Homeಸಾಮಾಜಿಕಈ ವಯಸ್ಸಿನಲ್ಲಿ ಇಂಥ ಆಪಾದನೆ ಬರಬಾರದಿತ್ತು!

ಈ ವಯಸ್ಸಿನಲ್ಲಿ ಇಂಥ ಆಪಾದನೆ ಬರಬಾರದಿತ್ತು!

- Advertisement -
- Advertisement -

ಕರ್ನಾಟಕದ ಜನಸ್ತೋಮಕ್ಕೆ ಅನ್ನ ನೀರು ವಸತಿ ಮತ್ತು ಉದ್ಯೋಗ ನೀಡುವ ಜವಾಬ್ದಾರಿ ಹೊತ್ತವರಂತೆ ಬೊಬ್ಬಿರಿಯುತ್ತಿದ್ದ ಅಷ್ಟಮಠಗಳ ಯತಿಗಳ ಕರ್ಮಕಾಂಡ ಅಷ್ಟ ದಿಕ್ಕಿಗೂ ಹರಡುತ್ತಿದೆಯಲ್ಲಾ.
ಕರ್ಮಕಾಂಡದ ರುವಾರಿಯಾಗಿದ್ದ ಶಿರೂರು ಸ್ವಾಮಿ ನಿಜಕ್ಕೂ ಈ ಸಮಯದಲ್ಲಿ ಹುತಾತ್ಮರಂತೆ ಕಾಣುತ್ತಿದ್ದಾರೆ. ಸದರಿ ಸ್ವಾಮಿಯನ್ನು ಏಳನೇ ವರ್ಷಕ್ಕೆ ಸನ್ಯಾಸಿ ಮಾಡಲಾಗಿತ್ತು ಪ್ರಾಪ್ತವಯಸ್ಸಿಗೆ ಬಂದ ಶಿರೂರು ಯಾವ ಎಗ್ಗೂಇಲ್ಲದೆ ಪಂಚೇಂದ್ರಿಯಗಳನ್ನ ಧಾರಾಳವಾಗಿಯೇ ಬಳಸತೊಡಗಿದ್ದಲ್ಲದೆ ತನ್ನ ಬಗ್ಗೆ ಮಾತನಾಡಲು ಮುಂದಾದ ಇತರ ಸ್ವಾಮಿಗಳ ಜಾತಕವನ್ನೇ ಬಿಚ್ಚಿಡುವುದಾಗಿ ಬೆದರಿಕೆ ಹಾಕಿದ್ದರಂತಲ್ಲಾ. ಹಾಗೆ ನೋಡಿದರೆ ಇದು ಬೆದರಿಕೆಯಲ್ಲ ನಿಮ್ಮ ಕೆಲಸವನ್ನ ನೀವು ಮಾಡಿ ನನ್ನ ಕೆಲಸವನ್ನ ನಾನು ಮಾಡುತ್ತೇನೆ ಎಂದ ಶಿರೂರು ಎಲ್ಲವನ್ನ ಕಂಠಪೂರ್ತಿ ಅನುಭವಿಸಿದರಂತಲ್ಲಾ. ಅಂತೂ ಬುದ್ದಿ ಮತ್ತು ಭಾಷೆಯ ಬಗ್ಗೆ ನಿಯಂತ್ರಣ ಕಳೆದುಕೊಂಡ ಶಿರೂರು ಅಷ್ಟಮಠಕ್ಕೆ ಅನಿಷ್ಟವಾದ ಕೂಡಲೇ ಅವರ ಕೊಲೆಯಾಯ್ತಂತಲ್ಲಾ ಥೂತ್ತೇರಿ.

