Homeಮುಖಪುಟಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

ಮಂಗಳೂರು ಬಾಂಬ್ ಪ್ರಕರಣ: ಮಾಧ್ಯಮಗಳ ಇಸ್ಲಾಮಫೋಬಿಯ ಮತ್ತು ಪೊಲೀಸರ ಪಕ್ಷಪಾತ

- Advertisement -
- Advertisement -

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾಗಿದೆ. ಕೂಡಲೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದವರು ಅದನ್ನು ಸುರಕ್ಷಿತವಾಗಿ ಸ್ಫೋಟಿಸಿ ಆತಂಕ ಹೋಗಲಾಡಿಸಿದರು. ಬಾಂಬ್‌ ಇಟ್ಟಿದ್ದ ಆರೋಪಿ ಎನ್ನಲಾದ ಆದಿತ್ಯ ರಾವ್‌ ಕೂಡ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆ ಸಂದರ್ಭದಲ್ಲಿ ಕನ್ನಡದ ಕೆಲ ಮಾಧ್ಯಮಗಳು ನಡೆದುಕೊಂಡ ರೀತಿ ಅಸಹ್ಯ ಹುಟ್ಟಿಸುವಂತದ್ದು. ಒಂದು ಪಕ್ಷಕ್ಕೆ, ಒಂದು ಸಿದ್ದಾಂತಕ್ಕೆ ತಮ್ಮನ್ನು ತಾವು ಮಾರಿಕೊಂಡತೆ ಅವು ನಡೆದುಕೊಂಡಿದ್ದು ಪತ್ರಿಕೋದ್ಯಮದ ಎಲ್ಲಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದಂತಿತ್ತು. ‘ಪೌರತ್ವಕ್ಕೆ ಪ್ರತಿಕಾರ’, ‘ಬಾಂಬ್‌ಗೂ ಪಿಎಫ್‌ಐ ಸಂಘಟನೆಗೂ ನಂಟು ಏಕಿರಬಾರದು’ ಎಂಬಂತಹ ವರದಿಗಳನ್ನು ಪ್ರಸಾರ ಮಾಡಿದ್ದವು.

ವಿಜಯ ಕರ್ನಾಟಕ ಪತ್ರಿಕೆಯಂತೂ ಪೌರತ್ವ ವಿರೋಧಿಸಿ ನಡೆದ ಗಲಭೆಯ ವೇಳೆ ಪೊಲೀಸ್ ಗೋಲಿಬಾರ್‌ಗೆ ಇಬ್ಬರು ಬಲಿಯಾದ ಬಳಿಕ ಮಂಗಳೂರಿನಲ್ಲಿ ದೊಡ್ಡಮಟ್ಟದ ದುಷ್ಕೃತ್ಯವೊಂದು ನಡೆಯುವ ಸಾಧ್ಯತೆಯಿತ್ತು. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದು ಈ ದುಷ್ಕೃತ್ಯದ ಭಾಗವಾಗಿರಬಹುದೆಂದು ಶಂಕಿಸಲಾಗಿದೆ ಎಂದು ಕಪೋಲಕಲ್ಪಿತ ವರದಿಯನ್ನು ತನ್ನ ಮುಖಪುಟದಲ್ಲಿ ಪ್ರಕಟಿಸಿತ್ತು. ಆಮೂಲಕ ಗೋಲಿಬಾರ್‌ಗೆ ಬಲಿಯಾದವರು ಮುಸ್ಲಿಮರಾದ್ದರಿಂದ ಬಾಂಬ್ ಇಟ್ಟಿರುವವರು ಮುಸ್ಲಿಮರೆ ಎಂದು ಸಾರುವ ಉದ್ದೇಶ ಅದರಲ್ಲಿತ್ತು.

ಭಯೋತ್ಪಾದನ ಕೃತ್ಯಕ್ಕೆ ಜಯ ಸಿಗದು ಎಂಬ ಸಂಪಾದಕೀಯವನ್ನು ಬರೆದು ಈ ವಿಚಾರದ ಕುರಿತು ಪೂರ್ವನಿರ್ಧರಿತ ಅಭಿಪ್ರಾಯಕ್ಕೆ ಬಂದಿದ್ದನ್ನು ಸಾರಿತ್ತು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಬಾಂಬ್ ಮಾತ್ರವಲ್ಲ ಅದನ್ನು ಇಟ್ಟ ಭಯೋತ್ಪಾದಕ ಶಕ್ತಿಗಳನ್ನು ಸಹ ಸಂಪೂರ್ಣವಾಗಿ ನಿಷ್ಕ್ರಿಯ ಮಾಡುತ್ತೇವೆ ಎಂದು ಘೋಷಿಸಿದ್ದರು.

