Homeಪುಸ್ತಕ ವಿಮರ್ಶೆಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

ಗಾಂಧೀಜಿಗೆ ಪ್ರಭಾವ ಬೀರಿದ ಪುಸ್ತಕ ಜಾನ್ ರಸ್ಕಿನ್‌ರ ’ಅನ್‍ಟು ದಿಸ್ ಲಾಸ್ಟ್’ ಬಗ್ಗೆ

- Advertisement -
- Advertisement -

ಗಾಂಧೀಜಿಗೆ ಸರ್ವೋದಯವಾಗಿ ಕಂಡ ಜಾನ್ ರಸ್ಕಿನ್ ಅವರ ಅನ್ಟು ದಿಸ್ ಲಾಸ್ಟ್ ಶಿರೋಬರಹದ ಬೇರು ಬೈಬಲ್ಲಿನ ಒಬ್ಬ ಉದಾರ ಮನದ ಮಾಲಿಕನ ದೃಷ್ಟಾಂತದಲ್ಲಿದೆ. ಸ್ವರ್ಗ ಸಾಮ್ರಾಜ್ಯದ ರೂಪಕವನ್ನು ಅರ್ಥೈಸಲು ಯೇಸು ಹೇಳುವ ಕತೆ.

ದ್ರಾಕ್ಷಿತೋಟದ ಯಜಮಾನ ಕೂಲಿಯಾಳುಗಳಿಗೆ ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಗೊತ್ತು ಮಾಡಿ ಕೆಲಸಕ್ಕೆ ಕಳುಹಿಸುತ್ತಾನೆ. ತೋಟದೊಡೆಯ ಕೆಲಸವಿಲ್ಲದೇ ಇರುವ ಇತರರನ್ನೂ ಕಂಡು ತಡವಾಗಿದ್ದರೂ ಅವರನ್ನೂ ಕೂಲಿಗೆ ಕಳುಹಿಸುತ್ತಾನೆ. ಅದೇ ರೀತಿಯಲ್ಲಿ ಇನ್ನೂ ದಿನದ ಕೊನೆಯ ಭಾಗದಲ್ಲಿ ಬಂದು ಸೇರಿಕೊಂಡವರಿಗೆಲ್ಲಾ ಕೆಲಸಕ್ಕೆ ಸೇರಿಸಿಕೊಳ್ಳುತ್ತಾನೆ. ಸಂಜೆ ಎಲ್ಲರೂ ಹೊರಡುವಾಗ ಎಲ್ಲರಿಗೂ ಸಮನಾಗಿ ಒಂದು ಬೆಳ್ಳಿ ನಾಣ್ಯದ ಕೂಲಿಯೇ ಸಿಗುತ್ತದೆ. ಮೊದಲು ಕೆಲಸಕ್ಕೆ ಬಂದವರು ಮೊದಲು, ನಡುವೆ ಮತ್ತು ಕೊನೆಗೆ ಬಂದವರೆಲ್ಲರಿಗೂ ಒಂದೇ ಸರಿಸಮ ಕೂಲಿ ಎಂದು ಗೊಣಗಿದಾಗ ತೋಟದೊಡೆಯ ಹೇಳುತ್ತಾನೆ.

“ನಿನಗೆ ಅನ್ಯಾಯ ಮಾಡಲಿಲ್ಲ. ಒಪ್ಪಂದದ ಪ್ರಕಾರ ನಿನಗೆ ನಿನ್ನ ಬೆಳ್ಳಿನಾಣ್ಯ ಸಿಕ್ಕಿದೆ. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ. ನನ್ನ ಔದಾರ್ಯ ಕಂಡು ನಿನಗೇಕೆ ಅಸೂಯೆ?”

ಈ ಕಟ್ಟ ಕಡೆಯವನಿಗೆ ಎನ್ನುವುದೇ “ಅನ್ ಟು ದಿಸ್ ಲಾಸ್ಟ್.”

