ಗೃಹ ಸಚಿವ ಅಮಿತ್ ಶಾ ಅವರೇ, ಸಿಎಎ, ಎನ್ಆರ್ಸಿ ಮೂಲಕ ದೇಶ ಒಡೆಯುವ ಕೆಲಸಕ್ಕೆ ಸ್ವಲ್ಪ ವಿರಾಮ ನೀಡಿ, ನೆರೆಹಾವಳಿಯಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರ ಕಡೆ ಗಮನ ಕೊಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು ರೂ.35 ಸಾವಿರ ಕೋಟಿ, ಕೇಂದ್ರ ಸರ್ಕಾರ ನೀಡಿರುವುದು ರೂ.1800 ಕೋಟಿ. ಮೊದಲು ಬಾಕಿ ನೆರೆ ಪರಿಹಾರ ಪಾವತಿ ನಂತರ ಸಿಎಎ, ಎನ್ ಆರ್ ಸಿ ಬಗ್ಗೆ ಮಾತನಾಡಿ ಎಂದು ಒತ್ತಾಯಿಸಿದ್ದಾರೆ.
ಗೃಹ ಸಚಿವ @AmithShah,
ನೆರೆ ಹಾವಳಿ ನಷ್ಟಕ್ಕೆ ಪರಿಹಾರ ಕೇಳಿರುವುದು ರೂ.೩೫ ಸಾವಿರ ಕೋಟಿ, ಕೇಂದ್ರ ಸರ್ಕಾರ ನೀಡಿರುವುದು ರೂ.೧೮೦೦ ಕೋಟಿ. ಮೊದಲು ಬಾಕಿ ನೆರೆಪರಿಹಾರ ಪಾವತಿ ನಂತರ ಸಿಎಎ, ಎನ್ ಆರ್ ಸಿ.#AnswerMadiShah
— Siddaramaiah (@siddaramaiah) January 18, 2020
ಕಳಸಾ-ಬಂಡೂರಿ ಯೋಜನೆ ಬಗ್ಗೆ ನಿಮ್ಮ ಪಕ್ಷ ಎರಡು ನಾಲಿಗೆಯಲ್ಲಿ ಯಾಕೆ ಮಾತನಾಡುತ್ತಿದೆ? ಚುನಾವಣೆಯ ಮೊದಲು ನಮ್ಮ ಪರ, ಈಗ ಗೋವಾ ಪರ. ಹುಬ್ಬಳ್ಳಿ ಸಭೆಯಲ್ಲಿ ಒಂದೇ ನಾಲಗೆಯಲ್ಲಿ ಸ್ಪಷ್ಟೀಕರಣ ಕೊಟ್ಟು ಬಿಡಿ ಎಂದು ಅವರು ಆಗ್ರಹಿಸಿದ್ದಾರೆ.