾತಂತ್ರ್ಯ ಪೂರ್ವದಿಂದಲೂ ಇಲ್ಲಿ ಜೀವನ ನಡೆಸಿದ್ದೇವೆ. ಧರ್ಮ, ಜಾತಿ, ಆಧಾರದ ಮೇಲೆ ಪೌರತ್ವ ನೋಂದಣಿ ಪ್ರಕ್ರಿಯೆಯನ್ನು ಕೈಬಿಡಬೇಕು.  ನಾವು ದಾಖಲೆಗಳನ್ನು ಯಾಕೆ ತೋರಿಸಬೇಕು ಎಂದು ಪ್ರಶ್ನಿಸಿದರು. ವೇದಿಕೆಯ ಮುಂದೆ ಕುಳಿತಿದ್ದ ಮಹಿಳೆಯರ ನಡುವಿನಿಂದ ಅಜಾದಿ ಘೋಷಣೆಗಳು ಮೊಳಗುತ್ತಿದ್ದವು.

ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲ ಮಾತನಾಡಿದರು. ದೇಶದಲ್ಲಿ ಹಲವು ಸಮಸ್ಯೆಗಳಿವೆ. ಬಡತನ, ನಿರುದ್ಯೋಗ, ಕೆಲಸ ಇಲ್ಲದೆ ಜನ ನರಳುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಉದ್ದಿಮೆಗಳು ಬಾಗಿಲು ಮುಚ್ಚಿವೆ.  ಇಂತಹ ಹೊತ್ತಿನಲ್ಲಿ ಸಮಸ್ಯೆಗಳನ್ನು ನಿವಾರಿಸುವ ಬದಲು ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನುಗಳು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ತಲೆತಲಾಂತರದಿಂದ ಇಲ್ಲಿಯೇ ಹುಟ್ಟಿ ಬದುಕಿ ಮಣ್ಣುಸೇರಿದ್ದಾರೆ. ತಂದೆತಾಯಿಗಳ ದಾಖಲೆಗಳನ್ನು ತೋರಿಸಿ ಎಂದರೆ ಹೇಗೆ? ನಾವು ಈ ದೇಶದ ಪೌರರಲ್ಲವೇ? ಜನರನ್ನು ಅನುಮಾನದಿಂದ ನೋಡುವ ದೃಷ್ಟಿಯನ್ನು ಸರ್ಕಾರ ಕೈಬಿಡಬೇಕು. ಸಿಎಎ, ಎನ್.ಆರ್.ಸಿ ಮತ್ತು ಎನ್‍.ಪಿ.ಆರ್ ಅನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ದೇಶದಲ್ಲಿ ಅಲೆಮಾರಿಗಳು ಇದ್ದಾರೆ. ಬಡವರು ಬದುಕುತ್ತಿದ್ದಾರೆ. ಎಷ್ಟೋ ಗ್ರಾಮಗಳಿಗೆ ಅಸ್ತಿತ್ವವೇ ಇಲ್ಲ. ಆದಿವಾಸಿಗಳು, ವೇಶ್ಯಯರ ಮಕ್ಕಳು, ದೇವದಾಸಿಯರ ಮಕ್ಕಳು, ದ್ವಿಲಿಂಗಿಗಳು, ದಲಿತರು ಯಾರಿಗೂ ಸೂಕ್ತ ದಾಖಲೆಗಳು ಇಲ್ಲ. ಎನ್.ಆರ್.ಸಿ ಜರುಗಿಸಿದ ಅಸ್ಸಾಂನಲ್ಲೇ 13 ಲಕ್ಷ ಮುಸ್ಲೀಮೇತರರು ಪಟ್ಟಿಯಿಂದ ಹೊರಗೆ ಇದ್ದಾರೆ. ಇನ್ನು ಬೇರೆ ಮಹಿಳೆಯರಿಗೆ ಎಲ್ಲಿಂದ ದಾಖಲೆ ಬರಬೇಕು. ಸಮಾಜದಲ್ಲಿ ಅತ್ಯಂತ ಶೋಷಿತರೆಂದರೆ ಮಹಿಳೆಯರು. ಅವರು ದಾಖಲೆಗಳನ್ನು ಎಲ್ಲಿ ಇಟ್ಟುಕೊಂಡಿರುತ್ತಾರೆ. ಸರ್ಕಾರಕ್ಕೆ ಸಾಮಾನ್ಯ ಜ್ಞಾನವೂ ಇಲ್ಲವೇ ಎಂದು ಭಾಷಣಕಾರರು ಪ್ರಶ್ನಿಸಿದರು.

ಮಹಾನಗರ ಪಾಲಿಕೆ ಸದಸ್ಯೆ ಫರೀದಾ ಬೇಗಂ, ಎಐಎಂಎಸ್‍ಎಸ್ ರಾಜ್ಯ ಉಪಾಧ್ಯಕ್ಷೆ ಹರಿಣಿ ಆಚಾರ್ಯ, ಶೀ ಮೊಹಸೀನ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಝೈನಬ್ ಮೊಹಮ್ಮದಿ, ಕಲ್ಯಾಣಿ, ಹರ್ಷಿಯಾ ಹರ್ಷಫ್, ತಾಹೇರಾ ಬಾನು, ಉಲ್ಪತ್ ಸಮಾವೇಶದ ನೇತೃತ್ವವನ್ನು ವಹಿಸಿ ಅಚ್ಚುಕಟ್ಟಾಗಿ ನಿರ್ವಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...