*****

ಶಿರೂರು ಸ್ವಾಮಿಯ ಅಕ್ರಮ ಸಂತಾನದಂತಿರುವ ಕೆಲವೇ ಕೆಲವು ಮಾಧ್ಯಮದ ಮುಸಂಡಿಗಳು ಶಿರೂರನ ಬಾಲಲೀಲೆ, ಪ್ರಾಪ್ತ ವಯಸ್ಸಿನ ಬಾನಗಡಿ ಹಾಗೂ ಸ್ವಾಮಿಯಾದ ನಂತರ ನಡೆಸಿದ ಕಾಮಕ್ರೀಡೆಯನ್ನ ಮರೆಮಾಚಿ ರಮ್ಯಾಶೆಟ್ಟಿ ಎಂಬುವಳು ಮಾಯಾಂಗನೆ, ವಿಷಕನ್ಯೆ, ನಯವಂಚಕಿ ಶಿರೂರು ಶಿರಭಾಗದಲ್ಲಿದ್ದ ಸರವನ್ನು ಲಫಟಾಯಿಸಿದ್ದಾಳೆ. ಕೈ ಕಡಗವನ್ನು ಕಿತ್ತುಕೊಂಡಿದ್ದಾಳೆ. ಇವೆಲ್ಲವನ್ನ ದೋಚಿಕೊಂಡು ಹೋಗುವ ಮುನ್ನ ಪಾಪ ದೇವರಂತಹ ಶಿರೂರು ಸ್ವಾಮಿಗೆ ವಿಷಪ್ರಾಶನ ಮಾಡಿಸಿರಲುಬಹುದು. ಆಕೆ ಮುಸ್ಲಿಂ ಹೆಣ್ಣುಮಕ್ಕಳು ಧರಿಸುವಂತಹ ಬುರ್ಖಾ ಧರಿಸಿದ್ದಳು ಎಂದರೆ, ಪಾತಕಕೃತ್ಯ ನಡೆಸಿರುವುದಕ್ಕೆ ಇನ್ನಾವ ಸಾಕ್ಷಿ ಬೇಕು ಎಂಬಂತೆ ಬಿತ್ತರಿಸುತ್ತ ಕೂತಿವೆಯಂತಲ್ಲಾ ಥೂತ್ತೇರಿ.