ನ್ಯಾಯ ಮತ್ತು ಪ್ರಾಮಾಣಿಕತೆಗಳೆಂಬ ಮೌಲ್ಯಾಧಾರದಲ್ಲಿ ಸಂಪತ್ತನ್ನು ವ್ಯಾಖ್ಯಾನಿಸುವ ರಸ್ಕಿನ್ ಗಾಂಧಿ ಮತ್ತು ಟಾಲ್‌ ಸ್ಟಾಯ್‌ ಒಳಗೊಂಡಂತೆ ಅನೇಕಾನೇಕರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದ್ದರು. ಹಾಗೆಯೇ ಅವರನ್ನು ಬಂಡವಾಳಶಾಹಿಯನ್ನು ಪ್ರತಿನಿಧಿಸುವವರು ವಿರೋಧಿಸುತ್ತಿದ್ದರು. ಸೃಷ್ಟಿಯ ಸಂರಚನೆಯಲ್ಲಿ ಕೈಗಾರಿಕೆಗಳ ಆಡಳಿತಯಂತ್ರಗಳು ಮತ್ತು ಬಂಡವಾಳಶಾಹಿಯು ಹೇಗೆ ಅಮಾನ್ಯವಾಗುತ್ತದೆ ಎಂಬ ಅರಿವನ್ನೂ ಈ ಕೃತಿಯಲ್ಲಿ ಉಸುರಿದ್ದರು.

ಎಲ್ಲಾ ಕೆಲಸಗಳನ್ನೂ ಗೌರವಿಸುತ್ತಾ ಕೊಟ್ಟೆಲ್ಲಾ ಕೆಲಸಗಳಿಗೆ ಸಮವಾಗಿ ಸಂದಾಯ ಮಾಡಬೇಕೆನ್ನುವ ರಸ್ಕಿನ್ ಪ್ರತಿಯೊಬ್ಬರನ್ನೂ ಕುಶಲಿಗಳನ್ನಾಗಿ, ವಿದ್ಯಾವಂತರನ್ನಾಗಿ ರೂಪಿಸುವುದು ಸರಕಾರದ ಕೆಲಸವೆನ್ನುತ್ತಾರೆ. ಅವರ ಆದರ್ಶವೆಂದರೆ; ಯಜಮಾನನು ತನ್ನ ಮಗನನ್ನು ವಿದ್ಯಾವಂತನನ್ನಾಗಿ, ಹಣವಂತನನ್ನಾಗಿ ಆಸ್ಥೆಯಿಂದ ರೂಪಿಸುವಂತೆ ತನ್ನ ಕೆಲಸಗಾರರನ್ನೂ ರೂಪಿಸಬೇಕು.

ಮತ್ತೊಬ್ಬರನ್ನು ಬಳಸಿಕೊಳ್ಳುತ್ತಾ ತಾನು ಸಿರಿವಂತನಾಗುವುದು ಪಾಪದ ಕೆಲಸ. ಅದು ಸರಕಾರದ ಆರ್ಥಿಕತೆಗೂ ಅನ್ಯಾಯ. ತನ್ನ ನೆರೆಯವನನ್ನು ಬಡತನಕ್ಕೆ ದೂಡುತ್ತಾ ತನ್ನನ್ನು ಶ್ರೀಮಂತಗೊಳಿಸಿಕೊಳ್ಳುವ ಯಾವುದೇ ವಿಧಾನ ಅನ್ಯಾಯ. ತಾನೊಬ್ಬ ಸಿರಿವಂತನಾಗಿ ಬಡ ಸಮಾಜದಲ್ಲಿರುವುದು ಮೌಲ್ಯಹೀನ. ಹಾಗಾಗಿ ಸಂಪತ್ತು ಎಂಬುದು ನ್ಯಾಯದ ಆಧಾರದಲ್ಲಿರಬೇಕು. ಇತರರ ದುಡಿಮೆಯಿಂದ ತಾನು ಶ್ರೀಮಂತನಾಗುವುದು ಶೀಲವಲ್ಲ.

ರಾಷ್ಟ್ರೀಯ ಸಂಪತ್ತೆನ್ನುವುದು ಕೆಲವು ಜನರ ಒಟ್ಟುಗೂಡಿಸಿದ ಸಂಪತ್ತಾಗಬಾರದು. ರಾಷ್ಟ್ರದ ಎಲ್ಲಾ ಜನರ ವಿದ್ಯಾರ್ಹತೆ, ಪ್ರತಿಭೆ, ದುಡಿಮೆಗಳಿಂದ ಕ್ರೋಢೀಕರಿಸಿರುವಂತಹ ಸಂಪತ್ತಾಗಬೇಕು. ವ್ಯಕ್ತಿಗತವಾಗಿ ಶ್ರೀಮಂತರಾಗಿರುವವರಿಂದ ಸಮಾಜಕ್ಕೆ ಎಂತಹ ಕೊಡುಗೆ ದೊರಕುತ್ತದೆ!

