Homeಕರ್ನಾಟಕಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

ಸಿಎಎ ಪರ ರ್‍ಯಾಲಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆಗೆ ಸಂಚು ಆರೋಪದಲ್ಲಿ 6 ಜನರ ಬಂಧನ

- Advertisement -
- Advertisement -

ಸಿಎಎ ಪರ ರ್‍ಯಾಲಿ ನಡೆಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ವರುಣ್ ಭೂಪಾಲಂ ಮೇಲೆ ಕೊಲೆಯತ್ನ ಮತ್ತು  ಹಿಂದೂಪರ ಕಾರ್ಯಕರ್ತರನ್ನು ಹತ್ಯೆಗೈಯ್ಯುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದ್ದು ಅವರು ಎಸ್‌ಡಿಪಿಐ ಕಾರ್ಯಕರ್ತರು ಎಂದು ಕಮಿಷನರ್‌ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿಎಎ ಪರ ರ್‍ಯಾಲಿಯಲ್ಲಿಯೇ ಎಸ್‌ಡಿಪಿಐ ಕಾರ್ಯಕರ್ತರು ಹಿಂದೂ ನಾಯಕರನ್ನು ಮುಖ್ಯವಾಗಿ ಸಂಸದ ತೇಜಸ್ವಿ ಸೂರ್ಯ, ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯವರನ್ನು ಕೊಲ್ಲಲು ಯೋಜಿಸಿದ್ದರು. ಆದರೆ ರ್‍ಯಾಲಿಯಲ್ಲಿ ಭಾರೀ ಪೊಲೀಸ್ ಉಪಸ್ಥಿತಿಯಿಂದ ಅದು ಸಾಧ್ಯವಾಗಲಿಲ್ಲ. ಆದರೆ ಅದೇ ಕೋಪದಲ್ಲಿ ರ್‍ಯಾಲಿ ಮುಗಿಸಿ ಮನೆಗೆ ಹೊರಟಿದ್ದ ವರುಣ್ ಭೂಪಾಲಂ ಮೇಲೆ ಹಲ್ಲೆ ನಡೆಸಿದರು ಎಂದು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬಂಧಿತರನ್ನು ಮೊಹಮ್ಮದ್ ಇರ್ಫಾನ್(33), ಸನಾವುಲ್ಲಾ ಶೆರಿಫ್ (28), ಸೈಯದ್ ಸಿದ್ದೀಕ್, ಸಯ್ಯದ್ ಅಕ್ಬರ್ (30), ಅಕ್ಬರ್ ಬಾಷಾ(27), ಸಾದಿಕ್ ಉಲ್ ಅಮೀನ್ (39) ಎಂದು ಗುರುತಿಸಲಾಗಿದೆ.

ಈ ಆರು ಜನರು ಸಹ ಡಿಸೆಂಬರ್ 22 ರಂದು ಟೌನ್‌ಹಾಲ್‌ ಮುಂದೆ ನಡೆದ ಸಿಎಎ ಪರ ಪ್ರತಿಭಟನೆಗೆ ತೆರಳಿದ್ದರು. ಕೇಸರಿ ಬಟ್ಟೆಗಳನ್ನು ಧರಿಸಿದ್ದ ಇವರು ಕಲ್ಲು ಎಸೆದ ಅವ್ಯವಸ್ಥೆ ಸೃಷ್ಟಿಸಿ ಗಲಭೆ ಎದ್ದಾಗ ಹಿಂದೂ ಮುಖಂಡರನ್ನು ಕೊಲ್ಲುವುದಾಗಿ ಸಂಚು ರೂಪಿಸಿದ್ದರು. ಆಧರೆ ಭಾರೀ ಭದ್ರತೆಯ ಕಾರಣಕ್ಕಾಗಿ ಕಲ್ಲು ಎಸೆಯಲು ಸಾಧ್ಯವಾಗಿಲ್ಲ. ಹಾಗಾಗಿ ಸಂಚು ವಿಫಲಗೊಂಡಿದೆ ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಅವರ ಯೋಜನೆ ವಿಫಲವಾದ ಕಾರಣ, ರ್‍ಯಾಲಿಯಲ್ಲಿ ಭಾಗವಹಿಸಿದ ಯಾವುದೇ ಹಿಂದೂ ಕಾರ್ಯಕರ್ತರನ್ನು ಕೊಲ್ಲಲು ಗ್ಯಾಂಗ್ ಬಯಸಿದೆ. ಆಗ ಬೌನ್ಸ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವರುಣ್ ಭೂಪಾಲಂ ಅವರನ್ನು ಹಿಂಬಾಲಿಸಿದರು. ಅವರು ಕಲಾಸಿಪಾಳ್ಯದ ಬಳಿ ಆತನ ಮೇಲೆ ಹಲ್ಲೆ ನಡೆದು ಬಿಡದಿ ಕಡೆಗೆ ಓಡಿಹೋದರು. ನಂತರ ಅವರಲ್ಲಿ ಇಬ್ಬರು ಆ ವ್ಯಕ್ತಿ ನಿಜವಾಗಿಯೂ ಸತ್ತಿದ್ದಾನೆಯೇ ಎಂದು ನೋಡಲು ಹಿಂದಿರುಗಿ ಬಂದಿದ್ದರು. ಆದರೆ ಆ ಹೊತ್ತಿಗೆ ವರುಣ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ನಂತರ ಆತ ಬದುಕುಳಿದ ಎಂದು ರಾವ್ ಹೇಳಿದರು.

ನಾವು ಟೌನ್ ಹಾಲ್‌ ದಾರಿಯಲ್ಲಿ 700 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಅಪರಾಧಿಗಳನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದೇವೆ” ಎಂದು ರಾವ್ ಹೇಳಿದರು.

“ಎಲ್ಲಾ ಆರೋಪಿಗಳು ಎಸ್‌ಡಿಪಿಐ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ಅವರಿಗೆ ಪ್ರತಿ ತಿಂಗಳು ರೂ. 10,000 ಬರುತ್ತಿತ್ತು. ಅವರಿಗೆ ಯಾರು ಹಣಕಾಸು ಒದಗಿಸಿದ್ದಾರೆ ಎಂಬ ಬಗ್ಗೆ ನಾವು ಈಗ ತನಿಖೆ ನಡೆಸುತ್ತೇವೆ. ಈ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಯ ಆಂಟಿ ಟೆರರ್ ಸ್ಕ್ವಾಡ್ ತನಿಖೆ ನಡೆಸಲಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...