Homeಕರ್ನಾಟಕದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

ದುರ್ಬಲ ಮನಸ್ಸಿನ ಸಿಎಂ ಯಡಿಯೂರಪ್ಪ ರಾಜಿನಾಮೆ ನೀಡುವುದು ಒಳ್ಳೆಯದು: ಉಗ್ರಪ್ಪ ವಾಗ್ದಾಳಿ

- Advertisement -
- Advertisement -

ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳೇ ನಡೆಯುತ್ತಿಲ್ಲ. ದುರ್ಬಲ ಮನಸ್ಸಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕೇವಲ ಅಧಿಕಾರ ದಾಹ, ಸಮಯ ಸಾಧಕತನದಿಂದ ಆಡಳಿತ ನಡೆಸುತ್ತಿದ್ದು ಹೈಕಮಾಂಡ್ ನಿಂದ ಅವಮಾನ ಸಹಿಸುವುದು ಬಿಟ್ಟು ರಾಜಿನಾಮೆ ನೀಡುವುದೇ ಸೂಕ್ತ ಎಂದು ಕಾಂಗ್ರೆಸ್ ವಕ್ತಾರ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಗ್ರಪ್ಪ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಾಹುಲಿ ಅಲ್ಲ. ರಾಜಾ ಇಲಿ ಎಂಬ ಮಾತುಗಳನ್ನು ತುಮಕೂರಿನಲ್ಲೂ ಪುನರುಚ್ಚರಿಸಿದರು. ಕಾಂಗ್ರೆಸ್ ಜೆಡಿಎಸ್ ಶಾಸಕರು ರಾಜಿನಾಮೆ ನೀಡಿದಾಗ ಯಡಿಯೂರಪ್ಪ ವೀರಾವೇಶದ ಮಾತುಗಳನ್ನಾಡಿದರು. ನಾನು ಮುಖ್ಯಮಂತ್ರಿಯಾಗಿ ಒಂದು ಗಂಟೆಯೊಳಗೆ ಎಲ್ಲರನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಆದರೆ ಇದುವರೆಗೂ ಉಪ ಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಸಚಿವರನ್ನಾಗಿ ಮಾಡಲು ಸಾಧ್ಯವಾಗಿಲ್ಲ ಎಂದು ಕಿಚಾಯಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿ ಮುಂದೆ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಗೋಗರೆದರು. ಜಿಎಸ್.ಟಿಯ ರಾಜ್ಯದ ಪಾಲಿನ ಹಣವನ್ನು ನೀಡುವಂತೆ ಕೋರಿದರು. ಗೃಹ ಸಚಿವ ಅಮಿತ್ ಶಾ ಅವರ ಬಳಿ ಹೋಗಿ ಮನವಿ ಮಾಡಿದರು. ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ. ನನಗೆ ಬೆಂಬಲವಾಗಿ ನಿಂತ ಶಾಸಕರನ್ನು ಮಂತ್ರಿ ಮಾಡಬೇಕೆಂದು ಶಾ ಅವರಿಗೆ ಮನವಿ ಮಾಡಿದರು. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮುಖ್ಯಮಂತ್ರಿಗಳ ಮಾತುಗಳನ್ನೇ ಕೇಳುತ್ತಿಲ್ಲ. 24 ಗಂಟೆಗಳಲ್ಲಿ ಮಂತ್ರಿ ಮಾಡುತ್ತೇನೆಂದ ಮಾತುಗಳೆಲ್ಲವೂ ಸುಳ್ಳಾಗಿವೆ. ಯಾರೂ ಮುಖ್ಯಮಂತ್ರಿಗಳ ಮಾತುಗಳನ್ನು ಕೇಳದಂತಾಗಿದ್ದಾರೆ ಎಂದು ಲೇವಡಿ ಮಾಡಿದರು.

ಯಡಿಯೂರಪ್ಪನವರ ಶಕ್ತಿ ಕುಂದಿ ಹೋಗಿದೆ. ಮಠದ ಸ್ವಾಮೀಜಿಯೊಬ್ಬರು ತಮ್ಮ ಸುಮುದಾಯದವರನ್ನು ಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು. ಅವರ ಮಾತಿಗೆ ಸಿಟ್ಟಿಗೆದ್ದ ಮುಖ್ಯಮಂತ್ರಿ ನಾಳೆಯೇ ರಾಜಿನಾಮೆ ಕೊಡುತ್ತೇನೆ ಎಂದು ಅಸಹಾಯಕತೆ ತೋರಿದರು. ಮುಖ್ಯಮಂತ್ರಿಗಳಿಗೆ ತಾಳ್ಮೆ ಇರಬೇಕು. ಯಾರೋ ಒಬ್ಬ ಸ್ವಾಮಿ ಮಾತನಾಡಿದ ಮಾತ್ರಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಬೇಕೇ? ಇದನ್ನು ನೋಡಿದರೆ ಯಡಿಯೂರಪ್ಪ ವೀಕ್ ಮೈಂಡ್ ಸಿಎಂ. ಇಂಥವರಿಂದ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.

ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ ವ್ಯಕ್ತಿಗಳು ಮತ್ತು ಶಕ್ತಿಗಳೇ ಇಂದೂ ಅವರನ್ನು ಮುಗಿಸುವ ಕೆಲಸ ಮಾಡುತ್ತಿವೆ. ನಾಲ್ಕು ಬಾರಿ ಮುಖ್ಯಮಂತ್ರಿಯಾದರೂ ಅವರಿಗೆ ಬಹುಮತ ಇಲ್ಲ. ಸಿಎಂಗೆ ಸ್ವಾಭಿಮಾನವಿದ್ದರೆ ರಾಜಿನಾಮೆ ಕೊಡುವುದು ಒಳ್ಳೆಯದು. ರಾಜ್ಯದ ಜನರ ವಿಶ್ವಾಸ ಗಳಿಸಲು ಯಡಿಯೂರಪ್ಪ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಸಿಎಎ ಮತ್ತು ಎನ್ಆರ್.ಸಿ ಸಂವಿಧಾನ ವಿರೋಧಿಯಾಗಿವೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ಒಡೆಯುವ ಕೆಲಸವನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಂದಾಗಿದೆ. ಇದು ಸಂವಿಧಾನದ 14, 15, 21, 25 ಮತ್ತು 51 ಎ ಆರ್ಟಿಕಲ್ ಗಳಿಗೆ ವಿರುದ್ದವಾಗಿದೆ. ಇಂತಹ ಕಾಯ್ದೆಯ ಬಗ್ಗೆ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಇಂತಹ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ದೇಶದ ಸಮಸ್ಯೆಗಳ ಬಗ್ಗೆ ಮಾತನಾಡದೆ ಜನರ ಗಮನವನ್ನು ಬೇರೆಡೆ ಸೆಳೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ದೂರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....