ಬಾಂಬ್ ಎಂದ ಕೂಡಲೇ ಮುಸ್ಲಿಮರು ಎನ್ನುವಂತಹ ಮನೋಭಾವ ಮೂಡುವಂತೆ ಮಾಧ್ಯಮಗಳು ಮತ್ತು ಕೆಲ ಕೋಮುವಾದಿ ಪೊಲೀಸ್ ಅಧಿಕಾರಿಗಳು ದೀರ್ಘ ಅವಧಿಯಲ್ಲಿ ಬೆಳೆಸಿದ್ದಾರೆ. ಇದಕ್ಕಾಗಿಯೇ ಬಾಂಬ್ ಎಂದ ತಕ್ಷಣ ಬಹಳಷ್ಟು ಜನರು “ತನಿಖೆಯಲ್ಲಿ ಸಿಗುವ ಆರೋಪಿ ಮುಸ್ಲಿಮನಾಗಿದ್ದರೆ ಭಯೋತ್ಪಾದಕ ಎಂದು ಕರೆಸಿಕೊಳ್ಳುತ್ತಾನೆ, ಒಂದು ವೇಳೆ ಹಿಂದೂವಾಗಿದ್ದರೆ ಮಾನಸಿಕ ಅಸ್ವಸ್ಥನೆಂದು ಕರೆಸಿಕೊಳ್ಳುತ್ತಾನೆ” ಎಂದು ಟ್ರೋಲ್ ಮಾಡಿದ್ದರು.

ಆದರೆ ವಾಸ್ತವವೇನೆಂದರೆ ಸದ್ಯದ ಪೊಲೀಸ್ ತನಿಖೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಮಣಿಪಾಲದ ಮಣ್ಣಪಳ್ಳದ ಬಿ.ಕೃಷ್ಣಮೂರ್ತಿಯವರ ಮಗ ಆದಿತ್ಯ ರಾವ್ ಎಂದು ತಿಳಿದುಬಂದಿದ್ದಲ್ಲದೇ ಆತ ಪೊಲೀಸರೆದುರು ಶರಣಾಗಿದ್ದಾನೆ ಕೂಡ..

ಇಂಜಿನಿಯರಿಂಗ್ ಓದಿರುವ ಆದಿತ್ಯರಾವ್ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗೆ ಪ್ರಯತ್ನಿಸಿ ವಿಫಲವಾಗಿದ್ದನಂತೆ. ಕೆಲಸ ಸಿಗದ ಬೇಸರದಲ್ಲಿ ಒಂದು ವರ್ಷದ ಹಿಂದೆಯೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿಬಾಂಬ್ ಕರೆ ಮಾಡಿ ಸಿಕ್ಕಿಬಿದ್ದಿದ್ದ. ಆ ಅಪರಾಧಕ್ಕಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆತನಿಗೆ ವಿಮಾನ ನಿಲ್ದಾಣ ಸಿಬ್ಬಂದಿ ಮತ್ತು ಅಥಾರಿಟಿಯ ಮೇಲೆ ದ್ವೇಷವಿತ್ತು. ಆ ಕಾರಣಕ್ಕಾಗಿಯೇ ಆತ ಮಂಗಳೂರಿನಲ್ಲಿ ಬಾಂಬ್ ಇಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಮಣಿಪಾಲದ ಮಣ್ಣಪಳ್ಳದಲ್ಲಿ ವಾಸವಾಗಿದ್ದ ಈತನ ಕುಟುಂಬ ಒಂದು ವಾರದ ಕೆಳಗೆ ತಾನೇ ಮಂಗಳೂರಿನ ಲೇಡಿಹಿಲ್ ಅಪಾರ್ಟ್ಮೆಂಟ್‌ಗೆ ಶಿಫ್ಟ್ ಆಗಿದ್ದಾರೆ. ಆದರೆ ಆ ಒಂದು ವಾರದಿಂದ ಆತ ತನ್ನ ಮನೆಗೆ ಹೋಗದೆ ಕಾಣೆಯಾಗಿದ್ದಾನೆ ಎಂದು ಪೊಲೀಸರೆದುರು ಆತನ ತಂದೆ ತಿಳಿಸಿದ್ದಾರೆ. ಇನ್ನು ಬಾಂಬ್ ಇಟ್ಟಿದ್ದ ಘಟನೆ ಬೆಳಿಗ್ಗೆ 9 ಗಂಟೆಗೆ ನಡೆದರೆ ಮಧ್ಯಾಹ್ನ 2.50ಕ್ಕೆ ಟರ್ಮಿನಲ್ ಮ್ಯಾನೇಜರ್‌ಗೆ ಬಂದ ಕರೆಯೊಂದರಲ್ಲಿ ನನಗೆ ಕೊಟ್ಟ ತೊಂದರೆಗೆ ನಾನು ಸುಮ್ಮನೆ ಬಿಡುವುದಿಲ್ಲ ಎಂಬ ಧಮಕಿ ಹಾಕಲಾಗಿದೆಯಂತೆ. ಆದಿತ್ಯರಾವ್‌ನನ್ನು ಹೋಲುವ ವ್ಯಕ್ತಿಯು ಮಂಗಳೂರಿನ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ವಿಷಯ ಹೊರಬರುತ್ತಿದ್ದಂತೆಯೇ ಕನ್ನಡದ ಬಹುತೇಕ ಮುದ್ರಣ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಆರೋಪಿ ಮುಸ್ಲಿಮನಾಗಿರುತ್ತಾನೆ ಎಂದು ಹಂಬಲಿಸುತ್ತಿದ್ದ ಅವರಿಗೆ ಈ ‘ರಾವ್’ ಎಂಬ ಹೆಸರು ಕೇಳಿದೊಡನೆಯೆ ಗರಬಡಿದವರಂತಾಗಿರುವುದು ಕಂಡುಬಂದಿದೆ. ಅಲ್ಲಿಯವರೆಗೂ ಏರುಧ್ವನಿಯ ಸುದ್ದಿ ಪ್ರಸಾರ ಮಾಡುತ್ತಿದ್ದ ಅವರು ಬಾಯಿಗೆ ಬೀಗ ಜಡಿದುಕೊಂಡಿದ್ದಾರೆ.