ವಾಣಿಜ್ಯ ವ್ಯವಹಾರವು ನ್ಯಾಯಸಮ್ಮತವಾಗಿಯೇ ನಡೆಯಬೇಕು. ಏಕೆಂದರೆ ಸೃಷ್ಟಿಯ ವ್ಯವಹಾರಗಳಲ್ಲಿ ತಾರತಮ್ಯವಿಲ್ಲ. ಅದೇರೀತಿ ನ್ಯಾಯದ ಪ್ರಜ್ಞೆಯಿಂದ ಆರ್ಥಿಕ ವ್ಯವಹಾರಗಳೂ ನಡೆಯಬೇಕು. ಆರ್ಥಿಕತೆಯೂ ಕೆಲವು ಜನರ ಕೈಯೊಡೆತನದಲ್ಲಿರದೇ ಸಹಜೀವಿಗಳೆಲ್ಲ ಸರಣಿಯಲ್ಲಿ ವ್ಯಾಪ್ತವಾಗಿ ಪ್ರಾಪ್ತಿಯಲ್ಲಿರಬೇಕು. ರಸ್ಕಿನ್ ಹೇಳುವಂತೆ ಯಾರುಯಾರನ್ನೂ ಕಡೆಯಾಗಿ ನೋಡಬಾರದು, ಯಾರು ಯಾರಿಗೂ ಗುಲಾಮರಾಗಿರಕೂಡದು. ಕೆಲವು ಜನರ ಕೈಯೊಡೆತನದಲ್ಲಿರುವ ಸಂಪತ್ತು ಹಲವು ಜನರನ್ನು ಬಡತನಕ್ಕೆ ದೂಡುತ್ತದೆ.

ರಸ್ಕಿನ್ ಧ್ವನಿಸುವುದಿಷ್ಟೇ, ಜೀವನಕ್ಕೆ ಆಧಾರವಾಗುವುದೋ ಅದೇ ಮೌಲ್ಯ. ಹಣ, ಬೆಲೆ, ಉತ್ಪಾದನೆ ಯಾವುದಾದರೂ ಜೀವಿಗಳ ಜೀವನಕ್ಕೆ ಆಧಾರವಾಗುವುದಾದರೆ ಮಾತ್ರವೇ ಅವು ಮೌಲ್ಯ. ಉಪಯೋಗಿಸದ ಸಂಪತ್ತನ್ನು ಶೇಖರಿಸಿಟ್ಟುಕೊಳ್ಳುವುದು ಸಿರಿವಂತಿಕೆಯ ರೋಗ. ಉತ್ಪಾದನೆಗಳು ಹಣವನ್ನು ಸೃಷ್ಟಿಸುವ ಆಧಾರದಲ್ಲಾಗದೇ ಬಳಕೆಯ ಆಧಾರದಲ್ಲಾದರೆ ಅದು ಉಪಯುಕ್ತ ಮತ್ತು ಮೌಲ್ಯಾಧಾರಿತವಾದ ಪ್ರಗತಿ.

ರಸ್ಕಿನ್‍ರವರ ಆರ್ಥಿಕ ತತ್ವ, ಜೀವನಕ್ಕೆ ಹೊರತಾದ ಸಂಪತ್ತಿಲ್ಲ. ಪ್ರೀತಿ, ಆನಂದ, ಅಭಿಮಾನ ಎಲ್ಲವನ್ನೂ ಒಳಗೊಳ್ಳುವ ಶಕ್ತಿಯೇ ಜೀವನವಾಗಿರುವಾಗ ದೇಶದ ಸರ್ಕಾರವೂ ಕೂಡಾ ಘನತೆಯ ಮತ್ತು ಸಂತೋಷದ ಮನುಷ್ಯರನ್ನು ತನ್ನ ನೆಲದಲ್ಲಿ ರೂಪಿಸಬೇಕು. ಇತರರ ಮರ್ಜಿಯಲ್ಲಿ ದೈನೇಸಿಯಿಂದ ಬದುಕುವಂತಹ ಪರಾವಲಂಬಿಗಳನ್ನಾಗಿ ಮಾಡುವುದಲ್ಲ.

ಇದೇ ರಸ್ಕಿನ್ನನ್ನಿಂದ ಗಾಂಧೀಜಿ ಗ್ರಹಿಸಿದ ಸರ್ವೋದಯ ತತ್ವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...