Homeಕರ್ನಾಟಕCAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

CAA, NRC ಕುರಿತು ಮೋದಿ-ಶಾ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ. ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು. ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಮರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಅವರು ಹೇಳಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದು ಅವರು ಸವಾಲು ಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...