ಈಗ ಅಸಲಿ ವಿಷಯಕ್ಕೆ ಬರುವುದಾದರೆ ಆದಿತ್ಯ ರಾವ್‌ಗೂ ಪೌರತ್ವ ವಿರೋಧಿ ಹೋರಾಟಕ್ಕೂ ಏನು ಸಂಬಂಧ? ಈತ ಬಾಂಬ್ ಇಟ್ಟಿರುವುದು ಪೌರತ್ವಕ್ಕೆ ಪ್ರತೀಕಾರ ಹೇಗಾಗುತ್ತದೆ? ಒಂದು ಸಮುದಾಯವನ್ನು, ಒಂದು ಭಿನ್ನಾಭಿಪ್ರಾಯವಿಟ್ಟುಕೊಂಡು ಹೋರಾಟ ಮಾಡುತ್ತಿರುವವರ ಮೇಲೆ ಯಾವುದೇ ಸಾಕ್ಷಿ ಇಲ್ಲದೇ ಗೂಬೆ ಕೂರಿಸಿದ ಮಾಧ್ಯಮಗಳು ನೀತಿ ಸಂಹಿತೆಯನ್ನು ಈ ರೀತಿ ಕೈಬಿಟ್ಟಿರುವುದು ಏತಕ್ಕಾಗಿ? ಈ ಮಾಧ್ಯಮಗಳು ತಮ್ಮ ತಪ್ಪಿನಿಂದ ಪಾಠ ಕಲಿತು ಕ್ಷಮಾಪಣೆಯನ್ನು ಪ್ರಕಟಿಸುತ್ತವೆಯೇ? ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲವೆಂದು ಸಂಕಲ್ಪ ಮಾಡುತ್ತದೆಯೆಂದು ನಾವು ನಿರೀಕ್ಷಿಸಬಹುದೇ?

ಈಗ ಪೊಲೀಸರ ವಿಷಯಕ್ಕೆ ಬರೋಣ.

ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ಪರ ಪ್ರತಿಭಟನೆಯಲ್ಲಿ ಹಿಂದೂ ಮುಖಂಡರ ಕೊಲೆಗೆ ಸ್ಕೆಚ್ ಹಾಕಿದ್ದರು, ಅವರು ಎಸ್‌ಡಿಪಿಐ ಸಂಘಟನೆಗೆ ಸೇರಿದವರು, ಅವರಿಗೆ ಹಣ ಬರುತ್ತದೆ ಎಂದು ಬೆಂಗಳೂರು ನಗರ ಕಮಿಷನರ್ ಪತ್ರಿಕಾಗೋಷ್ಟಿಯಲ್ಲಿ ಘೋಷಿಸಿದ್ದರು. ಆದರೆ ಎಫ್‌ಐಆರ್‌ನಲ್ಲಿಯಾಗಲಿ, ಆರೋಪಿತರ ಹೇಳಿಕೆಗಳಲ್ಲಾಗಲೀ ಅವರ ಟಾರ್ಗೆಟ್ ಆಗಿ ಯಾವುದೇ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಲಿಲ್ಲ. ಇಂಥವರೇ ಟಾರ್ಗೆಟ್ ಆಗಿದ್ದರು ಎಂದು ಹೇಳಲಾದ ವ್ಯಕ್ತಿಗಳು ಆಗಲೇ ಹುತಾತ್ಮರಂತೆ ಹೇಳಿಕೆಯನ್ನು ಕೊಟ್ಟೂ ಆಗಿತ್ತು. ಇದನ್ನೇ ಮುಂದುವರೆಸಿ ಪಿಎಫ್‌ಐ ನಿಷೇಧ ಎಂಬ ಟೈಟಲ್ ಸಹಾ ಬಂದಾಗಿತ್ತು. ವಾಸ್ತವದಲ್ಲಿ ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ಅದಕ್ಕೆ ತೀರ್ಮಾನವಾಗಿತ್ತು ಎಂಬುದನ್ನು ಬಿಟ್ಟರೆ ಅದಿನ್ನೂ ಫೈಲ್ ಸಮೇತ ಕೇಂದ್ರ ಸರ್ಕಾರಕ್ಕೆ ಹೋಗಿ, ಕೇಂದ್ರವು ಅಂತಹ ನಿಷೇಧ ಮಾಡಬೇಕಷ್ಟೇ.