*****

ಅಷ್ಟಮಠದ ಯತಿಗಳಲ್ಲೇ ಸರ್ವಶ್ರೇಷ್ಠರೂ, ಮನುಕುಲತಿಲಕರೂ ಮತ್ತು ಕೃಷ್ಣನ ಭಾಗಕ್ಕೆ ವಾಸುದೇವನಂತಿರುವ ಪೇಜಾವರ ಶ್ರೀಗಳನ್ನ ಮಾತನಾಡಿಸಿದರೆ ಹೇಗೆ ಅನ್ನಿಸಿ ಫೋನ್ ಮಾಡಲಾಗಿ ರಿಂಗಾಯ್ತು, ರಿಂಗ್ ಟೋನ್…… ಕೃಷ್ಣ ನೀ ಬೇಗನೇ ಬಾರೋ, ಬೇಗನೆ ಬಂದು ಮುಕ್ತಿಯ ತೋರೋ. ಕೃಷ್ಣಾ………….. ಹಲೋ
“ನಮಸ್ಕಾರ ಸ್ವಾಮೀಜಿ ನಾನು ಯಾಹೂ.”
“ಯಾರ ಬಳಿಯಲ್ಲೂ ಮಾತನಾಡಲು ಸಮಯವಿಲ್ಲ.”
ಒಂದೇ ನಿಮಿಷ ಸ್ವಾಮಿ.”
“ಸಾಧ್ಯವಿಲ್ಲ.”
“ಹಾಗಾದ್ರೆ ನಮ್ಮ ಮನಸ್ಸಿಗೆ ಬಂದದ್ದನ್ನ ಬರಕೊಳ್ತೀವಿ ಸ್ವಾಮಿ.”
“ಎರಡೇ ಮಾತಲ್ಲಿ ಕೇಳಿ.”
“ಧರ್ಮರಾಯ ಇದ್ದ ಜಾಗದಲ್ಲಿ ಮಳೆ ಬೆಳೆ ಜೊತೆಗೆ ಅಪರಾಧಗಳು ನಡೀತಿರಲಿಲ್ಲ. ಹಾಗೇ ನಮ್ಮ ಪೇಜಾವರರು ನೆಲೆಸಿದ ಜಾಗ ಅಂದುಕೊಂಡಿದ್ದೋ.”
“ಆ ನಂಬಿಕೆಗೆ ಈಗ ಯಾವ ತೊಂದರೆಯೂ ಆಗಿಲ್ಲ.”
“ಇದೇನು ಸ್ವಾಮಿ ಹೀಗಂತಿರಿ, ಪ್ರಳಯದಂತಹ ಮಳೆ ಆಗಿದೆ, ಶಿರೂರು ಸ್ವಾಮಿ ಕೊಲೆಯಾಗಿದೆ.”
“ಅದನ್ನ ಕೊಲೆ ಅಂತ ಈಗಲೇ ಹೇಳಲು ಬರುವುದಿಲ್ಲ.”
“ನಂತರ ಹೇಳಬಹುದಾ.”
“ನೋಡಿ ಇವರೆ ಈಗ ನಾವು ಯಾವ ವಿಷಯ ಕುರಿತು ಏನೂ ಹೇಳುವುದಿಲ್ಲ.”
“ಅಂತಹ ಸ್ಥಿತಿ ಶಿರೂರು ತಂದಿಟ್ಟರಲ್ಲಾ ಸ್ವಾಮೀಜಿ.”
“ಅಂತಹ ಸ್ಥಿತಿ ಬಂದಿಲ್ಲ.”
“ನಿಮ್ಮ ಬುಡಕ್ಕೆ ಬಂದಿದೆಯಲ್ಲಾ ಸ್ವಾಮಿ.”
“ನಮ್ಮ ಬುಡಕ್ಕೆ ಯಂತ ಬಂದಿಲ್ಲ.”
“ಪೇಜಾವರಶ್ರೀ ತಾರುಣ್ಯದಲ್ಲಿ ತರುಣಿಯ ಸಂಗ ಮಾಡಿದ್ದರು ಅದರ ಫಲವಾಗಿ ಮಗಳಿದ್ದಾಳೆ ಅಂತ ದೂರಿದೆಯಲ್ಲ ಸ್ವಾಮೀಜಿ.”
“ಅದನ್ನ ಸಾಭೀತುಮಾಡಿದರೆ ಪೀಠತ್ಯಾಗ ಮಾಡುತ್ತೇನೆ.”
“ನೀವು ಮಾಡದೆಯಿದ್ರೂ ಆಯಸ್ಸು ಅವಧಿ ಎಲ್ಲ ಮುಗಿದಿದೆ, ಈಗಿನ ನಿಮ್ಮ ತ್ಯಾಗ ಒಂಥರ ಮಾಧ್ವ ಕುಲವೇ ತಲೆತಗ್ಗಿಸುವಂತದ್ದು.”
“ಮಾಧ್ವಕುಲ ತಲೆತಗ್ಗಿಸುವಂತಹ ಕೆಲಸ ನಾವು ಮಾಡಿಲ್ಲ.”
“ನೀವು ಮಾಡದೇಯಿದ್ರೂ ಮಾಡೋರಿಗೆ ಪುಸಲಾಯಿಸಿದ್ದೀರಿ.”
“ಅದನ್ನ ಸಬೀತು ಮಾಡಿದರೆ ಪೀಠತ್ಯಾಗ ಮಾಡ್ತೇನೆ.”
