Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....