Homeಮುಖಪುಟ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

- Advertisement -
- Advertisement -

ಲೇಖನದ ಶೀರ್ಷಿಕೆಯು ಹಿಂದೂ ರಾಷ್ಟ್ರ ಎಂಬುದೊಂದು ಅಸ್ತಿತ್ವಕ್ಕೆ ಬರಲಿದೆ ಎಂಬ ಸಾಧ್ಯತೆಯನ್ನು ಧ್ವನಿಸುತ್ತದೆ. ಇಂದು ಅಂತಹ ಸಾಧ್ಯತೆಯನ್ನು ಖಡಾಖಂಡಿತವಾಗಿ ಯಾರಾದರೂ ಅಲ್ಲಗಳೆದರೆ ಅಂತಹವರನ್ನು ಒಂದು ಮಾತು ಕೇಳಬೇಕಾಗುತ್ತದೆ. ಈ ದೇಶದಲ್ಲಿ ಮುಸ್ಲಿಮರಾಗಿರುವ ಏಕೈಕ ಕಾರಣಕ್ಕೆ ವ್ಯಕ್ತಿಗಳನ್ನು, ಕೆಲವೊಮ್ಮೆ ಅಪರಿಚಿತರನ್ನೂ ಕೊಲ್ಲಬಹುದು ಎಂದು ನೀವು ಊಹಿಸಿದ್ದೀರಾ? ದೇಶದ ಪ್ರಧಾನಮಂತ್ರಿಯು ಧರ್ಮವನ್ನು ಎಳೆದುತಂದು ಕೆಲವರ ಪರ ಅಥವಾ ವಿರುದ್ಧ ನೇರವಾಗಿ ಮಾತಾಡಬಹುದು ಎಂದು ಭಾವಿಸಿದ್ದೀರಾ? ಭಾರತ ದೇಶದ ಪೌರತ್ವವನ್ನು ಧರ್ಮಾಧಾರಿತವಾಗಿ ನಿರ್ಧರಿಸುವ ಕಾನೂನೊಂದು ಬರುತ್ತದೆ ಎಂದು ನಿರೀಕ್ಷಿಸಿದ್ದಿರಾ? ಭಾರತದ ಪ್ರಧಾನಿಯು ಪತ್ರಕರ್ತೆಯೊಬ್ಬರ ಕೊಲೆಯನ್ನು ಸಂಭ್ರಮಿಸುವ ವ್ಯಕ್ತಿಗಳನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡುತ್ತಾರಷ್ಟೇ ಅಲ್ಲದೇ, ಅದನ್ನು ಬಯಲಿಗೆ ತಂದರೂ ಅದನ್ನು ಬದಲಿಸದೇ ಸೂಚನೆಯೊಂದನ್ನು ನೀಡಬಹುದು ಎಂದುಕೊಂಡಿದ್ದಿರಾ?

ಪ್ರಶ್ನೆಗಳ ಪಟ್ಟಿ ಇನ್ನೂ ದೀರ್ಘವಿದೆ ಎಂಬುದು ನಿಮಗೆ ಗೊತ್ತು. ಹಾಗಾಗಿ ಹಿಂದೂ ರಾಷ್ಟ್ರವೆಂಬುದೊಂದು ಬರುವುದೇ ಇಲ್ಲ ಎಂದು ಅಂದುಕೊಳ್ಳಲಾಗದು. ಪ್ರಧಾನಿ ಹಾಗೂ ಆಳುವ ಪಕ್ಷವು ಸದಾ ಪೂಜಿಸುವ ಭಾರತ ಮಾತೆಯ ಫೋಟೋದಲ್ಲಿ ರಾಷ್ಟ್ರಧ್ವಜ ಇರುವುದಿಲ್ಲ; ಕೇಸರಿ ಧ್ವಜ ಮಾತ್ರ ಇರುತ್ತದೆ ಎಂಬುದನ್ನು ಗಮನಿಸಿ. ಈ ಪರಿವಾರವು ಬಳಸುವ ಸಂಕೇತಗಳು, ದೀರ್ಘಕಾಲದಿಂದ ಮುಂದಿಡುತ್ತಾ ಬಂದಿರುವ ಯೋಜನೆಗಳು, ಡಿಮ್ಯಾಂಡ್‍ಗಳು ಒಂದೊಂದೇ ನಿಜವಾಗುತ್ತಿರುವುದನ್ನೂ ಗಮನಿಸಿ. ಮುಂದಿನ ಎರಡು ವರ್ಷಗಳಲ್ಲಿ ಗೋಡ್ಸೆಯನ್ನು ಬಹಿರಂಗವಾಗಿ ಆರಾಧಿಸುವ (ಆ ಚಿಂತನೆಯು ಸಾಕಷ್ಟು ಕಾಲದಿಂದ ಸಾಕಷ್ಟು ವ್ಯಾಪಕವಾಗಿಯೇ ಚಾಲನೆಯಲ್ಲಿದೆ ಎಂಬುದು ತಿಳಿದಿಲ್ಲವಾದರೆ, ಆರೆಸ್ಸೆಸ್‍ನ ಯಾವುದೇ ಸ್ವಯಂಸೇವಕನನ್ನು ಖಾಸಗಿಯಾಗಿ ಮಾತನಾಡಿಸಿ) ಕಾರ್ಯಕ್ರಮಗಳು ನಡೆಯಲು ಎಲ್ಲಾ ತಯಾರಿಗಳು ನಡೆದಿಲ್ಲವೇ?