ಬೆಂಗಳೂರಿನಲ್ಲಿನ ಸ್ಲಂಗಳಲ್ಲಿ ಬಾಂಗ್ಲಾದವರಿದ್ದಾರೆ ಎಂದು ಬಿಜೆಪಿ ಸಂಸದರ ಮಾಲೀಕತ್ವದ ಚಾನೆಲ್ ನಕಲಿ ಸ್ಟಿಂಗ್ ಒಂದನ್ನು ನಡೆಸಿತು. ಕೂಡಲೇ ಹಿಂದು ಮುಂದು ನೋಡದೇ ಉತ್ತರ ಕರ್ನಾಟಕದ ಮತ್ತು ಪೂರ್ವ ಭಾರತದ ಕೂಲಿ ಜನರು ವಾಸವಿದ್ದ ಗುಡಿಸಲುಗಳನ್ನು ನೆಲಸಮ ಮಾಡಿದ್ದ ಪೊಲೀಸ್ ಇಲಾಖೆಯ ಕಮಿಷನರ್ ಭಾಸ್ಕರ್‌ರಾವ್‌ರನ್ನು ಯಾರಾದರೂ ಬಿಜೆಪಿ ಪಕ್ಷದ ವಕ್ತಾರರಾ ಎಂದು ಕೇಳಿದರೆ ಏನು ಹೇಳುತ್ತಾರೆ?

ಬಾಂಬ್ ಇಟ್ಟವರು ಯಾರಾದರೂ ಸರಿಯೇ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ, ಭದ್ರತೆಯನ್ನು ಹೆಚ್ಚಿಸಿ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ ಎಂಬ ಮಾತುಗಳನ್ನು ಆಡುವುದು ಸಮಂಜಸ. ಅದನ್ನು ದಾಟಿ ಕೋಮುಗಳಿಗೆ ಸಂಬಂಧ ಕಲ್ಪಿಸಿ ಹೇಳಿಕೆಗಳನ್ನು ನೀಡಲಾಗುತ್ತದೆ.

ಮಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಹೋರಾಟದಲ್ಲಿ ಇಬ್ಬರು ಮುಸ್ಲಿಮರನ್ನು ಗುಂಡಿಟ್ಟು ಹತ್ಯೆ ಮಾಡಿದ ಪೊಲೀಸರು ಅದಕ್ಕೆ ಕಾರಣವಾದ ಘಟನಾವಳಿಯ ಕುರಿತೂ ಸಮರ್ಪಕ ಪುರಾವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಆದರೆ ಬಾಂಬ್ ಎಂದ ಕೂಡಲೇ ಒಂದು ಕಡೆ ಕೈ ತೋರಿಸುತ್ತಾರೆ.. ವಾಸ್ತವ ಗೊತ್ತಾದಾಗ ಪೆಚ್ಚುಮೋರೆ ಹಾಕಿ ಕೂರುತ್ತಾರೆ ಅಷ್ಟೇ.

ಪ್ರತಿಭಟಿಸುತ್ತಿರುವವರ ಬಟ್ಟೆ ನೋಡಿದರೆ ಸಾಕು ಅವರು ಯಾರು ಎಂಬುದು ಗೊತ್ತಾಗುತ್ತದೆ ಎಂದು ಹೇಳುವ ಪ್ರಧಾನಿ ಇರುವ ರಾಷ್ಟ್ರವಿದು. ಮಾಧ್ಯಮಗಳು ಅಂತಹ ಪ್ರಧಾನಿಗೆ ಪ್ರಶ್ನೆ ಹಾಕುವ ಬದಲು ಪ್ರಧಾನಿಯ ವಿರುದ್ಧ ಮಾತಾಡುವವರ ಮೇಲೆ ದಾಳಿ ನಡೆಸಲು ಕಥೆಗಳನ್ನು ಹೊಸೆಯುತ್ತಿರುತ್ತವೆ. ಹೀಗಿರುವಾಗ ನಾವು ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...