“ಮಾಡಬೇಡಿ ಅಲ್ಲೇ ಇರಿ, ಆದರೆ ಈ ಹಿಂದೆ ಹೆಣ್ಣಿನ ಸಂಗದ ಬಗ್ಗೆ ಪ್ರಚೋದನೆಗೊಂಡ ಸ್ವಾಮಿಯೊಬ್ಬರು ಪೀಠತ್ಯಾಗ ಮಾಡಿ ಸಂಸಾರಿಯಾಗುತ್ತೇನೆ ಅಂದಾಗ ತಾವು ಹಾಗೆ ಮಾಡಬೇಡಿ, ಪೀಠದಲ್ಲಿ ಇದ್ದುಕೊಂಡೇ ಗುಟ್ಟಾಗಿ ನಿಭಾಯಿಸಿ ಅನ್ನೋ ಮಾತನ್ನ ತಾವು ಹೇಳಿದ್ದೀರಿ.”
“ಇಲ್ಲ ನಾನು ಹಾಗೆ ಹೇಳಿಲ.್ಲ”
“ತಮ್ಮ ಮಾತನ್ನ ಮೀರಿ ಪೀಠತ್ಯಾಗ ಮಾಡಿ ಈಗ ಅಮೇರಿಕದಲ್ಲಿ ಸಂಸಾರಿಯಾಗಿರೊ ವ್ಯಕ್ತಿ, ನಮ್ಮ ಜೊತೆ ನಿಮ್ಮ ಸಂಧಾನದ ಮಾತನ್ನ ಹಂಚಿಕೊಂಡ್ರು ಇದಕ್ಕಿಂತ ಸಾಕ್ಷಿಬೇಕೆ”
“ನೋಡಿ ಇವರೆ ನಾನು ಹೇಳಿದ್ದು ಸನ್ಯಾಸಿ ಜೀವನ ಕಷ್ಟಕರವಾದದ್ದು ಅದನ್ನ ನಿಭಾಯಿಸಿ ಅಂತ ಹೇಳಿದ್ದು.”
“ಹೊಂದಾಣಿಕೆಯಿಂದ.”
“ಹಾಗಲ್ಲ ಕೃಷ್ಣಪೂಜೆ ಓದು ಧ್ಯಾನವ್ರತಗಳನ್ನ ಮಾಡಿಕೊಂಡು ನಮ್ಮ ಮನಸ್ಸನ್ನ ನಿಯಂತ್ರಣದಲ್ಲಿ ಇಟ್ಟುಕೊಂಡು ಸನ್ಯಾಸಿ ಜೀವನವನ್ನ ಸಾಗಿಸಬೇಕು.”
“ಅದು ಸರಿ ಸ್ವಾಮಿ ನೀವು ಪೂಜೆ ಮಾಡೋ ದೇವರೆ ಸ್ತ್ರೀಲೋಲ. ಮತ್ತೆ ಪೀಡಕನಾಗಿದ್ದ. ಅವನು ಕಟ್ಟಿಕೊಂಡ ಸ್ತ್ರೀಯರ ಸಂಖ್ಯೆ ಅಗಣಿತ, ಅಂತಹ ವ್ಯಕ್ತಿಯನ್ನ ಪೂಜೆ ಮಾಡೋರು ಸನ್ಯಾಸಿ ಜೀವನ ಮಾಡದು ಸುಳ್ಳಲ್ಲವ.”
“ನಾವಿದ್ದೇವಲ್ಲ.”
“ನಿಮ್ಮ ಮಠದಲ್ಲಿದ್ದವರಿಂದಲೇ ನಿಮ್ಮ ಜೀವನವೂ ಅನಾವರಣವಾಯ್ತಲ್ಲ ಸ್ವಾಮಿ.”
“ಯಂತ ಅನಾವರಣವಾಯ್ತು.”
“ಬೇರೆಯವರಿಗೆ ಗೌಪ್ಯ ಸುಖಸಂಸಾರ ಹೇಳಿಕೊಟ್ಟವರು, ಹಾಗೇ ತಾವೂ ಮಾಡುತ್ತಿರಬಹುದಲ್ಲ, ಇಂತ ಅನುಮಾನಗಳು ಈಗ ಹುಟ್ಟಿಕೊಂಡಿವೆ, ತಡವಾದರೂ ಸತ್ಯದರ್ಶನವಾಗುತ್ತಿವೆ. ಕರ್ನಾಟಕದ ಮಠಗಳ ಮಾನ ಹರಾಜಾಗ್ತಾಯಿದೆ. ಇಷ್ಟರ ನಡುವೆ ಇನ್ನೂ ಕೆಲವು ಮಠಗಳು ತಮ್ಮ ನೈತಿಕ ಜವಬ್ದಾರಿ ಬಿಟ್ಟುಕೊಟ್ಟಿಲ್ಲ. ಆದರೆ ನಿಮ್ಮ ಮಠಗಳು ಹಣ ಅಧಿಕಾರ ಸ್ತ್ರೀಶಕ್ತಿ ಮತ್ತು ಮತಾಂಧತೆಯಿಂದ ಪತನವಾಗ್ತಾಯಿವೆ. ಅದೂ ನೈತಿಕವಾಗಿ ನಿಮಗೂ ಹಿಂಗನ್ಸಲ್ಲ ಸ್ವಾಮೀಜಿ……. ಹಲೋ ಹಲೋ ಹಲೋ ಮಾತಾಡಿ ಸ್ವಾಮೀಜಿ..
ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...