ಪ್ರಗ್ಯಾ ಠಾಕೂರ್ ಎಂಬ ಸಂಸದೆ ಈಗಾಗಲೇ ಗೋಡ್ಸೆ ಒಬ್ಬ ದೇಶಭಕ್ತ ಎಂದು ದೇಶದ ಸಂಸತ್ತಿನಲ್ಲೇ ಹೇಳಿಯಾಗಿದೆ. ಅಂತಹ ಹಲವು ಹೇಳಿಕೆಗಳ ನಂತರ ಬಿಜೆಪಿ ಪಕ್ಷವು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲವೆಂಬುದು ಸ್ಪಷ್ಟ ಸೂಚನೆಯನ್ನು ನೀಡುತ್ತಿದೆ. ಅಂದರೆ ಹಿಂದೂ ರಾಷ್ಟ್ರದ ಕಲ್ಪನೆ ಏನಿತ್ತೋ, ಅದು ಸಾಕಾರವಾಗುವ ದಿಕ್ಕಿನಲ್ಲಿ ದೇಶ ನಡೆದಿದೆ. ಗಾಂಧಿ ಕೊಲೆಯನ್ನು ಆರೆಸ್ಸೆಸ್ಸಿನವರೇ ಮಾಡಿದ್ದು ಮತ್ತು ಅದನ್ನು ಅವರು ಸಂಭ್ರಮಿಸಿದರು ಎಂಬುದಕ್ಕೆ ದಾಖಲೆಗಳಿವೆ. ಗಾಂಧಿ ದ್ವೇಷ ಮಾತ್ರವಲ್ಲದೇ ಅಂಬೇಡ್ಕರ್‍ಗೆ ವಿರೋಧ, ಮಂಡಲ್ ವರದಿಗೆ ವಿರೋಧ ಇತ್ಯಾದಿಗಳು ಬಹಿರಂಗವಾಗಿ ವ್ಯಕ್ತವಾಗಿವೆ. ಮೀಸಲಾತಿಯ ಕುರಿತು ದಲಿತ ಸಮುದಾಯದ ಕುರಿತು ಭಾರತದ ಮೇಲ್ಜಾತಿಗಳಿಗೆ ಇರುವ ಅಸಹನೆಯ ಕುರಿತು ಯಾವುದೇ ಪುರಾವೆ ಒದಗಿಸುವ ಅಗತ್ಯವಿಲ್ಲ.

ಅದೇ ರೀತಿ ಬಡವರು, ಅನಕ್ಷರಸ್ಥರು, ‘ಕೀಳು’ ಜಾತಿಯವರು (ಕೀಳು ಜಾತಿ ಎಂಬ ಪದ ಇಂದಿಗೂ ಬಳಕೆಯಲ್ಲಿದೆ ಎಂಬುದನ್ನು ಮರೆಯಲಾಗುತ್ತದೆಯೇ?) ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವುದಿಲ್ಲ; ಸ್ಲಂ ಜನರಂತಹವರು ಸೇರಿಕೊಂಡು ದೇಶ ಹಾಳು ಮಾಡುತ್ತಿದ್ದಾರೆ ಎಂಬ ಭಾವವೂ ‘ಕುಲೀನ’ರಲ್ಲಿ ಗಾಢವಾಗಿಯೇ ಇದೆ. ವಿದ್ಯಾವಂತರಲ್ಲದವರಿಗೆ ಮತದಾನದ ಹಕ್ಕು ಇರಬಾರದು ಎಂದು ಪ್ರತಿಪಾದಿಸುವವರೂ ಇದ್ದಾರೆ.

ಪೌರತ್ವವೆಂಬುದು ಹಕ್ಕುಗಳನ್ನು ಪಡೆಯಲು ಇರುವ ಹಕ್ಕಾಗಿದೆ. ಇಂದು ದಾಖಲಾತಿಗಳ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯೊಂದು ದೇಶದಲ್ಲಿ ಚಾಲ್ತಿಗೆ ಬಂದಿದೆ. ಅಂತಹ ಹಕ್ಕುಗಳಲ್ಲಿ ಒಂದು ಮತದಾನದ ಹಕ್ಕೂ ಆಗಿದೆ. ದೇಶದ ಬಡವರಿಗೆ, ದಲಿತರಿಗೆ ಏನಾದರೂ ಹಕ್ಕುಗಳು ಸಿಕ್ಕಿದ್ದರೆ ಅದಕ್ಕೆ ಓಟೂ ಒಂದು ಕಾರಣವಾಗಿದೆ. ಆದರೆ, ದಾಖಲಾತಿಗಳ ಮೇಲೆ ನಿರ್ಧರಿಸಲಾಗುವ ಪೌರತ್ವವು ಮುಂದೊಂದು ದಿನ ಈ ಬಡವರ, ದಲಿತರ, ಹಿಂದುಳಿದವರ ಓಟಿನ ಹಕ್ಕನ್ನೂ ಕಸಿಯುವ ಅಸ್ತ್ರವಾಗುವುದಿಲ್ಲ ಎಂದು ಸುಮ್ಮನೇ ಕೂರುವ ಹಾಗಿಲ್ಲ. ಈಗ ಮೈಮರೆತರೆ ಮುಂದೊಂದು ದಿನ ಬಹಳ ದುಬಾರಿ ಬೆಲೆ ತೆರಬೇಕಾಗಿ ಬರಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...